ಮಂಗಳೂರು

ಮೈಸೂರಿಗೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba, ಮೈಸೂರು ಜೂ.06: ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯ ಆಗಮನವಾಗಿದೆ. ಡಾ. ಬಗಾದಿ ಗೌತಮ್ ಅವರು ಇಂದು ಇಲ್ಲಿನ ಡಿಸಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಅವರಿಂದ ಅಧಿಕಾರ ಸ್ವೀಕರಿಸಿದರು.   ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಸರ್ವೀಸ್‌ನಲ್ಲಿ ಯಾವ ವಿವಾದಕ್ಕೂ ಆಸ್ಪದ ನೀಡಿಲ್ಲ. ನನ್ನ ಹೆಸರು ನೀವು ಕೇಳಿದ್ದಿರೋ ಇಲ್ಲವೋ ಗೊತ್ತಿಲ್ಲ. ನಾನು ತುಂಬಾ ಲೋ ಪ್ರೊಫೈಲ್ ಅಧಿಕಾರಿ. ಸಾಂಪ್ರದಾಯಿಕ ನಗರಿ ಮೈಸೂರಿನಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಸಮಸ್ಯೆ ಇರಬಹುದು. ನಾನು ಪಾರದರ್ಶಕವಾಗಿ ಜನರಿಗೆ […]

ಮೈಸೂರಿಗೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ಅಧಿಕಾರ ಸ್ವೀಕಾರ Read More »

ಕರ್ನಾಟಕ

MRPL ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ➤ ಪ್ರತಿಭಟನೆ ನಡೆಸಿ ಆಕ್ರೋಶ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.06: ಎಂಆರ್​ಪಿಎಲ್​ನ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗೆ ಆಗಿರುವ ಅನ್ಯಾಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮನೆ-ಮನೆ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್ಐ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಮನೆಮನೆ ಪ್ರತಿಭಟನೆ ನಡೆಯಿತು.   ತುಳುನಾಡ ಅಭಿವೃದ್ದಿಯಲ್ಲಿ ತುಳುವರಿಗೆ ದೊಡ್ಡ ಪಾಲು ಸಿಗಬೇಕು. ಸ್ಥಳೀಯರಿಗೆ ಉದ್ಯೋಗ ನಿರಾಕರಿಸುವ ಕಂಪನಿಗಳಿಗೆ ಬೀಗ ಜಡಿಯಿರಿ ಎಂಬ ಫಲಕಗಳೊಂದಿಗೆ ಡಿವೈಎಫ್ಐ, ಎಸ್​ಎಫ್ಐ ಕಾರ್ಯಕರ್ತರು, ಸಿಪಿಎಂ, ಕಾಂಗ್ರೆಸ್, ಜೆಡಿಎಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

MRPL ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ➤ ಪ್ರತಿಭಟನೆ ನಡೆಸಿ ಆಕ್ರೋಶ Read More »

ಕರ್ನಾಟಕ

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸದ್ಯದಲ್ಲೇ ಕೊರೊನಾ ಲಸಿಕೆ ➤ ಸಚಿವ ಡಾ.ಕೆ. ಸುಧಾಕರ್‌

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06: ಸದ್ಯಕ್ಕೆ 18 ವರ್ಷ ಮೇಲ್ಪಟ್ಟ ಆದ್ಯತಾ ಗುಂಪಿನವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಅತೀ ಶೀಘ್ರದಲ್ಲೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು. ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ  ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಉಚಿತ ದಿನಸಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ತಲಾ 5 ಸಾವಿರ ರೂಪಾಯಿ ಸಹಾಯಧನ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸದ್ಯದಲ್ಲೇ ಕೊರೊನಾ ಲಸಿಕೆ ➤ ಸಚಿವ ಡಾ.ಕೆ. ಸುಧಾಕರ್‌ Read More »

ಕರ್ನಾಟಕ

ದ. ಕನ್ನಡದ ಮೊದಲ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳದಲ್ಲಿ ಉದ್ಘಾಟನೆ

(ನ್ಯೂಸ್ ಕಡಬ) newskadaba,ಬಂಟ್ವಾಳ ಜೂ.05:ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕವನ್ನು ವಾಮದಪದವು ಸಮುದಾಯ ಬಂಟ್ವಾಳದ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಉದ್ಘಾಟನೆ ಮಾಡಲಾಯಿತು.     ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು.ಬಂಟ್ವಾಳದಲ್ಲಿ ಕೊರೊನಾ ವಿರುದ್ಧ ಹೋರಾಟ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಹಾಗೂ ಅಧಿಕಾರಿ ವೃಂದದ ಶ್ರಮವನ್ನು ಅವರು ಶ್ಲಾಘಿಸಿದರು.  

ದ. ಕನ್ನಡದ ಮೊದಲ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳದಲ್ಲಿ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ನರಿಮೊಗರು: ಮಾನಸಿಕ ಅಸ್ವಸ್ಥೆಯಾಗಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba,ನರಿಮೊಗರು ಜೂ.05: ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ವರದಿಯಾಗಿದೆ. 23 ವರ್ಷದ ವಿಜೇತಾ ಎಂಬುವವರು ನಾಪತ್ತೆಯಾಗಿರುವ ಯುವತಿ.   ವಿಜೇತ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಜೂ.4ರಂದು ಬೆಳಿಗ್ಗೆ ತನ್ನ ಮನೆಯಿಂದ ಹೊರಗೆ ಹೋದವರು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಯುವತಿ ತಂದೆ ಅಣ್ಣು ಪೂಜಾರಿ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನರಿಮೊಗರು: ಮಾನಸಿಕ ಅಸ್ವಸ್ಥೆಯಾಗಿದ್ದ ಯುವತಿ ನಾಪತ್ತೆ Read More »

ಕರಾವಳಿ

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ..!?

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಕೊರೋನಾ ನಿರೀಕ್ಷಿತ ಮಟ್ಟದಲ್ಲಿ ಕಡಿಮೆ ಆಗದ ಕಾರಣ ಜೂ. 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಘೋಷಣೆ ಮಾಡಲಾಗಿತ್ತು.   ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸುತ್ತೇವೆ. ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ..!? Read More »

ಕರ್ನಾಟಕ

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ➤ ಖ್ಯಾತ ಕಿರುತೆರೆ ನಟನ ಬಂಧನ

(ನ್ಯೂಸ್ ಕಡಬ) newskadaba,ಮುಂಬೈ ಜೂ.05: ಬಣ್ಣದ ಲೋಕದ ಕನಸು ಹೊತ್ತು ಬಂದ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿ ಬಾಲಿವುಡ್​ ಸಿರಿಯಲ್​ ನಟ ಪರ್ಲ್‌ ವಿ ಪುರಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.   ‘ನಾಗಿನ್ 3’, ‘ನಾಗಾರ್ಜುನ ಏಕ್ ಯೋಧ’, ‘ಬೆಪನಾಹ್ ಪ್ಯಾರ್’, ‘ಬ್ರಹ್ಮರಾಕ್ಷಸ್ 2’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿರುವ ಪರ್ಲ್ ಪುರಿಯನ್ನು ಮುಂಬಯಿಯ ಅಂಬೋಳಿ ಪೊಲೀಸರು ನೆರವಿನೊಂದಿಗೆ ಮಿರಾ ಭಾಯಂದಾರ್ ವಾಸಾಯಿ ವಿರಾರ್ ಪೊಲೀಸರು ಬಂಧಿಸಿದ್ದಾರೆ.ನಟನ ವಿರುದ್ಧ ಎಫ್ ಐಆರ್ ದಾಖಲಾಗಿದೆ    

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ➤ ಖ್ಯಾತ ಕಿರುತೆರೆ ನಟನ ಬಂಧನ Read More »

ಕರಾವಳಿ

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.05: ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ  ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.   ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ.  ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಕಾರ್ಕಳ: ಊಟ ಕೇಳಿದ ಹೆತ್ತ ತಾಯಿಗೆ ಥಳಿಸಿದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba,ಕಾರ್ಕಳ ಜೂ.05: ಊಟ ಕೇಳಿದ 82 ವರ್ಷದ ತಾಯಿಯನ್ನು ಮಗ ಹಲ್ಲೆ ನಡೆಸಿ ಮನೆಯಿಂದ ಹೊರ ಹಾಕಿ ಕ್ರೂರತ್ವ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.   ತಾಲೂಕಿನ ಕಲ್ಯಾ ಗ್ರಾಮದ ಕೈಕಂಬ ಎಂಬಲ್ಲಿ 82 ವರ್ಷದ ಯಶೋಧ ಹಾಗೂ ಮಗ ದಾಮೋದರನೊಂದಿಗೆ ವಾಸವಾಗಿದ್ದರು. ತಾಯಿ ಹಸಿವಿನಿಂದ ಮಗನಲ್ಲಿ ಊಟ ಕೇಳಿದ್ದಾರೆ. ಈ ವೇಳೆ ಕೋಪಗೊಂಡ ಮಗ ದಾಮೋದರ ಊಟ ನೀಡದೇ, ಎದ್ದು ನಿಲ್ಲಲು ಆಗದ ವೃದ್ಧೆ ತಾಯಿಯನ್ನು ಹೊಡೆದು ಮನೆಯಿಂದ ಹೊರಗೆ ಹಾಕಿದ್ದಾನೆ ಎನ್ನಲಾಗಿದೆ.

ಕಾರ್ಕಳ: ಊಟ ಕೇಳಿದ ಹೆತ್ತ ತಾಯಿಗೆ ಥಳಿಸಿದ ಪಾಪಿ ಪುತ್ರ Read More »

ಕರ್ನಾಟಕ

ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ ➤ ಸಚಿವ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.     ಕಪ್ಪು ಶಿಲೀಂಧ್ರದ ಔಷಧಿಯ ಕೊರತೆ ಈಗ ಇಲ್ಲ. 15 ದಿನಗಳ ಹಿಂದೆ ಇದ್ದ ಕೊರತೆ ಈಗ ಇಲ್ಲ. ಕೇಂದ್ರದಿಂದ ದೊಡ್ಡ ಪ್ರಮಾಣದಲ್ಲಿ ಔಷಧಿ ಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಚಿಕಿತ್ಸೆಗಳನ್ನು ಉಚಿತಗೊಳಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ನಿರ್ದಿಷ್ಟ ದರ ನಿಗದಿಪಡಿಸಬೇಕಿದೆ. ಬೇಕಾದ ಹಾಗೆ

ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ ➤ ಸಚಿವ ಡಾ.ಕೆ.ಸುಧಾಕರ್ Read More »

ಕರ್ನಾಟಕ
Scroll to Top