ಮಂಗಳೂರು

ವ್ಯಾಟ್ಸಪ್ ನಲ್ಲಿ ಸದ್ಯದಲ್ಲೇ ಬರಲಿದೆ ಈ ಹೊಸ ಫೀಚರ್

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.15: ಒಂದು ಸಂಖ್ಯೆಯನ್ನು ಬಳಸಿ ಒಂದು ವ್ಯಾಟ್ಸಪ್ ಖಾತೆ. ಇದು ಸದ್ಯಕ್ಕಿರುವ ವ್ಯವಸ್ಥೆ. ಆದರೆ ಇದು ಸದ್ಯದಲ್ಲೇ ಬದಲಾಗಲಿದೆ. ನಿಮ್ಮ ಒಂದೇ ವ್ಯಾಟ್ಸಪ್ ಖಾತೆಯನ್ನು ಒಂದೇ ಸಮಯಕ್ಕೆ ಒಂದಕ್ಕಿಂತ ಹೆಚ್ಚು ಡಿವೈಸ್ ಗಳಲ್ಲಿ ಲಾಗಿನ್ ಆಗುವ ಹೊಸ ಸೌಲಭ್ಯವನ್ನು ವ್ಯಾಟ್ಸಪ್ ಅಳವಡಿಸಿಕೊಳ್ಳಲಿದೆ.   ಇದರಿಂದ ಒಂದೇ ಸಮಯಕ್ಕೆ ಒಂದೇ ವ್ಯಾಟ್ಸಪ್ ಖಾತೆಯನ್ನು ಬೇರೆ ಬೇರೆ ಮೊಬೈಲ್ ಅಥವಾ ಪಿಸಿ ಮೂಲಕ ನೀವು ಓಪನ್ ಮಾಡಬಹುದಾಗಿದೆ. ಅದೇ ರೀತಿ ಲಾಗಿನ್, ಲಾಗ್ ಔಟ್ […]

ವ್ಯಾಟ್ಸಪ್ ನಲ್ಲಿ ಸದ್ಯದಲ್ಲೇ ಬರಲಿದೆ ಈ ಹೊಸ ಫೀಚರ್ Read More »

ಲೈಫ್‍ಸ್ಟೈಲ್

ತಮಿಳುನಾಡಿನ 4 ಜಿಲ್ಲೆ ಸಂಪೂರ್ಣ ಲಾಕ್ ಡೌನ್

(ನ್ಯೂಸ್ ಕಡಬ) newskadaba.com ತಮಿಳುನಾಡು,ಜೂ.15: ತಮಿಳುನಾಡು ಸರ್ಕಾರ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು 4 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಜೂನ್ 19ರಿಂದ 30ರ ತನಕ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಆಗಿರುತ್ತದೆ. ಚೆನ್ನೈ, ತಿರುವಳ್ಳೂರು, ಕಾಂಚಿಪುರಂ, ಚೆಂಗಲ್‌ಪಟ್ಟು‌ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ತಮಿಳುನಾಡು ಸರ್ಕಾರ ಸೋಮವಾರ ಈ ಕುರಿತು ಆದೇಶ ಹೊರಡಿಸಿದೆ. ಅಗತ್ಯ ಸೇವೆಗಳನ್ನು ಮಾರಾಟ ಮಾಡುವ ಅಂಗಡಿಗಳು ಮಾತ್ರ ಬಾಗಿಲು ತೆರೆಯಬಹುದಾಗಿದೆ.

ತಮಿಳುನಾಡಿನ 4 ಜಿಲ್ಲೆ ಸಂಪೂರ್ಣ ಲಾಕ್ ಡೌನ್ Read More »

ರಾಷ್ಟ್ರೀಯ ನ್ಯೂಸ್

ಹರ್ಷ ಸಂಸ್ಥೆಯ ಸಂಸ್ಥಾಪಕರ ಪತ್ನಿ ಶ್ರೀ ಮತಿ ಯಶೋಧ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.15:   ಕರಾವಳಿಯಲ್ಲಿ ಮನೆಮಾತಾಗಿರುವ ಗೃಹಪಯೋಪಯೋಗಿ ವಸ್ತುಗಳ ಮಳಿಗೆ ಹರ್ಷ ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಬೋಳ ಪೂಜಾರಿ ಅವರ ಪತ್ನಿ ಶ್ರೀಮತಿ ಯಶೋಧಾ ಅವರು ನಿನ್ನೆ ನಿಧನರಾಗಿದ್ದಾರೆ.     ಅವರಿಗೆ 90 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲೆಯ ಕಪ್ಪೆಟ್ಟುವಿನ ತಮ್ಮ ಸ್ವಗೃಹದಲ್ಲಿ ನಿನ್ನೆ ಸ್ವರ್ಗಸ್ಥರಾಗಿದ್ದಾರೆ. ಮೃತರು ಐವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  

ಹರ್ಷ ಸಂಸ್ಥೆಯ ಸಂಸ್ಥಾಪಕರ ಪತ್ನಿ ಶ್ರೀ ಮತಿ ಯಶೋಧ ನಿಧನ Read More »

ಕರಾವಳಿ, ಕರ್ನಾಟಕ

ಇಂದಿನಿಂದ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕರಾವಳಿ,ಜೂ.15: ಇಂದಿನಿಂದ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ರಜೆ ಘೋಷಣೆಯಾಗಿದೆ. ಈ ಬಾರಿ 46 ದಿನಗಳ ಕಾಲ ಕರಾವಳಿಯಲ್ಲಿ ಮೀನುಗಾರಿಕೆ ಬಂದ್ ಇರಲಿದೆ. ಮುಂಗಾರು ಪ್ರಾರಂಭವಾದ ಹಿನ್ನಲೆಯಲ್ಲಿ ಜೂನ್ 1 ರಿಂದ ಬಂದ್ ಆಗಬೇಕಾಗಿದ್ದ ಆಳಸಮುದ್ರ ಮೀನುಗಾರಿಕೆಯನ್ನ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿತ್ತು. ಆದರೆ ಈ ಬಾರಿ ಕೊರೊನಾ ಸೊಂಕು ಹರಡುವಿಕೆಯ ಭೀತಿ ಹಾಗೂ ಚಂಡಮಾರುತದಿಂದಾಗಿ ಮೀನುಗಾರರಿಗೆ, ಮೀನುಗಾರಿಕೆ ನಡೆಸುವುದಕ್ಕೆ ಅವಕಾಶ ಸಿಗದಂತಾಗಿದ್ದು, ಈ ಅತಂತ್ರ ಪರಿಸ್ಥಿತಿ ಮೀನುಗಾರರನ್ನ ಸಂಕಷ್ಟಕ್ಕೆ ಸಿಲುಕಿಸಿದೆ.

ಇಂದಿನಿಂದ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ

ದೇವರ ದರ್ಶನಕ್ಕೆ ಮಾತ್ರ ಅವಕಾಶ: ಸಚಿವ ಕೋಟ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ,ಜೂ.14:  ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗಳಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಮುಂದೆ ಪರಿಸ್ಥಿತಿ ನೋಡಿಕೊಂಡು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶನಿವಾರ ಸುಬ್ರಹ್ಮಣ್ಯದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಫಲಿತಾಂಶ ಭಿನ್ನವಾಗಿ ಲಭಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ವ್ಯಕ್ತಿಗಳು ದೂರದೂರುಗಳಿಂದ ಬಂದು ತುಂಬಾ

ದೇವರ ದರ್ಶನಕ್ಕೆ ಮಾತ್ರ ಅವಕಾಶ: ಸಚಿವ ಕೋಟ Read More »

ಕರಾವಳಿ, ಕರ್ನಾಟಕ

ಮೃತ ಮೀನುಗಾರ ಭಾಗ್ಯರಾಜ್ ಮನೆಗೆ ಸಚಿವ ಕೋಟ ಭೇಟಿ ➤ ಸಂಕಷ್ಟ ಪರಿಹಾರ ನಿಧಿಯಿಂದ ರೂ 2 ಲಕ್ಷ ವಿತರಣೆ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.14: ಇತ್ತೀಚೆಗೆ ಮೃತಪಟ್ಟ ಮಲ್ಪೆ ಬಡಾನಿಡಿಯೂರು ಗ್ರಾಮದ ಮೀನುಗಾರರಾದ ಭಾಗ್ಯರಾಜ್ ರವರ ಮನೆಗೆ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಭೇಟಿ ನೀಡಿ ಮೀನುಗಾರರ ಸಂಕಷ್ಟ ನಿಧಿಯಿಂದ 2 ಲಕ್ಷ ಮೊತ್ತದ ಚೆಕ್ ವಿತರಿಸಿ ಮೃತರ ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ ಕೆ ರಘುಪತಿ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಬಡಾನಿಡಿಯೂರು

ಮೃತ ಮೀನುಗಾರ ಭಾಗ್ಯರಾಜ್ ಮನೆಗೆ ಸಚಿವ ಕೋಟ ಭೇಟಿ ➤ ಸಂಕಷ್ಟ ಪರಿಹಾರ ನಿಧಿಯಿಂದ ರೂ 2 ಲಕ್ಷ ವಿತರಣೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿ..!

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.14:  ಮೃತರನ್ನು ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಎಂದು ತಿಳಿದುಬಂದಿದೆ. ಈತ ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿ ಮನೆಗೆ ಹೋಗಿದ್ದು, ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವನ್ನಪ್ಪಿದ್ದಾನೆ.ಈತನ ಕೊರೊನಾ ಪರೀಕ್ಷೆ ಮಾಡಲಾಗಿದ್ದು ಪರೀಕ್ಷೆ ವೇಳೆ ಕೊರೊನಾ ಇರುವುದು ದೃಢಪಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿ..! Read More »

ಕರಾವಳಿ, ಕರ್ನಾಟಕ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ,ಜೂ.14: ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.ಮುಂಬೈನ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರೂಮಿನಲ್ಲಿ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಪ್ರಾಜೆಕ್ಟ್ ಸಿಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿರಬಹುದು ಎಂದು

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ ➤ ಮೇ ತಿಂಗಳಲ್ಲಿ 24 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ,ಜೂ.14: ಉಡುಪಿ ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರ ನಡುವೆ ಸದ್ದಿಲ್ಲದೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ನಿಯಂತ್ರಣದಲ್ಲಿದೆ. ಆದರೂ ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆಯಾಗಿದೆ. 2020 ಜನವರಿ ತಿಂಗಳಿನಿಂದ ಮೇ ವರೆಗೆ ಒಟ್ಟು 72 ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ. ಇದೇ ಸಮಯಕ್ಕೆ 2018ರಲ್ಲಿ 41 ಪ್ರಕರಣ ಕಂಡುಬಂದಿದ್ದವು. ಈ ಬಾರಿ

ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ ➤ ಮೇ ತಿಂಗಳಲ್ಲಿ 24 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ

ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪೊಂಛ್,ಜೂ.14: ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪೊಂಛ್ ಮತ್ತು ರಜೌರಿ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಪಾಕಿಸ್ತಾನ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ, ಮೃತಪಟ್ಟ ಸೈನಿಕರಲ್ಲಿ ಇವರು ಮೂರನೇಯವರಾಗಿದ್ದಾರೆ. ಷಹಪುರ್ – ಕರ್ನಿ ಸೆಕ್ಟರ್ ನ ಗಡಿಯುದ್ದಕ್ಕೂ ಶನಿವಾರ

ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top