ಮಂಗಳೂರು

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19: ತರಕಾರಿ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ.     ನಗರದ ಹಲವು ಕಡೆ ಭಾರಿ ಮಳೆಯಾಗಿದೆ. ಈ ಪರಿಣಾಮ ಅನಾಹುತಗಳು ಸಹ ಸಂಭವಿಸುತ್ತಿವೆ. ನೈಸ್ ರಸ್ತೆಯಲ್ಲಿ ಅಪಘಾತ ನಡೆದ ಸಮಯದಲ್ಲಿ ಜೋರಾಗಿ ಮಳೆಯಾಗಿತ್ತು. ರಸ್ತೆ ಪೂರ್ತಿ ನೀರಿನಿಂದ ತೊಯ್ದಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕೆ ಉರುಳಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ […]

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಕರಾವಳಿ

ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ಲೈಸೆನ್ಸ್ ರದ್ದು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇನ್ನುಮುಂದೆ ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಿಗಿ ಅಮಾನತುಗೊಳಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ. ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.    

ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.!

(ನ್ಯೂಸ್ ಕಡಬ) newskadaba.com ಸುಳ್ಯ  ಅ. 19: ಸುಳ್ಯ ನಗರದ ವಸತಿಗೃಹವೊಂದರಲ್ಲಿ ಯುವಕ ಹಾಗೂ ಯುವತಿಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದು ಬಂದಿದೆ.   ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ .ಇನ್ನು ಆತ್ಮಹತ್ಯೆಗೆ ಶರಣಾಗಿರುವ ಯುವತಿ ಬೆಳ್ತಂಗಡಿ ನಿವಾಸಿ ಎಂದು ತಿಳಿದು ಬಂದಿದೆ. ಆದರೆ ಯುವಕ ಹಾಗೂ ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ

ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಡಾಖ್ ಗಡಿಯಲ್ಲಿ ಚೀನಾ ಯೋಧನ ಬಂಧನ

(ನ್ಯೂಸ್ ಕಡಬ) newskadaba.com ಲಡಾಖ್ ಅ. 19: ಲಡಾಖ್‌ನ ಚುಮಾರ್-ಡೆಮ್‌ಚೋಕ್ ಪ್ರದೇಶದಲ್ಲಿ ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ. ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕ ಅಜಾಗರೂಕತೆಯಿಂದ ಭಾರತೀಯ ಭೂಪ್ರದೇಶವನ್ನು ಪ್ರವೇಶಿಸಿರಬಹುದು ಎನ್ನಲಾಗಿದ್ದು ವಶಕ್ಕೆ ಪಡೆದ ಸೈನಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ಮುಗಿದ ನಂತರ ಪ್ರೋಟೋಕಾಲ್ ಪ್ರಕಾರ ಅವನನ್ನು ಚೀನಾಗೆ ವಾಪಾಸ್ ಕಳಿಸಲಾಗುತ್ತದೆ ಎಂದು ಸುದ್ದಿ ಸಂಸ್ಥೆ ಮೂಲಗಳು  ವರದಿ ಮಾಡಿದೆ.ಲಡಾಖ್ ನಲ್ಲಿ ನಡೆಯುತ್ತಿರುವ ಗಡಿ ಸಂಘರ್ಷದ ನಡುವೆ ಈ ಬೆಳವಣಿಗೆ

ಲಡಾಖ್ ಗಡಿಯಲ್ಲಿ ಚೀನಾ ಯೋಧನ ಬಂಧನ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಕರಾವಳಿ ಅ. 19: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಜನರು ಸುಧಾರಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಧ್ಯೆ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ.   ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ಈ ಕುರಿತು ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸೋಮವಾರ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೂರು ದಿನ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೂರು ದಿನ

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಪಬ್​ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…!

(ನ್ಯೂಸ್ ಕಡಬ) newskadaba.com ಮೇರಠ್, ಅ.19: ಪಬ್​ಜಿ ಆಡಬೇಡ, ಅದು ಒಳ್ಳೆಯದಲ್ಲ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೇಳಿ ಕೇಳಿ ಕೆದರಿದ ಮಗ ಪಕ್ಕದಲ್ಲೇ ಇದ್ದ ಚೂರಿ ತಗೊಂಡು ಅಪ್ಪನ ಕತ್ತು ಸೀಳಿಯೇ ಬಿಟ್ಟ! ಇಂಥದ್ದೊಂದು ವಿಲಕ್ಷಣ ಕೃತ್ಯ ಮೇರಠ್ ಜಿಲ್ಲೆಯ ಖಾರ್​ಖೋಡ ಪಟ್ಟಣದ ಜಾಮ್​ನಗರ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಆಮಿರ್ ಎಂದು ಗುರುತಿಸಲಾಗಿದೆ.     ಈ ಕೃತ್ಯ ಗುರುವಾರವೇ ನಡೆದಿದೆ. ಆದರೆ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಸುದೀರ್ಘ ಹೊತ್ತು ಗೇಮ್​ನಲ್ಲೇ ಕಾಲಕಳೆಯುತ್ತಿದ್ದ ಆಮಿರ್​ಗೆ ಈ ಬಗ್ಗೆ

ಪಬ್​ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…! Read More »

ರಾಷ್ಟ್ರೀಯ ನ್ಯೂಸ್

ಕೊಲ್ಲಮೊಗ್ರ: ತಾತ್ಕಾಲಿಕವಾಗಿ ಕಡಂಬಳ ಸೇತುವೆ ದುರಸ್ಥಿ

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, ಅ.19: ಇತ್ತೀಚೆಗೆ ಎಡೆಬಿಡದೆ ಸುರಿದ ಭಾರಿ ಮಳೆಗೆ ಕೊಲ್ಲಮೊಗ್ರ ಕಡಂಬಳ ಸಂಪರ್ಕ ರಸ್ತೆಯ ಕಡಂಬಳ ಸೇತುವೆಯ ಇಕ್ಕೆಳಗಳಲ್ಲಿ ಮಣ್ಣು ಕೊಚ್ಚಿ ಹೋಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.     ಈಗ ಇದನ್ನು ಉದಯ ಕೊಪ್ಪಡ್ಕ, ಶರತ್‌ ಕಲ್ಲೇಮಠ, ಮನೋಜ್‌ ಪೆರ್ನಾಜೆ, ಗಿರೀಶ ಕಡಂಬಳ, ಕುಸುಮಾ ಕಡಂಬಳ ಮತ್ತೀತರರು ಸೇರಿ ತಾತ್ಕಾಲಿಕವಾಗಿ ದುರಸ್ಥಿಗೊಳಿಸಿದ್ದಾರೆ.    

ಕೊಲ್ಲಮೊಗ್ರ: ತಾತ್ಕಾಲಿಕವಾಗಿ ಕಡಂಬಳ ಸೇತುವೆ ದುರಸ್ಥಿ Read More »

ಕರಾವಳಿ

ಡಿಸೆಂಬರ್ ನಲ್ಲಿ ಕೊರೊನಾ ಲಸಿಕೆ ಬರುತ್ತೆ…!?

(ನ್ಯೂಸ್ ಕಡಬ) newskadaba.com ನವದೆಹಲಿ ಅ. 19: ಮಾರ್ಚ್ 2021 ರ ವೇಳೆಗೆ ದೇಶದಲ್ಲಿ ಕೊರೋನಾ ಲಸಿಕೆ ಸಿಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಸುರೇಶ್ ಜಾಧವ್ ಹೇಳಿದ್ದಾರೆ. ‘ಮಾರ್ಚ್ 2021 ರ ವೇಳೆಗೆ ಭಾರತಕ್ಕೆ COVID-19 ಲಸಿಕೆ ಸಿಗಬಹುದು, ಏಕೆಂದರೆ ನಿಯಂತ್ರಕರು ಈ ಪ್ರಕ್ರಿಯೆಯನ್ನು ವೇಗಗೊಳಿಸುತ್ತಾರೆ, ಏಕೆಂದರೆ ಅನೇಕ ತಯಾರಕರು ಅದರ ಮೇಲೆ ಕೆಲಸ ಮಾಡುತ್ತಿದ್ದಾರೆ” ಎಂದು ಜಾಧವ್ ಐಸಿಸಿಐಡಿಡಿ ಸಹಯೋಗದೊಂದಿಗೆ ಹೆಲ್ ಫೌಂಡೇಶನ್ ಆಯೋಜಿಸಿದ್ದ ಶೃಂಗಸಭೆಯಲ್ಲಿ ಹೇಳಿದರು. ಡಾ. ಜಾಧವ್ ಅವರ

ಡಿಸೆಂಬರ್ ನಲ್ಲಿ ಕೊರೊನಾ ಲಸಿಕೆ ಬರುತ್ತೆ…!? Read More »

ಕರಾವಳಿ

ಬಜ್ಪೆ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಆರ್ಕೊ ಮೈದಾನದಲ್ಲಿ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಬಜ್ಪೆ, ಅ.19: ಕ್ಯಾಂಪಸ್‌ ಫ್ರಂಟ್‌ ಆಫ್‌ ಇದರ ವತಿಯಿಂದ ಬಜ್ಪೆ ಆಸುಪಾಸಿನ ವಿದ್ಯಾರ್ಥಿಗಳಿಗೆ ಆರ್ಕೋ ಮೈದಾನದಲ್ಲಿ ಕ್ರೀಡಾಕೂಟ ಏರ್ಪಡಿಸಲಾಯಿತು. ಕ್ಯಾಂಪಸ್‌ ಫ್ರಂಟ್‌ ಮಂಗಳೂರು ಜಿಲ್ಲಾ ಕೋಶಾಧಿಕಾರಿ ಶರ್ಫುದ್ದೀನ್‌ ಹಾಗೂ ಜಿಲ್ಲಾ ಸಮೀತಿ ಸದಸ್ಯ ಫಾರೀಶ್‌ ಧ್ವಜ ಹಸ್ತಾಂತರಿಸುವ ಮೂಲಕ ಕ್ರೀಡಾ ಕೂಟವನ್ನು ಉದ್ಘಾಟಿಸಿದರು.   ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ರಿಲೆ, ಮಿಲಿಟರಿ ಓಟ, ಹಗ್ಗ ಜಗ್ಗಾಟ, ಕ್ವಿಝ್‌, ಜ್ಞಾನದ ಪರೀಕ್ಷೆ ಮುಂತಾದ ಆಟದ ಮೂಲಕ ವಿದ್ಯಾರ್ಥಿಗಳು ಮನರಂಜನೆ ಪಡೆದರು. ಈ ಸಂದರ್ಭದಲ್ಲಿ

ಬಜ್ಪೆ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಆರ್ಕೊ ಮೈದಾನದಲ್ಲಿ ಕ್ರೀಡಾಕೂಟ Read More »

ಕರಾವಳಿ

ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.19: ಅರಸಿನಮಕ್ಕಿಯ ಕಲ್ಲಕೋಟೆ ಎಂಬಲ್ಲಿ ಎಂಟು ತಿಂಗಳ ಹೆಣ್ಣು ಮಗು ಬಕೆಟ್ ನಲ್ಲಿದ್ದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.  ಮೃತಪಟ್ಟ ಮಗು ಅರಸಿನಮಕ್ಕಿಯ ಕಲ್ಲಕೋಟೆ ನಿವಾಸಿ ಜಗದೀಶ್ ಹಾಗೂ ವಿದ್ಯಾ ದಂಪತಿಯ ಪುತ್ರಿ.     ತಾಯಿ ಮನೆಯ ಸಮೀಪದಲ್ಲೇ ಬಟ್ಟೆ ಒಗೆಯುತ್ತಿದ್ದರು. ಈ ಸಂದರ್ಭದಲ್ಲಿ ಮಗು ಮನೆಯಿಂದ ಹೊರ ಬಂದಿದ್ದು, ಕೈಯಲ್ಲಿದ್ದ ಲೋಟ ಬಕೆಟ್ ಗೆ ಮುಳುಗಿಸಿದ್ದು, ಇದೇ ಸಂದರ್ಭದಲ್ಲಿ ಮಗು ಬಕೆಟ್ ನೊಳಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಬಳಿಕ

ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top