ಮಂಗಳೂರು

ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು.     ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. […]

ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜು.30: ಮುಂದಿನ ಮೂರು ವರ್ಷಕ್ಕೂ ಬಿ.ಎಸ್. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿರಲಿದೆ ಈ ಕುರಿತು ಯಾರಿಗೂ ಸಂಶಯ ಬೇಡ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್​‌ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಊಹಾಪೋಹಗಳಿಗೆ ಇಂದು ಚಾಮರಾಜನಗರದ ಕೊಳ್ಳೆಗಾಲದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್​ ‌ತೆರೆ ಎಳೆಯಲು ಮುಂದಾಗಿದ್ದಾರೆ.

ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ

(ನ್ಯೂಸ್ ಕಡಬ) newskadaba.com ಮಂಗಳೂರು: ಜು.30., ಕರ್ನಾಟಕ ಪ್ರಾದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಜುಲೈ 31 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಡಿ. ಕೆ ಶಿವಕುಮಾರ್ ಅವರು ಕೇಂದ್ರ ಮಾಜಿ ಸಚಿವರಾದ ಡಾ. ಆಸ್ಕರ್ ಫೆರ್ನಾಂಡಿಸ್, ಮಂಗಳೂರು ಬಿಷಪ್ ರವನ್ನುಭೇಟಿ ಮಾಡಿ ಬಳಿಕ ದ.ಕ.ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ, ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕುದ್ರೋಳಿ

ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ Read More »

ಕರಾವಳಿ

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಇಂಫಾಲ್, ಜು.30: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.  ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಇದರಲ್ಲಿ 4 ಅಸ್ಸಾಂ ರೈಫಲ್ಸ್ ಘಟಕದ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದು ನಾಲ್ವರು ಗಾಯಗೊಂಡಿದ್ದಾರೆ.       ಗಸ್ತಿನಲ್ಲಿದ್ದ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ಐಇಡಿ ಸ್ಫೋಟಿಸಿದ್ದು

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರಾವಳಿಯಲ್ಲಿ ಮತ್ತೆ ಚುರುಕುಗೊಂಡ ಮಳೆ ➤ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ಒಂದು ವಾರಗಳ ಬಿಡುವು ಕೊಟ್ಟಿದ್ದ ಮಳೆ ಕರಾವಳಿಯಲ್ಲಿ ಮತ್ತೆ ಚುರುಕುಗೊಂಡಿದೆ. ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ನಿನ್ನೆಯಿಂದ ಮಳೆ ಮತ್ತೆ ಸುರಿಯಲಾರಂಭಿಸಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಯಾವುದೇ ಸಂದರ್ಭದಲ್ಲಿ ಭಾರೀ ಮಳೆಯಾಗುವ ಲಕ್ಷಣ ಗೋಚರಿಸಲಾರಂಭಿಸಿದೆ.     ಹವಾಮಾನ ಇಲಾಖೆ ಸೂಚನೆ ಪ್ರಕಾರ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲೂ ಎಲ್ಲೋ ಅಲರ್ಟ್

ಕರಾವಳಿಯಲ್ಲಿ ಮತ್ತೆ ಚುರುಕುಗೊಂಡ ಮಳೆ ➤ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜು.30:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಆತ್ಮಹತ್ಯೆ ದುರಂತ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಬ್ಬ ಯುವ ನಟ ಸಾವನ್ನಪ್ಪಿದ್ದಾರೆ. 32 ವರ್ಷದ ಮರಾಠಿ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮರಾಠಿ ಚಿತ್ರರಂಗದ 32 ವರ್ಷದ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.     ಮಹಾರಾಷ್ಟ್ರದ ಮರಾಠವಾಡದ ನಂದೇಡ್ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಅವರು ಜುಲೈ 29ರಂದು ನೇಣುಬಿಗಿದುಕೊಂಡು ಸಾವನ್ನಪ್ಪಿರುವುದು ತಿಳಿದುಬಂದಿದೆ. ನಂದೇಡ್ನ ಗಣೇಶ್ ನಗರ್ನಲ್ಲಿ ಇರುವ ಫ್ಲಾಟ್ನಲ್ಲಿ

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಸೆ.1 ರಿಂದ ಮೀನುಗಾರಿಕೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ಜು.30: ಅಗಸ್ಟ್ 1 ರಂದು ಪ್ರಾರಂಭವಾಗಬೇಕಿದ್ದ ಮೀನುಗಾರಿಕಾ ಋತುವನ್ನು ಕೊರೊನಾದಿಂದಾಗಿ ಈ ಬಾರಿ ಕರಾವಳಿಯಲ್ಲಿ ಸೆಪ್ಟೆಂಬರ್‌ 1 ರಿಂದ ಆರಂಭಿಸಲು ಮೀನುಗಾರಿಕಾ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರತಿ ವರ್ಷದಂತೆ ಮೀನುಗಾರಿಕೆಯ ನಿಷೇಧದ ಅವಧಿ ಜುಲೈ 31 ಕ್ಕೆ ಮುಕ್ತಾಯವಾಗಿ, ಆಗಸ್ಟ್ 1ರಿಂದ ಆರಂಭವಾಗಬೇಕಾಗಿತ್ತು. ಕೊರೊನಾದ ಸಂಕಷ್ಟದಿಂದ ಮತ್ತೆ ಅಗಸ್ಟ್ 1 ರಿಂದ ಪ್ರಾರಂಭ ಕಷ್ಟ ಸಾಧ್ಯವಾದ ಹಿನ್ನಲೆ ಈ ನಿರ್ಧಾರಕ್ಕೆ ಬರಲಾಗಿದೆ.     ಈ ಕುರಿತಂತೆ ವಿವಿಧ ಸಂಘಟನೆಗಳ ಸಭೆ

ಮಂಗಳೂರು: ಸೆ.1 ರಿಂದ ಮೀನುಗಾರಿಕೆ ಆರಂಭ Read More »

ಕರಾವಳಿ, ಕರ್ನಾಟಕ

ಆಗಸ್ಟ್ 15 ರ ವೇಳೆಗೆ ಸಿಇಟಿ ಫಲಿತಾಂಶ ಪ್ರಕಟ ➤ ಸೆಪ್ಟಂಬರ್ ನಿಂದ ಕಾಲೇಜ್ ಶುರು

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.30: ಸವಾಲಿನ ಜೊತೆ ಸಿಇಟಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ ನಡೆಯಲಿದ್ದು 1.94 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕೋವಿಡ್ 19 ರ ದೊಡ್ಡ ಸವಾಲಿನ ಜೊತೆಗೆ ಪರೀಕ್ಷೆ ನಡೆಸಲಾಗುತ್ತಿದೆ. ಆಗಸ್ಟ್ ಮಧ್ಯದಲ್ಲೇ ಸಿಇಟಿ ರಿಸಲ್ಟ್ ಪ್ರಕಟಿಸಲಾಗುವುದು. ರಾಜ್ಯದೆಲ್ಲೆಡೆ ವ್ಯವಸ್ಥೆ ಮಾಡಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.    

ಆಗಸ್ಟ್ 15 ರ ವೇಳೆಗೆ ಸಿಇಟಿ ಫಲಿತಾಂಶ ಪ್ರಕಟ ➤ ಸೆಪ್ಟಂಬರ್ ನಿಂದ ಕಾಲೇಜ್ ಶುರು Read More »

ಕರಾವಳಿ, ಕರ್ನಾಟಕ

ಗೂಗಲ್ ಪೇ ಆ್ಯಪ್ ನಲ್ಲಿ 24,500 ರೂ. ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29:  ಸಿಲಿಕಾನ್ ಸಿಟಿಯಲ್ಲಿ ಗೂಗಲ್ ಪೇ ಆ್ಯಪ್ ಬಳಕೆದಾರರ ಮೇಲೂ ಸೈಬರ್ ಖದೀಮರು ಕಣ್ಣು ಹಾಕಿದ್ದಾರೆ. ನಗರದ ಗವಿಪುರಂ ನಿವಾಸಿ ಹರೀಶ್​​ ಎಂಬುವವರಿಗೆ ಗೂಗಲ್ ಪೇ ಸಮಸ್ಯೆಯಾಗಿತ್ತು. ಹೀಗಾಗಿ ಅವರು ಗೂಗಲ್ ಪೇ ನಲ್ಲಿರುವ ಕಸ್ಟಮರ್ ಕೇರ್ ಸಂಖ್ಯೆಯನ್ನು ಸರ್ಚ್ ಮಾಡಿ ಸಿಕ್ಕ ನಂಬರ್​ 990177xxxxxಕ್ಕೆ ಕರೆ ಮಾಡಿದ್ದರು. ಆದರೆ, ಅವರಿಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ತಕ್ಷಣವೇ 06291766339 ಸಂಖ್ಯೆಯಿಂದ ಅಪರಿಚಿತ ವ್ಯಕ್ತಿಯೋರ್ವನಿಂದ ಹರೀಶ್​​ ಅವರಿಗೆ ಕರೆ ಬಂದಿದ್ದು, ನಿಮಗೆ

ಗೂಗಲ್ ಪೇ ಆ್ಯಪ್ ನಲ್ಲಿ 24,500 ರೂ. ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಳೆ ನೋಟು ಚಲಾವಣೆಗೆ ಯತ್ನ ➤ ಮೂವರು ಆರೋಪಿಗಳನ್ನು ಬಂಧಿಸಿ 30 ಲಕ್ಷ ರೂ. ನೋಟು ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29: ನಿಷೇಧಿಸಲ್ಪಟ್ಟ ಹಳೆಯ ನೊಟುಗಳನ್ನು ಚಲಾವಣೆಯಲ್ಲಿರುವ ನೋಟುಗಳಿಗೆ ಕಮಿಷನ್‌ಗಾಗಿ ಸಾರ್ವಜನಿಕರಲ್ಲಿ ವಿನಿಮಯ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಉತ್ತರ ವಿಭಾಗ ಪೊಲೀಸರು, ಆರೋಪಿಗಳಿಂದ 30 ಲಕ್ಷ ರೂ.ಮೌಲ್ಯದ ನಿಷೇಧಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾಗಡಿ ರಸ್ತೆಯ ಕೆ.ಪಿ.ಅಗ್ರಹಾರ ನಿವಾಸಿ ಕಿರಣ್ ಕುಮಾರ್, ನಾಗರಬಾವಿ, ಮಾನಸನಗರದ ಪ್ರವೀಣ್ ಕುಮಾರ್ ಬಿ.ಆರ್., ಕಾಮಾಕ್ಷಿಪಾಳ್ಯದ ಪವನ್ ಕುಮಾರ್ ಬಂಧಿತ ಆರೋಪಿಗಳು.   ಜಾಲಹಳ್ಳಿಯ ಎಚ್‌ಎಂಟಿ ಸರ್ವೀಸ್ ರಸ್ತೆಯಲ್ಲಿರುವ ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ್ಟ್‌ಮೆಂಟ್ ಬಳಿ ಮೂವರು ಆರೋಪಿಗಳು

ಹಳೆ ನೋಟು ಚಲಾವಣೆಗೆ ಯತ್ನ ➤ ಮೂವರು ಆರೋಪಿಗಳನ್ನು ಬಂಧಿಸಿ 30 ಲಕ್ಷ ರೂ. ನೋಟು ವಶ Read More »

ಕರಾವಳಿ
Scroll to Top