ಮಂಗಳೂರು

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ➤ ದಡ ಸೇರಿದ ಬೋಟುಗಳು

(ನ್ಯೂಸ್ ಕಡಬ) newskadaba.com ಕಾರವಾರ, ಸೆ. 21:  ತಡರಾತ್ರಿ ಬೀಸಿದ ಭಾರೀ ಪ್ರಮಾಣದ ಗಾಳಿಯಿಂದಾಗಿ ಎರಡು ಮೀನುಗಾರಿಕಾ ಬೋಟುಗಳು ದಡಕ್ಕೆ ತೇಲಿಬಂದ ಘಟನೆ ನಗರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ. ಆಯಂಕರ್ ತುಂಡಾದ ಪರಿಣಾಮ ಈ ಅವಘಡ ಸಂಭವಿಸಿದೆ.   ಬಂದರು ಪ್ರದೇಶದ ಸಮುದ್ರದಲ್ಲಿ ಲಂಗರು ಹಾಕಿದ್ದ ಮಲ್ಪೆ ಭಾಗದ ಮಜ್ದೂರ್ ಹಾಗೂ ಪ್ರಾವಿನೆನ್ಸ್ ಹೆಸರಿನ ಬೋಟುಗಳು ಇವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಹಿನ್ನಲೆ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆ, […]

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ➤ ದಡ ಸೇರಿದ ಬೋಟುಗಳು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ ➤ ಹೈಅಲರ್ಟ್ ಘೋಷಣೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21:  ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ 9 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೊಡಗು, ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಗಡಿಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಅಲ್ಲದೆ, ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆ ಸುರಿದಿದೆ.ದಕ್ಷಿಣ

ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ ➤ ಹೈಅಲರ್ಟ್ ಘೋಷಣೆ..!! Read More »

ಕರಾವಳಿ, ಕರ್ನಾಟಕ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್‌.ಡಿ ದೇವೇಗೌಡರು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ20:  ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ರಾಜ್ಯಸಭಾ ಸದಸ್ಯರಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.   ರಾಜ್ಯಸಭೆಯ ಸಭಾಧ್ಯಕ್ಷರೂ ಆಗಿರುವ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಪ್ರಮಾಣವಚನ ಬೋಧಿಸಿದರು. ದೇವೇಗೌಡರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ‘ನಮ್ಮ ಸದನಕ್ಕೆ ಉತ್ತಮ ವ್ಯಕ್ತಿಯ ಸೇರ್ಪಡೆಯಾಗಿದೆ. ಮಾಜಿ ಪ್ರಧಾನಿ ಹಾಗೂ ದೇಶದ ಹಿರಿಯ ರಾಜಕೀಯ ನಾಯಕರಲ್ಲಿ ಒಬ್ಬರಾಗಿರುವ ಎಚ್.ಡಿ. ದೇವೇಗೌಡ ಅವರು ಈಗ ನಮ್ಮ ಸದನಕ್ಕೆ ಬಂದಿದ್ದಾರೆ’ ಎಂದು ಉಪ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್‌.ಡಿ ದೇವೇಗೌಡರು Read More »

ರಾಷ್ಟ್ರೀಯ ನ್ಯೂಸ್

ಚಾಲಕನ ಅತಿವೇಗದ ಪರಿಣಾಮ ಸುಳ್ಯದಲ್ಲಿ ಸರಣಿ ಅಪಘಾತ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ20:  ಮಳೆಯ ಅಬ್ಬರದ ನಡುವೆಯು ಸರಣಿ ಅಪಘಾತಗಳು ಬೆಳಕಿಗೆ ಬರುತ್ತಿದೆ. ಇಂದು ಹೋಂಡಾ, ಡಿಯೋ, ಟೊಯೊಟೊ ಇನ್ನೋವಾ ಕಾರು ಮತ್ತು ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ.   ಮಂಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಇನೋವಾ ಕಾರು ಅಯ್ಯಪ್ಪ ಮಂದಿರದ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಸಂಚರಿಸಿ ಎದುರಿನಿಂದ ಬರುತ್ತಿದ್ದ ಸ್ಕೂಟಿಸಯ ಹಿಂಬದಿಯಲ್ಲಿ ಬರುತ್ತಿದ್ದ ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸರಣಿ

ಚಾಲಕನ ಅತಿವೇಗದ ಪರಿಣಾಮ ಸುಳ್ಯದಲ್ಲಿ ಸರಣಿ ಅಪಘಾತ Read More »

ಕರಾವಳಿ, ಕರ್ನಾಟಕ

ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ತಂಡ , ಹೆಲಿಕಾಪ್ಟರ್ ನಿಯೋಜನೆ ➤ ಸಂಸದೆ ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ20:  ಉಡುಪಿ ಜೆಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವಾರು ತಗ್ಗು ಪ್ರದೇಶಗಳಲ್ಲಿ ಮನೆಗಳು ಆಸ್ತಿ-ಪಾಸ್ತಿ ಮುಳುಗಡೆಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿ ಅಗತ್ಯದ ಕ್ರಮಗಳನ್ನು ಕೈಗೊಳ್ಳಲಾಗಿದೆ.ತುರ್ತು ಪರಿಹಾರ ಕಾರ್ಯಕ್ಕೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ತಂಡವನ್ನು ಕಳಿಸಿಕೊಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ತಿಳಿಸಿದ್ದು ಮಂಗಳೂರಿನಿಂದ ಎನ್‌ಡಿಆರ್‌ಎಫ್‌ ತಂಡ ಕಳುಹಿಸಿದ್ದಾರೆ. 20 ಸಿಬ್ಬಂದಿಯನ್ನೊಳಗೊಂಡ ಮತ್ತೊಂದು ಎನ್‌ಡಿಆರ್‌ಎಫ್‌

ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ತಂಡ , ಹೆಲಿಕಾಪ್ಟರ್ ನಿಯೋಜನೆ ➤ ಸಂಸದೆ ಶೋಭಾ ಕರಂದ್ಲಾಜೆ Read More »

ಕರಾವಳಿ, ಕರ್ನಾಟಕ

ಮಂಗಳೂರು: 3 ಬೋಟ್‌ ಮುಳುಗಡೆ, ಸುರಕ್ಷಿತವಾಗಿ ದಡ ಸೇರಿದ ಮೀನುಗಾರರು.

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ.20: ಇತ್ತೀಚೆಗೆ ಕರಾವಳಿಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿದ್ದು, ಇದರಿಂದಾಗಿ ಅಲೆಗಳ ಹೊಡೆತಕ್ಕೆ ಮಲ್ಪೆಯಲ್ಲಿ ಮೂರು ಬೋಟ್ ಗಳು ಮುಳುಗಡೆಯಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಬೋಟ್ ಗಳಲ್ಲಿದ್ದ ಮೀನುಗಾರರು ಕಲ್ಲು ಬಂಡೆ ಮೇಲೆ ಆಶ್ರಯ ಪಡೆದು ದಡ ಸೇರಿದ್ದು ಸುರಕ್ಷಿತವಾಗಿದ್ದಾರೆ. ಬೋಟ್ ಮುಳುಗಡೆಯಿಂದ ಲಕ್ಷಾಂತರ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.     ಕಳೆದ ದಿನ ರಾತ್ರಿಯೇ ಕರಾವಳಿ ರಕ್ಷಣೆ ಪಡೆಯಿಂದ ರಕ್ಷಣಾ ಕಾರ್ಯಾಚರಣೆ ಪ್ರಯತ್ನ ನಡೆದಿದ್ದು, ಸಾಧ್ಯವಾಗದ ಹಿನ್ನಲೆಯಲ್ಲಿ

ಮಂಗಳೂರು: 3 ಬೋಟ್‌ ಮುಳುಗಡೆ, ಸುರಕ್ಷಿತವಾಗಿ ದಡ ಸೇರಿದ ಮೀನುಗಾರರು. Read More »

ಕರಾವಳಿ

ಮಂಗಳೂರು : ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ20:  ನಗರದ ಹೊರವಲಯದ ನೀರುಮಾರ್ಗ ಎಂಬಲ್ಲಿ ರಸ್ತೆ ಬಾಯ್ತೆರೆದರೆ, ಅದ್ಯಪಾಡಿಯಲ್ಲಿ ಗುಡ್ಡ ಕುಸಿತಗೊಂಡಿದೆ. ನಗರದ ಹೊರವಲಯದ ನೀರುಮಾರ್ಗದಲ್ಲಿ ಕಟಿಂಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತವಾಗಿದೆ. ರಸ್ತೆ ಸಂಪೂರ್ಣವಾಗಿ ಎರಡು ಭಾಗವಾಗಿದ್ದು, ಸಂಚಾರ ಸ್ಥಗಿತವಾಗಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.     ಅಳಪೆಯಲ್ಲಿ ಎರಡು ಮನೆಗಳಿಗೆ ಹಾನಿಯಾಗಿದ್ದು, ಇಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮನೆಯ ಕಂಪೌಂಡ್ ಗೋಡೆಗಳು ಕುಸಿದಿದ್ದು, ಗಾಯಗೊಂಡಿರುವ ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಜಪೆ ಸಮೀಪದ ಅದ್ಯಪಾಡಿ ಸಮೀಪದಲ್ಲಿ

ಮಂಗಳೂರು : ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ.! Read More »

ಕರಾವಳಿ, ಕರ್ನಾಟಕ

ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ20:  ಕರಾವಳಿಯಲ್ಲಿ ನಿರಂತರವಾಗಿ ಮಳೆಯು ಸುರಿಯುತ್ತಿದ್ದು, ಮಂಗಳೂರು ವಿವಿ ಪರೀಕ್ಷೆ ಮುಂದೂಡಲಾಗಿದೆ. ಮಳೆಯಿಂದಾಗಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅಡಚಣೆ ಉಂಟಾಗಿದೆ.   ಈ ಕುರಿತಂತೆ ಮಂಗಳೂರು ವಿವಿ ಪ್ರಕಟಣೆ ನೀಡಿದ್ದು, ನಾಳೆ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಲನ್ನು ಮುಂದೂಡಲಾಗಿದೆ,. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ Read More »

ಕರಾವಳಿ, ಕರ್ನಾಟಕ

ಉಡುಪಿಯಲ್ಲಿ ಮುಂದುವರಿದ ಧಾರಕಾರ ಮಳೆ ➤ ಎಲ್ಲೆಡೆ ಹಲವಾರು ಮನೆಗಳು ಜಲಾವೃತ

(ನ್ಯೂಸ್ ಕಡಬ) newskadaba.com ಉಡುಪಿ, ಸೆ20:  ಜಿಲ್ಲೆಯಲ್ಲಿ ನಿರಂತರ 24 ಗಂಟೆಗಳ ಕಾಲ ಸುರಿದ ಮಳೆಯಿಂದ ಹಲವಾರು ನದಿ ಪಾತ್ರದ ಮನೆಗಳಿಗೆ ನೆರೆ ನೀರು ನುಗ್ಗಿದ್ದು, ಜಿಲ್ಲಾಡಳಿತದಿಂದ ರಕ್ಷಣಾ ಕಾರ್ಯ ಪ್ರಾರಂಭವಾಗಿದೆ.   ನೆರೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳ ಸಂಚಾರ ಸ್ಥಗಿತವಾಗಿದೆ . ಅಂಬಲಪಾಡಿ, ಮಠದಬೆಟ್ಟು, ಗುಂಡಿಬೈಲು, ಬನ್ನಂಜೆ,‌ ಕಾಪು ಸೇರಿದಂತೆ ಹಲವು ಭಾಗದಲ್ಲಿ ನೆರೆ ಹಾವಳಿ‌ ತೀವ್ರವಾಗಿದ್ದು, ಇಲ್ಲಿವರೆಗೆ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿ, ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ

ಉಡುಪಿಯಲ್ಲಿ ಮುಂದುವರಿದ ಧಾರಕಾರ ಮಳೆ ➤ ಎಲ್ಲೆಡೆ ಹಲವಾರು ಮನೆಗಳು ಜಲಾವೃತ Read More »

ಕರಾವಳಿ, ಕರ್ನಾಟಕ

ತಾಯಿಯಿಂದಲ್ಲೇ ಮಕ್ಕಳಿಗೆ ವಿಷಪ್ರಾಶನ ➤ ಪುತ್ರಿ ಮೃತ್ಯು, ಗಂಡನ ವಿರುದ್ದ ದೂರು ದಾಖಲು.!!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.20: ಸಂಬಂಧಿಕರ ಮನೆಯಲ್ಲಿದ್ದ ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬವರ ಪತ್ನಿ ದಿವ್ಯಶ್ರೀ (29ವ) ಎಂಬ ಮಹಿಳೆಯೊಬ್ಬರು ಜ್ಯೂಸ್‌ ನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ ಬಳಿಕ ತಾನೂ ಸೇವಿಸಿ ಮಂಗಳೂರಿಗೆ ಸಂಬಂಧಿಕರ ಮನೆಗೆ ತೆರಳಿ ಬಳಿಕ ತಾನೂ ಆತ್ಮ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಎಂಟು ವರ್ಷದ ಪುತ್ರಿ ಅನ್ವಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಿಸದೆ ಕಳೆದ ದಿನ ರಾತ್ರಿ ಮೃತಪಟ್ಟಿದ್ದಾರೆ.  ಇನ್ನು ಹತ್ತು ವರ್ಷದ ಪುತ್ರ

ತಾಯಿಯಿಂದಲ್ಲೇ ಮಕ್ಕಳಿಗೆ ವಿಷಪ್ರಾಶನ ➤ ಪುತ್ರಿ ಮೃತ್ಯು, ಗಂಡನ ವಿರುದ್ದ ದೂರು ದಾಖಲು.!! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top