ಮಂಗಳೂರು

ಏಕಕಾಲಕ್ಕೆ 2 ಕೈಯಲ್ಲಿ ಬರೆದು ದಾಖಲೆ ನಿರ್ಮಿಸಿದ ಆದಿ ಸ್ವರೂಪಾ!

 (ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 15. ಮಂಗಳೂರಿನ ಬಾಲಕಿ ಆದಿ ಸ್ವರೂಪಾ ಒಂದು ನಿಮಿಷಕ್ಕೆೆ 45ರಂತೆ ಇಂಗ್ಲಿಷ್ ಪದಗಳನ್ನು ಯುನಿ ಡೈರೆಕ್ಷನಲ್ ಶೈಲಿಯಲ್ಲಿ ಬರೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಉತ್ತರ ಪ್ರದೇಶದ ಬರೇಲಿಯ ಲಾಟಾ ಪ್ರತಿಷ್ಠಾನದ ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ಸ್ (ಇಡಬ್ಲುೃಆರ್)ನಲ್ಲಿ ಇದು ಸೇರ್ಪಡೆಯಾಗಿದೆ.     ಇಲ್ಲಿನ ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್-ಸುಮಾಡ್ಕರ್ ಪುತ್ರಿ ಸ್ವರೂಪಾ 2 ವರ್ಷಗಳ ಹಿಂದೆ ಎರಡೂ ಕೈಯಿಂದ ಬರೆಯುವುದನ್ನು ಆರಂಭಿಸಿದ್ದು, ಈಗ ಹತ್ತು ರೀತಿಗಳಲ್ಲಿ ಬರೆಯುವುದನ್ನು ರೂಢಿಸಿಕೊಂಡಿದ್ದಾರೆ. ಸೋಮವಾರ […]

ಏಕಕಾಲಕ್ಕೆ 2 ಕೈಯಲ್ಲಿ ಬರೆದು ದಾಖಲೆ ನಿರ್ಮಿಸಿದ ಆದಿ ಸ್ವರೂಪಾ! Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಕೈಕಂಬ : ಅನನ್ಯ ಚೇತನಾ ಫೌಂಡೇಶನ್ ವತಿಯಿಂದ ಪರಿಸರದ ಕುರಿತು ನಾಮ ಫಲಕ ಅಳವಡಿಕೆ

 (ನ್ಯೂಸ್ ಕಡಬ) newskadaba.com ಕೈಕಂಬ , ಸೆ. 15. ಬಿಳಿನೆಲೆ ಗ್ರಾಮದ ಕೈಕಂಬದಲ್ಲಿ ಅನನ್ಯ ಚೇತನಾ ಫೌಂಡೇಶನ್ ವತಿಯಿಂದ ಪರಿಸರದ ಕುರಿತಾಗಿ ಅರಿವು ಮೂಡಿಸಲು ನಾಮ ಫಲಕ ಗಳನ್ನು ಸೂಕ್ಷ್ಮ ಪ್ರದೇಶದಲ್ಲಿ ಅಳವಡಿಸುವ ಮೂಲಕ ವಿಭಿನ್ನ ಕಾರ್ಯ ಮಾಡಿದ್ದಾರೆ . ಪರಿಸರವನ್ನು ಸ್ಪಚ್ಚವಾಗಿಡುವುದು ನಮ್ಮೆಲ್ಲರ ಆದ್ಯಾ ಕರ್ತವ್ಯ. ಈ ಮೂಲಕ ಮೊದಲಾಗಿ ಕೈಕಂಬ ಪರಿಸರದಲ್ಲಿ ಸ್ವಚ್ಚತೆಯ ಅರಿವನ್ನು ಮೂಡಿಸುವ ಮೂಲಕ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಇದರ ಜೊತೆಗೆ, ಅನನ್ಯ ಚೇತನ ವತಿಯಿಂದ ಬಿಲಿನೆಲೆ ಗ್ರಾಮ ಪಂಚಾಯಿತಿಗೆ ಕಸದ

ಕೈಕಂಬ : ಅನನ್ಯ ಚೇತನಾ ಫೌಂಡೇಶನ್ ವತಿಯಿಂದ ಪರಿಸರದ ಕುರಿತು ನಾಮ ಫಲಕ ಅಳವಡಿಕೆ Read More »

ಕರಾವಳಿ

ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 15. ಮುಂಬೈ, ಬೆಂಗಳೂರು, ಮಂಗಳೂರು, ಸೇರಿದಂತೆ ದೇಶಾದ್ಯಂತ ಇದೀಗಾ ಮಾದಕ ದೃವ್ಯ ಹಾಗೂ ಗಾಂಜದ್ದೇ ಸದ್ದು- ಸುದ್ದಿಯಾಗಿದೆ. ಅದರ ಜೊತೆಗೆ ಕರಾವಳಿಯೇ ಅತೀ ಹೆಚ್ಚಾಗಿ ದ್ರವ್ಯಕ್ಕೆ ಕೇಂದ್ರ ಬಿಂದುವೆಂಬಂತೆ ಪರಿಣಮಿಸುತ್ತಿದೆ. ಇದಕ್ಕೆ ಸಂಬಂಧ ಪಟ್ಟಂತೆ ಉಡುಪಿಯಲ್ಲಿ ಖುದ್ದಾಗಿ ಎಸ್ ಪಿ ವಿಷ್ನುವರ್ಧನ್, ಎ ಎಸ್ಪಿ ಕುಮಾರ ಚಂದ್ರ ರವರು ಫೀಲ್ಡಗೆ ಇಳಿದಿದ್ದಾರೆ.   ಕರಾವಳಿ ನಗರಿ ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವವರು ಮತ್ತು ಗಾಂಜಾ ಸೇವಿಸುವವರ ಮೇಲೆ

ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳು ಆರಂಭ ➤ ಕ್ಷೇತ್ರಕ್ಕೆ ಹರಿದು ಬಂತು ಭಕ್ತ ಸಾಗರ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಸೆ. 15. ಐದು ತಿಂಗಳ ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಸೇವೆಗಳು ಆರಂಭಗೊಂಡಿದ್ದು, ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂತು. ಕೊವೀಡ್ 19 ಮಾರ್ಗ ಸೂಚಿಗೆ ಅನುಗುಣವಾಗಿ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷ ಬಲಿ ಸೇರಿದಂತೆ ಇತರ ಸೇವೆಗಳನ್ನು ನಡೆಸಲು ಅವಕಾಶ ನೀಡಲಾಗಿದೆ.   ಭಕ್ತರು ದೈಹಿಕ ಅಂತರದೊಂದಿಗೆ ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆದರು. ರಾತ್ರಿ 8 ಗಂಟೆಯವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕ್ಷೇತ್ರದ ಪ್ರಮುಖ ಸೇವೆ ಸರ್ಪಸಂಸ್ಕಾರವನ್ನು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳು ಆರಂಭ ➤ ಕ್ಷೇತ್ರಕ್ಕೆ ಹರಿದು ಬಂತು ಭಕ್ತ ಸಾಗರ Read More »

ಕರಾವಳಿ, ಕರ್ನಾಟಕ

ಅನೈತಿಕ ಸಂಬಂಧ ಆರೋಪ ➤ ಪತಿ ವಿರುದ್ಧ ಪತ್ನಿಯಿಂದಲೇ ದೂರು..!!

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 15. ಸರಕಾರಿ ಹಾಸ್ಟೇಲ್ ನಲ್ಲಿ ಅಡುಗೆ ಕೆಲಸದಲ್ಲಿರುವವನ ಅಕ್ರಮ ಸಂಬಂಧದ ಬಗ್ಗೆ ಮತ್ತು ಸರಕಾರಿ ಸ್ವತ್ತುಗಳನೇ ಮಾರಾಟಕ್ಕೆ ಸಂಬಂಧಿಸಿದಂತೆ ಪಡು ಪಣಂಬೂರು ಗ್ರಾಮದ ನಿವಾಸಿ ಆತನ ಪತ್ನಿಯೇ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ಮುಲ್ಕಿಯಲ್ಲಿರುವ ಸರ್ಕಾರಿ ಹಾಸ್ಟೆಲ್ನಲ್ಲಿ ನೌಕರನಾಗಿರುವ ಈತ ಸರ್ಕಾರಿ ಹಾಸ್ಟೆಲ್ ಮಕ್ಕಳಿಗೆ ನೀಡಿರುವ ಹೊದಿಕೆಗಳನ್ನು ಕದ್ದೊಯ್ದು ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ನೀಡುತ್ತಿದ್ದ. ಕೆಲವನ್ನು ಮಾರಾಟ ಮಾಡಿದ್ದು ಮನೆಗೂ ತಂದಿದ್ದಾನೆ. ಇದರ ಜೊತೆಗೆ ತನಗೆ

ಅನೈತಿಕ ಸಂಬಂಧ ಆರೋಪ ➤ ಪತಿ ವಿರುದ್ಧ ಪತ್ನಿಯಿಂದಲೇ ದೂರು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮಾನಸಿಕ ಅಸ್ವಸ್ಥನಿಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 15. ಮಾನಸಿಕ ಅಸ್ವಸ್ಥರೋರ್ವರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ತೆರಳುತ್ತಿದ್ದ ಕಾರೊಂದು ನರಿಮೊಗರು ಸಮೀಪ ರಸ್ತೆ ಬದಿಯಲ್ಲಿ ನಡೆಯುತ್ತಿದ್ದ ಮಾನಸಿಕ ಅಸ್ವಸ್ಥರೋರ್ವರಿಗೆ ಢಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ಇವರ ತಲೆಗೆ ಹಾಗೂ ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ ಎನ್ನಲಾಗಿದೆ. ಈ ವ್ಯಕ್ತಿಯು ಹಲವಾರು ವರ್ಷಗಳಿಂದ ನರಿಮೊಗರು ಭಾಗದಲ್ಲಿ ತಿರುಗಾಡುತ್ತಿದ್ದು, ಯಾರಿಗೂ ತೊಂದರೆ ನೀಡದೇ ತನ್ನ ಪಾಡಿಗೆ

ಪುತ್ತೂರು: ಮಾನಸಿಕ ಅಸ್ವಸ್ಥನಿಗೆ ಕಾರು ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಕ್ಷೇತ್ರ ಪಣೋಲಿಬೈಲು ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ರಶ್ಮಿ ಎಸ್. ಆರ್ ನೇಮಕ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.15: ತುಳುನಾಡಿನ ಪ್ರಸಿದ್ಧ ಐತಿಹಾಸಿಕ ಹಿನ್ನೆಲೆಯುಳ್ಳ ಕಾರಣಿಕದ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ನೇಮಕ ಮಾಡಲಾಗಿದೆ.     ಬಂಟ್ವಾಳ ವ್ಯಾಪ್ತಿಯಲ್ಲಿ ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರು ಪಡೆದಿದ್ದ ರಶ್ಮಿ ಎಸ್. ಆರ್ ರವರ ಸಾಧನೆ ಅಮೋಘ.  ಜನರ ಮೆಚ್ಚುಗೆಗೆ ಪಾತ್ರವಾಗಿರುವ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿ ಆದೇಶ ನೀಡಿದೆ.

ಶ್ರೀ ಕ್ಷೇತ್ರ ಪಣೋಲಿಬೈಲು ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ರಶ್ಮಿ ಎಸ್. ಆರ್ ನೇಮಕ Read More »

ಕರಾವಳಿ, ಕರ್ನಾಟಕ

ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಸೆ. 15. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಕಾರು ಮತ್ತು ಲಾರಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದವು.     ತಾಲೂಕಿನ ದೊಡ್ಡಪೈಲಗುರ್ಕಿಯ ರಸ್ತೆ ಹುಬ್ಬಿನಲ್ಲಿ ಈ ಆಕ್ಸಿಡೆಂಟ್ ನಡೆದಿದೆ. ಡಿಕ್ಕಿಯ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಕಾರಿನಲ್ಲಿದ್ದ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..  

ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಡಿ.ಕೆ. ಶಿವಕುಮಾರ್ ಪುತ್ರಿಯ ಮದುವೆಗೆ ಡೇಟ್ ಫಿಕ್ಸ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 15.  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ದಿವಂಗತ ಸಿದ್ಧಾರ್ಥ್ ಹೆಗಡೆ ಪುತ್ರ ಅಮರ್ತ್ಯ ಹೆಗಡೆ ಮದುವೆಗೆ ಡೇಟ್ ಫಿಕ್ಸ್ ಆಗಿದ್ದು, ಫೆ. 24, 2021 ರಂದು ಮದುವೆ ನಡೆಸಲು ಎರಡೂ ಕುಟುಂಬಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ. ಕಳೆದ ಏಪ್ರಿಲ್ 15 ರಂದು ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸರಳ ಕಾರ್ಯಕ್ರಮದಲ್ಲಿ ಐಶ್ವರ್ಯಾ ಮತ್ತು ಅಮರ್ತ್ಯ ಉಂಗುರ ಬದಲಾಯಿಸಿಕೊಂಡಿದ್ದರು. ನವೆಂಬರ್ ನಲ್ಲಿ ಇಬ್ಬರ ನಿಶ್ಚಿತಾರ್ಥ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಪುತ್ರಿಯ ಮದುವೆಗೆ ಡೇಟ್ ಫಿಕ್ಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 15. ಕೊವೀಡ್ 19 ವೈರಸ್ ಗೆ ತುತ್ತಾಗಿ, ಕಳೆದ ಹಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಆರೋಗ್ಯ ಕುರಿತಂತೆ ಎಸ್‌ಪಿಬಿ ಪುತ್ರ ಚರಣ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.   ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನು ಅವರಿಗೆ ಆಹಾರವನ್ನು

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ Read More »

ಕರಾವಳಿ
Scroll to Top