ಮಂಗಳೂರು

ಮರ್ಕಂಜ: ಹೆರಿಗೆ ವೇಳೆ ಮಹಿಳೆ ಮೃತ್ಯು ➤ ಮಗು ಕ್ಷೇಮ

(ನ್ಯೂಸ್ ಕಡಬ) newskadaba.com ಮರ್ಕಂಜ, ಅ.16: ಮರ್ಕಂಜದಿಂದ ಎರಡು ವರ್ಷಗಳ ಹಿಂದೆ ಪುತ್ತೂರಿನ ಕಾಪುವಿಗೆ ಮದುವೆಯಾಗಿದ್ದ ಮಹಿಳೆ ಕಳೆದ ದಿನ ಹೆರಿಗೆ ವೇಳೆ ಲೋ ಬಿಪಿ ಹಾಗೂ ರಕ್ತಸ್ರಾವ ಉಂಟಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಮರ್ಕಂಜ ಗ್ರಾಮದ ಬಳ್ಳಕ್ಕಾನ ಸುಬ್ಬಣ್ಣ ನಾಯ್ಕ ರವರ ಪುತ್ರಿ ಚಂದ್ರಕಲಾ (25) ಎಂದು ಗುರುತಿಸಲಾಗಿದೆ.     ಚಂದ್ರಕಲಾರವರನ್ನು ಪುತ್ತೂರು ತಾಲೂಕಿನ ಕಾವು ಬಳ್ಳಿಕಾನ ನಿವಾಸಿ ಪ್ರವೀಣ್‌ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಚಂದ್ರಕಲಾರವರು ಹೆರಿಗೆಗೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. […]

ಮರ್ಕಂಜ: ಹೆರಿಗೆ ವೇಳೆ ಮಹಿಳೆ ಮೃತ್ಯು ➤ ಮಗು ಕ್ಷೇಮ Read More »

ಕರಾವಳಿ

ಕಡಬ :ಇನ್ನುಂದೆ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ➤ ತಪ್ಪಿದಲ್ಲಿ ದಂಡ -ಎಸ್.ಐ ರುಕ್ಮ ನಾಯ್ಕ್

(ನ್ಯೂಸ್ ಕಡಬ) newskadaba.com ಕಡಬ ಅ. 16:  ನ್ಯಾಯಾಲಯದ ಆದೇಶ ಹಾಗೂ ಮೇಲಾಧಿಕಾರಿಗಳ ನಿರ್ದೇಶದಂತೆ ಇನ್ನು ಮುಂದೆ ದ್ವಿಚಕ್ರ ವಾಹನಗಳಲ್ಲಿ ಸಹ ಸವಾರರಾಗಿ ಸಂಚರಿಸುವವರೂ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು.   ತಪ್ಪಿದಲ್ಲಿ ದಂಡ ವಿಧಿಸಲಾಗುವುದು ಎಂದು ಕಡಬ ಠಾಣಾ ಎಸ್ಐ ರುಕ್ಮನಾಯ್ಕ್ ತಿಳಿಸಿದ್ದಾರೆ.ಕಡ್ಡಾಯವಾಗಿ ಹೆಲ್ಮೆಟ್‌ ಧರಿಸುವುದನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಮತ್ತು ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಹೆಲ್ಮೆಟ್‌ ಧರಿಸದೇ ಸಂಚಾರಿಸುವುದು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು ಎಂದು ಕಡಬ ಠಾಣಾ ಎಸ್ಐ ರುಕ್ಮನಾಯ್ಕ್ ತಿಳಿಸಿದ್ದಾರೆ ತಿಳಿಸಿದ್ದಾರೆ.  

ಕಡಬ :ಇನ್ನುಂದೆ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ➤ ತಪ್ಪಿದಲ್ಲಿ ದಂಡ -ಎಸ್.ಐ ರುಕ್ಮ ನಾಯ್ಕ್ Read More »

ಕರಾವಳಿ

ಮಕ್ಕಳ ಮೇಲೆ ದೌರ್ಜನ್ಯ ➤ 3ನೇ ಸ್ಥಾನದಲ್ಲಿ ಬೆಂಗಳೂರು.!!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 16:  ಮಕ್ಕಳ‌ ಮೇಲಿನ ದೌರ್ಜನ್ಯ ನಡೆಯುವುದರಲ್ಲಿ ದೇಶದಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಹೀಗೊಂದು ಆತಂಕಕಾರಿ ವರದಿ ಹೊರಬಿದ್ದಿದ್ದು ಸಿಲಿಕಾನ್ ಸಿಟಿಯ ಜನರಲ್ಲಿ ತಲ್ಲಣ ಹೆಚ್ಚಿಸಿದೆ.   ದೇಶದ 19 ಮಹಾನಗರಗಳಲ್ಲಿ ನಡೆಯುವ ಅಪರಾಧಗಳ ಕ್ರೋಢೀಕೃತ ವರದಿ ನೀಡಿದೆ ಎನ್‌ ಸಿ ಆರ್ ಬಿ. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ಸಂಸ್ಥೆ 2019ರ ವರ್ಷದಲ್ಲಿ ಸಂಭವಿಸಿದ ಅಪರಾಧ ಪ್ರಕರಣಗಳ ವರದಿ ನೀಡಿದೆ. ಈ ಪಟ್ಟಿಯಲ್ಲಿ ದೆಹಲಿ ಮೊದಲನೇ ಸ್ಥಾನ, ಮುಂಬೈ ಎರಡನೇ ಸ್ಥಾನ,

ಮಕ್ಕಳ ಮೇಲೆ ದೌರ್ಜನ್ಯ ➤ 3ನೇ ಸ್ಥಾನದಲ್ಲಿ ಬೆಂಗಳೂರು.!! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾಡಾನೆ ದಾಳಿಗೆ ಸಾಕಾನೆ “ರಾಜೇಂದ್ರ” ಸಾವು.!

(ನ್ಯೂಸ್ ಕಡಬ) newskadaba.com ಮಡಿಕೇರಿ ಅ. 16: ಸಮೀಪದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಕಾಡಾನೆ ದಾಳಿಯಿಂದ ಸಾಕಾನೆಯೊಂದು ಮೃತಪಟ್ಟಿದೆ. ರಾಜೇಂದ್ರ (56) ಹೆಸರಿನ ಗಂಡಾನೆ ಮೃತಪಟ್ಟಿದೆ.   ಮಂಗಳವಾರ ರಾತ್ರಿ ಈ ಆನೆಯನ್ನು ಮೇವಿಗಾಗಿ ಕಾಡಿಗೆ ಬಿಡಲಾಗಿತ್ತು. ಮರು ದಿನ ಬೆಳಿಗ್ಗೆ ಆನೆಯನ್ನು ಶಿಬಿರಕ್ಕೆ ಕರೆತರಲು ಮಾವುತ ಮತ್ತು ಕಾವಾಡಿಗರು ತೆರಳಿದಾಗ ಕಾಡಾನೆಯೊಂದಿಗೆ ಕಾದಾಟ ನಡೆಸಿದ ಆನೆಯ ಹೊಟ್ಟೆ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿತ್ತು. ಶಿಬಿರಕ್ಕೆ ಕರೆ ತಂದು ಚಿಕಿತ್ಸೆ ನೀಡಲಾಗಿತ್ತು. ಅದಕ್ಕೆ ಸ್ಪಂದಿಸದೆ ತೀವ್ರ ಅಸ್ವಸ್ಥಗೊಂಡ ಆನೆಯು

ಕಾಡಾನೆ ದಾಳಿಗೆ ಸಾಕಾನೆ “ರಾಜೇಂದ್ರ” ಸಾವು.! Read More »

ಕರಾವಳಿ, ಕರ್ನಾಟಕ

ಪತ್ತೂರು: ಹಿಂಬದಿ ಸವಾರರಿಗೂ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.16: ನ್ಯಾಯಾಲಯದ ಆದೇಶ ಹಾಗೂ ಮೇಲಾಧಿಕಾರಿಗಳ ನಿರ್ದೇಶದಂತೆ ಇನ್ನು ಮುಂದೆ ದ್ವಿಚಕ್ರ ವಾಹನಗಳಲ್ಲಿ ಸಹ ಸವಾರರಾಗಿ ಸಂಚರಿಸುವವರೂ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ತಪ್ಪಿದಲ್ಲಿ ದಂಡ ವಿಧಿಸಲಾಗುವುದು ಎಂದು ಸಂಚಾರ ಪೊಲೀಸ್‌ ಠಾಣಾ ಎಸ್.ಐ ತಿಳಿಸಿದ್ದಾರೆ.     ಕಡ್ಡಾಯವಾಗಿ ಹೆಲ್ಮೆಟ್‌ ಧರಿಸುವುದನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಮತ್ತು ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಹೆಲ್ಮೆಟ್‌ ಧರಿಸದೇ ಸಂಚಾರಿಸುವುದು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು ಎಂದು ಸಂಚಾರಿ ಠಾಣಾ ಎಸ್‌.ಐ ರಾಮ ನಾಯ್ಕ

ಪತ್ತೂರು: ಹಿಂಬದಿ ಸವಾರರಿಗೂ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ Read More »

ಕರಾವಳಿ

ಮೂಡಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16: ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಮೂಡುಬಿದಿರೆ ಶಿಕ್ಷಕಿಯೊಬ್ಬರು ಇಂದು ಮೃತಪಟ್ಟಿದ್ದಾರೆ.     ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಯವರಿಗೆ ಸೆ. 29 ರಂದು ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಮೂಡಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೃತ್ಯು Read More »

ಕರಾವಳಿ

ತಲಕಾವೇರಿ: ಕಾವೇರಿ ತೀರ್ಥೋದ್ಭವʼಗೆ ಕ್ಷಣಗಣನೆ..!

(ನ್ಯೂಸ್ ಕಡಬ) newskadaba.com ತಲಕಾವೇರಿ, ಅ.16: ಕೊಡವರ ಕುಲದೇವತೆ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲು ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಕೊರೋನಾ ಹಿನ್ನಲೆ ಈ ತೀರ್ಥೋದ್ಭವ ಜಾತ್ರೆಗೆ ಹೆಚ್ಚಿನ ಜನರು ಸೇರದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು, ಸರಳವಾಗಿ ಈ ಬಾರಿ ಕಾರ್ಯಕ್ರಮ ಆಚರಣೆ ಮಾಡಲು ಸೂಚನೆ ನೀಡಿದ್ದು, ಕೋವಿಡ್​ ಸುರಕ್ಷತೆ ಪಾಲಿಸುವುದು ಕಡ್ಡಾಯವಾಗಿದೆ. ತೀರ್ಥೋದ್ಭವದಲ್ಲಿ ಭಾಗಿಯಾಗುವ ಭಕ್ತರು ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್​ ಬಳಕೆ ಕಡ್ಡಾಯ. ತೀರ್ಥೋದ್ಭವಕ್ಕೆ ಈಗಾಗಲೇ ಎಲ್ಲಾ ಪೂಜಾ ವಿಧಿವಿಧಾನಗಳು ನಡೆಯುತ್ತಿವೆ.

ತಲಕಾವೇರಿ: ಕಾವೇರಿ ತೀರ್ಥೋದ್ಭವʼಗೆ ಕ್ಷಣಗಣನೆ..! Read More »

ಕರ್ನಾಟಕ

ಬೈಂದೂರು : ವೃತ್ತ ನಿರೀಕ್ಷಕರ ಜೀಪು ಚಾಲಕ ನಿಯಂತ್ರಣ ತಪ್ಪಿ ಪಲ್ಟಿ

(ನ್ಯೂಸ್ ಕಡಬ) newskadaba.com ವಿಟ್ಲ ಅ. 16: ಕಾರೊಂದನ್ನು ಫಾಲೋ ಮಾಡಲು ಹೋಗಿದ್ದ ಬೈಂದೂರು ವೃತ್ತ ನಿರೀಕ್ಷಕರ ಜೀಪು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವೃತ್ತ ನೀರಿಕ್ಷಕ ಸುರೇಶ್ ನಾಯ್ಕ್ ಮತ್ತು ಅವರ ಚಾಲಕ ಹೇಮ ರಾಜ್ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ.   ಗುರುವಾರ ತಡ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಒತ್ತಿನೆಣೆ ಬಳಿ ರಾತ್ರಿ ಗಸ್ತು ತಿರುಗುತ್ತಿರುವ ವೇಳೆ ಮಾರುತಿ ಓಮಿನಿ ಕಾರೊಂದು ವೃತ್ತ ನಿರೀಕ್ಷಕರ ಜೀಪನ್ನು ಕಂಡು ಅನುಮಾಸ್ಪದವಾಗಿ ವೇಗವಾಗಿ ಹೋಗಿದ್ದು, ಅದನ್ನು ಬೆನ್ನಟ್ಟಿಕೊಂಡು

ಬೈಂದೂರು : ವೃತ್ತ ನಿರೀಕ್ಷಕರ ಜೀಪು ಚಾಲಕ ನಿಯಂತ್ರಣ ತಪ್ಪಿ ಪಲ್ಟಿ Read More »

ಕರಾವಳಿ, ಕರ್ನಾಟಕ

ಹಸುವನ್ನು ಬಿಡದ ಕಾಮುಕ ➤ ಸಿಸಿಟಿವಿಯಲ್ಲಿ ವ್ಯಕ್ತಿಯ ದುರ್ವರ್ತನೆ ಸೆರೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ಅ. 16: ಹಸುವಿನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಈತ ಎರ್ನಾಕುಲಂ ಮೂಲದವನಾಗಿದ್ದು, ಕೋಯಿಕ್ಕೋಡ್ ನ ವಲಿಯವಯಾಲ್ ಮುಲ್ಲೆರಿಕುನುಮೆಲ್ ನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತ ವಾಸವಿದ್ದ 12 ಮೈಲಿ ದೂರದಲ್ಲಿದ್ದ ಚಥಮಂಗಲಂ ಎಂಬವರ ಮನೆಯ ಹಸುವಿನ ಮೇಲೆ ಆರೋಪಿ ಈ ಕೃತ್ಯ ಎಸಗಿದ್ದಾನೆ. ರಾತ್ರಿ ಆರೋಪಿ  ಕೊಟ್ಟಿಗೆಯಿಂದ ಹಸುವನ್ನು ಬಿಚ್ಚಿಕೊಂಡು ಹೊರಗಡೆ ಕರೆದೊಯ್ಯುತ್ತಾನೆ. ಬಳಿಕ ಅದರ ಮೇಲೆ ಅಸಹಜ ಲೈಂಗಿಕ ಕ್ರಿಯೆ ಎಸಗುತ್ತಿದ್ದನು.

ಹಸುವನ್ನು ಬಿಡದ ಕಾಮುಕ ➤ ಸಿಸಿಟಿವಿಯಲ್ಲಿ ವ್ಯಕ್ತಿಯ ದುರ್ವರ್ತನೆ ಸೆರೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನ ಬಾರ್‌ ಮಾಲೀಕ ಮನೀಷ್ ಶೆಟ್ಟಿ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 16: ಗುರುವಾರ ರಾತ್ರಿ ನಗರದ ರೆಸ್ಟ್ ಹೌಸ್ ಪಾರ್ಕ್ ರಸ್ತೆಯಲ್ಲಿ ಮಾಲೀಕನ ಮೇಲೆ ಶೂಟೌಟ್‌ ಮಾಡಲಾಗಿದೆ.ಡ್ಯುಯೆಟ್ ಬಾರ್ ಮಾಲೀಕನಾಗಿರುವ ಮನೀಷ್ ಮೇಲೆ ಎರಡು ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.   ಮನೀಷ್‌ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ನಡೆದ ಸ್ಥಳದಲ್ಲಿ ಒಂದು ಡಿಯೋ ಬೈಕ್ ಬಿಟ್ಟು ಹೋಗಿದ್ದಾರೆ. ಪಬ್ ನಿಂದ ಇನ್ನೂರು ಮೀಟರ್ ದೂರದಲ್ಲಿ ಮತ್ತೊಂದು ಬೈಕ್ ಮತ್ತು ಡಬ್ಬಲ್ ಬ್ಯಾರಲ್ ಗನ್ ಎಸೆದು ಆರೋಪಿಗಳು

ಬೆಂಗಳೂರಿನ ಬಾರ್‌ ಮಾಲೀಕ ಮನೀಷ್ ಶೆಟ್ಟಿ ಮೇಲೆ ಶೂಟೌಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top