ಮಂಗಳೂರು

ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ,ಜು.15: ಬೆಳ್ಳಾರೆ ಸಮೀಪದ 62 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದುದಾಗಿ ತಿಳಿದು ಬಂದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ಳಾರೆಯ ನೆಟ್ಟಾರು ನಿವಾಸಿ ಮಹಿಳೆಯನ್ನು ಕುಲಾಯಿ 14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಮಹಿಳೆ ಬಿಪಿ, ಶುಗರ್, ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಅವರ ಕೋವಿಡ್ ಪರೀಕ್ಷೆ ವೇಳೆ ಸೋಂಕು ದೃಢ ಪಟ್ಟಿರುವುದು ಬೆಳಕಿಗೆ ಬಂದಿದೆ ತೀರಾ ಗಂಭೀರಾ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ […]

ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್

(ನ್ಯೂಸ್ ಕಡಬ) newskadaba.com ಉಡುಪಿ,ಜು.15: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳು ಲಾಕ್‌ಡೌನ್ ಮೊರೆ ಹೋಗಿದ್ದರೆ, ಉಡುಪಿ ಜಿಲ್ಲೆ ಮಾತ್ರ ವಿಭಿನ್ನವಾಗಿ ಗಡಿಗಳನ್ನು ಸೀಲ್ ಮಾಡಲು ಮುಂದಾಗಿದೆ. ಹೀಗಾಗಿ ಜುಲೈ 15ರ ರಾತ್ರಿ 8 ಗಂಟೆಯಿಂದ ಉಡುಪಿ ಜಿಲ್ಲೆಗೆ ಯಾರು ಬರುವಂತಿಲ್ಲ ಉಡುಪಿ ಜಿಲ್ಲೆಯಿಂದ ಯಾರು ಹೊರಹೋಗುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ. ಜಿಲ್ಲೆಯ ತಜ್ಞ ಆರೋಗ್ಯಾಧಿಕಾರಿಗಳ ಜೊತೆಗೆ ಮಂಗಳವಾರ ಮಹತ್ವದ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಬುಧವಾರ ರಾತ್ರಿ

ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್ Read More »

ಕರಾವಳಿ, ಕರ್ನಾಟಕ

ದ. ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ಲಾಕ್ ಡೌನ್ ➤ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಲಾಕ್‌ಡೌನ್ ನಿರ್ಧಾರವನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಜಿಲ್ಲೆಯ ಜನಪ್ರತಿನಿಧಿಗಳ, ಅಧಿಕಾರಿಗಳ ಅಭಿಪ್ರಾಯ ಪಡೆದು ಒಂದು ವಾರಗಳ ಲಾಕ್‌ಡೌನ್ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.ಇಂದು ರಾತ್ರಿ ಎಂಟು ಗಂಟೆಯಿಂದ ಮುಂದಿನ ಜುಲೈ 23ರ ಬೆಳಗ್ಗೆ 5 ಗಂಟೆವರೆಗೂ ಜಿಲ್ಲೆಯಲ್ಲಿ ಲಾಕ್‌ಡೌನ್ ಇರಲಿದೆ. ನಿನ್ನೆ

ದ. ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ಲಾಕ್ ಡೌನ್ ➤ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ Read More »

ಕರಾವಳಿ

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು

(ನ್ಯೂಸ್ ಕಡಬ) newskadaba.com ಬೈಂದೂರು,ಜು.14:  ಪಡುಕೋಣೆಯ ಶ್ರೀರಾಮ ದೇವಸ್ಥಾನಕ್ಕೆ ಜು.13ರ ತಡರಾತ್ರಿ ನುಗ್ಗಿದ ಕಳ್ಳರು 1.5 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ಕಳವು ಗೈದಿದ್ದಾರೆ.ದೇವಸ್ಥಾನದ ಮುಖ್ಯದ್ವಾರದ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಈ ಕೃತ್ಯವೆಸಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರ್ಚಕರು ಪೂಜೆಗೆ ಬಂದಾಗ ಬಾಗಿಲು ಒಡೆದಿರುವುದು ಕಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೈಂದೂರು ಸರ್ಕಲ್ ಇನ್ಸ್‍ಪೆಕ್ಟರ್ ಸುರೇಶ್, ಗಂಗೊಳ್ಳಿ ಠಾಣಾಧಿಕಾರಿ ಭೀಮಾಶಂಕರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ದೇವಸ್ಥಾನಗಳ ಭದ್ರತೆಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆಯಷ್ಟೇ

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 131 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇದೇ ವೇಳೆ ಜಿಲ್ಲೆಯಲ್ಲಿ ನಾಲ್ವರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಬಾಧಿತರ ಪೈಕಿ 16 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಕೋವಿಡ್ 19 ತಗಲಿದೆ. ವಿದೇಶದಿಂದ ಆಗಮಿಸಿದ್ದ ನಾಲ್ವರಿಗೆ, ಇನ್‌ಫ್ಲೂಯೆನ್ಷಾ ಲೈಕ್‌ ಇಲ್‌ನೆಸ್‌ನಿಂದ ಬಳಲುತ್ತಿದ್ದ 63 ಮಂದಿಗೆ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 10 ಮಂದಿಗೆ ಕೋವಿಡ್ 19 ಪಾಸಿಟಿವ್‌ ಬಂದಿದೆ. 38 ಮಂದಿಯ ಸಂಪರ್ಕವನ್ನು

ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು,ಜು.14: ಕಾರಿನಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೀಯಪದವು ನಿವಾಸಿ 28 ವರ್ಷದ ಕೂಳೂರಿನ ನವೀನ್ ಶೆಟ್ಟಿ ಎಂದು ಗುರುತಿಸಲಾಗಿದೆ.   ಇನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಅಂಗಡಿಮೊಗರು ಸೇತುವೆಯಲ್ಲಿ ಇನ್ನೋವಾಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.  ಕಾರಿನಲ್ಲಿ 51 ಬಾಕ್ಸ್ ಗಳಲ್ಲಿ 2668 ಬಾಟಲ್‌ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಅಕ್ರಮ ಮದ್ಯ ತಂದು ದಾಸ್ತಾನಿಟ್ಟು ವಿವಿದೆಡೆಗೆ ಪೂರೈಕೆ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ‌. ಮಂಗಳೂರು  ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ ಆರೇಳು ಮಂದಿ ಗಾಂಜಾ ವ್ಯಸನಿಗಳು ಕೃತ್ಯ ಎಸಗಿದ್ದಾರೆ. ಅಜಯ್ ಎಂಬಾತನ ಮನೆಗೆ ನುಗ್ಗಿದ ಯುವಕರ ತಂಡ  ದಾಂಧಲೆ ಮಾಡಿದೆ. ಈ ವೇಳೆ, ಅಜಯ್ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಆಗಮಿಸಿ ಸ್ಥಳದಲ್ಲಿ ಸೇರಿದ್ದ ಎರಡೂ

ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.13: ಸದ್ಯ ಸಿಲಿಕಾನ್ ಸಿಟಿಯಲ್ಲಿ ವಿಧಿಸಲಾಗುತ್ತಿರುವ ಲಾಕ್‍ಡೌನ್ ಒಂದು ವಾರವಷ್ಟೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇಂದು ಟಾಸ್ಕ್ ಫೋರ್ಸ್, ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದ್ದಾರೆ.  

ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ Read More »

ಕರಾವಳಿ, ಕರ್ನಾಟಕ

ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಪಂಜ,ಜು.13: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ, ಇವತ್ತೊಕ್ಲು ಹಾಗೂ ಕಲ್ಮಡ್ಕ ಗ್ರಾಮದ ನಡುವಿನ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. .ಡಯಾ¼ಲಿಸಿಸ್ ಗಗಿ ಅವರು ತಾಲ್ಲೂಕು ಆರೋಗ್ಯ ಕೇಂದ್ರ ಸುಳ್ಯಕ್ಕೆ ಹೋಗುತ್ತಿದ್ದರು. ಸುಳ್ಯ ಆಸ್ಪತ್ರೆ ಸೀಲ್ ಡೌನ್ ಆದ ಖಾರಣ ಮಂಗಳೂರಿನ ಆಸ್ಪತ್ರೆಗೆ ತೆರಳಿರುವ ವೇಳೆ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅವರಿಗೆ ಕೊರೋನಾ ದೃಢಪಟ್ಟಿದೆ. ಗೊಳಿಯಡಿಗೆ ಪಂಜ ಗ್ರಾಮ ಪಂಚಾಯತ್ ಕಾರ್ಯನಿರ್ವಾಹಣ ಅಧಿಕಾರಿ ಸೇರಿದಂತೆ ಪಂಜ ಆರೋಗ್ಯಧೀಕಾರಿಗಳೂ ಸೋಂಕಿತರ ಮನೆಗೆ ಭೇಟಿ

ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು,ಜು.13: ಪುತ್ತೂರು ಮಹಿಳಾ ಪೋಲೀಸ್ ಠಾಣೆಗೆ ಮತ್ತೆ ಕೊರೋನಾ ವಕ್ಕರಿಸಿದೆ. ಈ ಹಿಂದೆ ವಿಟ್ಲ ಪೋಲೀಸ್ ಕಾನ್ಸ್‌ಟೇಬಲ್ ಸಂಪರ್ಕ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಕೆಲವರನ್ನು ಕ್ವಾರೈಂಟೈನ್ ಗೆ ಒಳಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಠಾಣೆಯ ಯಾವೊಬ್ಬ ಸಿಬ್ಬಂದಿಯಲ್ಲೂ ಕೊರೋನಾ ಪಾಸಿಟಿವ್ ಪತ್ತೆಯಾಗಿರಲಿಲ್ಲ. ಆದರೆ ಈ ಬಾರಿ ಠಾಣೆಯ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಓರ್ವರಿಗೆ ಕೊರೋನಾ ದೃಢಪಟ್ಟಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯ ಕಾನ್ಸ್‌ಟೇಬಲ್‌ನಲ್ಲಿ ಪಾಸಿಟೀವ್ ಪತ್ತೆಯಾದ ಹಿನ್ನಲೆಯಲ್ಲಿ ಮಹಿಳಾ ಪೋಲೀಸ್

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ
Scroll to Top