ಮಂಗಳೂರು

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಸೂಪರ್ ಮಾರ್ಕೆಟ್ ನಲ್ಲಿ ಆಗಸ್ಟ್ 25 ರಂದು ರಾತ್ರಿ ಸುಮಾರು ೨೫ ಸಾವಿರ ಮೌಲ್ಯದ ದಿನಸಿ ಸಾಮಾಗ್ರಿ ಹಾಗೂ ನಗದು ಕಳವು‌ ಮಾಡಿರುವ ಆರೋಪಿಯನ್ನು ಕೆಲವೇ ದಿನಗಳಲ್ಲಿ‌ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಯಿತು. ಬಂಧಿತ ಆರೋಪಿಯು ಮಂಗಳೂರು ತಾಲೂಕಿನ ಬೆಂಗ್ರೆ ಕಸಬ ನಿವಾಸಿಯಾದ ಮಹಮ್ಮದ್ ಅನ್ಸರ್ ಎಂದು ಗುರುತಿಸಲಾಗಿದ್ದು, ಈತನು ಈ ಹಿಂದೆ ಮಂಗಳೂರು ನಗರ ವ್ಯಾಪ್ತಿಯ ಪಾಂಡೇಶ್ವರ, ಬಂದರು,ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ […]

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಯುವಬ್ರೀಗೆಡ್‌ ಕಾರ್ಯಕರ್ತರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 30 : ಸುಳ್ಯ ತಾಲೂಕಿನ ಅರಂತೋಡು ಬಳಿಯ ಬಿಳಿಯಾರು ಬಸ್ಸು ನಿಲ್ದಾಣದ ಆಸುಪಾಸು ಬೆಳೆದಿದ್ದ ಹುಲ್ಲು ಕಾಡುಗಿಡಗಳನ್ನು ತೆಗೆದು ಬಸ್ಸು ನಿಲ್ದಾಣವನ್ನು ಯು ಬ್ರಿಗೇಡ್‌ ಕಾರ್ಯಕರ್ತರಾದ ಶರತ್‌, ಕಿಶೋರ್ ಕುಮಾರ್‌, ಸದಾಶಿವ, ಚಿದಾನಂದ, ಅನೀಲ್‌ ಕುಮಾರ್‌ ರವರು ಸೇರಿ ಸ್ವಚ್ಚಗೊಳಿಸಿದರು.

ಅರಂತೋಡು: ಯುವಬ್ರೀಗೆಡ್‌ ಕಾರ್ಯಕರ್ತರಿಂದ ಶ್ರಮದಾನ Read More »

ಕರಾವಳಿ, ಕರ್ನಾಟಕ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ. ಆ,31:  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ಅವರು ಇಂದು ಮಧ್ಯಾಹ್ನ ಹೃದಯಘಾತ ಸಂಭವಿಸಿ ವಿಧಿವಶರಾಗಿದ್ದಾರೆ.70 ವರ್ಷದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದರು. ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 80 ರ ದಶಕದಲ್ಲಿ ಕೊಲ್ಲಿ ರಾಷ್ಟ್ರಕ್ಕೆ ಹೋದ ಅವರು ಅಲ್ಲಿ ಕನ್ನಡದ ಪತಾಕೆಯನ್ನು ಹಾರಿಸಿದ್ದು ಕನ್ನಡ ಭಾಷೆ ಪ್ರೇಮದಿಂದ ಕನ್ನಡಿಗರ ಸಂಘಟನೆ ಸ್ಥಾಪಿಸಿ ಬೆಳೆಸಿದ್ದಾರೆ. ಅವರು

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ವಿಧಿವಶ Read More »

ಕರಾವಳಿ, ಕರ್ನಾಟಕ

ಭೂತ ಬಂಗಲೆಯಂತಾದ ನೆಲ್ಯಾಡಿಯ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ

(ನ್ಯೂಸ್ ಕಡಬ) newskadaba.com ಕಡಬ, ಆ. 31 : ಕಡಬ ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ನೆಲ್ಯಾಡಿ ಪೇಟೆಗೆ ಸಂಬಂಧಿಸಿ, ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ ಜನಸಂಚಾರವಿಲ್ಲದೆ ಭೂತ ಬಂಗಲೆಯಂತಾಗಿದೆ. ಇಲ್ಲಿ ಎಲ್ಲ ಸರಕಾರಿ ಬಸ್ ಗಳು ಪೇಟೆಯಲ್ಲೇ ನಿಂತು ಸಂಚಾರಿಸುವುದರಿಂದ ಈ ಬಸ್ಸು ನಿಲ್ದಾಣ ಬಿಕೋ ಎನ್ನುತ್ತಿದೆ. ನೆಲ್ಯಾಡಿ ಬಸ್‌ ನಿಲ್ದಾಣಕ್ಕೆ 1 ಎಕ್ರೆ ಜಾಗವಿದೆ. ಬಸ್ಸುಗಳು ತಂಗಲು ಸಾಕಷ್ಟು ಸ್ಥಳಾವಕಾಶವೂ ಇದೆ. ಸರಕಾರಿ ಬಸ್ಸುಗಳು ಇಲ್ಲಿಗೆ ಬರುವಂತೆ ಮಾಡುವ ಉದ್ದೇಶದಿಂದ ಕೆ.ಎಸ್.ಆರ್.ಟಿ.ಸಿ

ಭೂತ ಬಂಗಲೆಯಂತಾದ ನೆಲ್ಯಾಡಿಯ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ Read More »

ಕರಾವಳಿ, ಕರ್ನಾಟಕ

ಬೈಕ್ ಮೇಲಿದ್ದ ಯುವಕನ ರುಂಡ ಕತ್ತರಿಸಿ ಕಗ್ಗೊಲೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ. ಆ,31:  ಬೈಕ್ ಮೇಲೆ ಕೂತಿದ್ದ ಯುವಕನನ್ನು ಹಿಂದಿನಿಂದ ಬಂದು ರುಂಡ ಕತ್ತರಿಸಿ ದುಷ್ಕರ್ಮಿಗಳು ಕಗ್ಗೊಲೆ ಮಾಡುವ ಮೂಲಕ ಕಲಬುರ್ಗಿ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ನಡೆದಿದೆ. ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಾಬು ಮಲ್ಲೇಶಪ್ಪ ಕೋಬಾಳ್ (32) ಹತ್ಯೆಯಾದ ಯುವಕ.     ಅದೇ ಗ್ರಾಮದ ಪ್ರಭು ಕಾಂಬಳೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಬೈಕ್ ಮೇಲೆ ಕುಳಿತಿದ್ದಾಗ ಪ್ರಭು ಕಾಂಬಳೆ ಕೊಡಲಿಯಿಂದ ಬಾಬು ಕೋಬಾಳನ ರುಂಡ ಕಡಿದಿದ್ದಾನೆ ಎಂದು ಆರೋಪಿಸಲಾಗಿದೆ.

ಬೈಕ್ ಮೇಲಿದ್ದ ಯುವಕನ ರುಂಡ ಕತ್ತರಿಸಿ ಕಗ್ಗೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,. ಆ,31:  ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ (103) ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಎಸ್.ಪದ್ಮಾವತಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.     ಹನ್ನೊಂದು ದಿನಗಳ ಹಿಂದೆ ಕೋವಿಡ್-19 ಸೋಂಕು ಕಂಡುಬಂದ ಇವರನ್ನು ನ್ಯಾಷನಲ್ ಹಾರ್ಟ್ ಇನ್‌ಸ್ಟಿಟ್ಯೂಟ್ (ಎನ್‌ಎಚ್‌ಐ)ಗೆ ದಾಖಲಿಸಲಾಗಿತ್ತು. 1981ರಲ್ಲಿ ಈ ಸಂಸ್ಥೆಯನ್ನು

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು Read More »

ಕರಾವಳಿ

ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನದ ಜಾಗವನ್ನು ಲೀಸ್ ಗೆ ಕೊಡದಂತೆ ಮನವಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ. ಆ,31:  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಯಾವುದೇ ಭೂಮಿಯನ್ನು ಸಂಸ್ಥೆಗೆ ಅಥವಾ ಖಾಸಗಿಯವರಿಗೆ ಲೀಸ್ ಗೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿಮನವಿ ಸಲ್ಲಿಸಲಾಗಿದೆ.   ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ್ಳ ವಿರೋಧ ವ್ಯಕ್ತಪಡಿಸಿ ಇಂದು ದೇವಳದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ. ಎಚ್ ಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶ್ರೀನಾಥ್ ಭಟ್ ಪ್ರಶಾಂತ್ ಮಾಣಿಲ. ಗುರು ಪ್ರಸಾದ್ ಉಪಸ್ಥಿತರಿದ್ದರು.  

ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನದ ಜಾಗವನ್ನು ಲೀಸ್ ಗೆ ಕೊಡದಂತೆ ಮನವಿ Read More »

ಕರ್ನಾಟಕ

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್‌ ದೃಢ

(ನ್ಯೂಸ್ ಕಡಬ) newskadaba.com ಕಡಬ , ಆ. 31: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು ಒಟ್ಟು 21 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ 49 ವರ್ಷದ ಮಹಿಳೆಯಲ್ಲಿ ಕೊರೋನಾ ದೃಡಪಟ್ಟಿದೆ. ಪುತ್ತೂರು ತಾಲೂಕಿನ ಕಬಕ ಗ್ರಾಮದ 49 ವರ್ಷದ ಪುರುಷ, ಕೆಯ್ಯೂರು ಗ್ರಾಮದ 40 ವರ್ಷದ ಪುರುಷ, 34 ವರ್ಷದ ಮಹಿಳೆ, 52ವರ್ಷದ ಮಹಿಳೆ, 16 ವರ್ಷದ ಬಾಲಾಕಿ, 25 ವರ್ಷದ ಮಹಿಳೆ, 50 ವರ್ಷದ ಮಹಿಳೆ, 14 ವರ್ಷದ

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್‌ ದೃಢ Read More »

ಕರಾವಳಿ, ಕರ್ನಾಟಕ

ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ . ಆ,31:  ವಿದೇಶದಿಂದ ತವರು ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ವಿಮಾನ ನಿಲ್ದಾಣದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಚೆರುಥೋನಿ ಮೂಲದ 28 ವರ್ಷದ ಲೀಜಾ ಜೋಸ್ ಮೃತ ವಿದ್ಯಾರ್ಥಿನಿ. ಲೀಸಾ ಕಳೆದ ನಾಲ್ಕು ವರ್ಷಗಳಿಂದ ದಕ್ಷಿಣ ಕೊರಿಯದ ಪುಸಾನ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದರು.   ಕೇರಳಕ್ಕೆ ವಾಪಸ್ ಬರಲೆಂದು ಲೀಸಾ, ಇಂಚಿಯಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದ ಲೀಸಾ ಏಕಾಏಕಿ ಕುಸಿದು

ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮುಲ್ಕಿ : ಮಾನಸಿಕ ಖಿನ್ನತೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮುಲ್ಕಿ. ಆ,31: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಸಮೀಪದ ಕೊಲಕಾಡಿ ಎಂಬಲ್ಲಿ ನಡೆದಿದೆ. ಕೊಲಕಾಡಿ ನಿವಾಸಿ ರತ್ನಾಕರ್ ಆಚಾರ್ಯ ಎಂಬುವವರ ಪತ್ನಿ ಶಶಿ ಆರ್ ಆಚಾರ್ಯ (55) ಎಂಬುವವರು ಮೃತ ಮಹಿಳೆಯಾಗಿದ್ದಾರೆ.       ಭಾನುವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಮಹಿಳೆಯನ್ನು ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಆಪದ್ಬಾಂಧವ ಆಸಿಫ್ ನೇತೃತ್ವದ ಕಾರ್ನಾಡು ಮೈಮುನಾ ಫೌಂಡೇಶನ್ ಸಿಬ್ಬಂದಿ ಮುಸ್ತಕ್

ಮುಲ್ಕಿ : ಮಾನಸಿಕ ಖಿನ್ನತೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ
Scroll to Top