ಮಂಗಳೂರು

ಪಂಜ : ಔಷಧಕ್ಕಾಗಿ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24:  ವ್ಯಕ್ತಿಯೊಬ್ಬರು ಮುಂಜಾನೆ ಉಜಿರೆ ಖಾಸಗಿ ಆಸ್ಪತ್ರೆಗೆ ಔಷಧಕ್ಕಾಗಿ ತೆರಳಿದ ಪಂಜದ ಕೃಷ್ಣ ನಗರದ ನಿವಾಸಿ ದಿ. ಶೇಷಪ್ಪ ಆಚಾರ್ಯರವರ ಪುತ್ರ ವಸಂತ ಆಚಾರ್ಯರವರು ಆಸ್ಪತ್ರೆಯಲ್ಲಿಯೇ ಹೃದಯಾಘಾತದಿಂದ ನಿಧನರಾದ ಘಟನೆ ಇಂದು ಸಂಭವಿಸಿದೆ.     ಮುಂಜಾನೆ ಉಜಿರೆ ಖಾಸಗಿ ಆಸ್ಪತ್ರೆಗೆ ಔಷಧಕ್ಕಾಗಿ ತೆರಳಿ, ಅಲ್ಲಿ ತಲುಪಿ ಸ್ವಲ್ಪ ಹೊತ್ತಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.ಎಂದು ತಿಳಿದುಬಂದಿದೆ    

ಪಂಜ : ಔಷಧಕ್ಕಾಗಿ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ

ಮತ್ತೆ ಕರ್ನಾಟಕದಲ್ಲಿ ಲಾಕ್ ಡೌನ್ ಇಲ್ಲ ➤ ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 24:  ಕೊರೋನಾ ಸೋಂಕಿನ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ, ಕಳೆದ ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಯಡಿಯೂರಪ್ಪ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಕೊರೋನಾ ಕಂಟ್ರೋಲ್ ಗಾಗಿ ಲಾಕ್ ಡೌನ್ ಸಲಹೆ ನೀಡಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಲಿದೆ ಎನ್ನುವ ಕುರಿತಂತೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.  

ಮತ್ತೆ ಕರ್ನಾಟಕದಲ್ಲಿ ಲಾಕ್ ಡೌನ್ ಇಲ್ಲ ➤ ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24: ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು 66ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು.   ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಮೊದಲ ಕೇಂದ್ರ ಸಚಿವರು. ಗೈಡ್​ಲೈನ್ಸ್​ ಪ್ರಕಾರ ಕೊರೊನಾ ಸೋಂಕಿಗೀಡಾಗಿ ನಿಧನರಾದವರ ಮೃತದೇಹವನ್ನ ಒಂದು ರಾಜ್ಯದಿಂದ

ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ Read More »

ಕರಾವಳಿ

ಹಿರಿಯ ನಟ ರಾಕ್​ಲೈನ್ ಸುಧಾಕರ್ ನಿಧನ..!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ. 24:  ತಮ್ಮ ವಿಶಿಷ್ಟ ಕಾಮಿಡಿ ನಟನೆಯ ಮೂಲಕ ಸ್ಯಾಂಡಲ್ ವುಟ್ ಚಿತ್ರರಂಗದಲ್ಲಿ ನಟರಾಗಿ ಗುರ್ತಿಸಿಕೊಂಡಿದ್ದಂತ ನಟ ರಾಕ್ ಲೈನ್ ಸುಧಾಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.   ಶೂಟಿಂಗ್​ ಸಮಯದಲ್ಲೇ ಹೃದಯಾಘತ ಸಂಭವಿಸಿದ್ದರಿಂದ ಹಿರಿಯ ನಟ ರಾಕ್​ಲೈನ್​ ಸುಧಾಕರ್​ ಮೃತಪಟ್ಟಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಪೋಷಕ ಪಾತ್ರ ಹಾಗೂ ಕಾಮಿಡಿ ಪಾತ್ರಗಳಲ್ಲಿ ಅವರು ನಟಿಸಿದ್ದರು. ಅವರ ಅಗಲಿಕೆ ಇಡೀ ಚಿತ್ರರಂಗವೇ ಶೋಕ ವ್ಯಕ್ತಪಡಿಸಿದೆ. ಕೆಲ ದಿನಗಳ ಹಿಂದಷ್ಟೇ ಸುಧಾಕರ್​ಗೆ ಕೊರೋನಾ ಸೋಂಕು ತಗುಲಿತ್ತು. ಇದಕ್ಕಾಗಿ ಅವರು

ಹಿರಿಯ ನಟ ರಾಕ್​ಲೈನ್ ಸುಧಾಕರ್ ನಿಧನ..!! Read More »

ಕರ್ನಾಟಕ

ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ನೆಲ್ಯಾಡಿ ➤ ಪತ್ನಿ, ಚಿಕ್ಕಮ್ಮ ಮೇಲೆ ಆಸಿಡ್ ದಾಳಿ,ಆರೋಪಿ ಪರಾರಿ..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 24: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ಎರಚಿದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ 38 ವರುಷ ಪ್ರಾಯದ ಬಿಜು ಎಂಬಾತ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ನೆಲ್ಯಾಡಿ ನಿವಾಸಿ ಬಿಜು ತನ್ನ ಪತ್ನಿ ಶೈನಿ ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ ಮೇಲೆ ಆಸಿಡ್ ದಾಳಿ ನಡೆಸಿದ ಪರಿಣಾಮ

ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ನೆಲ್ಯಾಡಿ ➤ ಪತ್ನಿ, ಚಿಕ್ಕಮ್ಮ ಮೇಲೆ ಆಸಿಡ್ ದಾಳಿ,ಆರೋಪಿ ಪರಾರಿ..!! Read More »

ಕರಾವಳಿ, ಕ್ರೈಮ್ ನ್ಯೂಸ್

ನೇಕಾರ ಲಕ್ಷ್ಮಣ ಶೆಟ್ಟಿಗಾರ್ ಅವರ ನೆರವಿಗೆ ನಿಂತ ಕೇಂದ್ರ ಸಚಿವೆ ಸ್ಮೃತಿ ಇರಾನಿ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 24: ಉಡುಪಿಯಲ್ಲಿ ಸುರಿದ ಮಹಾಮಳೆಗೆ ಬದುಕಿಗೆ ಆಧಾರವಾಗಿದ್ದ ಕೈಮಗ್ಗ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟಪಾಡಿ ಮಟ್ಟುವಿನ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ಸಹಾಯಕ್ಕೆ ನಿಂತಿದ್ದಾರೆ. ಲಕ್ಷ್ಮಣ್‌ ಶೆಟ್ಟಿಗಾರ್‌ ಕುಟುಂಬಕ್ಕೆ ತಕ್ಷಣ ನೆರವು ನೀಡುವಂತೆ ಕೇಂದ್ರ ಸರಕಾರದ ಟೆಕ್ಸ್‌ಟೈಲ್‌ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ನೇಕಾರರ ಸೇವಾ ಕೇಂದ್ರಕ್ಕೆ ಅವರು ನಿರ್ದೇಶನ ನೀಡಿದ್ದಾರೆ. ಉಡುಪಿಯಲ್ಲಿ ಸುರಿದ ಮಹಾಮಳೆ ಸಂದರ್ಭ ಲಕ್ಷ್ಮಣ ಶೆಟ್ಟಿಗಾರ್ ಅವರು ಪತ್ನಿ ಜತೆ ನೆರೆ

ನೇಕಾರ ಲಕ್ಷ್ಮಣ ಶೆಟ್ಟಿಗಾರ್ ಅವರ ನೆರವಿಗೆ ನಿಂತ ಕೇಂದ್ರ ಸಚಿವೆ ಸ್ಮೃತಿ ಇರಾನಿ Read More »

ಕರಾವಳಿ, ಕರ್ನಾಟಕ

ರಫೇಲ್ ಫೈಟರ್ ಜಟ್‍ನ ಪ್ರಥಮ ಮಹಿಳಾ ಪೈಲಟ್ ಲೆಫ್ಟಿನೆಂಟ್ ‘ಶಿವಾಂಗಿ’

(ನ್ಯೂಸ್ ಕಡಬ) newskadaba.com ಹರಿಯಾಣ, ಸೆ. 24: ಭಾರತೀಯ ವಾಯು ಪಡೆಯ ಅತ್ಯಂತ ಪ್ರಬಲ ರಫೇಲ್ ಫೈಟರ್ ಜಟ್‍ನ ಪ್ರಥಮ ಮಹಿಳಾ ಪೈಲಟ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಈ ಉತ್ತರ ಲಭಿಸಿದೆ. ವಾರಣಾಸಿ ಮೂಲದ ಐಎಎಫ್‍ನ ಸಮರ್ಥ ಮಹಿಳಾ ಪೈಲಟ್ ಪ್ಲೈಟ್ ಲೆಫ್ಟಿನೆಂಟ್ ಶಿವಾಂಗಿ ಸಿಂಗ್ ಈ ಯುದ್ಧ ವಿಮಾನವನ್ನು ಹಾರಿಸುವ ದೇಶದ ಪ್ರಥಮ ವನಿತೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2017ರಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾದ ಶಿವಾಂಗಿ ಸಿಂಗ್ ಯುದ್ಧ ವಿಮಾನಗಳ ಹಾರಾಟ ಮತ್ತು ಸಮರ ಕೌಶಲ್ಯದಲ್ಲಿ

ರಫೇಲ್ ಫೈಟರ್ ಜಟ್‍ನ ಪ್ರಥಮ ಮಹಿಳಾ ಪೈಲಟ್ ಲೆಫ್ಟಿನೆಂಟ್ ‘ಶಿವಾಂಗಿ’ Read More »

ರಾಷ್ಟ್ರೀಯ ನ್ಯೂಸ್

ಕುಕ್ಕೆಯಲ್ಲಿ ದಿನಕ್ಕೆ 225 ಆಶ್ಲೇಷ ಪೂಜೆ ಮಾಡಲು ಅವಕಾಶ ➤ ಆಡಳಿತಾಧಿಕಾರಿ ರೂಪಾ ಎಂ.ಜೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 24:  ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿನಕ್ಕೆ 225 ಶ್ಲೇಷ ಪೂಜೆ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ರೂಪಾ ಎಂ ಜೆ ರವರು ತಿಳಿಸಿದ್ದಾರೆ.   ಕುಕ್ಕೆ ಯಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಣೆ ಬಳಿಕ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.  ಪೂಜೆಗಳ ಬಗ್ಗೆ ಮಾಹಿತಿ ನೀಡಿದ್ದು, ಆಶ್ಲೇಷ ಬಲಿ ಪೂಜೆ ಮೂರು ಬ್ಯಾಚ್ ಮಾಡಿ ತಲಾ 75ರಂತೆ ದಿನಕ್ಕೆ 225 ಆಶ್ಲೇಷ ಪೂಜೆ ನಡೆಸಲು ಅವಕಾಶ ಕಲ್ಪಿಸಿದ್ದು, ಬೆಳಗ್ಗೆ

ಕುಕ್ಕೆಯಲ್ಲಿ ದಿನಕ್ಕೆ 225 ಆಶ್ಲೇಷ ಪೂಜೆ ಮಾಡಲು ಅವಕಾಶ ➤ ಆಡಳಿತಾಧಿಕಾರಿ ರೂಪಾ ಎಂ.ಜೆ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಮಾಸ್ಕ್, ಕಡ್ಡಾಯ ತಪ್ಪಿದ್ದಲ್ಲಿ ಬೀಳುತ್ತೆ “ಈ” ಮೊತ್ತ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ. 24:  ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.     ಹೊಟೇಲ್‌, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ ಅಂಗಡಿ ಮಾಲಕರು ಸಾಮಾಜಿಕ ಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ

ಮಾಸ್ಕ್, ಕಡ್ಡಾಯ ತಪ್ಪಿದ್ದಲ್ಲಿ ಬೀಳುತ್ತೆ “ಈ” ಮೊತ್ತ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ : ನಟ ದಿಗಂತ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23:  ಸ್ಯಾಂಡಲ್ ವುಡ್‍ ನಲ್ಲಿ ಮಾದಕ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟ ದಿಗಂತ್ ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.   ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿ, ಸಿಸಿಬಿಗೆ ನನ್ನ ಬಳಿಯಿದ್ದ ಅಗತ್ಯ ಮಾಹಿತಿ ನೀಡಿರುವೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ. ತನಿಖೆ ಪ್ರಗತಿಯಲ್ಲಿರುವ ಕಾರಣ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವಂತಿಲ್ಲ ಎಂದರು.  

ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ : ನಟ ದಿಗಂತ್ Read More »

ಕರ್ನಾಟಕ
Scroll to Top