ಮಂಗಳೂರು

ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com  ಮಂಗಳೂರು ,ಜೂ.23:  ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಪಲ್ಕೆ ಎಂಬಲ್ಲಿ ಸೋಮವಾರ ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ.   ಮಂಗಳೂರು ಕಡೆಯಿಂದ ಬೆಂಗಳುರು ಕಡೆಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಲಾರಿ ಪಲ್ಟಿಯಾಗಿದೆ. ಚತುಷ್ಟಥ ಕಾಮಗಾರಿ ಹಿನ್ನಲೆಯಲ್ಲಿ ಅಗೆದು ಹಾಕಿರುವ ರಸ್ತೆ ಬದಿಯ ಹೊಂಡಕ್ಕೆ ಲಾರಿ ಬಿದ್ದು ಪಲ್ಟಿಯಾಗಿದೆ. ಸದ್ಯ ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಇನ್ನು ಘಟನ ಸ್ಥಳಕ್ಕೆ ವಿಟ್ಲ […]

ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ

ಆರೋಗ್ಯ ಸೇತು ಮೂಲಕ ಕೊರೋನಾ ರೋಗಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.23: ದ.ಕ.ಜಿಲ್ಲೆಯಲ್ಲಿ ಮೊದಲ ಬಾರಿಗೆ ಆರೋಗ್ಯ ಸೇತು ಆ್ಯಪ್ ಮೂಲಕ ಕರೊನಾ ರೋಗಪೀಡಿತನನ್ನು ಗುರುತಿಸಲಾಗಿದೆ. ಮಂಗಳೂರಿನ ಎಕ್ಕೂರಿನ ಮೀನು ಮಾರಾಟ ಮಾಡುವ ಯುವಕನ ಬಗ್ಗೆ ಮೊದಲು ಶಂಕೆ ವ್ಯಕ್ತವಾಗಿ, ನಂತರ ಪರೀಕ್ಷೆಯಲ್ಲಿ ಆತ ರೋಗಿ ಎಂದು ಸಾಬೀತಾಗಿದೆ. ವಿಶೇಷವೆಂದರೆ, ಈ ಯುವಕನಿಗೆ ಕೋವಿಡ್ ತಗುಲಿರುವ ವಿಚಾರ ಆರೋಗ್ಯ ಇಲಾಖೆ ಅಧಿಕಾರಿಗಳಿಗಿಂತ ಮೊದಲು ತಿಳಿದದ್ದು ನೆರಮನೆಯವರಿಗೆ. ಆರೋಗ್ಯ ಸೇತು ಆ್ಯಪ್ ಮೂಲಕ ಅವರಿಗೆ ಈ ಮಾಹಿತಿ ಗೊತ್ತಾಯಿತು. ಆ್ಯಪ್ ಕೋವಿಡ್ ಲಕ್ಷಣವಿರುವ ವ್ಯಕ್ತಿ

ಆರೋಗ್ಯ ಸೇತು ಮೂಲಕ ಕೊರೋನಾ ರೋಗಿ ಪತ್ತೆ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಉಸ್ತುವರಿ ಸಚಿವರಿಂದ ವಿಪತ್ತು ನಿರ್ವಹಣಾ ಸಾಮಗ್ರಿ ಹಸ್ತಾಂತರ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.23:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಮಳೆಗಾಲದಲ್ಲಿ ಸಂಭವಿಸಿದ ತೀವ್ರ ಹಾನಿಯನ್ನು ಮನಗಂಡು ಜಿಲ್ಲಾಡಳಿತವು ಪ್ರಸಕ್ತ ವರ್ಷದಲ್ಲಿ ಉಂಟಾಗಬಹುದಾದ ವಿಪತ್ತುಗಳನ್ನು ಎದುರಿಸಲು ಸರ್ವ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಂಆರ್‌ಪಿಎಲ್‌ ನೆರವಿನೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿ ಕಾರವು ಖರೀದಿಸಿದ ರಕ್ಷಣಾ ಸಾಮಗ್ರಿ ಗಳನ್ನು ವಿವಿಧ ಇಲಾಖೆಗಳಿಗೆ ಸೋಮವಾರ ಹಸ್ತಾಂತರಿಸಿ ಅವರು ಮಾತನಾಡಿದರು.ವಿಪತ್ತುಗಳ ಸಂದರ್ಭದಲ್ಲಿ

ಜಿಲ್ಲಾ ಉಸ್ತುವರಿ ಸಚಿವರಿಂದ ವಿಪತ್ತು ನಿರ್ವಹಣಾ ಸಾಮಗ್ರಿ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಚೌಳಿಕೆರೆಗೆ ಬಿದ್ದ ಯುವತಿಯನ್ನ ರಕ್ಷಿಸಿದ ಯುವಕರು ➤ ಮರು ಜೀವ ನೀಡಿದ 15ರ ಬಾಲಕಿ

(ನ್ಯೂಸ್ ಕಡಬ) newskadaba.com  ಕುಂದಾಪುರ,ಜೂ.23: ಜೂನ್ 21ರಂದು ಬ್ರಹ್ಮವರದ, ಬಾರ್ಕೂರು ಚೌಳಿಕೆರೆಗೆ, ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಉರುಳಿ ಬಿದ್ದಿತ್ತು. ಘಟನೆಯಲ್ಲಿ ಚಾಲಕ ಉದ್ಯಮಿ ಸಂತೋಷ್ ಶೆಟ್ಟು ಎಂಬುವವರು ಮೃತಪಟ್ಟಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯ ಯುವಕರು, ತಮ್ಮ ಪ್ರಾಣದ ಹಂಗು ತೊರೆದು ಚೌಳಿಕೆರೆಗೆ ಧುಮುಕಿ ಕಾರಿನಲ್ಲಿದ್ದ ಇಬ್ಬರನ್ನು ಮೇಲಕ್ಕೆತ್ತಿದ್ದಾರೆ.   ಸ್ಥಳೀಯ ಯುವಕರಾದ ಪ್ರದೀಪ್ ದೇವಾಡಿಗ ಮತ್ತು ಪ್ರವೀನ್ ಪೂಜಾರಿ ಹಿಂದೆ ಮುಂದೆ ನೋಡದೆ, ಕೆರೆಗೆ ಜಿಗಿದಿದ್ದಾರೆ. ಯುವತಿಗೆ ಮರು ಜೀವ ನೀಡಿದ್ದಾರೆ. ಆದರೆ, ಅದಾಗಲೇ ಉದ್ಯಮಿಯ

ಚೌಳಿಕೆರೆಗೆ ಬಿದ್ದ ಯುವತಿಯನ್ನ ರಕ್ಷಿಸಿದ ಯುವಕರು ➤ ಮರು ಜೀವ ನೀಡಿದ 15ರ ಬಾಲಕಿ Read More »

ಕರಾವಳಿ, ಕರ್ನಾಟಕ

ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್

(ನ್ಯೂಸ್ ಕಡಬ) newskadaba.com ,ಜೂ.22: 1980ರ ಕಾಲಘಟ್ಟ. ನಾನಾಗ ಎರಡನೇ ತರಗತಿಯಲ್ಲಿ ಓದುತ್ತಿದ್ದ. 1973ರಲ್ಲಿ ಹುಟ್ಟಿದ ನನಗೆ ಆಗ 7 ವರ್ಷವಾಗಿತ್ತು. ನಮ್ಮೂರು ಚೂಂತಾರು ಸಮೀಪದ, ಶೇಣಿಯ ಸರಕಾರಿ ಶಾಲೆಯಲ್ಲಿ ಓದುತ್ತಿದ್ದ ಸಮಯವದು. ಆ ಸಂದರ್ಭದಲ್ಲಿ ಪೊಲಿಯೋ ಡ್ರಾಪ್ಸ್ ಹಾಕುವುದು ಈಗಿನಂತೆ ಎಲ್ಲೆಡೆ ಭರದಿಂದ ನಡೆಯುತ್ತಿತ್ತು. ನಮ್ಮಪ್ಪನಿಗೆ ನಾನು ಸೇರಿ ನಾಲ್ಕು ಮಕ್ಕಳು ಬೆನ್ನು ಬೆನ್ನಿಗೆ ಹುಟ್ಟಿದ ಕಾರಣದಿಂದ ನಮಗೆಲ್ಲರಿಗೂ ವರ್ಷದಷ್ಟೆ ಅಂತರ ಇತ್ತು. ತಮ್ಮ, ಅಣ್ಣ, ಅಕ್ಕ ಮತ್ತು ನನಗೆ ಹೀಗೆ ನಾಲ್ವರಿಗೂ ಪೊಲಿಯೋ ಡ್ರಾಪ್ಸ್

ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ:,ಜೂ.22:  ಭಾರತದ ಮಾಜಿ ಶೂಟರ್ ಮತ್ತು ತರಬೇತುದಾರೆ ಪೂರ್ಣಿಮಾ ಜಾನಾನೆ  ಇಂದು, ತಮ್ಮ  42 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಭಾರತೀಯ ರೈಫಲ್ ಶೂಟರ್ ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು, ಪೂರ್ಣಿಮಾ ಪುಣೆಯಲ್ಲಿ ಕೊನೆಯುಸಿರೆಳೆದರು.   ಪೂರ್ಣಿಮಾ ವಿಶ್ವಕಪ್, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಅವರು 10 ಮೀಟರ್ ಏರ್ ರೈಫಲ್‌ನಲ್ಲಿ ದೀರ್ಘಕಾಲದವರೆಗೆ ರಾಷ್ಟ್ರೀಯ ದಾಖಲೆ ಹೊಂದಿದ್ದರು. ಅವರ ಯಶಸ್ಸಿಗೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಶಿವ ಛತ್ರಪತಿ ಕ್ರೀಡಾ ಪ್ರಶಸ್ತಿಯನ್ನು

ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ

(ನ್ಯೂಸ್ ಕಡಬ) newskadaba.com ಮಡಿಕೇರಿ,ಜೂ.22: ಮುಂಬೈನಿಂದ ಬಂದಿದ್ದ ವ್ಯಕ್ತಿ ಹಾಗೂ ಕೊಡಗಿನ ಸೋಮವಾರಪೇಟೆ ಸಮೀಪದ ನಿವಾಸಿಗೆ ಕೊರೊನಾ ಸೋಂಕು ತಗುಲಿದೆ ಎಂದು ಡಿಎಚ್ಓ ಮೋಹನ್ ಸ್ಪಷ್ಟಪಡಿಸಿದ್ದಾರೆ.   ಸೋಂಕಿತರು ವಾಸವಾಗಿದ್ದ ಗ್ರಾಮವನ್ನು ಜಿಲ್ಲಾಡಳಿತ ಸೀಲ್ಡೌನ್ ಮಾಡಿದೆ. ಗದಗ ಜಿಲ್ಲೆಗೆ ಹೋಗಿ ಬಂದಿದ್ದ ವ್ಯಕ್ತಿ ಬಳಿಕ ಗ್ರಾಮದಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಗ್ರಾಮವನ್ನು ಸೀಲ್ಡೌನ್ ಮಾಡಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಖಚಿತವಾಗಿದೆ. ಸೋಂಕಿತರಿಬ್ಬರನ್ನು ಮಡಿಕೇರಿಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ

ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ Read More »

ಕರಾವಳಿ, ಕರ್ನಾಟಕ

ಹೂಹಾಕುವಕಲ್ಲು: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.22: ಬೈಕ್ ಗೆ ಟ್ರ್ಯಾಕ್ಟರ್‍ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಸವಾರ ಟ್ರ್ಯಾಕ್ಟರ್ ನಡಿಗೆ ಸಿಲುಕಿ ದಾರುಣವಾಗಿ ಮೃತ ಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣೇ ವ್ಯಾಪ್ತಿಯ ಹೂ ಹಾಕುವ ಕಲ್ಲು ಪುಣ್ಯಕೋಟಿ ನಗರದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.   ಮೃತ ಬೈಕ್ ಸವಾರ ಅಧೇ ಟ್ರ್ಯಾಕ್ಟರ್ ಚಾಲಕನಾಗಿದ್ದು, ಸೋಮವಾರ ರಜೆ ತೆಗೆದುಕೊಂಡಿದ್ದು, ಬದಲಿ ಚಾಲಕನನ್ನು, ಕರೆಸಿಕೊಂಡಿದ್ದರು. ಮನೆಯೊಂದರ ರಸ್ತೆ ಅಗೆಯುವ ಕೆಲಸ ನಿರ್ವಹಿಸಿದ ಬದಲಿ ಚಾಲಕ ಒಳರಸ್ತೆಯಿಂದ ಮುಡಿಪು

ಹೂಹಾಕುವಕಲ್ಲು: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಏರಿಕೆಯತ್ತ ಪೆಟ್ರೋಲ್‌, ಡೀಸೆಲ್ ದರ

(ನ್ಯೂಸ್ ಕಡಬ) newskadaba.com  ನವದೆಹಲಿ,ಜೂ.22:  ಕಳೆದ ಎರಡು ತಿಂಗಳು ಜಾಗತಿಕವಾಗಿ ತೈಲ ಬೇಡಿಕೆ ಕುಸಿದು, ಬ್ರೆಂಟ್‌ ಕಚ್ಚಾ ತೈಲ ಫ್ಯೂಚರ್ಸ್‌ ದರ ದಾಖಲೆಯ ಇಳಿಕೆಯಾದರೂ ಭಾರತದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗುತ್ತಲ್ಲೇ ಇದ್ದು ಸತತ 16 ನೇ ದಿನವೂ ಕೂಡಾ ದರ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 33 ಪೈಸೆ ಹೆಚ್ಚಳವಾಗಿ 79.56ರೂ. ಆಗಿದ್ದರೆ ಡೀಸೆಲ್‌ 58 ಪೈಸೆ ಹೆಚ್ಚಳವಾಗಿ 78.85 ರೂ. ಬೆಲೆಗೆ ಏರಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ

ಏರಿಕೆಯತ್ತ ಪೆಟ್ರೋಲ್‌, ಡೀಸೆಲ್ ದರ Read More »

ರಾಷ್ಟ್ರೀಯ ನ್ಯೂಸ್

ರಜೌರಿ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.22 :ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಭಾರತ ಪಾಕ್ ಗಡಿ ಭಾಗದಲ್ಲಿ ನಡೆದ ಗುಂಡಿ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಪಾಕ್ ಪಡೆಗಳು ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಪಾಕಿಸ್ಥಾನ ಸೇನೆ ಹಲವು ಬಾರಿ ಕದನ ವಿರಾಮ ಉಲ್ಲಂಘಿಸಿದೆ.   ಪೂಂಚ್ ಜಿಲ್ಲೆಯ ಕೃಷ್ಣ ಘಾಟಿಯಲ್ಲಿ ಇಂದು ಬೆಳಿಗ್ಗೆ 3.30ರ ಸುಮಾರಿಗೆ ಪಾಕಿಸ್ಥಾನ

ರಜೌರಿ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್
Scroll to Top