ಮಂಗಳೂರು

ಅಕ್ರಮ ದನ ಸಾಗಾಟದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ,ಜು.17 : ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು  ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಪೊಲೀಸರು ದಾಳಿ ನಡೆಸಿ ಒರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಗು ನಿವಾಸಿ ಕರಿಕೆ ಮನೆಯ ಅಬ್ದುಲ್ ಫಾರೂಕ್ (45) ಎಂದು ಗುರುತಿಸಲಾಗಿದೆ. ಜುಲೈ 14 ರಂದು ಸುಳ್ಯ ಕಸಬಾ ಗ್ರಾಮದ ಜ್ಯೋತಿ ಸರ್ಕಲ್ ಎಂಬಲ್ಲಿ ಪಿಕಪ್ ವಾಹನದಲ್ಲಿ ಎರಡು ದನಗಳನ್ನು  ತೆಗೆದುಕೊಂಡು ಹೋಗುತ್ತಿದ್ದುದನ್ನು ಕಂಡು ಸುಳ್ಯ ಪೊಲೀಸ್ ಠಾಣೆ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ತಡೆಯಲು ಯತ್ನಿಸಿದ್ದರು. ಆದರೆ […]

ಅಕ್ರಮ ದನ ಸಾಗಾಟದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.16: ಕಳೆದೊಂದು ವಾರದಿಂದ ಬೆಂಗಳೂರು ಜತೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.   ಇದರಿಂದ ಕೊರೊನಾ ರೋಗ ಹರಡುವ ಭಯದಲ್ಲಿ ಜನ ಕಾಲ ಕಳೆಯುವಂತಾಗಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಇನ್ನು, ರಾಜ್ಯದಲ್ಲಿ ಒಂದಷ್ಟು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಇದು ಮಳೆಗಾಲವಾಗಿದ್ದು, ಮುಂಗಾರು ನಂತರ ಬರುವ ಮಳೆಯಾಗಿದೆ. ಈ ಮಳೆ ಹೆಚ್ಚಿರುವ ತಾಪಮಾನವನ್ನು ಈ ಮಳೆ ಕಡಿಮೆ ಮಾಡುತ್ತದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ Read More »

ಕರಾವಳಿ, ಕರ್ನಾಟಕ

ನೀರಿನ ಹೊಂಡಕ್ಕೆ ಬಿದ್ದ ಕರುವಿನ ರಕ್ಷಣೆ ➤ ಯುವಕನ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.16: ನೀರಿನ ಹೊಂಡಕ್ಕೆ ಬಿದ್ದು ಜೀವಣ್ಮರಣ ಸ್ಥಿತಿಯಲ್ಲಿದ್ದ ಕರುವೊಂದನ್ನು ದಾರಿಹೋಕರೊಬ್ಬರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಮಂಗಳೂರು ಹೊರವಲಯದ ತಣ್ಣೀರುಬಾವಿ ಬೀಚ್ ಗೆ ಹೋಗುವ ರಸ್ತೆ ಬದಿಯಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆ ಕಾರ್ಮಿಕರು ತೋಡಿದ ಗುಂಡಿಗೆ ಕರುವೊಂದು ಬಿದ್ದಿತ್ತು, ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ನಿಖಿಲ್ ಪೂಜಾರಿ ಈ ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿ ನೀರು ತುಂಬಿದ ಹೊಂಡಕ್ಕೆ ಇಳಿದು ಒದ್ದಾಡುತ್ತಿದ್ದ ಕರುವನ್ನ ಮೇಲೆಕೆತ್ತಿ ರಕ್ಷಣೆ ಮಾಡಿದ್ದಾರೆ.ಇವರಿಗೆ ಸ್ಥಳೀಯ ಯುವಕರು , ಅಗ್ನಿ

ನೀರಿನ ಹೊಂಡಕ್ಕೆ ಬಿದ್ದ ಕರುವಿನ ರಕ್ಷಣೆ ➤ ಯುವಕನ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ Read More »

ಕರಾವಳಿ, ಕರ್ನಾಟಕ

ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಉಡುಪಿ ,ಜು.16: ಕೊರೊನಾ ವೈರಸ್‌ಗೆ ಉಡುಪಿಯಲ್ಲಿ ಇಂದು (ಗುರುವಾರ) 6ನೇ ಬಲಿ ಪಡೆದಿದೆ. ಮೃತರನ್ನು ಉಡುಪಿ ನಿವಾಸಿ 49 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.   ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಇವರು ಮಧುಮೇಹ ಮತ್ತು ಉಸಿರಾಟದ ಸಮಸ್ಯೆಗಳಂತಹ ಇತರ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದರು. ಜುಲೈ 15 ರ ಬುಧವಾರ ರಾತ್ರಿ ಅವರ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರನ್ನು ಉಡುಪಿಯ ಡಾ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು .

ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕಾಣಿಯೂರಿನ ಯುವಕನಲ್ಲಿ ಕೊರೋನಾ ದೃಢ ➤ ಯುವಕ ಭೇಟಿ ನೀಡಿದ್ದ ಖಾಸಗಿ ಆಸ್ಪತ್ರೆ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಾಣಿಯೂರು ,ಜು.16: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಯುವಕನೋರ್ವನಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತ ತೆರಳಿದ್ದ ಕಾಣಿಯೂರಿನ ಖಾಸಗಿ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಯುವಕ ಮಂಗಳೂರಿನ ಆಹಾರ ತಯಾರಿಕೆಯ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಆತನಿಗೆ ಆರೋಗ್ಯ ಸಮಸ್ಯೆ ಬಂದಿದ್ದರಿಂದ ಕಾಣಿಯೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ರಕ್ತ ಪರೀಕ್ಷಾ ಲ್ಯಾಬ್ ತೆರಳಿದ್ದಾರೆ.ಬಳಿಕ ಯುವಕ ಕಾಣಿಯೂರು ಪೇಟೆಯಲ್ಲಿರುವ ಹಲವು ಅಂಗಡಿಗಳಿಗೆ ಹಾಗೂ ಬ್ಯಾಂಕ್ ಗಳಿಗೆ ತೆರಳಿರುವ ಬಗ್ಗೆ

ಕಾಣಿಯೂರಿನ ಯುವಕನಲ್ಲಿ ಕೊರೋನಾ ದೃಢ ➤ ಯುವಕ ಭೇಟಿ ನೀಡಿದ್ದ ಖಾಸಗಿ ಆಸ್ಪತ್ರೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಗುಡಿಸಲಲ್ಲಿ ವಾಸವಿದ್ದ ಕುಟುಂಬಕ್ಕೆ ಸುಸಜ್ಜಿತ ಮನೆ ಹಸ್ತಾಂತರ ➤ ವೀರಕೇಸರಿ ಮತ್ತು ಸ್ಪಂದನ ಸೇವಾ ಸಂಘದಿಂದ ಮನೆ ನಿರ್ಮಾಣ

(ನ್ಯೂಸ್ ಕಡಬ) newskadaba.com ಪಟ್ರಮೆ ,ಜು.16: ವೀರಕೇಸರಿ ಸಂಘಟನೆ ಅನಾರು, ಪಟ್ರಮೆ ಹಾಗೂ ಸ್ಪಂದನ ಸೇವಾ ಸಂಘ ಬೆಳ್ತಂಗಡಿ ಹಾಗೂ ಊರಿನ ಸಹೃದಯಿಗಳ ಸಹಾಯದಿಂದ ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬವೊಂದಕ್ಕೆ, 2 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮನೆಯನ್ನು ನಿರ್ಮಿಸಿಕೊಟ್ಟ ಪ್ರಶಂಶನೀಯ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಮೈಕೆ ಎಂಬಲ್ಲಿ ನಡೆದಿದೆ.   ಕಳೆದ ಹಲವಾರು ವರ್ಷಗಳಿಂದ ಗಿರಿಜ ಎಂಬುವರು ಯಾವುದೇ ರೀತಿಯ ಮೂಲ ಸೌಕರ್ಯಗಳಿಲ್ಲದೆ ನಿರ್ಗತಿಕರಂತೆ ಗುಡಿಸಲಲ್ಲಿ ವಾಸಮಾಡುತ್ತಿದ್ದರು. ಇವರ ಕಷ್ಟವನ್ನು ಗಮನಿಸಿದ ವೀರಕೇಸರಿ ಸಂಘಟನೆ ಹಾಗೂ

ಗುಡಿಸಲಲ್ಲಿ ವಾಸವಿದ್ದ ಕುಟುಂಬಕ್ಕೆ ಸುಸಜ್ಜಿತ ಮನೆ ಹಸ್ತಾಂತರ ➤ ವೀರಕೇಸರಿ ಮತ್ತು ಸ್ಪಂದನ ಸೇವಾ ಸಂಘದಿಂದ ಮನೆ ನಿರ್ಮಾಣ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕಿನಲ್ಲಿ ಲಾಕ್‍ಡೌನ್ ಗೆ ವ್ಯಾಪಕ ಬೆಂಬಲ ವ್ಯಕ್ತ

(ನ್ಯೂಸ್ ಕಡಬ) newskadaba.com ಕಡಬ,ಜು.16: ಮಾನವ ಸಂಕುಲಕ್ಕೆ ಮೃತ್ಯುವಾಗಿ ಕಾಡುತ್ತಿರುವ ಮಾರಕ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ತನ್ನ ವರಸೆಯನ್ನೆ  ಬದಲಾಯಿಸುತ್ತಿದೆ. ಮಿತಿ ಮೀರಿ ಹಬ್ಬುತ್ತಿರುವ ಕೊರೋನಾ ಸೊಂಕಿನಿಂದಾಗಿ, ರಾಜ್ಯ ಸರ್ಕಾರ ಮುಂದಿನ 7 ದಿನಗಳ ಕಾಲ ಲಾಕ್ ಡೌನ್ ಆದೇಶ ಹೊರಡಿಸಿದೆ. ಲಾಕ್ ಡೌನ್ ನ ಮೊದಲ ದಿನವಾದ ಇಂದು ಕಡಬ ತಾಲೂಕು ವ್ಯಾಪ್ತಿಯಲ್ಲಿ ಹಾಲು, ಮೆಡಿಕಲ್ , ಆಸ್ಪತ್ರೆ, ತರಕಾರಿ, ಅಗತ್ಯ ವಸ್ತುಗಳ ಅಂಗಡಿಗಳು, ಪತ್ರಿಕೆ ಬಿಟ್ಟು ಉಳಿದೆಲ್ಲಾ ವ್ಯವಹಾರದ ಅಂಗಡಿಗಳು ಸ್ಥಗಿತಗೊಂಡಿತ್ತು.

ಕಡಬ ತಾಲೂಕಿನಲ್ಲಿ ಲಾಕ್‍ಡೌನ್ ಗೆ ವ್ಯಾಪಕ ಬೆಂಬಲ ವ್ಯಕ್ತ Read More »

ಕರಾವಳಿ, ಕರ್ನಾಟಕ

ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರು ವಿಧಿವಶ

(ನ್ಯೂಸ್ ಕಡಬ) newskadaba.com ಬಳ್ಳಾರಿ ,ಜು.16:  ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರು(81) ವಿಧಿವಶರಾಗಿದ್ದಾರೆ. ಸ್ವಗ್ರಾಮ ಬಳ್ಳಾರಿಯಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ನಿಧನರಾಗಿದ್ದಾರೆ.   ರಂಗಭೂಮಿ ಚರಿತ್ರೆಯಲ್ಲಿ ಅರ್ಧ ಶತಮಾನ ಕಳೆದವರು. ತಮ್ಮ 27ನೇ ವಯಸ್ಸಿಗೆ ರಂಗಪ್ರವೇಶಿಸಿದ್ದ ಇವರು, ಕುಂತಿ, ಗಾಂಧಾರಿ, ದ್ರೌಪದಿ, ಉತ್ತರೆ, ಸೀತೆ ಪಾತ್ರಗಳ ಮೂಲಕ ಜನಮಾನಸದಲ್ಲಿ ಅಚ್ಚೊತ್ತಿದ್ದ ಕಲಾವಿದೆ. ಬಳ್ಳಾರಿ ಸುಭದ್ರಮ್ಮ ಅಂತಲೇ ಖ್ಯಾತಿ ಗಳಿಸಿದ್ದ ರಂಗಕರ್ಮಿ. ಎರಡು ಸಾವಿರಕ್ಕೂ ಹೆಚ್ಚು ನಾಟಕ ಪ್ರದರ್ಶನಗಳಿಗೆ ಬಣ್ಣ ಹಚ್ಚಿದ್ದ ಸುಭದ್ರಮ್ಮನವರು. ರಾಜ್ಯೋತ್ಸವ ಪ್ರಶಸ್ತಿ,

ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರು ವಿಧಿವಶ Read More »

ಕರಾವಳಿ, ಕರ್ನಾಟಕ

ಜಿಂಕೆಯ ಮೇಲೆ ಬೀದಿ ನಾಯಿಗಳ ದಾಳಿ ➤ ಸ್ಥಳೀಯರಿಂದ ಜಿಂಕೆಯ ರಕ್ಷಣೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ,ಜು.15: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಮಧ್ಯಾಹ್ನ ಬಿದಿ ನಾಯಿಗಳು ಅಟ್ಟಿಸಿಕೊಂಡು ಹೋಗಿರುವ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ.   ನಂತರ ಸುಸ್ತಾಗಿ ಜಿಂಕೆ ಧರ್ಮಸ್ಥಳ ಬಸ್ ನಿಲ್ದಾಣದ ಒಳಗೆ ಬಂದು ಆಶ್ರಯ ಪಡೆದಿದೆ. ಕೂಡಲೇ ಅರಣ್ಯ ಇಲಾಖೆಯ ಬೆಳ್ತಂಗಡಿ ಕಛೇರಿಗೆ ಮಾಹಿತಿ ತಿಳಿಸಿದ್ದು ಅಧಿಕಾರಿಗಳು ಹಾಗೂ ಸ್ಥಳೀಯರ ಸಹಾಯದಿಂದ ಹಿಡಿದು ಪಿಕಪ್ ವಾಹನದಲ್ಲಿ ಹಾಕಿಕೊಂಡು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಜಿಂಕೆಯ ಮೇಲೆ ಬೀದಿ ನಾಯಿಗಳ ದಾಳಿ ➤ ಸ್ಥಳೀಯರಿಂದ ಜಿಂಕೆಯ ರಕ್ಷಣೆ Read More »

ಕರಾವಳಿ, ಕರ್ನಾಟಕ

ಅಂಗವೈಕಲ್ಯವನ್ನು ಮೆಟ್ಟಿನಿಂತ ಎಂಡೋಪೀಡಿತ ವಿದ್ಯಾರ್ಥಿ ➤ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಕಡಬ ,ಜು.15: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವಿದ್ಯಾರ್ಥಿಯೋರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಂಡೋಸಲ್ಪಾನ್ ನಿಂದ ತನಗಾದ ಅಂಗವೈಕಲ್ಯವನ್ನೂ ಮೆಟ್ಟಿನಿಂತು ಉತ್ತಮ ಸಾಧನೆ ಮಾಡಿದ್ದಾರೆ. ಶೇ. 85 ರಷ್ಟು ಎಂಡೋ ಪೀಡಿತರಾಗಿರುವ ವಿದ್ಯಾರ್ಥಿ ಮನೋಜ್ ಕುಮಾರ್ ಮಂಗಳೂರಿನ ಸೇವಾಭಾರತಿ ¸ನಡೆಸುತ್ತಿರುವ ಕಾಜರುಕುಕ್ಕು ವಿದ್ಯಾಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಪಿಯುಸಿ ಪರೀಕ್ಷೆಗೆ ತರಬೇತಿ ಪಡೆದು ಕಲಾ ವಿಭಾಗದಲ್ಲಿ 360 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮನೋಜ್ ಕುಮಾರ್ ಕಿವಿ. ಕೈ ಎಲುಬು

ಅಂಗವೈಕಲ್ಯವನ್ನು ಮೆಟ್ಟಿನಿಂತ ಎಂಡೋಪೀಡಿತ ವಿದ್ಯಾರ್ಥಿ ➤ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ Read More »

ಕರಾವಳಿ, ಕರ್ನಾಟಕ
Scroll to Top