ಮಂಗಳೂರು

ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ

(ನ್ಯೂಸ್ ಕಡಬ) newskadaba.com ಕಾರವಾರ ಅ. 23: ಡ್ರಂಕ್ ಅಂಡ್ ಡ್ರೈವ್ ಮಾಡಿದ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕಾರವಾರದ‌ ಗ್ರೀನ್ ಸ್ಟ್ರೀಟ್‌ ಬಳಿ ಗುರುವಾರ ರಾತ್ರಿ ನಡೆದಿದೆ.   ರಾಜಸ್ಥಾನ ಮೂಲದ ರವೀಂದ್ರ ಶರ್ಮಾ ಕುಡಿದು ಕಾರು ಚಾಲನೆ ಮಾಡಿದ ವ್ಯಕ್ತಿ.  ಕಾರವಾರದಲ್ಲಿ ರೈಲ್ವೆ ಗುತ್ತಿಗೆದಾರನಾಗಿ ಕೆಲಸ ಮಾಡ್ತಿದ್ದ ಈತ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿದ್ದಾನೆ. ನಗರದ ಗ್ರೀನ್ ಸ್ಟ್ರೀಟ್ ಬಳಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾನೆ. ಹೀಗಾಗಿ ಸಾರ್ವಜನಿಕರು ಗೂಸಾ ನೀಡಿದ್ದಾರೆ‌. ಆಕ್ರೋಶಗೊಂಡ […]

ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ Read More »

ಕರ್ನಾಟಕ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ತರಕಾರಿ ಟೆಂಪೋ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.23: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಸಾಗಾಟದ ವಾಹನ ಹಳ್ಳಕ್ಕೆ  ಬಿದ್ದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ 75 ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ನಡೆದಿದೆ.     ಈ ಟೆಂಪೋ ಹಾಸನ ಮೂಲದ್ದಾಗಿದ್ದು, ಪುತ್ತೂರು ಕಡೆಗೆ ತರಕಾರಿ ಸಾಗಾಟ ಮಾಡಲಾಗುತ್ತಿತ್ತು. ರಸ್ತೆಯಲ್ಲಿ ಇರುವ ಬೃಹತ್‌ ಗುಂಡಿ ತಪ್ಪಿಸಲು ಹೋಗಿ ಈ ಯೊಂದು ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಇದ್ದು, ಯಾವುದೇ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ತರಕಾರಿ ಟೆಂಪೋ Read More »

ಕರಾವಳಿ

ಸುಳ್ಯ: ನೇಣು ಬಿಗಿದು ಯುವತಿ ಆತ್ಮ ಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.23: ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಕಳೆದ ದಿನ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಳನ್ನು ಗಂಗಾಧರ ನಾಯ್ಕರವರ ಪುತ್ರಿ ಪ್ರಸನ್ನ ಎಂದು ಗುರುತಿಸಲಾಗಿದೆ.     ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಮೃತಳು ತಂದೆ, ತಾಯಿ ಪುಷ್ಪ, ಸಹೋದರ ಶಿವಪ್ರಸಾದ್‌ ರವರನ್ನು ಅಗಲಿದ್ದಾರೆ.  

ಸುಳ್ಯ: ನೇಣು ಬಿಗಿದು ಯುವತಿ ಆತ್ಮ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಯುವತಿಯ ಮೊಬೈಲ್ ಎಗರಿಸಿ ಎಸ್ಕೇಪ್ ➤ಕಳ್ಳನ ಗುರುತು ಪತ್ತೆಗಾಗಿ ಮನವಿ

(ನ್ಯೂಸ್ ಕಡಬ) newskadaba.com  ಕಡಬ ಅ. 23: ಅ. 22 ಗುರುವಾರ ಮಧ್ಯಾಹ್ನ 12.45 ರ ವೇಳೆಗೆ ಸುಬ್ರಹ್ಮಣ್ಯದಿಂದ ಉಪ್ಪಿನಂಗಡಿಯತ್ತ ಹೋಗುವ ಸರಕಾರಿ ಬಸ್ ಗೆ ಕಡಬ ಪೇಟೆಯ ಪಂಜ ಕ್ರಾಸ್ ಬಳಿ (ಟಿಸಿ ಪಾಯಿಂಟ್ ಹತ್ತಿರ) ಯ ಬಸ್ ಸ್ಟ್ಯಾಂಡ್ ನಲ್ಲಿ ಹತ್ತಿದ ಯುವತಿಯ ಬ್ಯಾಗ್ ನಿಂದ ಬೆಲೆಬಾಳುವ ಮೊಬೈಲ್ ಸೆಟ್ ನ್ನು ಖದೀಮನೊಬ್ಬ ಎಗರಿಸಿದ್ದಾನೆ.     ಯುವತಿಯ ಹಿಂದಿನಿಂದ ಬಸ್ ಏರಿದ ಕಳ್ಳ (ಕೆಂಪು ಚೆಕ್ಸ್ ಶರ್ಟ್ ಧರಿಸಿ ಕೈಯಲ್ಲಿ ಬ್ಯಾಗ್ ಹಿಡಿದಾತ) ಮೊಬೈಲ್

ಕಡಬದಲ್ಲಿ ಯುವತಿಯ ಮೊಬೈಲ್ ಎಗರಿಸಿ ಎಸ್ಕೇಪ್ ➤ಕಳ್ಳನ ಗುರುತು ಪತ್ತೆಗಾಗಿ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 23: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ ಸತೀಶ್ ಕುಲಾಲ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ನಿನ್ನೆ ಬಂಟ್ವಾಳದ ಬಿಸಿ ರೋಡ್ ನಲ್ಲಿದ್ದಂತ ತುಳು ನಟ ಹಾಗೂ ರೌಡಿ ಶೀಟರ್ ಸುರೇಂದ್ರ ಬಂಟ್ವಾಳ ಅವರನ್ನು ಅವರದ್ದೇ ಫ್ಲಾಟ್ ನಲ್ಲಿ ಬರ್ಬರವಾಗಿ ಕೊಲೆ ಗೈಯ್ಯಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕೊಲೆಯ ಆರೋಪಿಗಾಗಿ ಬಲೆ ಕೂಡ ಬೀಸಿದ್ದರು. ಇದರ ಮಧ್ಯೆ  ಪೊಲೀಸರಿಗೆ ಆಡಿಯೋ ಸಂದೇಶವೊಂದನ್ನು ಕಳುಹಿಸಿರುವ

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಕಾರವಾರ  ಅ. 23: ಬೈಕ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಿಣಗಾ ಘಟ್ಟದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಸೊಲ್ಲಾಪುರ ಮೂಲದ ಮನೋಜ್ ರೇವಣಕರ್ ( 38), ಶೃತಿ ( 25) ಮೃತಪಟ್ಟವರು.ಗುರುವಾರ ಸಂಜೆ ಚೆಂಡಿಯಾದಿಂದ ಮಾಜಾಳಿಗೆ ಬೈಕ್ ಮೂಲಕ ಹೋಗುತ್ತಿದ್ದ ವೇಳೆ ಬಿಣಗಾ ಘಾಟ್ ಬಳಿ  ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಂಚಾರಿ ಪೋಲಿಸ್ ಠಾಣೆಯಲ್ಲಿ

ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.! Read More »

ಕರ್ನಾಟಕ

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .!

(ನ್ಯೂಸ್ ಕಡಬ) newskadaba.com ಉಡುಪಿ ಅ. 23: ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ 12 ಗಂಟೆಯೊಳಗೆ ಆರೋಪಿಗಳಾದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಬಳ್ಳಾರಿಯ ಸಬಿತಾ, ಲತಾ, ಕವಿತಾ ಬಂಧಿತ ಆರೋಪಿಗಳು. ಇವರಿಂದ 32,400 ರೂ. ನಗದು, ಎರಡು ಮೊಬೈಲ್, ಎರಡು ಎಟಿಎಂ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬೆಂಗಳೂರು ಉತ್ತರಹಳ್ಳಿ ಅರ್ಚನಾ ರಾವ್ (39) ಎಂಬವರು ಸಂಜೆ ಸಿಟಿಬಸ್ನಲ್ಲಿ ಉಡುಪಿ ಸಿಟಿಬಸ್ ನಿಲ್ದಾಣದಿಂದ ಕುಂಜಿಬೆಟ್ಟುವಿಗೆ ಪ್ರಯಾಣಿಸುತ್ತಿದ್ದರು.

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 22: ವಿಶ್ವ ವಿಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಭರಣಗಳ ಅವ್ಯವಹಾರ ನಡೆಸಿರುವ ಆರೋಪವು ದೇವಸ್ಥಾನದ ಆಡಳಿತ ಮಂಡಳಿಯ ಮೇಲೆಯೇ ಕೇಳಿಬಂದಿದ್ದು, ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ ಹಾಗೂ ದೇಗುಲದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್ ಅವರ ಮೇಲೆ ಸುಬ್ರಹ್ಮಣ್ಯದ ನಿವಾಸಿ ಶ್ರೀನಾಥ್ ಟಿ.ಎಸ್. ಅವರು ಮಂಗಳೂರಿನ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೋಲಿಸ್ ಅಧೀಕ್ಷಕರಿಗೆ ದೂರು ದಾಖಲಿಸಿ, ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.   ಕರ್ನಾಟಕ ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು Read More »

ಕರಾವಳಿ, ಕರ್ನಾಟಕ

ನ.1 ರಿಂದ ಉಡುಪಿಯ ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧ ಜಾರಿ

(ನ್ಯೂಸ್ ಕಡಬ) newskadaba.com ಉಡುಪಿ ಅ. 22: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನ.1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳು ಇದ್ದರೂ ಸಹ ಅವುಗಳ ಬಳಕೆ ನಡೆಯುತ್ತಿಲ್ಲ, ಆದ್ದರಿಂದ ನ.1 ರಿಂದ ಪ್ಲಾಸ್ಟಿಕ್‌ ಬಳಸುವವರ ವಿರುದ್ಧ

ನ.1 ರಿಂದ ಉಡುಪಿಯ ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧ ಜಾರಿ Read More »

ಕರಾವಳಿ, ಕರ್ನಾಟಕ

ಅದಿತ್ಯನಾಥ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ➤ ಮಾಜಿ ಶಾಸಕ ವಸಂತ ಬಂಗೇರ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 22: ಉತ್ತರಪ್ರದೇಶ ಸಿಎಂ ಆದಿತ್ಯನಾಥ್ ನಾಡಿನಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಕೃತ್ಯ ನಡೆದಿದ್ದು ದೇಶವೇ ತಲೆತಗ್ಗಿಸುವ ಕೆಲಸ ಆಗಿದೆ. ಪೊಲೀಸರ ಮೇಲೆ ಒತ್ತಡ ಹೇರಿ ಮೃತ ಯುವತಿಯ ಮನೆಯವರಿಗೆ ಮೃತದೇಹದ ಮುಖದರ್ಶನಕ್ಕೂ ಅವಕಾಶ ನೀಡದೆ ದುರಹಂಕಾರ ಮೆರೆಯಲಾಗಿದೆ. ಅಂತಹಾ ನೀಚ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ಎಂದು ಮಾಜಿ ಶಾಸಕ ವಸಂತ ಬಂಗೇರ ಆಗ್ರಹಿಸಿದರು. ಉತ್ತರಪ್ರದೇಶದ ಹತ್ರಾಸ್‍ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ

ಅದಿತ್ಯನಾಥ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ➤ ಮಾಜಿ ಶಾಸಕ ವಸಂತ ಬಂಗೇರ ಒತ್ತಾಯ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top