ಮಂಗಳೂರು

ಪುತ್ತೂರು :ಮೂರುವರೆ ವರ್ಷದ ಮಗು ಈಜುಕೊಳಕ್ಕೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.25: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರುವರೆ ವರ್ಷದ ಪುಟ್ಟ ಬಾಲಕ ಸ್ಥಳೀಯ ತೋಟದಲ್ಲಿದ್ದ ಈಜು ಕೊಳದಲ್ಲಿ ಬಿದ್ದು ಮೃತಪಟ್ಟ ಬಗ್ಗೆ ಪಾಣಾಜೆ ಗ್ರಾಮದ ಅಪಿನಿಮೂಲೆ ಎಂಬಲ್ಲಿ ಡಿ.24ರಂದು ಸಂಜೆ ನಡೆದಿದೆ. ಅಪಿನಮೂಲೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಮತ್ತು ಆಶ್ಮಾ ದಂಪತಿಯ ಮೂರುವರೆ ವರ್ಷದ ಮಗು ಮಹಮ್ಮದ್ ಸಾನಿದ್ ಮೃತಪಟ್ಟವರು. ಡಿ.24ರಂದು ಸಂಜೆ ಮನೆಯ ವರಾಂಡದಲ್ಲಿ ಆಟವಾಡಿಕೊಂಡು ಇದ್ದ ಮಗು ಮನೆಯಲ್ಲಿ ಕಾಣಿಸದೇ ಇದ್ದಾಗ ಸುತ್ತಮುತ್ತ ಹುಡುಕಾಡಿದಾಗ ನೆರೆಯ ರಾಮ್ ಕುಮಾರ್‌ರವರ ತೋಟದ ಈಜು […]

ಪುತ್ತೂರು :ಮೂರುವರೆ ವರ್ಷದ ಮಗು ಈಜುಕೊಳಕ್ಕೆ ಬಿದ್ದು ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ : ಪ್ರಾಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.25: ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ ಇಂದು ನಡೆಸಲಾಯಿತು.   ಇನ್ನು ಈ ಕೊವೀಡ್ ಪರೀಕ್ಷೆಯಲ್ಲಿ ಒಟ್ಟು 40 ಮಂದಿ ಭಾಘವಹಿಸಿ ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಕೋವಿಡ್ 19 ಮೊಬೈಲ್ ಟೀಮ್ ಸುಳ್ಯದ ಸಿಬ್ಬಂದಿ ಅಮಿತಾ, ಡಾಟಾ ಎಂಟ್ರಿ ಆಪರೇಟರ್ ನೀತಾ ಆಶಾ ಕಾರ್ಯಾಕರ್ತೆಯರಾದ ಹೇಮಲತಾ, ಸಾವಿತ್ರಿ ರತ್ನಾವತಿ ಸಹಕರಿಸಿದ್ದಾರೆ.

ಸುಬ್ರಹ್ಮಣ್ಯ : ಪ್ರಾಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ Read More »

ಕರಾವಳಿ

ಮಂಗಳೂರು: ಸಂಗೀತ ಸಾಧಕ ಮುರಳೀಧರ ಕಾಮತ್ ಗೆ ‘ ರಂಗ ಚಾವಡಿ’ ಪ್ರಶಸ್ತಿ ಗೌರವ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ತುಳು ಸಾಹಿತ್ಯ ಅಕಾಡೆಮಿ ಹಾಗೂ ರಂಗ ಚಾವಡಿ ಮಂಗಳೂರು ಆಶ್ರಯದಲ್ಲಿ ನಗರದ ಉರ್ವಸ್ಟೋರ್ ನಲ್ಲಿರುವ ತುಳುಭವನದ ಸಿರಿ ಚಾವಡಿ ವೇದಿಕೆಯಲ್ಲಿ “ರಂಗ ಚಾವಡಿ ಪ್ರಶಸ್ತಿ” ಪ್ರದಾನ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಕಾರ್ಯಕಾರಿಣಿ ಸದಸ್ಯ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ನೆರವೇರಿಸಿದರು. ಅಧ್ಯಕ್ಷತೆಯನ್ನು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಜಿ.ಕತ್ತಲ್ ಸಾರ್ ವಹಿಸಿದ್ದರು. ಈ ವೇಳೆ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಮುರಳೀಧರ ಕಾಮತ್ ಅವರಿಗೆ ‘ರಂಗಚಾವಡಿ ಗೌರವ’ ಪ್ರಶಸ್ತಿ

ಮಂಗಳೂರು: ಸಂಗೀತ ಸಾಧಕ ಮುರಳೀಧರ ಕಾಮತ್ ಗೆ ‘ ರಂಗ ಚಾವಡಿ’ ಪ್ರಶಸ್ತಿ ಗೌರವ Read More »

ಕರಾವಳಿ

ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.25: ಕೋವಿಡ್-19 ಈ ವರ್ಷ ಅಧಿಕ ಆದಾಯ ತರುವ ದೇವಸ್ಥಾನಗಳನ್ನು ಕೂಡ ಬಿಟ್ಟಿಲ್ಲ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಪದ್ಭರಿತ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯದಂತಹ ದೇವಸ್ಥಾನಗಳ ಆದಾಯ ಕೂಡ ಕುಸಿದಿದೆ. ಕರ್ನಾಟಕದಲ್ಲಿರುವ ಪ್ರಮುಖ 12 ದೇವಾಲಯಗಳು ಕಳೆದ ವರ್ಷ ಒಟ್ಟಾರೆ 317 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದ್ದರೆ ಈ ವರ್ಷ ಗಳಿಸಿದ ಆದಾಯ ಕೇವಲ 18.6 ಕೋಟಿ ಮಾತ್ರ. ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಕುಕ್ಕೆ ಸುಬ್ರಹ್ಮಣ್ಯ ಪ್ರತಿವರ್ಷ ಸರಾಸರಿ 90 ಕೋಟಿ

ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ

ಸಿನಿಮಾ‌ ನಿರ್ದೇಶಕ ಭರತ್ ಹಠಾತ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.25: ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.   45 ವರ್ಷದ ಭರತ್‌ ಆರೋಗ್ಯ ಸಮಸ್ಯೆಯಿಂದಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ

ಸಿನಿಮಾ‌ ನಿರ್ದೇಶಕ ಭರತ್ ಹಠಾತ್ ನಿಧನ Read More »

ಕರ್ನಾಟಕ

ಉಜಿರೆ ಬಾಲಕನ ಅಪಹರಣ ಪ್ರಕರಣ ➤ ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ , ಸುಳ್ಳು ಮಾಹಿತಿ ಹರಡದಂತೆ ಬಿಜಾಯ್ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25:ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ. ಹಾಗೆಯೇ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಹರಡದಂತೆ ಅಪಹರಣಕೊಳಗಾಗಿದ್ದ ಉಜಿರೆಯ ಬಾಲಕನ ತಂದೆ ಬಿಜಾಯ್ ಮಾಧ್ಯಮಕ್ಕೆ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜಾಯ್, ನಾನು ಕೋಟ್ಯಂತರ ರೂಪಾಯಿ ಸಾಲವನ್ನು ಪಾವತಿಸಬೇಕಾಗಿದೆ ಎಂದು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ಹರಡುತ್ತಿದೆ. ನಾನು ಯಾರಿಗಾದರೂ ಹಣ ನೀಡಲು ಬಾಕಿಯಿದೆ ಎಂದು ಅವರು ಸಾಕ್ಷಿ ಸಮೇತ ಪೊಲೀಸರಿಗೆ ಸಾಬೀತುಪಡಿಸಿದರೆ ನಾನು ಮೊತ್ತವನ್ನು ಅವರಿಗೆ ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿದರು. ಬಿಟ್ ಕಾಯಿನ್

ಉಜಿರೆ ಬಾಲಕನ ಅಪಹರಣ ಪ್ರಕರಣ ➤ ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ , ಸುಳ್ಳು ಮಾಹಿತಿ ಹರಡದಂತೆ ಬಿಜಾಯ್ ಮನವಿ Read More »

ಕರಾವಳಿ

ರಂಗತ್ತಮಲೆ :ನಿಯಂತ್ರಣ ತಪ್ಪಿ ತೋಟಕ್ಕೆ ಬಿದ್ದ ಜೀಪು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.25: ಸುಳ್ಯದಿಂದ ಆಲೆಟ್ಟಿ ರಸ್ತೆ ಮೂಲಕ ರಂಗತ್ತಮಲೆಗೆ ಸಂಚರಿಸುತ್ತಿದ್ದ ಜೀಪು ಚಾಲಕನ ನಿಯಂತ್ರಣ ತಪ್ಪಿ ಆಲೆಟ್ಟಿ ರಾಧಾಕೃಷ್ಣ ರೈ ಯವರ ತೋಟಕ್ಕೆ ಬಿದ್ದ ಘಟನೆ ನಡೆದಿದೆ.   ಜೀಪಿನ ಚಾಲಕ ರವಿ ಸೇರಿ ೩ ಮಂದಿ ಪ್ರಯಾಣಿಕರು ಜೀಪಿನಲ್ಲಿದ್ದರು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸದೆ ಪ್ರಯಾಣಿಕರು ಪಾರಾಗಿದ್ದಾರೆ.

ರಂಗತ್ತಮಲೆ :ನಿಯಂತ್ರಣ ತಪ್ಪಿ ತೋಟಕ್ಕೆ ಬಿದ್ದ ಜೀಪು Read More »

ಕರಾವಳಿ

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಡಿ. 25 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಡಿಸೆಂಬರ್ 25 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ. ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ ಮತ್ತು ಸ್ಯಾನಿಟೈಸರನ್ನು ಕಡ್ಡಾಯವಾಗಿ ಬಳಸಿ ವೀಕ್ಷಿಸಬಹುದಾಗಿದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಡಿ. 25 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಸರಳವಾಗಿ ಕ್ರಿಸ್ ಮಸ್ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.25: ವಿಶ್ವದೆಲ್ಲೆಡೆ ಇಂದು ಕ್ರಿಸ್ ಮಸ್ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಜಗತ್ತಿಗೆ ಶಾಂತಿಮಂತ್ರ ಬೋಧಿಸಿದ ಯೇಸು ಕ್ರಿಸ್ತನ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ.ಕಡಬ, ಕೋಡಿಂಬಾಳ ಕುಟ್ರುಪಾಡಿ ಕುಂತೂರು ನೆಲ್ಯಾಡಿ ಸೇರಿದಂತೆ ಬಹುತೇಕ ಎಲ್ಲ ಚರ್ಚ್‍ಗಳನ್ನು ವಿದ್ಯುತ್ ದೀಪ ಸಕ್ಷತ್ರಗಳಿಂದ ಅಲಂಕಾರಿಸಲಾಗಿದೆ. ಚರ್ಚ್ ಆವರಣದಲ್ಲಿ ಮತ್ತು ಕೈಸ್ತರ ಮನೆ ಆವರಣದಲ್ಲಿ ಆಕರ್ಷಕ ಗೋದಲಿಗಳನ್ನು ನಿರ್ಮಿಸಲಾಗಿತ್ತು. ಬಾಲಯೇಸು ಮೂರ್ತಿಯನ್ನು ಇಟ್ಟು, ದೇವರ ಸ್ತುತಿ, ಜೋಗುಳದ ಮೂಲಕ ಭಕ್ತರು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಹೂವು

ಕಡಬದಲ್ಲಿ ಸರಳವಾಗಿ ಕ್ರಿಸ್ ಮಸ್ ಸಂಭ್ರಮಾಚರಣೆ Read More »

ಕರಾವಳಿ, ಕರ್ನಾಟಕ

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಸ್ತುತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜನವರಿ 8, 9, ಮತ್ತು 10 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ.   ಡಿಸೆಂಬರ್ 30 ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ಕಾಳಿದಾಸ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿನ

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ Read More »

ಕರಾವಳಿ, ಕರ್ನಾಟಕ
Scroll to Top