ಮಂಗಳೂರು

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.21:  ಘಜಿಯಾಬಾದ್​ನಲ್ಲಿ ಸೋಮವಾರ ರಾತ್ರಿ 10.30ಕ್ಕೆ ಪತ್ರಕರ್ತನ ತಲೆಗೆ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಕೊಲ್ಲಲು ಪ್ರಯತ್ನಿಸಿದೆ. ಘಜಿಯಾಬಾದ್‌ನಲ್ಲಿ ಸಹೋದರಿ ಮನೆಯಿಂದ ತನ್ನ ಇಬ್ಬರು ಮಕ್ಕಳ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಜಿಯಾಬಾದ್​ನ ಪತ್ರಕರ್ತ ವಿಕ್ರಂ ಜೋಶಿ ತಂಗಿಯ ಮನೆಯಿಂದ ತನ್ನ ಬೈಕಿನಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವೇಗವಾಗಿ ಚಲಿಸುತ್ತಿರುವಾಗ ದುಷ್ಕರ್ಮಿಗಳ ಗುಂಪು […]

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಉಡುಪಿ,ಜು.21:  ಸೈಬೀರಿಯಾದ ಬೆಲ್‌ಗ್ರೇಡ್‌ನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉಡುಪಿ ಮೂಲದ ಪ್ರಸಿದ್ಧ ಛಾಯಾಗ್ರಾಹಕ  ಪತ್ರಿಕೋದ್ಯಮ ವಿಭಾಗದಲ್ಲಿ ಎಫ್‌ಐಎಪಿ ಗೋಲ್ಡ್ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರ ಗ್ರಾಮೀಣ ಮಕ್ಕಳು ಕೆಸರಿನಲ್ಲಿ ಆಟವಾಡುತ್ತಿರುವ ಚಿತ್ರಕ್ಕೆ ಈ ಪ್ರತಿಷ್ಠಿತ ಗೌರವ ಸಿಕ್ಕಿದೆ.  ಹಲವಾರು ದೇಶಗಳ ಛಾಯಾಗ್ರಾಹಕರು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಉಡುಪಿಯ ರಘು ಪ್ರಶಸ್ತಿ ಗಳಿಸಿ ಕನ್ನಡಿಗರಿಗೆ ಹೆಮ್ಮೆ ತಂದಿದ್ದಾರೆ. ಇನ್ನು ರಘು ಪಾಲಿಗೆ ಇದು 24 ನೇ ಅಂತರರಾಷ್ಟ್ರೀಯ ಪ್ರಶಸ್ತಿ ಆಗಿದೆ.  

ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್

ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.21:  ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.       ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ.  

ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊವೀಡ್ -19 ದೃಢ Read More »

ಕರಾವಳಿ, ಕರ್ನಾಟಕ

ಮಾಸ್ಕ್, ಸಾಮಾಜಿಕ ಅಂತರದಿಂದ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ➤ ಕರ್ನಾಟಕದಲ್ಲಿ ಇನ್ಮುಂದೆ ಲಾಕ್ ಡೌನ್ ಇಲ್ಲ – ಸಿ.ಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಮುಖ್ಯಮಂತ್ರಿ ಬಿ.ಎಸ್​​​ ಯಡಿಯೂರಪ್ಪ ರಾಜ್ಯವನ್ನುದ್ದೇಸಿ ಭಾಷಣ ಮಾಡಿದರು. ಇಂದು ಸಂಜೆ 5 ಗಂಟೆಗೆ ಸರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಆನ್​​ಲೈನ್​​ ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತಾಡಿದ ಯಡಿಯೂರಪ್ಪರ ಭಾಷಣವೂ ಫೇಸ್​​ಬುಕ್​​, ಟ್ವಿಟರ್​​, ಇನ್ಸ್ಟಾಗ್ರಾಮ್, ಯೂಟ್ಯೂಬ್​​​ ಲೈವ್​​ನಲ್ಲಿ ಪ್ರಸಾರವಾಗಿದೆ. ಪ್ರಸ್ತುತ ದೇಶಾದ್ಯಂತ ಕೋವಿಡ್​-19 ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಕೊರೋನಾ ತಹಬದಿಗೆ ತರುವಲ್ಲಿ ಆರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೀಗ, ಇತ್ತೀಚೆಗೆ ಬೆಂಗಳೂರಿನಲ್ಲಿ ಮಾತ್ರ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮೊದಲಿನಷ್ಟು ಕೊರೋನಾ ತಡೆಯಲು

ಮಾಸ್ಕ್, ಸಾಮಾಜಿಕ ಅಂತರದಿಂದ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ➤ ಕರ್ನಾಟಕದಲ್ಲಿ ಇನ್ಮುಂದೆ ಲಾಕ್ ಡೌನ್ ಇಲ್ಲ – ಸಿ.ಎಂ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪುತ್ತೂರು :1 ಲಕ್ಷ ಆಯುರ್ವೇದ ಮಾತ್ರೆ ವಿತರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.21: ಕರೊನಾ ಸೋಂಕು ತಡೆಗಟ್ಟಲು ಶಾಸಕ ಸಂಜೀವ ಮಠಂದೂರು, ಉಪವಿಭಾಗೀಯ ಅಧಿಕಾರಿ ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ವಿನೂತನ ಯೋಜನೆ ಸಿದ್ಧಗೊಂಡಿದೆ. ಭಾರತ ಸರ್ಕಾರದಿಂದ ಪ್ರಮಾಣಿಕೃತಗೊಂಡು ಪುತ್ತೂರಿನಲ್ಲಿ ಸಿದ್ಧಗೊಂಡಿರುವ ಆಯುಷ್ ಕ್ವಾತ ಮತ್ತು ಆರೋಗ್ಯ ರಕ್ಷಕ್ ಮಾತ್ರೆಗಳನ್ನು 1 ಸಾವಿರ ಮನೆಗಳಿಗೆ ಉಚಿತವಾಗಿ ವಿತರಿಸಲು ಯೋಜನೆ ರೂಪಿಸಲಾಗಿದೆ. ಪುತ್ತೂರಿನ ಆಯುರ್ವೇದ ತಜ್ಞ ಡಾ.ಹರಿಕೃಷ್ಣ ಪಾಣಾಜೆ ಸಿದ್ಧಪಡಿಸಿದ ಆಯುಷ್ ಕ್ವಾತ ಮತ್ತು ಆರೋಗ್ಯ ರಕ್ಷಕ್ ಮಾತ್ರೆಗಳನ್ನು ಪುತ್ತೂರು ನಗರಸಭೆಯ 31 ವಾರ್ಡ್‌ನ 1 ಸಾವಿರ ಮನೆಗಳಿಗೆ

ಪುತ್ತೂರು :1 ಲಕ್ಷ ಆಯುರ್ವೇದ ಮಾತ್ರೆ ವಿತರಣೆ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್​ಗಳಿಗೆ ಬಂಪರ್ ಗಿಫ್ಟ್​ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಕೊರೋನಾ ಸೋಂಕನ್ನು ತಡೆಗಟ್ಟಲು ಕೊರೋನಾ ವಾರಿಯರ್​ಗಳಾಗಿ ಹೋರಾಡುತ್ತಿರುವ ವೈದ್ಯರು, ನರ್ಸ್​ಗಳು ಹಗಲು-ರಾತ್ರಿ ಕೊರೋನಾ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನರ್ಸ್​ಗಳಿಗೆ ರಾಜ್ಯ ಸರ್ಕಾರ ಬಂಪರ್ ಉಡುಗೊರೆಯೊಂದನ್ನು ನೀಡಿದೆ. ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 48,000ಕ್ಕೆ ಏರಿಕೆ ಮಾಡಲಾಗಿದೆ. ಹಾಗೇ, ತಿಂಗಳಿಗೆ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ ನರ್ಸ್​ಗಳ ವೇತನವನ್ನು 30 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.   ಈ ಬಗ್ಗೆ ಇಂದು ವೈದ್ಯಕೀಯ ಶಿಕ್ಷಣ

ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್​ಗಳಿಗೆ ಬಂಪರ್ ಗಿಫ್ಟ್​ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ Read More »

ಕರಾವಳಿ, ಕರ್ನಾಟಕ

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಕಾರಣ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ.

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳು ಫೇಸ್ ಬುಕ್, ಯೂಟ್ಯೂಬ್ ಮೂಲಕ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ. ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಲಾಕ್ ಡೌನ್ ಬುಧವಾರ ಬೆಳಗ್ಗೆ 5 ಗಂಟೆಗೆ ಮುಗಿಯಲಿದೆ.

5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ Read More »

ಕರಾವಳಿ, ಕರ್ನಾಟಕ

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಉಡುಪಿ , ಜು.21:  ಕೃಷ್ಣ ನಗರಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಸದ್ದು ಮಾಡುತ್ತಲೇ ಇದೆ. ಇಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವಂತಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com , ಜು.21: ಕೊರೊನಾ ಹಿನ್ನೆಲೆ ಕರಾವಳಿಯಲ್ಲಿ ಜು 25 ಶನಿವಾರದಂದು ನಡೆಯುವ ನಾಗರಪಂಚಮಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್‌‌‌ ಸಭೆಯಲ್ಲಿ ಮಾತನಾಡಿದ ಅವರು, ನಾಗಪಂಚಮಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿಲ್ಲ.     ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದಲ್ಲಿ ಸೋಂಕು ವ್ಯಾಪಿಸುವ ಸಾಧ್ಯತೆ ಇದೆ. ಈ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕೇತಿಕವಾಗಿ ಆಚರಣೆ ಮಾಡಲು

ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವಂತಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ
Scroll to Top