ಮಂಗಳೂರು

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಕರಾವಳಿ. ಆ,25: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಮ್ಮಾಜೆ, ಕಲ್ಲಬೆಟ್ಟು ನೆಲ್ಲಿತೀರ್ಥ,ಗುರುಪುರ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ, ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ| ಬಿ.ಆರ್.‌ ಅಂಬೆಡ್ಕರ್‌/ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯನ್ನು ಪುನಃ ಆರಂಭಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-08-2020 ಆಗಿತ್ತು. ಆದರೆ ದಿನಾಂಕ ಮುಂದೂಡಿಕೆಯಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-09-2020 […]

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ➤ ಬೆಳ್ಮಣ್ ಪೇಟೆಯಲ್ಲಿ ಆಕ್ರೋಶ ವ್ಯಕ್ತ

(ನ್ಯೂಸ್ ಕಡಬ) newskadaba.com ಬೆಳ್ಮಣ್. ಆ,25:  ಈಗಾಗಲೇ ಕೊರೊನಾದಿಂದ ಕಂಗೆಟ್ಟು ಹೋಗಿರುವ ಬೆಳ್ಮಣ್ ಗ್ರಾಮದ ಜನರನ್ನು ಯಾವುದೇ ಕಾರಣಕ್ಕೂ ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ಈಗಾಗಲೇ ಬೆಳ್ಮಣ್ ಜನತೆ ಸೀಲ್‌ಡೌನ್ ಹಾಗೂ ರ‌್ಯಾಪಿಡ್ ಟೆಸ್ಟ್‌ಗಳಿಂದ ರೋಸಿ ಹೋಗಿದ್ದು ತೊಂದರೆ ಅನುಭವಿಸಿದ್ದಾರೆ. ರ‌್ಯಾಪಿಡ್ ಟೆಸ್ಟ್ ನಡೆಸುವುದಕ್ಕೆ ವಿರೋಧವಿದೆ ಎಂದು ಬೆಳ್ಮಣ್ ಪೇಟೆಯ ವರ್ತಕರು ಹಾಗೂ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ಮಣ್‌ನಲ್ಲಿ ನಡೆದಿದೆ. ಬೆಳ್ಮಣ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಜಮಾಯಿಸಿದ ಬೆಳ್ಮಣ್ ಪೇಟೆ ಪರಿಸರದ ವರ್ತಕರು ಹಾಗೂ ನಾಗರಿಕರು

ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ➤ ಬೆಳ್ಮಣ್ ಪೇಟೆಯಲ್ಲಿ ಆಕ್ರೋಶ ವ್ಯಕ್ತ Read More »

ಕರಾವಳಿ, ಕರ್ನಾಟಕ

ರ‍್ಯಾಪರ್ ಚಂದನ್ ಶೆಟ್ಟಿಗೆ ಸಂಕಷ್ಟ ತಂದ ‘ಕೋಲು ಮಂಡೆ ಜಂಗಮ ದೇವರು” ಹಾಡು

(ನ್ಯೂಸ್ ಕಡಬ) newskadaba.com ಚಾಮರಾಜನಗರ. ಆ,25: ಜನಪದ ಹಾಡು ‘ಕೋಲು ಮಂಡೆ ಜಂಗಮ ದೇವರು” ಎಂಬ ಜನಪದ ರ್ಯಾಪ್ ಹಾಡಿಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡ ರ್ಯಾಪರ್, ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೋರಿದ್ದಾರೆ.   ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ನೀಡಿರುವ ಚಂದನ್ ಶೆಟ್ಟಿ, “ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ಜಾನಪದ ತಲುಪಲಿ ಎನ್ನುವ ಕಾರಣಕ್ಕೆ ರ್ಯಾಪ ಹಾಡಿನ ರೂಪ ಕೊಟ್ಟಿದ್ದೆ.

ರ‍್ಯಾಪರ್ ಚಂದನ್ ಶೆಟ್ಟಿಗೆ ಸಂಕಷ್ಟ ತಂದ ‘ಕೋಲು ಮಂಡೆ ಜಂಗಮ ದೇವರು” ಹಾಡು Read More »

ಕರಾವಳಿ

ಜಗತ್ತಿನ ಅತಿ ವೇಗದ ಓಟಗಾರ ‘ಉಸೇನ್‌ ಬೋಲ್ಟ್’ ಅವರಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಿಂಗ್ ಸ್ಟನ್. ಆ,25:  ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್‌ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಸೋಮವಾರ ಮಧ್ಯಾಹ್ನ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್‌, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಸುರಕ್ಷಿತವಾಗಿರಲು ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿರುವುದಾಗಿ ಹೇಳಿಕೊಂಡಿದ್ದರು.   ಆದರೆ, ಅವರ ವರದಿ ಪಾಸಿಟಿವ್‌ ಬಂದಿರುವುದಾಗಿ ಜಮೈಕಾದ ಆರೋಗ್ಯ ಸಚಿವಾಲಯ ಖಚಿತಪಡಿಸಿದೆ. ಶನಿವಾರ 34ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಬೋಲ್ಟ್,‌ ಮರುದಿನವೇ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು. ಸುರಕ್ಷಿತವಾಗಿರಲು ನಾನು ಸ್ವಯಂ ಕ್ವಾರಂಟೈನ್‌ಗೆ

ಜಗತ್ತಿನ ಅತಿ ವೇಗದ ಓಟಗಾರ ‘ಉಸೇನ್‌ ಬೋಲ್ಟ್’ ಅವರಿಗೆ ಕೊರೊನಾ ಪಾಸಿಟಿವ್ Read More »

ಕರಾವಳಿ

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕರಾವಳಿ . ಆ,25:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 201 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಒಟ್ಟು ಸಂಖ್ಯೆ ಸಂಖ್ಯೆ 316ಕ್ಕೆ ಹೆಚ್ಚಳವಾಗಿದೆ.   ಮೃತರಲ್ಲಿ 255 ಮಂದಿ ದಕ ಜಿಲ್ಲೆಯವರಾದರೆ, 61 ಮಂದಿ ಹೊರಜಿಲ್ಲೆಯವರು. ಸೋಮವಾರ ಮೃತಪಟ್ಟವರಲ್ಲಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಇಬ್ಬರು ಮತ್ತು ಹೊರಜಿಲ್ಲೆಯ ಒಬ್ಬರು ಸೇರಿದ್ದಾರೆ.ಪಾಸಿಟಿವ್‌ ಆದವರಲ್ಲಿ ಮಂಗಳೂರು ತಾಲೂಕಿನ 144, ಬಂಟ್ವಾಳದ 22, ಪುತ್ತೂರಿನ 5, ಸುಳ್ಯದ 5,

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com ಕೊಡಗು . ಆ,25:  ಮಗ SSLC ಪರೀಕ್ಷೆಯಲ್ಲಿ ಫೇಲಾದ ಎಂಬ ಬೇಸರದಿಂದ ತಂದೆಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. 39 ವರ್ಷದ ತಂದೆ, ಕೂಲಿ ಕಾರ್ಮಿಕ ರಘು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಪತ್ನಿಯ ವೇಲ್ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. SSLC  ಪರೀಕ್ಷೆಯ ನಾಲ್ಕು ವಿಷಯದಲ್ಲಿ ಮಗ ಪ್ರಶಾಂತ್​ ಅನುತೀರ್ಣನಾಗಿದ್ದ. ಮಗ ಫೇಲ್ ಆಗಿದ್ದಕ್ಕೆ ತಂದೆ ಕುಡಿತದ ದಾಸನಾಗಿದ್ದ ಎಂದು ಆತನ ಪತ್ನಿ ಮಂಜುಳಾ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಸಿದ್ದಾಪುರ

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಹುಮಹಡಿ ಕಟ್ಟಡ ಕುಸಿತ ದುರಂತ ➤ ಅವಶೇಷದಡಿ ಹಲವಾರು ಮಂದಿ ಸಿಲುಕಿರುವ ಶಂಕೆ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ. ಆ,25:  ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ನಡೆದಿದೆ.   ಎನ್ ಡಿಆರ್ ಎಫ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದು, ಈಗಾಗಲೇ ಒಟ್ಟು 24 ಮಂದಿಯನ್ನು ರಕ್ಷಿಸಿದ್ದು, ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಅವಶೇಷಗಳಡಿ

ಬಹುಮಹಡಿ ಕಟ್ಟಡ ಕುಸಿತ ದುರಂತ ➤ ಅವಶೇಷದಡಿ ಹಲವಾರು ಮಂದಿ ಸಿಲುಕಿರುವ ಶಂಕೆ Read More »

ರಾಷ್ಟ್ರೀಯ ನ್ಯೂಸ್

ಪರಸ್ಪರ ಡಿಕ್ಕಿಯಾದ ಬೈಕುಗಳು ➤ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ. ಆ,25: ಎರಡು ಬೈಕುಗಳ ಮಧ್ಯೆ ಅಪಘಾತ ಸಂಭವಿಸಿ, ಸವಾರರಿಬ್ಬರು ಗಾಯಗೊಂಡ ಘಟನೆಯೊಂದು ಕನಕಮಜಲಿನಲ್ಲಿ ಆ.25 ರಂದು ಸಂಭವಿಸಿದೆ. ಕನಕಮಜಲಿನ ಕುತ್ತಿಮುಂಡ ಶೇಷಪ್ಪ ಗೌಡ ಎಂಬವರು ತಮ್ಮ ಬೈಕ್‌ ನಲ್ಲಿ ದೇರ್ಕಜೆ ರಸ್ತೆಯಿಂದ ಮುಖ್ಯರಸ್ತೆ ಕಡೆಗೆ ಬರುತ್ತಿದ್ದಾಗೆ ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಪ್ರಸನ್ನ ಅಡ್ಕಾರು ಎಂಬವರ ಬೈಕ್‌ ಗೆ ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್‌ ನಿಂದ ರಸ್ತೆಗೆ ಎಸೆಯಲ್ಪಟ್ಟ ಶೇಷಪ್ಪ ಗೌಡರು ಕಾಲಿಗೆ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ಪರಸ್ಪರ ಡಿಕ್ಕಿಯಾದ ಬೈಕುಗಳು ➤ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ತಡರಾತ್ರಿ ಬೆಂಕಿಗಾಹುತಿಯಾದ ಮಾರುತಿ ಇಂಡಸ್ಟ್ರೀಸ್ ➤ 1.5 ಕೋಟಿ ರೂ ಮೌಲ್ಯದ ನಷ್ಟ

(ನ್ಯೂಸ್ ಕಡಬ) newskadaba.com ಕಾರ್ಕಳ. ಆ,25: ಕಾರ್ಕಳದ ಕುಕ್ಕುಂದೂರು ಗ್ರಾಮದ ಹಾರ್ಜೆಡ್ಡು ಎಂಬಲ್ಲಿ ಮಾರುತಿ ಇಂಡಸ್ಟ್ರೀಸ್ ಗೆ ಕಳೆದ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಬೆಂಕಿ ತಗುಲಿದ್ದು ಅಪಾರ ಪ್ರಮಾಣದ ಹಾನಿಯಾಗಿ ನಷ್ಟವುಂಟಾಗಿದೆ.     ಪ್ರಕಾಶ್ ಪುತ್ರನ್ ಎಂಬುವರಿಗೆ ಸೇರಿದ ಮಾರುತಿ ಇಂಡಸ್ಟ್ರೀಸ್ ಇದು ಗೇರುಬೀಜದ ಎಣ್ಣೆ ತೆಗೆಯುವ ಕಂಪನಿಯಾಗಿದ್ದು, ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮ ಫ್ಯಾಕ್ಟರಿ ಬೆಂಕಿಯ ಕೆನ್ನಾಲಿಗೆ ಆಹುತಿಯಾಗಿದೆ. ಇನ್ನು ಎರಡು ಲಾರಿಗಳು ಭಾಗಶ: ಭಸ್ಮವಾಗಿದೆ. ಸರಿ ಸುಮಾರು ಅಂದಾಜು

ತಡರಾತ್ರಿ ಬೆಂಕಿಗಾಹುತಿಯಾದ ಮಾರುತಿ ಇಂಡಸ್ಟ್ರೀಸ್ ➤ 1.5 ಕೋಟಿ ರೂ ಮೌಲ್ಯದ ನಷ್ಟ Read More »

ಕರಾವಳಿ, ಕರ್ನಾಟಕ

ಆರೋಗ್ಯ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ ➤ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್‌ ಅಗತ್ಯವಿಲ್ಲ…

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25 : ರಾಜ್ಯಕ್ಕೆ ಆಗಮಿಸುವ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರದ್ದುಗೊಳಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಲಾಗಿದೆ.ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಪರಿಷ್ಕೃತ ಸುತ್ತೋಲೆ ಅನ್ವಯ, ಕೋವಿಡ್-19 ರೋಗ ಲಕ್ಷಣಗಳಿಲ್ಲದಿದ್ದಲ್ಲಿ 14 ದಿನಗಳ ಕ್ವಾರಂಟೈನ್ ಅಗತ್ಯವಿರುವುದಿಲ್ಲ, ಸೇವಾ ಸಿಂಧು ಆಪ್‌ನಲ್ಲಿ ರಿಜಿಸ್ಟರ್ ಅಗತ್ಯವಿಲ್ಲ. ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಆದರೆ, ಅವರು ರಾಜ್ಯಕ್ಕಾಗಮಿಸಿದ ದಿನದಿಂದ 14 ದಿನಗಳವರೆಗೆ ಕೊರೋನಾ ರೋಗದ ಲಕ್ಷಣಗಳಾದ ಜ್ವರ,

ಆರೋಗ್ಯ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ ➤ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್‌ ಅಗತ್ಯವಿಲ್ಲ… Read More »

ಕರಾವಳಿ, ಕರ್ನಾಟಕ
Scroll to Top