ನ್ಯೂಸ್ ಕಡಬ

ರೈತರ ಆತ್ಮಹತ್ಯೆ ➤ ಕರ್ನಾಟಕಕ್ಕೆ 2ನೇ ಸ್ಥಾನ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.16. ಬೆಂಗಳೂರು ಪಿಎಂ ಕಿಸಾನ್ ,  ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಸೇರಿದಂತೆ ಇನ್ನಿತರ ಯೋಜನೆಗಳು ಜಾರಿಗೊಂಡ ನಂತರವೂ ದೇಶದಾದ್ಯಂತ  ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ 16854 ಮತ್ತು ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ 3573 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿದ್ದರೆ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡ  ಒಟ್ಟು ರೈತರ ಪೈಕಿ ಕಳೆದ ಮೂರು ವರ್ಷಗಳಲ್ಲಿ ಕೇವಲ 462 ರೈತರಿಗೆ ಮಾತ್ರ […]

ರೈತರ ಆತ್ಮಹತ್ಯೆ ➤ ಕರ್ನಾಟಕಕ್ಕೆ 2ನೇ ಸ್ಥಾನ Read More »

ಕರ್ನಾಟಕ, ಕ್ರೀಡಾ ನ್ಯೂಸ್

 ಆ್ಯಂಬುಲೆನ್ಸ್-ಟೆಂಪೊ ನಡುವೆ ಢಿಕ್ಕಿ ➤‌ 8 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.comಹುಬ್ಬಳ್ಳಿ,ಫೆ.15. ಆ್ಯಂಬುಲೆನ್ಸ್​​ ಮತ್ತು ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಆ್ಯಂಬುಲೆನ್ಸ್ ಚಾಲಕ ಸೇರಿ 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಬಳಿ ಸಂಭವಿಸಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಕ್ತರು ಟೆಂಪೋ ವಾಹನದಲ್ಲಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದು ರಾಣೆಬೆನ್ನೂರಿಗೆ ಹೊರಟಿದ್ದು, ಆ್ಯಂಬುಲೆನ್ಸ್​​​​ ಗದಗ ನಗರದಿಂದ ಹುಬ್ಬಳ್ಳಿಯ ಕಿಮ್ಸ್​ಗೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.  

 ಆ್ಯಂಬುಲೆನ್ಸ್-ಟೆಂಪೊ ನಡುವೆ ಢಿಕ್ಕಿ ➤‌ 8 ಮಂದಿಗೆ ಗಾಯ Read More »

ಕರ್ನಾಟಕ

ಗುತ್ತಿಗೆದಾರರಿಂದ ಬಿಬಿಎಂಪಿ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಫೆ.15.  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಮಗಾರಿ ಪೂರ್ಣಗೊಂಡು ಮೂರು ವರ್ಷ ಕಳೆದರೂ 200 ಕೋಟಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರು ಬಿಬಿಎಂಪಿ ಮತ್ತು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್‌ನಲ್ಲಿ (KRIDL) ಕೆಲಸ ಮಾಡುತ್ತಿರುವ ಗುತ್ತಿಗೆದಾರರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ಪಾಲಿಕೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿ ನಮ್ಮನ್ನು ಬಂಧಿಸಿದ್ದಾರೆ. ನಮ್ಮನ್ನು ತಡವಾಗಿ ಬಿಡುಗಡೆ ಮಾಡಲಾಯಿತು’ ಎಂದು ಪ್ರತಾಪ್ ಆರೋಪಿಸಿದರು ಎಂದು ವರದಿಯಾಗಿದೆ.  

ಗುತ್ತಿಗೆದಾರರಿಂದ ಬಿಬಿಎಂಪಿ ವಿರುದ್ಧ ಪ್ರತಿಭಟನೆ Read More »

ಕರ್ನಾಟಕ

ಮದುವೆಯಾದ ಮೂರೇ  ದಿನದಲ್ಲಿ ದುರಂತ  ಅಂತ್ಯ ಕಂಡ ನವದಂಪತಿ!

(ನ್ಯೂಸ್ ಕಡಬ) newskadaba.com ಭುವನೇಶ್ವರ್,ಫೆ.15. ಮದುವೆಯಾಗಿ ಮೂರೇ ದಿನದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ಮೃತಪಟ್ಟ ಘಟನೆ ಒಡಿಶಾ ಬೆರ್ಹಾಂಪುರ್ನಲ್ಲಿ ನಡೆದಿದೆ.   ಮೃತರನ್ನು ಬೆರ್ಹಾಂಪುರ್  ಮೂಲದ ಸಿ.ಎಚ್.ಪ್ರನೇತಾ ಮತ್ತು ಆಂಧ್ರ ಪ್ರದೇಶದ ಇಚ್ಚಫುರ್ ಮೂಲದ ಜಿ ಬೆನು ಎಂದು ಗುರುತಿಸಲಾಗಿದೆ. ಪ್ರನೇತಾ ಮತ್ತು ಬೆನು ಮದುವೆಯಾಗಿ ಮೂರು ದಿನಗಳ ಬಳಿಕ ಬೈಕ್ ನಲ್ಲಿ ಬೆರ್ಹಾಂಪುರ್ ಗೆ  ಬರುತ್ತಿದ್ದರು .ಎದುರಿಂದ ಬರುತ್ತಿದ್ದ ಟ್ರ್ಯಾಕ್ಟರ್ ಗೆ ಬೈಕ್  ಢಿಕ್ಕಿ ಹೊಡೆದ ಪರಿಣಾಮವಾಗಿ  ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದಾದರೂ

ಮದುವೆಯಾದ ಮೂರೇ  ದಿನದಲ್ಲಿ ದುರಂತ  ಅಂತ್ಯ ಕಂಡ ನವದಂಪತಿ! Read More »

ರಾಷ್ಟ್ರೀಯ ನ್ಯೂಸ್

➤ ಪ್ರೇಯಸಿಯ ಕೊಲೆ ಮಾಡಿ, ಶವವನ್ನು ಹಾಸಿಗೆಯ ಕೆಳಗೆ ಬಚ್ಚಿಟ್ಟ ಯುವಕ

(ನ್ಯೂಸ್ ಕಡಬ) newskadaba.com. ದೆಹಲಿ, ಫೆ.15. ಶ್ರದ್ಧಾ ವಾಕರ್ ಹತ್ಯೆ ಸುದ್ದಿ ಮಾಸುವ ಮುನ್ನ ಮತ್ತೊಂದು ಭೀಕರ ಹತ್ಯೆ ನಡೆದುಬಿಟ್ಟಿದೆ. ಲಿವ್​ ಇನ್​ ಸಂಬಂಧದಲ್ಲಿದ್ದ ಸಂಗಾತಿಯನ್ನು ಹತ್ಯೆ ಮಾಡಿ ಹಾಸಿಗೆಯ  ಕೆಳಗೆ ಬಚ್ಚಿಟ್ಟಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲಘಡದಲ್ಲಿ ಈ ಘಟನೆ ನಡೆದಿದೆ, ಆರೋಪಿಯು ತನ್ನ ಪ್ರೇಯಸಿಯನ್ನು ಕೊಂದು ರಾಜ್ಯದಿಂದ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ. ಮಂಗಳವಾರ ಮಧ್ಯಪ್ರದೇಶದ ರೈಲಿನಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೋಲೀಸರ ಪ್ರಕಾರ, ಪಾಲಘಡ ಜಿಲ್ಲೆಯ ತುಲಿಂಜ್ ಪ್ರದೇಶದ ಮನೆಯೊಳಗೆ ಹಾಸಿಗೆಯ ಕೆಳಗೆ

➤ ಪ್ರೇಯಸಿಯ ಕೊಲೆ ಮಾಡಿ, ಶವವನ್ನು ಹಾಸಿಗೆಯ ಕೆಳಗೆ ಬಚ್ಚಿಟ್ಟ ಯುವಕ Read More »

ಕ್ರೈಮ್ ನ್ಯೂಸ್

ಕೋವಿಡ್‌ ಗಿಂತ ಡೇಂಜರಸ್ ಕಾಯಿಲೆ ಪತ್ತೆ ➤‌ ಮಾರ್ಬರ್ಗ್ ವೈರಸ್‌ನಿಂದ 9 ಮಂದಿ ಮೃತ್ಯು!

(ನ್ಯೂಸ್ ಕಡಬ) newskadaba.com ಆಫ್ರಿಕಾ, ಫೆ.15. ಆಫ್ರಿಕಾದ ಈಕ್ವಟೋರಿಯಲ್ ಗಿನಿಯಾದಲ್ಲಿ ಎಬೋಲಾ ರೀತಿಯ ಮಾರ್ಬರ್ಗ್ ವೈರಸ್ ಪತ್ತೆಯಾಗಿದ್ದು, ಏಕಾಏಕಿ 9 ಮಂದಿ ಮೃತಪಟ್ಟಿದ್ದಾರೆ ಎಂದುWHO ದೃಢಪಡಿಸಿದೆ. ಹಣ್ಣಿನ ಬಾವಲಿಗಳಿಂದ ಹರಡುವ ಮಾರ್ಬರ್ಗ್ ವೈರಸ್ ಹೆಚ್ಚು ಸಾಂಕ್ರಾಮಿಕವಾಗಿದೆ. ವಿಪರೀತ ವಾಂತಿ, ಅತಿಸಾರ, ಜ್ವರ ಮತ್ತು ಆಯಾಸದಂತಹ ತೀವ್ರ ರಕ್ತಸ್ರಾವದ ಲಕ್ಷಣಗಳೊಂದಿಗೆ ಅನಾರೋಗ್ಯವನ್ನು ಉಂಟು ಮಾಡುತ್ತದೆ. ರೋಗಲಕ್ಷಣಗಳು ಹೆಮರಾಜಿಕ್ ಜ್ವರವನ್ನು ಉಂಟು ಮಾಡುತ್ತದೆ. ಇದು ಎಬೋಲಾ ಕಾಯಿಲೆಯಂತೆಯೇ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. ಕಳೆದ ವಾರ

ಕೋವಿಡ್‌ ಗಿಂತ ಡೇಂಜರಸ್ ಕಾಯಿಲೆ ಪತ್ತೆ ➤‌ ಮಾರ್ಬರ್ಗ್ ವೈರಸ್‌ನಿಂದ 9 ಮಂದಿ ಮೃತ್ಯು! Read More »

ಅಂತರ್ರಾಷ್ಟ್ರೀಯ ನ್ಯೂಸ್

(ಇಂದು) ಫೆ. 15ರಂದು ವಿದ್ಯುತ್  ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ.15. ಮಡಿಕೇರಿ-ವಿರಾಜಪೇಟೆ 66 ಕೆವಿ ವಿದ್ಯುತ್ ಮಾರ್ಗದ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಬೃಹತ್ ಕಾಮಗಾರಿ ವಿಭಾಗ ಕೊಡಗು ಜಿಲ್ಲೆ ಕ.ವಿ.ಪ್ರ.ನಿ.ನಿ. ಮೈಸೂರು ಅವರ ಕೋರಿಕೆಯಂತೆ ಫೆಬ್ರುವರಿ , 15 ರಂದು ಬೆಳಗ್ಗೆ 09 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 33 ಕೆವಿ ವಿರಾಜಪೇಟೆ-ಮೂರ್ನಾಡು ಮಾರ್ಗದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ವರದಿ ತಿಳಿಸಿದೆ. ಈ ಕುರಿತು ಪಾರಾಣೆ, ಮೂರ್ನಾಡು, ನಾಪೋಕ್ಲು, ಹೊದ್ದೂರು, ಮರಗೋಡು, ಬೇತು, ಕಕ್ಕಬೆ, ನೆಲಜಿ, ಹಾಕತ್ತೂರು, ಕಾಂತೂರು, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ

(ಇಂದು) ಫೆ. 15ರಂದು ವಿದ್ಯುತ್  ವ್ಯತ್ಯಯ Read More »

ಕರ್ನಾಟಕ

ಹಿರಿಯ ಪತ್ರಕರ್ತ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.15. ಹಾಯ್ ಪುತ್ತೂರು ಪತ್ರಿಕೆಯ ಸಂಪಾದಕರಾದ ಹಾಜಿ ಹಮೀದ್ ಕಂದಕ್ ರವರು ಹೃದಯಾಘಾತದಿಂದ ನಿಧನರಾದ ವಾರ್ತೆಯು ಕೇಳಿ ಅತೀವ ನೋವನ್ನು ಉಂಟುಮಾಡಿದೆ. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಹಾಜಿ ಹಮೀದ್ ಕಂದಕ್ ರವರು ಮಿತ್ತೂರು ಸಿರಾಜುಲ್ ಹುದಾ ಕೇಂದ್ರ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷರು, ಪುತ್ತೂರು ರೇಂಜ್ ನ ಮದ್ರಸ ಮೇನೇಜ್ಮೆಂಟ್ ನ ಪ್ರಧಾನ ಕಾರ್ಯದರ್ಶಿ ಯಾಗಿ

ಹಿರಿಯ ಪತ್ರಕರ್ತ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ Read More »

ಕರ್ನಾಟಕ

ಬಿಸಿಎ ವಿದ್ಯಾರ್ಥಿಯೋರ್ವ ಐದನೇ ಮಹಡಿಯಿಂದ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.15. ಐದು ಅಂತಸ್ತಿನ ಕಟ್ಟಡದ ಮೇಲಿನಿಂದ ಬಿದ್ದು ಬಿಸಿಎ ಓದುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಸುಚೀರ್ (21) ಐದನೇ ಮಹಡಿಯ ಟೆರೇಸ್‌ಗೆ ನಡೆದುಕೊಂಡು ಹೋಗಿ ಅಲ್ಲಿಂದ ಬಿದ್ದಿದ್ದಾನೆ. ಸುಚೀರ್ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆಯೇ ಅಥವಾ ಜಿಗಿದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಬಿಸಿಎ ವಿದ್ಯಾರ್ಥಿಯೋರ್ವ ಐದನೇ ಮಹಡಿಯಿಂದ ಬಿದ್ದು ಮೃತ್ಯು Read More »

ಕರ್ನಾಟಕ

➤ ಹಣದುಬ್ಬರ ಮತ್ತೆ ಉಲ್ಬಣ, ರಿಸರ್ವ್ ಬ್ಯಾಂಕ್ ಅಸಮಾಧಾನ

(ನ್ಯೂಸ್ ಕಡಬ) newskadaba.com. ನವದೆಹಲಿ, ಫೆ.14. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ದರ ಹೆಚ್ಚಳದ ಒತ್ತಡದಲ್ಲಿ ಮುಂದುವರಿಯಬೇಕಾದ ಅಗತ್ಯ ಬಂದಿದ್ದು,  ಜನವರಿಯಲ್ಲಿ ಚಿಲ್ಲರೆ ಹಣದುಬ್ಬರವು ಶೇಕಡಾ 6.52ಕ್ಕೆ ಏರಿಕೆಯಾಗಿದೆ. ಎರಡು ತಿಂಗಳ ವಿರಾಮದ ನಂತರ RBI ಯ ಮೇಲಿನ ಸಹಿಷ್ಣುತೆಯ ಮಿತಿ ಶೇಕಡಾ 6ನ್ನು ಮೀರಿದೆ. ಗ್ರಾಹಕರ ಬೆಲೆ ಸೂಚ್ಯಂಕವನ್ನು ಆಧರಿಸಿದ ಚಿಲ್ಲರೆ ಹಣದುಬ್ಬರವು ಡಿಸೆಂಬರ್‌ನಲ್ಲಿ 5.72% ಮತ್ತು ಜನವರಿ 2022 ರಲ್ಲಿ 6.01% ಆಗಿತ್ತು. ಹಿಂದಿನ ಗರಿಷ್ಠವು ಅಕ್ಟೋಬರ್ 2022 ರಲ್ಲಿ 6.77% ಆಗಿತ್ತು. ಇತ್ತೀಚಿನ

➤ ಹಣದುಬ್ಬರ ಮತ್ತೆ ಉಲ್ಬಣ, ರಿಸರ್ವ್ ಬ್ಯಾಂಕ್ ಅಸಮಾಧಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top