ಮಂಗಳೂರು

ಪುತ್ತೂರು: ಅಳಕೆ ಮಜಲು ಬಳಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 01. ಪುತ್ತೂರು ವಿಟ್ಲ ರಸ್ತೆಯ ಅಳಕೆ ಮಜಲು ಎಂಬಲ್ಲಿ ಲಾರಿ ಪಲ್ಟಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.   ಪುತ್ತೂರಿನಿಂದ ವಿಟ್ಲ ಕಡೆಗೆ ಹರಳಿನ ಹಿಂಡಿ ಲೋಡನ್ನು ತುಂಬಿಸಿಕೊಂಡು ಬರುತ್ತಿರುವಾಗ ಅಳಕೆ ಮಜಲಿನ ಪೆಲತ್ತಿಂಜ ಎಂಬಲ್ಲಿ ಲಾರಿ ಪಲ್ಟಿಯಾಗಿದೆ.  ಘಟನೆಯಲ್ಲಿ ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಗಿದ್ದಾರೆ. ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಉಂಟಾಗಿತ್ತು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.  

ಪುತ್ತೂರು: ಅಳಕೆ ಮಜಲು ಬಳಿ ಲಾರಿ ಪಲ್ಟಿ Read More »

ಕರಾವಳಿ, ಕರ್ನಾಟಕ

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ➤ ‘ನನಗೆ ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ” ಎಂದು ಪ್ರಾಣ ಬಿಟ್ಟ ಯುವತಿ..!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಅ. 01. ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ದಲಿತ ಯುವತಿ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಿಪಕ್ಷಗಳು ಹರಿಹಾಯ್ದಿವೆ.ಬಲರಾಂಪುರ ಜಿಲ್ಲೆಯ 22 ವರ್ಷದ ದಲಿತ ಯುವತಿಯ ಮೇಲೆ ಮಂಗಳವಾರ ಇಬ್ಬರು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.   ಆಕೆ ಬಲಾಂಪುರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ➤ ‘ನನಗೆ ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ” ಎಂದು ಪ್ರಾಣ ಬಿಟ್ಟ ಯುವತಿ..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿರೂಪಕಿ ಅನುಶ್ರೀ ಬಗ್ಗೆ ಬಾಯ್ಬಿಟ್ಟ ನೈಜೀರಿಯಾ ಪ್ರಜೆ ➤ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ ನಿರೂಪಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ನೈಜೀರಿಯಾ ಪ್ರಜೆಗೂ ನಟಿ, ನಿರೂಪಕಿ ಅನುಶ್ರೀ ಪರಿಚಯ ಇದೆ. ಬೆಂಗಳೂರಿನಲ್ಲಿ ನಡೆದ ಡ್ರಗ್ಸ್‌ ಪಾರ್ಟಿಗಳಲ್ಲಿ ಅನುಶ್ರೀಯನ್ನು ನೋಡಿರುವುದಾಗಿ ಈತ ಹೇಳಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.   ಈಗಾಗಲೇ ಬಂಧಿತಳಾಗಿರುವ ಕಿಶೋರ್ ಗೆಳತಿ ಆಸ್ಕಾಳಿಗೂ ಅನುಶ್ರೀ ಪರಿಚಯವಿದೆ. ಅಲ್ಲದೇ ತರುಣ್‌ ರಾಜ್‌ ಕೂಡ ಅನುಶ್ರೀ ಪಾರ್ಟಿಯಲ್ಲಿ ಭಾಗವಹಿಸುತ್ತಿದ್ದರು ಎನ್ನುವ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅನುಶ್ರೀ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳು ಕಂಡು

ನಿರೂಪಕಿ ಅನುಶ್ರೀ ಬಗ್ಗೆ ಬಾಯ್ಬಿಟ್ಟ ನೈಜೀರಿಯಾ ಪ್ರಜೆ ➤ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ ನಿರೂಪಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್‌ಗೆ ಲಾರಿ ಡಿಕ್ಕಿ ➤ ದ್ವಿಚಕ್ರ ಸವಾರ ಗಂಭೀರ..!!

(ನ್ಯೂಸ್ ಕಡಬ) newskadaba.com ಸುರತ್ಕಲ್, ಸೆ.30: ಹಿಂಬದಿಯಿಂದ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಎದುರಿದ್ದ ಖಾಸಗಿ ಬಸ್‌ಗೆ ಸ್ಕೂಟರ್‌ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್‌ನ ಮಿಸ್ಕಿತ್ ಆಸ್ಪತ್ರೆಯ ಬಳಿ ನಡೆದಿದೆ.     ಗಂಭೀರ ಗಾಯಗೊಂಡ ದ್ವಿಚಕ್ರ ಸವಾರನನ್ನು ಸುಧಾಕರ್‌ (28) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸುರತ್ಕಲ್‌ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.  

ಸ್ಕೂಟರ್‌ಗೆ ಲಾರಿ ಡಿಕ್ಕಿ ➤ ದ್ವಿಚಕ್ರ ಸವಾರ ಗಂಭೀರ..!! Read More »

ಕರಾವಳಿ

ಜಿ. ಪಂ. ಸದಸ್ಯನಿಂದ ಬಾಕ್ಸೈಟ್ ಸಾಗಾಟ ➤ ಪೊಲೀಸರ ದಾಳಿ, ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೈಂದೂರು, ಸೆ. 30. ಬೈಂದೂರು ಒತ್ತಿನೆಣೆಯ ಸೆಳ್ಳೆಕುಳ್ಳಿ ಎಂಬ ಪ್ರದೇಶದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರ ಜಾಗದಲ್ಲಿ ಅಕ್ರಮವಾಗಿ ಬಾಕ್ಸೈಟ್ ಅಗೆದು ಸಾಗಾಟ ಮಾಡುತ್ತಿದ್ದ ಪ್ರದೇಶಕ್ಕೆ ಬೈಂದೂರು ಪೊಲೀಸರು ದಾಳಿ ನಡೆಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಈ ಭಾಗದಲ್ಲಿ ನಿಷೇಧಿತ ಬಾಕ್ಸೈಟ್ ಅದಿರನ್ನು ಅಗೆಸು ಅಕ್ರಮವಾಗಿ ಸಾಗಿಸಲಗುತ್ತಿತ್ತು ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಬಟ್ಟಾಡಿ ಅವರ ಜಾಗದಲ್ಲಿ ಈ ಬಾಕ್ಸೈಟ್‍ನ್ನು ಶ್ರೀ ಕಾಮತ್ ಶೆಟ್ಟಿ ಕಳೆದ ಒಂದು ತಿಂಗಳಿನಿಂದ ಅಗೆದು ಆಂದ್ರಪ್ರದೇಶದ ಸಿಮೆಂಟ್ ಕಂಪನಿಗೆ

ಜಿ. ಪಂ. ಸದಸ್ಯನಿಂದ ಬಾಕ್ಸೈಟ್ ಸಾಗಾಟ ➤ ಪೊಲೀಸರ ದಾಳಿ, ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನಿವೃತ್ತ ಶಸ್ತ್ರಚಿಕಿತ್ಸಕ ಡಾ.ದೇವದಾಸ್‌‌ ಹೆಗ್ಡೆ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30: ನಗರದ ಖ್ಯಾತ ಶಸ್ತ್ರಚಿಕಿತ್ಸಕ ಡಾ.ದೇವದಾಸ್‌‌‌ ಹೆಗ್ಡೆ (79) ಅವರು ಕಳೆದ (ಮಂಗಳವಾರ) ದಿನದಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಡಾ.ದೇವದಾಸ್ ಹೆಗ್ಡೆ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.     ಡಾ.ಹೆಗ್ಡೆ ಅವರು  ಎ.ಜೆ ಮೆಡಿಕಲ್‌ ಕಾಲೇಜಿನ ಡೀನ್‌‌‌‌ ಹಾಗೂ ಕೆ.ಎಸ್‌‌‌.ಹೆಗ್ಡೆ ಮೆಡಿಕಲ್‌‌ ಅಕಾಡೆಮಿಯ ನಿವೃತ್ತ ಮುಖ್ಯ ಶಸ್ತ್ರಚಿಕಿತ್ಸಕರಾಗಿದ್ದರು. ಕಸ್ತೂರ್ಬಾ ಮೆಡಿಕಲ್‌ ಕಾಲೇಜು ಆಸ್ಪತ್ರೆಯ ನಿವೃತ್ತ ಪ್ರಾಧ್ಯಾಪಕರಾಗಿದ್ದರು.  

ಮಂಗಳೂರು: ನಿವೃತ್ತ ಶಸ್ತ್ರಚಿಕಿತ್ಸಕ ಡಾ.ದೇವದಾಸ್‌‌ ಹೆಗ್ಡೆ ನಿಧನ Read More »

ಕರಾವಳಿ

ರಾತ್ರೋ ರಾತ್ರಿ ಅಡಿಕೆ ಕಳ್ಳತನ ಗೈದ ಖದೀಮರು..!!

(ನ್ಯೂಸ್ ಕಡಬ) newskadaba.com ಕಾಯರ್ತಡ್ಕ, ಸೆ. 30. ಕಾಯರ್ತಡ್ಕದಲ್ಲಿ ಸುಮಾರು 12 ವರ್ಷಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಪುತ್ತೂರಿನ ಸಿದ್ದೀಕ್ ಆಲಿಯವರ ಕಾರುಣ್ಯ ಟ್ರೇಡರ್ಸ್ ಗೆ ತಡ ರಾತ್ರಿ ನುಗ್ಗಿದ್ದ ಕಳ್ಳರ ತಂಡವೊಂದು ಸುಮಾರು 65 ಕೆಜಿಯಂತೆ ತುಂಬಿಸಿದ್ದ 9 ಗೋಣಿ ಅಡಿಕೆಯನ್ನು ಹೊತೊಯ್ದ ಘಟನೆ ನಡೆದಿದೆ. ಎಂದಿನಂತೆ ಅಂಗಡಿಯಲ್ಲಿ ಕೆಲಸಕ್ಕಿರುವವರು ಬಂದು ಬಾಗಿಲು ತೆರೆಯಲೆಂದು ಬಂದಾಗ ಬೀಜ ಮುರಿದಿರುವುದು ಕಂಡು ಬಂದಿದೆ.ಒಳ ಹೋಗಿ ನೋಡಿದ ವೇಳೆ ಅಡಿಕೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ

ರಾತ್ರೋ ರಾತ್ರಿ ಅಡಿಕೆ ಕಳ್ಳತನ ಗೈದ ಖದೀಮರು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ : ದೊಡ್ಡತೋಟದಲ್ಲಿ ರಸ್ತೆ ಬಿಟ್ಟು ತೋಡಿಗಿಳಿದ ಜೀಪು

(ನ್ಯೂಸ್ ಕಡಬ) newskadaba.com ದೊಡ್ಡತೋಟ, ಸೆ.30: ಸುಳ್ಯ ದೊಡ್ಡತೋಟದಿಂದ ಮರ್ಕಂಜ ರಸ್ತೆಯ ನಳಿಯಾರು ಎಂಬಲ್ಲಿ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ತೋಡಿಗಿಳಿದು ಭಾರೀ ಅಪಾಯದಿಂದ ಬಚಾವ್‌ ಆದ ಘಟನೆ ಕಳೆದ ದಿನ ಸಂಜೆ ವರದಿಯಾಗಿದೆ.     ದೊಡ್ಡತೋಟ – ಮರ್ಕಂಜಕ್ಕೆ ಹೋಗುವ ರಸ್ತೆಯ ದೊಡ್ಡತೋಟದಿಂದ ಸ್ವಲ್ಪ ಮುಂದಕ್ಕೆ ಹೋದಂತೆ ಇಳಿಜಾರು ಹಾಗೂ ತಿರುವು ಇದೆ. ಹಾಗೂ ಕೆಳಭಾಗದಲ್ಲಿ ತೋಡೊಂದು ಹರಿಯುತ್ತಿದ್ದು, ತಿರುವಿನಲ್ಲಿ ನಿಯಂತ್ರಣ ತಪ್ಪಿದ ಜೀಪು ನೇರವಾಗಿ ಸುಮಾರು 50 ಅಡಿ ಕೆಳಗೆ ಹರಿಯುವ ತೋಡಗೆ

ಸುಳ್ಯ : ದೊಡ್ಡತೋಟದಲ್ಲಿ ರಸ್ತೆ ಬಿಟ್ಟು ತೋಡಿಗಿಳಿದ ಜೀಪು Read More »

ಕರಾವಳಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೊನಾ ದೃಢ

 (ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 30. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕಿಗೆ ತಗುಲಿರುವುದಾಗಿ ತಿಳಿದುಬಂದಿದೆ.   ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಂಗಳವಾರ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದರು, ಅದರ ವರದಿ ಬಂದಿದ್ದು, ಅದರಲ್ಲಿ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಇದೀಗ ಅವರು ಆರೋಗ್ಯವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.  

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೊನಾ ದೃಢ Read More »

ಕರಾವಳಿ

ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ ➤ ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 30. ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್ ಕೆ ಯಾದವ್ ಅವರು ಇಂದು (ಸೆ. 30) ಪ್ರಕಟಿಸಿದ್ದು, ಪ್ರಮುಖ ಆರೋಪಿಗಳಾದ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾಭಾರತಿ ಸೇರಿದಂತೆ ಎಲ್ಲಾ ಆರೋಪಿಗಳು ನಿರ್ದೋಷಿಗಳು ಎಂದು ತಿಳಿಸಿದೆ. ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವನಿಯೋಜಿತ ಕೃತ್ಯ ಅಲ್ಲ. ಇದು ಆಕಸ್ಮಿಕವಾಗಿ ನಡೆದದ್ದು ಎಂದು ಲಖ್ನೋ ವಿಶೇಷ ನ್ಯಾಯಾಲಯದ

ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ ➤ ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್ Read More »

ರಾಷ್ಟ್ರೀಯ ನ್ಯೂಸ್
Scroll to Top