ಮಂಗಳೂರು

ಆನ್ ಲೈನ್ ಕ್ಲಾಸ್ ಪಜೀತಿ, ನೆಟ್ ವರ್ಕ್ ಸಮಸ್ಯೆ ➤ ಬಸ್ ನಿಲ್ದಾಣದಲ್ಲಿ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಪಾಲೆತ್ತಡಿ, ಆ.11:  ಕೊರೊನಾ ಹಾವಳಿಯಿಂದ ಇನ್ನೂ ಸರಿಯಾಗಿ ಶಾಲೆಗಳು ತೆರೆದುಕೊಂಡಿಲ್ಲ. ಆದರೆ ಆನ್ ಲೈನ್ ಕ್ಲಾಸ್ ಗಳ ಪಜೀತಿಯಲ್ಲಿ ಮಕ್ಕಳು ಸಿಲುಕಿ ಒದ್ದಾಡುತ್ತಿದ್ದಾರೆ. ಮೊಬೈಲ್ ಹಿಡಿದುಕೊಂಡು ನೆಟ್ವರ್ಕ್‍ಗಾಗಿ ಕಾಡು ಮೇಡು ಸುತ್ತುವ ಪರಿಸ್ಥಿತಿ ಗೆ ಸಿಲುಕಿದ್ದಾರೆ. ದ. ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂ‌ಬಲ್ಲಿನ ವಿದ್ಯಾರ್ಥಿಗಳಿಗೆ ಬಸ್ ನಿಲ್ದಾಣವೇ ತರಗತಿಯಾಗಿದೆ. ದಕ್ಷಿಣ ಕನ್ನಡ ವಿದ್ಯಾವಂತರ, ಅಭಿವೃದ್ಧಿ ಹೊಂದಿರುವ ಜಿಲ್ಲೆ ಎನ್ನುವ ಮಾತಿದೆ. ಆದರೆ ಇಲ್ಲಿನ ವಿದ್ಯಾವಂತರಾಗಲು ಪಡುವ ಪಾಡು […]

ಆನ್ ಲೈನ್ ಕ್ಲಾಸ್ ಪಜೀತಿ, ನೆಟ್ ವರ್ಕ್ ಸಮಸ್ಯೆ ➤ ಬಸ್ ನಿಲ್ದಾಣದಲ್ಲಿ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.11:   ಹಳ್ಳ, ತೊರೆಗಳಲ್ಲಿರುವ ಮರಳನ್ನು ತೆಗೆಯುವ ಸಲುವಾಗಿ ಮುಂದಿನ 15 ದಿನಗಳೊಳಗೆ ಮರಳು ಸಿಗುವ ಇಂತಹ ಸ್ಥಳಗಳನ್ನು ಗುರುತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಹಶೀಲ್ದಾರ್ ನೇತೃತ್ವದಲ್ಲಿ ಲೋಕೋಪಯೋಗಿ, ಅರಣ್ಯ, ಗಣಿ ಇಲಾಖೆ ಅಧಿಕಾರಿಗಳು, ಪಿ.ಡಿ.ಓ. ಗಳ ಜಂಟೀ ತಂಡ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾ ಸಮಿತಿಗೆ ವರದಿ ನೀಡಬೇಕು. ಜಂಟಿ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಕರ್ನಾಟಕ ಕೇರಳ ಗಡಿಯಲ್ಲಿ ಗುಡ್ಡ ಕುಸಿತ ➤ ಅಪಾಯದ ಅಂಚಿನಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಕಡಬ: ಆ.10,. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಪ್ರಕೃತಿವಿಕೋಪಗಳು ಸಂಭವಿಸುತ್ತಲೇ ಇದೆ.  ಕರ್ನಾಟಕ ಕೇರಳ ಗಡಿ ಪ್ರದೇಶವಾಗಿರುವ ಬಡ್ಡಡ್ಕ ಸಮೀಪದ ಬಾಟೋಳಿ ಎಂಬಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದಿದೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಭೂಮಿ ಬಿರುಕು ಬಿಟ್ಟಿತ್ತು. ಈ ಬಾರಿ ಸುಮಾರು ಎರಡು ಎಕರೆಯಷ್ಟು ಜಾಗ, ಇನ್ನೂರು ಮೀಟರ್ ದೂರಕ್ಕೆ ಗುಡ್ಡ ಜರಿದಿದೆ. ಎರಡು ಮೀಟರ್ ಅಗಲದಲ್ಲಿ ಮಣ್ಣು ಕುಸಿದಿದ್ದು ಪರಿಸರದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಕರ್ನಾಟಕ ಕೇರಳ ಗಡಿಯಲ್ಲಿ ಗುಡ್ಡ ಕುಸಿತ ➤ ಅಪಾಯದ ಅಂಚಿನಲ್ಲಿ ಜನತೆ Read More »

ಕರಾವಳಿ

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!!

(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,.ಇಲ್ಲಿನ ಪ್ರಸಿದ್ಧ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ನಾರಾಯಣ ನಾಯ್ಕ (48ವ.) ಅವರು  ಕ್ಕೀಡಾಗಿ ಶನಿವಾರ ರಾತ್ರಿ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಕುರಿಯ ಗ್ರಾಮದ ಅಮ್ಮುಂಜೆಯ ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ವೇಳೆ

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!! Read More »

ಕರಾವಳಿ

ತಲಕಾವೇರಿ ದುರಂತ ➤ ಪ್ರಧಾನ ಅರ್ಚಕರ ಅಣ್ಣ ‘ಆನಂದ ತೀರ್ಥ ಸ್ವಾಮಿ’ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಆ.08:  ಕಳೆದ ನಾಲ್ಕು ದಿನಗಳ ಹಿಂದೆ ಬ್ರಹ್ಮಗಿರಿ ಬೆಟ್ಟ ಕುಸಿತಗೊಂಡು ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಐವರು ಕಣ್ಮರೆಯಾಗಿದ್ದರು. ರಕ್ಷಣಾ ಕಾರ್ಯಾಚರಣೆಗೆ ಇಳಿದಿದ್ದಂತ ರಕ್ಷಣಾ ಸಿಬ್ಬಂದಿಗಳಿಗೆ ಇದೀಗ ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಅಣ್ಣ ಆನಂದ ತೀರ್ಥ ಸ್ವಾಮಿ(86) ಅವರ ಮೃತದೇಹ ಎಂದು ಹೇಳಲಾಗುತ್ತಿರುವ ಮೃತದೇಹ ಪತ್ತೆಯಾಗಿದೆ.       ಬ್ರಹ್ಮಗಿರಿ ಬೆಟ್ಟ ಕುಸಿತಗೊಂಡು ತಲಕಾವೇರಿಯ ಪ್ರಧಾನ ಅರ್ಚಕ ಸೇರಿದಂತೆ ಐವರು ಕಣ್ಮರೆಯಾಗಿದ್ರು. ಸಚಿವ

ತಲಕಾವೇರಿ ದುರಂತ ➤ ಪ್ರಧಾನ ಅರ್ಚಕರ ಅಣ್ಣ ‘ಆನಂದ ತೀರ್ಥ ಸ್ವಾಮಿ’ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಆಲೆಟ್ಟಿ: ಮದ್ಯರಾತ್ರಿ ಮನೆ ಹಿಂಬದಿಯ ಬರೆ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ದಂಪತಿ

(ನ್ಯೂಸ್ ಕಡಬ) newskadaba.com ಆಲೆಟ್ಟಿ, ಆ.08:  ಈಗಾಗಲೇ, ಕರಾವಳಿ ಗ್ರಾಮೀಣ ಭಾಗಗಳು ಮಳೆಯ ಅಬ್ಬರಕ್ಕೆ ನಲುಗುತ್ತಿದೆ. ಅಲ್ಲಲ್ಲಿ ಗುಡ್ಡ ಕುಸಿತಗೊಳ್ಳುತ್ತಿದೆ.  ಆಲೆಟ್ಟಿ ಗ್ರಾಮದ ಗುಂಡ್ಯ ನಿವಾಸಿ ಮೊರಂಗಲ್ಲು ಶಿವರಾಮ ರೈ ಯವರ ಮನೆ ಹಿಂಬದಿ ಭಾರಿ ಪ್ರಮಾಣದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಗುಡ್ಡ ಕುಸಿತಗೊಂಡು ಅಪಾರ ಪ್ರಮಾಣದ ನಷ್ಟವಾಗಿದೆ.   ತಡರಾತ್ರಿ ಸುಮಾರು 1 ಗಂಟೆ ಸುಮಾರಿಗೆ ನಾಯಿ ಜೋರಾಗಿ ಬೊಗಳಿದಾಗ ಮನೆಯ ಒಳಗೆ ಮಲಗಿ ನಿದ್ರಿಸಿದ್ದ ಶಿವರಾಮ ರೈ ದಂಪತಿ ಯವರು  ಎಚ್ಚರಗೊಂಡು ಹೊರಗೆ

ಆಲೆಟ್ಟಿ: ಮದ್ಯರಾತ್ರಿ ಮನೆ ಹಿಂಬದಿಯ ಬರೆ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ದಂಪತಿ Read More »

ಕರಾವಳಿ, ಕರ್ನಾಟಕ

ಮದಗಕ್ಕೆ ಉರುಳಿದ ಟಿಪ್ಪರ್ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ , ಆ.08:  ಆಯತಪ್ಪಿದ ಟಿಪ್ಪರ್‌ವೊಂದು ಪಳ್ಳಿ ನಿಂಜೂರು ಬಳಿ ರಸ್ತೆ ಪಕ್ಕದ ಮದಗಕ್ಕೆ ಉರುಳಿ ಬಿದ್ದ ಪರಿಣಾಮ ಟಿಪ್ಪರ್ ಚಾಲಕ ಸಹಿತ ಇಬ್ಬರು ಮೃತಪಟ್ಟಿದ್ದಾರೆ.     ಟಿಪ್ಪರ್ ಚಾಲಕ ಕುಕ್ಕುಂದೂರು ಗಣಿತ ನಗರ ನಿವಾಸಿ ಅರುಣ್‌ಕುಮಾರ್(40) ಹಾಗೂ 20 ಹರೆಯದ ಕ್ಲೀನರ್ ಮೃತಪಟ್ಟವರು. ಕ್ಲೀನರ್‌ನ ಬಗ್ಗೆ ಮಾಹಿತಿ ಲಭಿಸಿಲ್ಲ. ಬೈಲೂರು ಜಾರ್ಕಳದ ಸುಧಾಕರ ಎಂಬುವರಿಗೆ ಸೇರಿದ ಟಿಪ್ಪರ್‌ನಲ್ಲಿ ಮಣ್ಣು ಸಾಗಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.

ಮದಗಕ್ಕೆ ಉರುಳಿದ ಟಿಪ್ಪರ್ ➤ ಇಬ್ಬರು ಮೃತ್ಯು Read More »

ಕರಾವಳಿ

ಮಹಾಕುಸಿತಕ್ಕೆ ತುತ್ತಾಗುವ ಭೀತಿಯಲ್ಲಿ ಚಾರ್ಮಾಡಿ ಘಾಟ್

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಆ.08:  ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆಯಾಗುತ್ತಿದ್ದು, ಚಾರ್ಮಾಡಿ ಘಾಟ್ ಕಳೆದ ವರ್ಷದಂತೆ ಮಹಾಕುಸಿತಕ್ಕೆ ತುತ್ತಾಗುವ ಭೀತಿ ಎದುರಾಗಿದೆ. ಕೆಲದಿನಗಳಿಂದ ಘಾಟಿಯ ಕೆಲವೆಡೆ ಸಣ್ಣಪ್ರಮಾಣದಲ್ಲಿ ಕುಸಿತ ಆರಂಭಗೊಂಡಿದ್ದು, ಈಗ ಅಲೆಕಾನ್ ಪ್ರದೇಶದ ಹತ್ತಿರ ರಾಷ್ಟ್ರೀಯ ಹೆದ್ದಾರಿಯೇ ಬಿರುಕು ಬಿಟ್ಟಿದೆ. ಮಲಯಮಾರುತ, ನಾಲ್ಕನೇ ತಿರುವು ಹಾಗೂ ಅಣ್ಣಪ್ಪ ಬೆಟ್ಟ- ಅಲೆಕಾನ್ ನಡುವೆ ಕೆಲದಿನಗಳಿಂದ ರಸ್ತೆ ಬದಿ ಗುಡ್ಡ ಸಣ್ಣ ಪ್ರಮಾಣದಲ್ಲಿ ಕುಸಿಯಲಾರಂಭಿಸಿದೆ. ಶುಕ್ರವಾರ ಅಲೆಕಾನ್ ಸಮೀಪ ದರೆ ಕುಸಿದು ರಸ್ತೆಗೆ ಕಲ್ಲುಮಣ್ಣು ಮರ

ಮಹಾಕುಸಿತಕ್ಕೆ ತುತ್ತಾಗುವ ಭೀತಿಯಲ್ಲಿ ಚಾರ್ಮಾಡಿ ಘಾಟ್ Read More »

ಕರಾವಳಿ, ಕರ್ನಾಟಕ

ಮಂಗಳೂರು |ಮಳೆಗೆ ನಲುಗಿದ ಕರಾವಳಿ ಭಾಗ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.08:  ದ.ಕ. ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕು ಸಹಿತ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಭಾರಿ ಗಾಳಿ ಮಳೆ ಮುಂದುವರಿದಿದ್ದು, ನೆರೆ-ಪ್ರವಾಹ, ಗುಡ್ಡ ಕುಸಿತ, ಮನೆಗಳಿಗೆ ಹಾನಿ ಮೊದಲಾದವುಗಳಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.   ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸ್ನಾನಘಟ್ಟ ಐದನೇ ದಿನವೂ ಮುಳುಗಡೆಯಾಗಿದೆ. ಇಲ್ಲಿನ ಶೌಚಗೃಹ, ದೇವರ ಅವಭೃತ ಕಟ್ಟೆ ಭಾಗಶಃ ಮುಳುಗಡೆಗೊಂಡಿದೆ. ಡ್ರೆಸ್ಸಿಂಗ್ ರೂಂ, ಲಗೇಜ್ ಕೊಠಡಿ, ರಕ್ಷಕರ ಕೊಠಡಿ ಒಳಗೊಂಡ ಕಟ್ಟಡ ಜಲಾವೃತಗೊಂಡಿದೆ.

ಮಂಗಳೂರು |ಮಳೆಗೆ ನಲುಗಿದ ಕರಾವಳಿ ಭಾಗ Read More »

ಕರಾವಳಿ, ಕರ್ನಾಟಕ

ಬಂಟ್ವಾಳ : ಟ್ರಾಫಿಕ್ ಕಂಟ್ರೋಲ್ ಪೋಲೀಸ ರಿಂದ ಹೆದ್ದಾರಿ ರಸ್ತೆ ದುರಸ್ತಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.08: ಲಾಠಿ ಹಿಡಿದು ಟ್ರಾಫಿಕ್ ಕಂಟ್ರೋಲ್ ಮಾಡುವ ಪೋಲೀಸರು ಹಾರೆ, ಬುಟ್ಟಿ ಹಿಡಿದು ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿದ್ದು ವ್ಯಾಪಕ ಪ್ರಶಂಸೆಗೆ ಕಾರಣವಾಯಿತು. ಇದು ಸಾಧ್ಯವಾಗಿದ್ದು ಬಿ.ಸಿ.ರೋಡಿನ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಮಾಡಿದ ಮಾದರಿ ಕಾರ್ಯದಿಂದಾಗಿ. ಭಾರೀ ಮಳೆಗೆ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡಗಳೆದ್ದು ವಾಹನ ಸವಾರರಿಗೆ ಭಾರೀ ಸಂಕಷ್ಟ ಎದುರಾಗಿತ್ತು. ಇದನ್ನೆಲ್ಲಾ ಕಂಡು ಸಂಚಾರ ನಿಯಂತ್ರಣ ಕರ್ತವ್ಯವನ್ನು ಮಾಡುವ ಪೊಲೀಸರೇ ಸ್ವತಃ ಹಾರೆ, ಬುಟ್ಟಿ ಹಿಡಿದು ಹೊಂಡಗಳನ್ನು ಮುಚ್ಚವ

ಬಂಟ್ವಾಳ : ಟ್ರಾಫಿಕ್ ಕಂಟ್ರೋಲ್ ಪೋಲೀಸ ರಿಂದ ಹೆದ್ದಾರಿ ರಸ್ತೆ ದುರಸ್ತಿ Read More »

ಕರಾವಳಿ, ಕರ್ನಾಟಕ
Scroll to Top