ಮಂಗಳೂರು

ಬೆಂಗಳೂರು: ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ ➤ ಅಮಾಯಾಕ ವ್ಯಕ್ತಿ ಬಲಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18: ಕೂಲಿ ಕಾರ್ಮಿಕನೊಬ್ಬ ಮಟನ್ ಸ್ಟಾಲ್‍ನಿಂದ ಚಾಕುವನ್ನು ತೆಗೆದುಕೊಂಡು ದಾರಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದಿದ್ದರಿಂದ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಎಂ.ಗಣೇಶ್(35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.     ಬಂಧಿತ ಆರೋಪಿ ಕಾಟನ್‍ಪೇಟೆ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಆಂಜನಪ್ಪಗಾರ್ಡ್‍ನ ನಿವಾಸಿ ಎಂ.ಗಣೇಶ್ ಬಾಳೆಕಾಯಿ ಮಂಡಿ ಹತ್ತಿರ ಮಟನ್ ತರಲು ಹೋಗಿದ್ದ. ಆ ಸಂದರ್ಭದಲ್ಲಿ ಮಟನ್ ಶಾಪ್‍ನಲ್ಲಿದ್ದ ಚಾಕುವನ್ನು ತೆಗೆದುಕೊಂಡು […]

ಬೆಂಗಳೂರು: ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ ➤ ಅಮಾಯಾಕ ವ್ಯಕ್ತಿ ಬಲಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಸಾಂತ್ಮಕವಾಗಿ ದನ ಕರುಗಳ ಸಾಗಾಟ ➤ ಓರ್ವ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ ಅ. 18: ಜಾನುವಾರುಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲವೊಂದನ್ನು ಶನಿವಾರ ರಾತ್ರಿ ಪುಂಜಾಲಕಟ್ಟೆ ಪೊಲೀಸರು ಪತ್ತೆ ಹಚ್ಚಿದ್ದು, ಜಾನುವಾರುಗಳ ಸಹಿತ ಸಾಗಾಟಕ್ಕೆ ಬಳಸಿದ ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ. ಕಾವಳಮೂಡೂರು ಗ್ರಾಮದ ಎನ್.ಸಿ .ರೋಡ್‌ನಲ್ಲಿ ಕಾಡು ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಅಮಾನವೀಯವಾಗಿ ಕೂಡಿ ಹಾಕಿ ವಾಹನಗಳಲ್ಲಿ ಸಾಗಾಟಕ್ಕೆ ಪ್ರಯತ್ನಿಸುತ್ತಿದ್ದ ವೇಳೆ ಪುಂಜಾಲಕಟ್ಟೆ ಎಸ್‌ಐ ಸೌಮ್ಯಾ ಜೆ. ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.ಬೊಲೆರೊ ಜೀಪ್, ಆಮ್ನಿ ಕಾರು, ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ವಾಹನದಲ್ಲಿದ್ದ 7 ದನ

ಹಿಸಾಂತ್ಮಕವಾಗಿ ದನ ಕರುಗಳ ಸಾಗಾಟ ➤ ಓರ್ವ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೋಯ್ಡಾ ಪೊಲೀಸರ ಬಲೆಗೆ ಏಲಿಯನ್.!

(ನ್ಯೂಸ್ ಕಡಬ) newskadaba.com ನೋಯ್ಡಾ, ಅ. 18: ಗ್ಯಾಸ್ ತುಂಬಿದ ಈ ಐರನ್ ಮ್ಯಾನ್ ಆಕೃತಿಯ ಬಲೂನ್‌ವೊಂದು ಜನರಲ್ಲಿ ಆತಂಕ ಸೃಷ್ಟಿಸಿದ ಘಟನೆ ಉತ್ತರಪ್ರದೇಶದ ನೋಯ್ಡಾ ಬಳಿ ನಡೆದಿದೆ. ಈ ಬಲೂನ್‌ನನ್ನು ಏಲಿಯನ್ ಎಂದು ಭಾವಿಸಿ ಜನ ಆತಂಕಕ್ಕೀಡಾಗಿದ್ದರು. ಆಗಸದಲ್ಲಿ ಹಾರಾಡುತ್ತಿದ್ದ ಮನುಷ್ಯನಾಕೃತಿಯ ಈ ವಸ್ತುವನ್ನು ನೋಡಿದ ನೋಯ್ಡಾದ ದನ್ಕೌರ್ ಟೌನ್ ಜನ, ಏಲಿಯನ್ ದಾಳಿ ನಡೆದಿದೆ ಎಂದೇ ಭಾವಿಸಿದ್ದರು. ಗ್ಯಾಸ್ ತುಂಬಿದ ಈ ಐರನ್ ಮ್ಯಾನ್ ಆಕೃತಿಯ ಬಲೂನ್ ಇಲ್ಲಿನ ಭಟ್ಟಾ ಪರ್ಸೌಲ್ ಬಳಿಯ ಕೆನಾಲ್

ನೋಯ್ಡಾ ಪೊಲೀಸರ ಬಲೆಗೆ ಏಲಿಯನ್.! Read More »

ರಾಷ್ಟ್ರೀಯ ನ್ಯೂಸ್

ಕಲ್ಮಕಾರು: ಯುವಕ ಆತ್ಮಹತ್ಮಗೆ ಶರಣು

(ನ್ಯೂಸ್ ಕಡಬ) newskadaba.com ಕಲ್ಮಕಾರು ಅ. 18: ಕಲ್ಮಕಾರಿನಲ್ಲಿ ಯುವಕನೋರ್ವ ಮದ್ಯಾಹ್ನ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಳೆದ ದಿನ ನಡೆದಿದೆ. ಕಲ್ಮಕಾರು ಗ್ರಾಮದ ಪಡ್ಪು ವಸಂತರವರ ಪುತ್ರ ಲೋಹಿತ್ (24)  ಶನಿವಾರ ಮದ್ಯಾಹ್ಮ ಮನೆಯ ಸಮೀಪದ ಮಾವಿವಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮದ್ಯಾಹ್ನ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ್. ಮೃತ ಲೋಹಿತ್ ತಂದೆ ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ.  

ಕಲ್ಮಕಾರು: ಯುವಕ ಆತ್ಮಹತ್ಮಗೆ ಶರಣು Read More »

ಕರಾವಳಿ, ಕರ್ನಾಟಕ

ಭಟ್ಕಳ: ಗೂಡ್ಸ್ ರೈಲಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 18: ಚಲಿಸುತ್ತಿದ್ದ ಗೂಡ್ಸ್ ರೈಲಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನ ಮುರುಡೇಶ್ವರ ಬೀನಾವೈದ್ಯ ಶಾಲೆಯ ಸಮೀಪ ಶನಿವಾರ ಸಂಜೆ  ನಡೆದಿದೆ. ಗಾಯಗೊಂಡವರನ್ನು ಗುಜರಾತ್ ಪಡಲಿ ನಿವಾಸಿ ಕೃಪಾಲ್ ಸಿಂಗ್ ವಡಾರ್ (30) ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರು ಗೂಡ್ಸ್‍ರೈಲಿನಲ್ಲಿ ಮಂಗಳೂರು ಸುರತ್ಕಲ್‍ನಿಂದ ಗುಜರಾತ್ ಕೊಲಾಡ್‍ನತ್ತ ಪ್ರಯಾಣ ಬೆಳೆಸಿದ್ದು, ಪ್ಲೇಟಿನಲ್ಲಿದ್ದ ನೀರನ್ನು ರೈಲಿನಿಂದ ಹೊರಗೆ ಎಸೆಯುವ ಸಂದರ್ಭದಲ್ಲಿ ಅವಘಡ

ಭಟ್ಕಳ: ಗೂಡ್ಸ್ ರೈಲಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ Read More »

ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದ ಗೋದಾಮಿನಿಂದ 2.5 ಕೆಜಿ ಚಿನ್ನ ನಾಪತ್ತೆ ➤ ಐವರು ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಕೇಸ್.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 18: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ವಿಭಾಗದ ಗೋದಾಮಿನಿಂದ 2.5 ಕೆಜಿ ಚಿನ್ನವನ್ನು ಕದಿಯಲಾಗಿದೆ. ಚಿನ್ನ ಕಳ್ಳಸಾಗಣೆಯ ವೇಳೆ ಸೀಜ್ ಮಾಡಲಾಗಿದ್ದ ಚಿನ್ನವನ್ನು ಬೆಂಗಳೂರು ಏರ್​ಪೋರ್ಟ್ ಗೋದಾಮಿನಲ್ಲಿ ಇರಿಸಲಾಗಿತ್ತು. ಆ ಚಿನ್ನವನ್ನು ಕಳವು ಮಾಡಿರುವ ಆರೋಪದಲ್ಲಿ 5 ಜನ ಕಸ್ಟಮ್ಸ್​ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.   ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಸಿಬಿಐ ಎಸಿಬಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕಸ್ಟಮ್ಸ್ ಜಂಟಿ ಆಯುಕ್ತ ಎಂ.ಜೆ. ಚೇತನ್ ನೀಡಿದ

ಬೆಂಗಳೂರು ವಿಮಾನ ನಿಲ್ದಾಣದ ಗೋದಾಮಿನಿಂದ 2.5 ಕೆಜಿ ಚಿನ್ನ ನಾಪತ್ತೆ ➤ ಐವರು ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಕೇಸ್.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಮದ್ದಳೆಯ ಮಾಂತ್ರಿಕ ಗೋಪಾಲ್ ರಾವ್ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಅ.18: ಮದ್ದಳೆಯ ಮಾಂತ್ರಿಕ, ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ (101) ಅವರು ಕಳೆದ ದಿನ ರಾತ್ರಿ ಕೊನೆಯುಸಿರೆಳೆದಿದ್ದಾರೆ.     ಭಾರತದಲ್ಲಿ ಯಕ್ಷಗಾನ ಕಲಿಕೆಗೆ ಬಂದ ಪ್ರಥಮ ವಿದೇಶಿ ಮಹಿಳೆಯಾಗಿರುವ ಅಮೆರಿಕದ ಮಾರ್ತಾ ಆಸ್ಟಿನ್ ಅವರಿಗೆ, ಯಕ್ಷಗಾನದಲ್ಲಿ ಸಂಶೋಧನಾ ಪ್ರಬಂಧಕ್ಕೆ ಇವರು ಮಾರ್ಗದರ್ಶಕರಾಗಿದ್ದರು. ಅಲ್ಲದೇ ಅವರೊಂದಿಗೆ ಅಮೆರಿಕಕ್ಕೆ ತೆರಳಿ ಅಲ್ಲಿ ಯಕ್ಷಗಾನ ಪ್ರದರ್ಶನವನ್ನೂ ಕೂಡ ನೀಡಿದ್ದರು. ಇನ್ನು ಅವರು ಜಾನಪದ ಅಕಾಡೆಮಿ ಮತ್ತು ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅಲ್ಲದೇ

ಉಡುಪಿ: ಮದ್ದಳೆಯ ಮಾಂತ್ರಿಕ ಗೋಪಾಲ್ ರಾವ್ ನಿಧನ Read More »

ಕರಾವಳಿ

ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.18: ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಮತ್ತು ಪರ್ವತಮುಖಿ ಫ್ರೆಂಡ್ಸ್‌ ವತಿಯಿಂದ ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.     ಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಮಣಿಕಂಠ, ಜೇಸಿ ರವಿ ಕಕ್ಕೆಪದವು ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.  

ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಅಕ್ರಮ ಕೊಳಿ ಅಂಕಕ್ಕೆ ಪೊಲೀಸರ ದಾಳಿ ➤ ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬಳಕುಂಜೆ ಗುಡ್ಡೆ, ಅ.18: ಗುಡ್ಡೆಯಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಸ್ಥಳಕ್ಕೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಳಕುಂಜೆ ಮೇಗಿನ ಮನೆ ನಿವಾಸಿ ನಿತ್ಯಾನಂದ ಶೆಟ್ಟಿ ಹಾಗೂ ಮಾಗಂದಡಿ ನಿವಾಸಿ ವಿಜಯಕುಮಾರ್‌ ಎಂದು ಗುರುತಿಸಲಾಗಿದೆ.     ಬಳಕುಂಜೆ ಸಮೀಪ ಈ ಕೋಳಿ ಅಂಕ ನಡೆಯುತ್ತಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದ 11 ಮಂದಿ ಪರಾರಿಯಾಗಿದ್ದಾರೆ. ಬಳಕುಂಜೆ ಗುಡ್ಡೆ ಪಡ್ಪು ಬಳಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ

ಅಕ್ರಮ ಕೊಳಿ ಅಂಕಕ್ಕೆ ಪೊಲೀಸರ ದಾಳಿ ➤ ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ

ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಅ.18: ವೃದ್ಧರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ರಥಬೀದಿಯಲ್ಲಿ ಕಳೆದ ದಿನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೃಷ್ಣ ಯಾನೆ ಕಿಟ್ಟ(೬೫) ಎಂದು ಗುರುತಿಸಲಾಗಿದೆ.     ಕ್ಯಾಟರಸ್ ಕೆಲಸ ಮಾಡುತ್ತಿದ್ದ ಇವರು ಅವಿವಾಹಿತರಾಗಿದ್ದುಕೊಂಡು ಸಹೋದರನೊಂದಿಗೆ ರಥಬೀದಿಯ ಮನೆಯೊಂದರಲ್ಲಿ ವಾಸವಾಗಿದ್ದರು. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top