ಮಂಗಳೂರು

ಮಂಗಳೂರು: ಅತ್ಯಾಧುನಿಕ ಸಿಗ್ನಲ್ ಅಳವಡಿಕೆ ಕಾಮಗಾರಿ ಪೂರ್ಣ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.05: ಮಂಗಳೂರು – ಹಾಸನ ರೈಲು ಮಾರ್ಗದ ಯಡಕುಮೇರಿ ಹಾಗು ಕಡಗರವಳ್ಳಿ ನಿಲ್ದಾಣ ಮಧ್ಯೆ ಕೈಗೊಂಡಿರುವ ಅತ್ಯಾಧುನಿಕ ವ್ಯವಸ್ಥೆಗಳಿರುವ ಸಿಗ್ನಲ್‌ ವ್ಯವಸ್ಥೆ ಅಳವಡಿಕೆ ಕಾಮಗಾರಿಯು ಇದೀಗ ಪೂರ್ಣಗೊಂಡಿದೆ. ಸಿಗ್ನಲ್‌ ವ್ಯವಸ್ಥೆ ಉನ್ನತೀಕರಣದಿಂದಾಗಿ ಈ ಮಾರ್ಗದಲ್ಲಿ ರೈಲು ಸಂಚಾರ ಸಾಮರ್ಥ್ಯ ಶೇ. 35ರಷ್ಟು ವೃದ್ಧಿಯಾಗಿದ್ದು, ಹೆಚ್ಚು ಪ್ರಯಾಣಿಕರ ಹಾಗೂ ಸರಕು ಸಾಗಾಟ ರೈಲುಗಳ ಸಂಚಾರ ಸಾಧ್ಯವಾಗಲಿದೆ.   ಇನ್ನು ಹಾಸನ-ಮಂಗಳೂರು ರೈಲ್ವೇ ಅಭಿವೃದ್ಧಿ ನಿಗಮವು 4.4 ಕೋ.ರೂ. ವೆಚ್ಚವನ್ನು ಭರಿಸಿದೆ. ಕಡಗರವಳ್ಳಿ ಹಾಗು […]

ಮಂಗಳೂರು: ಅತ್ಯಾಧುನಿಕ ಸಿಗ್ನಲ್ ಅಳವಡಿಕೆ ಕಾಮಗಾರಿ ಪೂರ್ಣ Read More »

ಕರಾವಳಿ, ಕರ್ನಾಟಕ

ಕಾವೇರಿ ತೀರ್ಥೋತ್ಭವ ವೀಕ್ಷಣೆಗೆ ಕೋವಿಡ್‌ ಪರೀಕ್ಷೆಯ ದೃಢೀಕರಣ ಪತ್ರ ಕಡ್ಡಾಯ ➤ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ.05: ಕಾವೇರಿ ನದಿಯ ಉಗಮ ಸ್ಥಾನವಾದ ಕೊಡಗಿನ ತಲಕಾವೇರಿಯಲ್ಲಿ ಅ. 17ರಂದು ಬೆಳಗ್ಗೆ 7.03ಕ್ಕೆ ಕಾವೇರಿ ತೀರ್ಥ ಉದ್ಭವವಾಗಲಿದೆ. ಆದರೆ, ಈ ಅದ್ಭುತ ಕ್ಷಣವನ್ನು ವೀಕ್ಷಿಸಲು ಆಗಮಿಸುವ ಹೊರ ರಾಜ್ಯ ಹಾಗು ಜಿಲ್ಲೆಯ ಭಕ್ತರು ಕೋವಿಡ್‌ ಪರೀಕ್ಷೆಯ ದೃಢೀಕರಣ ಪತ್ರವನ್ನು ಜೊತೆಗೆ ತರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ತೀರ್ಥ ಉದ್ಭವದ ಸಂದರ್ಭ ಸಾಂಪ್ರದಾಯಿಕ ಆಚರಣೆಗಳಿಗೆ ಯಾವುದೇ ಅಡ್ಡಿ, ಆತಂಕಗಳಿರುವುದಿಲ್ಲ. ಆದರೆ, ಕೋವಿಡ್‌ ಮುಂಜಾಗ್ರತಾ ಕ್ರಮವಾಗಿ ಹೊರಗಿನಿಂದ ಬರುವ

ಕಾವೇರಿ ತೀರ್ಥೋತ್ಭವ ವೀಕ್ಷಣೆಗೆ ಕೋವಿಡ್‌ ಪರೀಕ್ಷೆಯ ದೃಢೀಕರಣ ಪತ್ರ ಕಡ್ಡಾಯ ➤ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ Read More »

ಕರಾವಳಿ, ಕರ್ನಾಟಕ

ಕಾರ್ಕಳ :ಮಹಿಳೆಯ ಚಿನ್ನದ ಸರ ಕಸಿದು ಕಳ್ಳರು ಎಸ್ಕೇಪ್

(ನ್ಯೂಸ್ ಕಡಬ) newskadaba.com ಕಾರ್ಕಳ, ಅ. 05.ಕಾರ್ಕಳದ ಎರ್ಲಪಾಡಿ ಬಳಿಯ ಬುಕ್ಕಿಗುಡ್ಡೆ ಎಂಬಲ್ಲಿ ಮಹಿಳೆಯೋರ್ವರ ಕುತ್ತಿಯಿಂದ ಕಳ್ಳರು ಚೈನ್ ಎಳೆದ ಘಟನೆ ಇಂದು ಬೆಳಗ್ಗೆ ನೆಡೆದಿದೆ. ಬುಕ್ಕಿಗುಡ್ಡೆ ಕಮಲಾ(75) ಎಂಬುವವರು ಶಿವನೆಟ್ಟು ಮಣ್ಣು ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಇಬ್ಬರು ಕಳ್ಳರು ಕಮಲಾ ರವರ ಕುತ್ತಿಯಲ್ಲಿದ್ದ 2 ಪವನ್ ಚೈನ್ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾರೆ. ಕಳ್ಳರ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.  

ಕಾರ್ಕಳ :ಮಹಿಳೆಯ ಚಿನ್ನದ ಸರ ಕಸಿದು ಕಳ್ಳರು ಎಸ್ಕೇಪ್ Read More »

ಕರಾವಳಿ, ಕ್ರೈಮ್ ನ್ಯೂಸ್

ಇನ್ನುಂದೆ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೆ ಎಷ್ಟು ಮೊತ್ತದ ದಂಡ ಗೊತ್ತೇ..!!?

(ನ್ಯೂಸ್ ಕಡಬ) newskadaba.com ಮಂಗಳೂರು, ಅ.05: ಕೊರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರಕಾರದಿಂದ ಕಟ್ಟು ನಿಟ್ಟಾಗಿ ಆದೇಶಗಳನ್ನು  ಹೊರಡಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದ್ದು, ಕೊರೋನಾ ಮಾರ್ಗಸೂಚಿಯನ್ನು ಉಲ್ಲಂಘಿಸುವವರು ಇನ್ನು ಮುಂದೆ ಬಹಳ ಎಚ್ಚರವಾಗಿರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೇ ಇಂದಿನಿಂದ, ಭಾರೀ ದಂಡ ಪಾವತಿಸಬೇಕಾಗುತ್ತದೆ. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ ಜನರಿಗೆ 1,000 ರೂ.ಗಳ ದಂಡ ಮತ್ತು ಇತರ ಸ್ಥಳಗಳಲ್ಲಿ ಮಾಸ್ಕ್‌ ಹಾಕದವರಿಗೆ 500 ರೂ. ವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನುಂದೆ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೆ ಎಷ್ಟು ಮೊತ್ತದ ದಂಡ ಗೊತ್ತೇ..!!? Read More »

ಕರಾವಳಿ

ಸುಬ್ರಹ್ಮಣ್ಯ :ಎಸ್ಕಾಂಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 05. ಸುಬ್ರಹ್ಮಣ್ಯದಲ್ಲಿ ಎಸ್ಕಾಂಗಳ ವತಿಯಿಂದ ಖಾಸಗೀಕರಣ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಇಂದು ಪ್ರತಿಭಟನೆ ನಡೆಸಿದ್ದಾರೆ.  ರಾಜ್ಯಾದಾದ್ಯಂತ ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣ ಮಡುವುದನ್ನು ವಿರೋಧಿಸಿ ಸುಬ್ರಹ್ಮಣ್ಯ ಸಬ್ ಸ್ಟೇಶನ್ ನ ವ್ಯಾಪ್ತಿಯ ನೌಕಕರು ಇಂಧು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗ್ಗೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಎಲ್ಲರೂ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸಡರಣ ನಿಗಮ ನೌಕರರ ಸಂಘ ಮತ್ತು ಸಂಘಗಳ ಒಕ್ಕೋಟ ವತಿಯಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ.

ಸುಬ್ರಹ್ಮಣ್ಯ :ಎಸ್ಕಾಂಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ Read More »

ಕರಾವಳಿ

ಕುಂದಾಪುರ: ಸರಣಿ ಕಳ್ಳತನ ➤ ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಅ.05: ಕುಂದಾಪುರದ ಆಸು – ಪಾಸಿನ ಪ್ರದೇಶದಲ್ಲಿ ನಡೆದ ಸರಣಿ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಆರೋಪಿಗಳನ್ನು ಹೊನ್ನಾವರದ ಮಂಕಿ ಗ್ರಾಮದ ವಿಲ್ಸನ್ ಪಿಯದಾಸ್ ಲೋಪಿಸ್ (29) ಹಾಗೂ ತೊಕೆಟ್ಟೆಯ 2 ನೇ ಕ್ರಾಸ್ ನಿವಾಸಿ ಗಂಗಾಧರ್ (40) ಎಂದು ಗುರುತಿಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು ಬಂಧಿತರಿಂದ 64.76 ಗ್ರಾಂ ಚಿನ್ನ ಮತ್ತು 112 ಗ್ರಾಂ ಬೆಳ್ಳಿ ಮತ್ತು

ಕುಂದಾಪುರ: ಸರಣಿ ಕಳ್ಳತನ ➤ ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಳಿಗೆ: ಆಕಸ್ಮಿಕವಾಗಿ ತೆಂಗಿನಮರವೊಂದು ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.05: ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಒಣಗಿದ ತೆಂಗಿನ ಮರವೊಂದು ಬಿದ್ದು ಕಾರ್ಮಿಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಇಂದು ಇರ್ದೆ ಗ್ರಾಮದ ಉಪ್ಪಳಿಗೆಯಲ್ಲಿ ನಡೆದಿದೆ.     ಉಪ್ಪಳಿಗೆ ತೋಟವೊಂದರಲ್ಲಿ ಕೆಲಸ ಮಾಡುತ್ತಿರುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತರನ್ನು ಉಪ್ಪಳಿಗೆ ಗುರುವ ಎಂಬವರ ಪುತ್ರ ಬಾಬು ಯಾನೆ ನೋನ (50 ವ.) ಎಂದು ಗುರುತಿಸಲಾಗಿದೆ.  

ಉಪ್ಪಳಿಗೆ: ಆಕಸ್ಮಿಕವಾಗಿ ತೆಂಗಿನಮರವೊಂದು ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ : ಎಂಡಿಎಂಎ ಮಾತ್ರೆ ಪೂರೈಸುತ್ತಿದ್ದ ಡ್ರಗ್ಸ್ ಪೆಡ್ಲರ್ ವಿದ್ಯಾರ್ಥಿಯ ಅರೆಸ್ಟ್

 (ನ್ಯೂಸ್ ಕಡಬ) newskadaba.com ಉಡುಪಿ, ಅ. 05. ಸಹಪಾಠಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ವಿದ್ಯಾರ್ಥಿಯನ್ನು ಬಂಧಿಸಿರುವ ಪೊಲೀಸರು 14.94 ಲಕ್ಷ ರೂ. ಮೌಲ್ಯದ ನಿಷೇಧಿತ ನಿದ್ರಾಜನಕ ಎಂಡಿಎಂಎ ಮಾತ್ರೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಕಾಲೇಜಿನ ಇನ್‌ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ವಿಭಾಗದ 7ನೇ ಸೆಮಿಸ್ಟರ್‌ನ ವಿದ್ಯಾರ್ಥಿ, ಉತ್ತರ ಭಾರತ ಮೂಲದ ಹಿಮಾಂಶು ಜೋಷಿ(20) ಬಂಧಿತ ಆರೋಪಿ. ಆಂತರಿಕ ಭದ್ರತಾ ವಿಭಾಗದ ಮಾಹಿತಿ ಮೇರೆಗೆ ಉಡುಪಿ ಐಎಸ್‌ಡಿ ಘಟಕ ಮತ್ತು ಮಣಿಪಾಲ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದ್ದು, ಶೀಂಬ್ರಾ ಸೇತುವೆ ಬಳಿ

ಉಡುಪಿ : ಎಂಡಿಎಂಎ ಮಾತ್ರೆ ಪೂರೈಸುತ್ತಿದ್ದ ಡ್ರಗ್ಸ್ ಪೆಡ್ಲರ್ ವಿದ್ಯಾರ್ಥಿಯ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ ಜಿ.ಪಂ. ನೂತನ ಸಿಇಒ ಆಗಿ ಡಾ| ನವೀನ್‌ ಭಟ್‌ ನೇಮಕ

(ನ್ಯೂಸ್ ಕಡಬ) newskadaba.com ಉಡುಪಿ, ಅ. 05. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ಭಾನುವಾರ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಡಾ. ವೈ. ನವೀನ್ ಭಟ್‌ ಅವರನ್ನು ನಿಯೋಜಿಸಲಾಗಿದೆ.     ನವೀನ್‌ ಭಟ್‌ 2017ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದು, ಹಾಸನ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರೀತಿ ಗೆಹ್ಲೋಟ್‌ ಸೆ. 07, 2019ರಂದು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ ಸದ್ಯಕ್ಕೆ ಸರಕಾರ ಅವರಿಗೆ ಯಾವುದೇ ಸ್ಥಾನವನ್ನು ತೋರಿಸಿಲ್ಲ.

ಉಡುಪಿ ಜಿ.ಪಂ. ನೂತನ ಸಿಇಒ ಆಗಿ ಡಾ| ನವೀನ್‌ ಭಟ್‌ ನೇಮಕ Read More »

ಕರಾವಳಿ, ಕರ್ನಾಟಕ

ಟ್ರಬಲ್ ಶೂಟರ್​ಗೆ ಮತ್ತೊಂದು ಸಂಕಷ್ಟ ➤ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಟ್ರಬಲ್ ಶೂಟರ್, ಕನಕಪುರ ಬಂಡೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗಿರುವಾಗ ನಡೆದಿರುವ ದಾಳಿ ರಾಜಕೀಯ ಸ್ವರೂಪ ಪಡೆಯುವ ನಿರೀಕ್ಷೆ ಇದೆ. ಸೋಮವಾರ ಬೆಳಗ್ಗೆ ಐವರು ಅಧಿಕಾರಿಗಳ ತಂಡ ಸದಾಶಿವ ನಗರದಲ್ಲಿರುವ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲಿಯೇ ಅಧಿಕಾರಿಗಳು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ

ಟ್ರಬಲ್ ಶೂಟರ್​ಗೆ ಮತ್ತೊಂದು ಸಂಕಷ್ಟ ➤ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ Read More »

ರಾಷ್ಟ್ರೀಯ ನ್ಯೂಸ್
Scroll to Top