ಮಂಗಳೂರು

ಮಂಗಳೂರು: ಭಾರತ ಬ್ಯಾಂಕ್ ಸ್ಥಾಪಕ ಜಯ ಸಿ. ಸುವರ್ಣ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.21: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮೂಲ್ಕಿಯ ಭಾರತ ಬ್ಯಾಂಕ್ ಸ್ಥಾಪಕ, ಬಿಲ್ಲವ ಮುಖಂಡ ಜಯ ಸಿ. ಸುವರ್ಣ (75) ರವರು ಇಂದು ಮುಂಬೈಯಲ್ಲಿ ನಿಧನರಾದರು.     ಇವರು ರಾಷ್ಟ್ರೀಯ ಬಿಲ್ಲವ ಮಹಾಮಂಡಳದ ಸ್ಥಾಪಕ ಅಧ್ಯಕ್ಷರಾಗಿದ್ದರು. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇಗುಲದ ಅಭಿವೃದ್ಧಿ ಹಾಗೂ ಇತರ ಕಾರ್ಯಗಳಿಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಜೊತೆ ಕೈ ಜೋಡಿಸಿಕೊಂಡವರು. ಗೋರೆಗಾಂವ್‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಸಾಯಿ ವೆಜ್ ಗ್ರೂಪ್ […]

ಮಂಗಳೂರು: ಭಾರತ ಬ್ಯಾಂಕ್ ಸ್ಥಾಪಕ ಜಯ ಸಿ. ಸುವರ್ಣ ನಿಧನ Read More »

ಕರಾವಳಿ

ಉಡುಪಿ: ಮಧ್ಯ ಸೇವನೆಗೆ ಹಣವಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಹೊನ್ನೆಕುಂಬ್ರಿ ಎಂಬಲ್ಲಿ ಮದ್ಯ ಸೇವನೆಗೆ ಹಣವಿಲ್ಲವೆಂದು ನೊಂದ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಅತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಾಮ ನಾಯ್ಕ(50) ಎಂದು ಗುರುತಿಸಲಾಗಿದೆ.     ಇವರು ಮದ್ಯ ಸೇವಿಸುವ ಚಟಹೊಂದಿದ್ದು, ಇವರು ಹೊನ್ನೆಕುಂಬ್ರಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ 4 ದಿನಗಳಿಂದ ಸರಿಯಾಗಿ ಕೆಲಸವಿಲ್ಲದೇ  ಮದ್ಯ ಸೇವನೆಗೆ ಹಣವಿಲ್ಲದ ಕಾರಣ ಮಾನಸಿಕವಾಗಿ ನೊಂದುಕೊಂಡು ಮನೆಯಲ್ಲಿ ಎನೇನೂ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ.

ಉಡುಪಿ: ಮಧ್ಯ ಸೇವನೆಗೆ ಹಣವಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ನಿಲ್ಲಿಸಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಆಟೋ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ನಾಗನಬೆಟ್ಟು ಗುಂಡಿಬೈಲು ಬಳಿ ನಿಲ್ಲಿಸಿದ್ದ ಕಾರಿಗೆ ಆಟೋರಿಕ್ಷಾ ಡಿಕ್ಕಿ ಹೊಡೆದು ಚಾಲಕ ಪ್ರಾಣ ಕಳೆದುಕೊಂಡ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಮುನಬೆಟ್ಟು ಮೂಲದ ಸುನಿಲ್ (44) ಎಂದು ಗುರುತಿಸಲಾಗಿದೆ.     ಆಟೋರಿಕ್ಷಾ ಚಾಲನೆ ಮಾಡುವಾಗ ನಿಯಂತ್ರಣ ಕಳೆದುಕೊಂಡ ಸುನಿಲ್ ಅವರು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ

ಉಡುಪಿ: ನಿಲ್ಲಿಸಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಆಟೋ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿ – ಮಗಳು ನದಿಗೆ ಹಾರಿ ಆತ್ಮಹತ್ಯೆ ➤ ಮೊಮ್ಮಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಅ.20: ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠ ಗ್ರಾಮದಲ್ಲಿ ತಾಯಿ ಹಾಗು ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಕ್ಕಮ್ಮ (60), ರಶ್ಮಿ (35) ಎಂದು ಗುರುತಿಸಲಾಗಿದೆ.     ರಶ್ಮಿ ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ಡಿಸಿಸಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಆಕೆಯು ತಾಯಿ ಅಕ್ಕಮ್ಮ ಮತ್ತು ಮಗಳು ಮಿಂಚು ಅವರೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಮೂವರೂ ಒಟ್ಟಿಗೆ ತೋಳುಗಳಿಗೆ ಬಟ್ಟೆ ಬಿಗಿದುಕೊಂಡು ನದಿಗೆ ಹಾರಿದ್ದಾರೆ.

ತಾಯಿ – ಮಗಳು ನದಿಗೆ ಹಾರಿ ಆತ್ಮಹತ್ಯೆ ➤ ಮೊಮ್ಮಗಳ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಐತ್ತೂರು: ನಿಕಟಪೂರ್ವ ಅಧ್ಯಕ್ಷ ಸತೀಶ್‌ ಕೆ. ರವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಅ.20: ಐತ್ತೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಜಕೆರೆ ಸಿಆರ್‌ಸಿ ಕಾಲೋನಿಗೆ ರಸ್ತೆ ಕಾಂಕ್ರಿಟೀಕರಣ, ಬಸ್ಸು ತಂಗುದಾಣ, ಅಂಗನವಾಡಿ ಕಟ್ಟಡ, ಬೀದಿದೀಪ, ಕಡಿಯುವ ನೀರು, ಸೋಲಾರ್‌ ದೀಪ ಅಳವಡಿಕೆ, ವಿದ್ಯುತ್‌ ಸಂಪರ್ಕ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸ ಮಾಡಿದ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಸತೀಶ್‌ ಕೆ. ರವರಿಗೆ ಕಾಲೋನಿ ನಿವಾಸಿಗಳಿಂದ ಸನ್ಮಾನ ಕಾರ್ಯಕ್ರಮ ಇಂದು ಬಜಕೆರೆ ಕಾಲೋನಿಯಲ್ಲಿ ನಡೆಯಿತು.     ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೋನಿಯ ಹಿರಿಯರಾದ ಸೋಲಮುತ್ತು ಹಾಗೂ ಶಿವಲಿಂಗರವರು ನೆರವೇರಿಸಿದ್ದರು.

ಐತ್ತೂರು: ನಿಕಟಪೂರ್ವ ಅಧ್ಯಕ್ಷ ಸತೀಶ್‌ ಕೆ. ರವರಿಗೆ ಸನ್ಮಾನ Read More »

ಕರಾವಳಿ

ಡ್ರಗ್ಸ್ ಜಾಗೃತಿ ಮೂಡಿಸುವಲ್ಲಿ ಬರಹದಿಂದ ಗಮನಸೆಳೆಯುತ್ತಿದೆ ಮಂಗಳೂರು ಸಿಟಿ ಬಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20: ಮಂಗಳೂರಿನ‌ ಸ್ಟೇಟ್ ಬ್ಯಾಂಕ್ ನಿಂದ ಮಂಗಳಾದೇವಿಗೆ ಸಂಚರಿಸುವ 27 ನಂಬರ್ ನ ಗಣೇಶ್ ಪ್ರಸಾದ್ ಬಸ್ ನಲ್ಲಿ ಡ್ರಗ್ಸ್ ಜಾಗೃತಿ‌ ಬರಹ ಬರೆದು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಹೊಸ ಪ್ರಯತ್ನ ಮಾಡಲಾಗಿದೆ. “ಯುವರ್ ಲೈಫ್ ಇಸ್ ಇನ್ ಯುವರ್ ಹ್ಯಾಂಡ್”, ” ಸೆ ನೋ ಟು ಡ್ರಗ್ಸ್” ಎಂಬಿತ್ಯಾದಿ ಜಾಗೃತಿ ಬರಹಗಳನ್ನು ಬಸ್ ನಲ್ಲಿ ಬರೆದಿರುವುದು ಗಮನ ಸೆಳೆದಿದೆ.     ಪ್ರಜ್ಞಾವಂತರ ನಗರಿ ಮಂಗಳೂರಿನಲ್ಲೂ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್

ಡ್ರಗ್ಸ್ ಜಾಗೃತಿ ಮೂಡಿಸುವಲ್ಲಿ ಬರಹದಿಂದ ಗಮನಸೆಳೆಯುತ್ತಿದೆ ಮಂಗಳೂರು ಸಿಟಿ ಬಸ್ Read More »

ಕರಾವಳಿ

ಹಿರಿಯ ಪತ್ರಕರ್ತ ಶ್ಯಾಮ ಸುಂದರ್ ನಿಧನ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.20: ದಿ ಹಿಂದು ಪತ್ರಿಕೆ ವರದಿಗಾರರಾಗಿ ಕೆಲಸ ಮಾಡಿದ ಹಿರಿಯ ಪತ್ರಕರ್ತರಾದ  ಶ್ಯಾಮ ಸುಂದರ್(70) ರವರು ಹೃದಯಾಘಾತದಿಂದ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.     ಇವರಿಗೆ ಇನ್ವೆಸ್ಟಿಗೇಷನ್ ವರದಿಗಾರಿಕೆಯಲ್ಲಿ ಬಂಗಾರದ ಪದಕ ಪಡೆದು, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದಂತ ಹಿರಿಯ ಪತ್ರಕರ್ತರಾಗಿರುತ್ತಾರೆ. ಶ್ಯಾಮ ಸುಂದರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮೃತರು, ಪತ್ನಿ, ಇಬ್ಬರು ಮಕ್ಕಳು, ಅಪಾರ

ಹಿರಿಯ ಪತ್ರಕರ್ತ ಶ್ಯಾಮ ಸುಂದರ್ ನಿಧನ Read More »

ಕರ್ನಾಟಕ

ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.20: ಇಂದು ಸಂಜೆ 6 ಗಂಟೆಗೆ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು ಮಹತ್ವದ ಘೋಷಣೆಯನ್ನು ಪ್ರಕಟಿಸುವ ನಿರೀಕ್ಷೆ ಇದೆ. ನವರಾತ್ರಿ ಸಂದರ್ಭದಲ್ಲಿ ಪ್ರಾಧಾನಿಯವರು ದೇಶ ವಾಸಿಗಳಿಗೆ ಶುಭ ಸುದ್ದಿಯೊಂದಿಗೆ ನೀಡಲಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.     ದೇಶ ಕೊರೊನಾ ಸೋಂಕಿಗೆ ತುತ್ತಾದ ಬಳಿಕ ಪ್ರಧಾನಿ ಮೋದಿ ಹಲವು ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಇದೀಗ ಇಂದು ಸಂಜೆ ದೇಶಕ್ಕೆ ಸಂದೇಶವನ್ನು ನೀಡಲಿದ್ದೇನೆ ಎಂಬ ಪ್ರಧಾನಿ ಮೋದಿ ಟ್ವೀಟ್ ಕುತೂಹಲವನ್ನು ಇಮ್ಮಡಿಗೊಳಿಸಿದೆ.ದೇಶದಲ್ಲಿ

ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ Read More »

ರಾಷ್ಟ್ರೀಯ ನ್ಯೂಸ್

ಭಟ್ಕಳ: 40 ಲಕ್ಷ ರೂ. ಮೌಲ್ಯದ ಆಭರಣ ಕಳವು ➤ ಅರ್ಚಕ ನಾಪತ್ತೆ

(ನ್ಯೂಸ್ ಕಡಬ) newskadaba.com ಭಡ್ಕಳ, ಅ.20: ಭಕ್ತರು ದೇಣಿಗೆ ರೂಪದಲ್ಲಿ ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ನೀಡಿದ ಸುಮಾರು 40 ಲಕ್ಷ ರೂ. ಮೌಲ್ಯದ ಆಭರಣಗಳು ಕಳುವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ  ಕಳೆದ ದಿನ ರಾತ್ರಿ ನಡೆದಿದೆ.     ದೇವಾಲಯದಲ್ಲಿ ಕೆಲಸ ಮಾಡುತ್ತಿದ್ದ ಅರ್ಚಕ ಸಹ ನಾಪತ್ತೆಯಾಗಿದ್ದಾನೆ ಎಂದು ದೇವಾಲಯದ ಅಧಿಕಾರಿಗಳು ದೂರಿನಲ್ಲಿ ತಿಳಿಸಿದ್ದಾರೆ. ನಾಪತ್ತೆಯಾದ ಅರ್ಚಕನನ್ನು ಯೆಲ್ಲಾಪುರ ನಿವಾಸಿ ಸತೀಶ್ ಭಟ್ ಎಂದು ಗುರುತಿಸಲಾಗಿದೆ. ದೇವರಿಗೆ ನವರಾತ್ರಿ ಸಮಯ ಆಭರಣಗಳನ್ನು ತೊಡಿಸಲು ದೇವಾಲಯದ ಪ್ರಧಾನ

ಭಟ್ಕಳ: 40 ಲಕ್ಷ ರೂ. ಮೌಲ್ಯದ ಆಭರಣ ಕಳವು ➤ ಅರ್ಚಕ ನಾಪತ್ತೆ Read More »

ಕರ್ನಾಟಕ

ರಾಷ್ಟ್ರೀಯ ಶಿಬಿರ ತೊರೆದು ದಿಡೀರ್ ಲಂಡನ್ ಗೆ ತೆರಳಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು

(ನ್ಯೂಸ್ ಕಡಬ) newskadaba.com ಲಂಡನ್, ಅ.20: ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧೂ ಒಲಿಂಪಿಕ್ ಗಾಗಿ ನಡೆಯುತ್ತಿರುವ ಶಿಬಿರ ತೊರೆದು ಲಂಡನ್ ಗೆ ತೆರಳಿದ್ದಾರೆ. ಒಲಿಂಪಿಕ್ ಶಿಬಿರವನ್ನು ಸಾಮಾನ್ಯವಾಗಿ ಯಾರೂ ಕೂಡಾ ಮಧ್ಯದಲ್ಲಿಯೇ ತೊರೆದು ಹೋಗವುದಿಲ್ಲ, ಅಲ್ಲದೇ ಇದೇ ಮೊದಲ ಬಾರಿಗೆ ತನ್ನ ಪೋಷಕರಿಲ್ಲದೆ ಪಿ. ವಿ. ಸಿಂಧೂ ಇಂಗ್ಲೆಂಡ್ ಗೆ ತೆರಳಿದ್ದಾರೆ.     ಚೇತರಿಕೆ ಮತ್ತು ಪುಷ್ಠಿಯ ಕೆಲಸಕ್ಕಾಗಿ ಇಂಗ್ಲೆಂಡ್ ಗೆ ತೆರಳಿರುವುದಾಗಿ ಪಿ. ವಿ. ಸಿಂಧೂ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಬಿರ ತೊರೆದು ದಿಡೀರ್ ಲಂಡನ್ ಗೆ ತೆರಳಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು Read More »

ರಾಷ್ಟ್ರೀಯ ನ್ಯೂಸ್
Scroll to Top