ಮಂಗಳೂರು

ಭಾರತದಲ್ಲಿಂದು 58,419 ಹೊಸ ಕೋವಿಡ್-19 ಕೇಸ್ ಪತ್ತೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ. 20:ಭಾರತದಲ್ಲಿ ಕೊರೋನಾ ಅಬ್ಬರದ ಇಳಿಕೆಯ ಹಾದಿ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 58,419 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1576 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,98,81,965ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,86,713ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 7,29,243ಕ್ಕೆ ಕುಸಿದ್ದು, 75 ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ […]

ಭಾರತದಲ್ಲಿಂದು 58,419 ಹೊಸ ಕೋವಿಡ್-19 ಕೇಸ್ ಪತ್ತೆ Read More »

ಕರಾವಳಿ

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ. 20: ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧವಿದ್ದರೂ ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಹೊಂದಿದವವರನ್ನು ಮಾತ್ರ ಜಿಲ್ಲೆಯ ಒಳಬರಲು ಬಿಡಲಾಗುತ್ತಿದೆ. ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ಕರೆಯಲಾಗುವುದಿಲ್ಲ.

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್ Read More »

ಕರಾವಳಿ

ಸುಳ್ಯ: ಸಿಬ್ಬಂದಿ ಕೊರತೆ ➤ ಕಸ ಸಂಗ್ರಹ ವಾಹನದ ಡ್ರೈವರ್ ಆದ ನ.ಪಂ. ಅಧ್ಯಕ್ಷರು

(ನ್ಯೂಸ್ ಕಡಬ) newskadaba, ಸುಳ್ಯ ಜೂ. 20: ಸುಳ್ಯ ನಗರ ಪಂಚಾಯಿತಿನ ಕಸ ಸಾಗಾಟ ವಾಹನ ಸಿಬ್ಬಂದಿ ಕ್ವಾರಂಟೈನ್ ಆಗಿದ್ದರು. ಈ ಸಂದರ್ಭ ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅವರೇ ಕಸ ಸಾಗಾಟ ವಾಹನದ ಡ್ರೈವರ್ ಆಗಿ ಕಾರ್ಯ ನಿರ್ವಹಿಸಿದರು. ಇದೀಗ ಎರಡು ದಿನಗಳಿಂದ ಸುಳ್ಯ ನಗರದಲ್ಲಿ ತ್ಯಾಜ್ಯ ಸಂಗ್ರಹಕ್ಕೆ ಸಿಬ್ಬಂದಿ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ವಿನಯಕುಮಾರ್ ತಾತ್ಕಾಲಿಕ ಸಿಬ್ಬಂದಿ ಹುಡುಕುವ ಬದಲು ತಾನೇ ಸ್ವತಃ ಲಭ್ಯರಿದ್ದ ಕಾರ್ಮಿಕರೊಂದಿಗೆ ಯಾವುದೇ ದೊಡ್ಡಸ್ತಿಕೆ ತೋರದೆ, ಮುಜುಗರವೂ

ಸುಳ್ಯ: ಸಿಬ್ಬಂದಿ ಕೊರತೆ ➤ ಕಸ ಸಂಗ್ರಹ ವಾಹನದ ಡ್ರೈವರ್ ಆದ ನ.ಪಂ. ಅಧ್ಯಕ್ಷರು Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ತಗ್ಗಿದ ಕೋವಿಡ್ ಕೇಸ್ ➤ ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba,ಮಂಗಳೂರು ಜೂ. 20: ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 88,707 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 583 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 80530 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 11 ಜನ ಸಾವನ್ನಪ್ಪಿದ್ದಾರೆ ಸಂಭವಿಸಿಲ್ಲ. ಈವರೆಗೆ ಒಟ್ಟು 1048 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡದಲ್ಲಿ ತಗ್ಗಿದ ಕೋವಿಡ್ ಕೇಸ್ ➤ ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢ Read More »

ಕರಾವಳಿ

ಮಂಗಳೂರಿನಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ ➤ ಪಾಲಿಕೆ ಅಧಿಕಾರಿಗಳಿಂದ ದಾಳಿ

(ನ್ಯೂಸ್ ಕಡಬ) newskadaba,ಮಂಗಳೂರು ಜೂ. 20: ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಅದ್ದೂರಿಯಾಗಿ ಮದುವೆ ನಡೆಯುತ್ತಿತ್ತು. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ( ಮನಪಾ) ಸಹಾಯಕ ಆಯುಕ್ತ ಮತ್ತು ಕಂದಾಯ ಇಲಾಖೆಯ ಉಪ ಆಯುಕ್ತ ಜಂಟಿ ದಾಳಿ ನಡೆಸಿ ಮದುವೆ ನಿಲ್ಲಿಸಿದ್ದಾರೆ. ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯವರ ಪುತ್ರಿಯ ವಿವಾಹ ಸೇರಿದಂತೆ ನಾಲ್ಕು ಜೋಡಿಗಳ ಮದುವೆಯನ್ನು ಏರ್ಪಡಿಸಲಾಗಿತ್ತು. ಮದುವೆ ಹಿನ್ನೆಲೆ ದೇವಸ್ಥಾನದ ಮುಂಭಾಗದಲ್ಲಿ 40ಕ್ಕೂ ಹೆಚ್ಚು

ಮಂಗಳೂರಿನಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ ➤ ಪಾಲಿಕೆ ಅಧಿಕಾರಿಗಳಿಂದ ದಾಳಿ Read More »

ಕರಾವಳಿ

ನಟಿ ಮೇಲೆ ಅತ್ಯಾಚಾರ ಆರೋಪ ➤ ಮಾಜಿ ಸಚಿವನ ಅರೆಸ್ಟ್​

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ. 20: ಅತ್ಯಾಚಾರ ಆರೋಪ ಹೊತ್ತಿರುವ ತಮಿಳುನಾಡಿನ ಎಐಡಿಎಂಕೆ ಪಕ್ಷದ ಮಾಜಿ ಸಚಿವ ಮಣಿಕಂದನ್​ ಅವರನ್ನು ಇಂದು ಬೆಂಗಳೂರಿನಲ್ಲಿ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.  ಅತ್ಯಾಚಾರ ಪ್ರಕರಣದ ಆರೋಪಿ ಮಣಿಕಂದನ್​ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು, ತಮಿಳುನಾಡು ಪೊಲೀಸರು ಹುಡುಕಾಟ ನಡೆಸಿದ್ದರು. ಇಂದು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಮಾಜಿ ಸಚಿವರನ್ನು ಬಂಧಿಸಿದ್ದಾರೆ. ಆರೋಪಿ ಮಣಿಕಂದನ್​ ಮಲೇಷ್ಯಾ ಮೂಲದ ನಟಿ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿ ಬಂದಿದೆ.  2017ರಲ್ಲಿ ಮಣಿಕಂದನ್ ಐಟಿ ಸಚಿವರಾಗಿದ್ದಾಗ ನಟಿಯ ಪರಿಚಯವಾಗಿತ್ತು.  ಮಲೇಷಿಯಾದಲ್ಲಿ

ನಟಿ ಮೇಲೆ ಅತ್ಯಾಚಾರ ಆರೋಪ ➤ ಮಾಜಿ ಸಚಿವನ ಅರೆಸ್ಟ್​ Read More »

ಕ್ರೈಮ್ ನ್ಯೂಸ್

ಕೋವಿಡ್​ ಸಂತ್ರಸ್ತರಿಗೆ 4 ಲಕ್ಷ ಪರಿಹಾರ ನೀಡಲು ಅಸಾಧ್ಯ ➤ಸುಪ್ರೀಂ ಕೋರ್ಟ್​ಗೆ ಕೇಂದ್ರ ಮಾಹಿತಿ

(ನ್ಯೂಸ್ ಕಡಬ) newskadaba,ನವ ದೆಹಲಿ ಜೂ. 20: ಮಾರಕ ಕೊರೋನಾ ವೈರಸ್​ನಿಂದ ಮೃತಪಟ್ಟವರಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಪಾವತಿಸಲಾಗುವುದಿಲ್ಲ. ಏಕೆಂದರೆ ಇದು ವಿಪತ್ತು ಪರಿಹಾರ ನಿಧಿಗಳನ್ನು ಖಾಲಿ ಮಾಡುತ್ತದೆ ಮತ್ತು COVID-19 ರ ಭವಿಷ್ಯದ ಅಲೆಗಳನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯಗಳ ಸಿದ್ಧತೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ಇಂದು ಅಫಿಡವಿಟ್​ ಸಲ್ಲಿಸಿದೆ.   ವಕೀಲರಾದ ಗೌರವ್ ಕುಮಾರ್ ಬನ್ಸಾಲ್ ಮತ್ತು ರೀಪಕ್ ಕನ್ಸಾಲ್, “ವಿಪತ್ತು ನಿರ್ವಹಣಾ ಕಾಯ್ದೆ 2005 ರ

ಕೋವಿಡ್​ ಸಂತ್ರಸ್ತರಿಗೆ 4 ಲಕ್ಷ ಪರಿಹಾರ ನೀಡಲು ಅಸಾಧ್ಯ ➤ಸುಪ್ರೀಂ ಕೋರ್ಟ್​ಗೆ ಕೇಂದ್ರ ಮಾಹಿತಿ Read More »

ಕರಾವಳಿ

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ ➤ ಬೆಂಗಳೂರಿನಲ್ಲಿ 933 ಸೇರಿ 4,517 ಹೊಸ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ. 20: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,517 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,06,453ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 120 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 33,883ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು 933 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,05,259ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ ➤ ಬೆಂಗಳೂರಿನಲ್ಲಿ 933 ಸೇರಿ 4,517 ಹೊಸ ಪ್ರಕರಣ ಪತ್ತೆ Read More »

ಕರಾವಳಿ

ಗಂಡು ಮಗುವಿಗಾಗಿ 4 ಹೆಣ್ಣು ಮಕ್ಕಳನ್ನು ಮಾರಾಟಕ್ಕಿಟ್ಟ ಅಪ್ಪ

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜೂ.19:ಗಂಡು ಮಗು ಬೇಕೇ ಬೇಕೆಂದು ವ್ಯಕ್ತಿ ತನ್ನ 4 ಹೆಣ್ಣು ಮಕ್ಕಳನ್ನು ಮಾರಾಟಕ್ಕಿಟ್ಟಿದ್ದಾನೆ. ಮಕ್ಕಳನ್ನು ಮಾರುವುದು ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರದಬ್ಬಿದ್ದಾನೆ.   ನಗರದ ಅಂಬೇಡ್ಕರ್ ಕಾಲೋನಿಯ ಪಾಪಿ ತಂದೆಯ ಹೆಸರು ಮುನಿಯಪ್ಪ, ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಈತ, 8 ವರ್ಷಗಳ ಹಿಂದೆ ಸಂಜು ಅವರನ್ನು ಮದುವೆಯಾಗಿದ್ದ. ಬಳಿಕ 4 ಹೆಣ್ಣು ಮಕ್ಕಳ ತಂದೆಯಾಗಿದ್ದಾನೆ. ಆದರೆ ಗಂಡು ಮಗು ಬೇಕೇ ಬೇಕೆಂದು ಪತ್ನಿಗೆ ಅಪರೇಷನ್ ಮಾಡಿಸಿಲ್ಲ. ಮಾತ್ರವಲ್ಲದೆ

ಗಂಡು ಮಗುವಿಗಾಗಿ 4 ಹೆಣ್ಣು ಮಕ್ಕಳನ್ನು ಮಾರಾಟಕ್ಕಿಟ್ಟ ಅಪ್ಪ Read More »

ಕರಾವಳಿ

ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ BSY

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.19: 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ

ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ BSY Read More »

ಕರಾವಳಿ
Scroll to Top