ಮಂಗಳೂರು

ಕೋವಿಡ್ -19 ➤ ಭಾರತದಲ್ಲಿ ಆಶಾದಾಯಕ ಬೆಳವಣಿಗೆ

(ನ್ಯೂಸ್ ಕಡಬ) newskadaba.com  ದೆಹಲಿ ,ಜೂ 04: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ನಡುವೆ, ಭಾರತದ ಒಟ್ಟು ಸೋಂಕಿತರಲ್ಲಿ ಸುಮಾರು 1 ಲಕ್ಷ ಜನರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಆಶಾದಾಯಕ ಬೆಳವಣಿಗೆಯಾಗಿದೆ.   ದೇಶದಲ್ಲಿ ಒಂದು ದಿನದಲ್ಲೇ 9,304 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 2.16.919 ಕ್ಕೆ ಏರಿಕೆಯಾಗಿದೆ. ಒಟ್ಟು 6075 ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ 1.06737 ಪ್ರಕರಣಗಳು ಸಕ್ರಿಯವಾಗಿದ್ದು 1.04.107 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ದೇಶದಲ್ಲಿ ಶೇ […]

ಕೋವಿಡ್ -19 ➤ ಭಾರತದಲ್ಲಿ ಆಶಾದಾಯಕ ಬೆಳವಣಿಗೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.04: ಕೆಪಿಸಿಸಿ ಅಧ್ಯಕ್ಷ, ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ಸಿದ್ಧಾರ್ಥ ಹೆಗ್ಡೆ ಹಿರಿಯ ಪುತ್ರ ಅಮರ್ಥ್ಯ ಹೆಗ್ಡೆಗೆ ಮದುವೆ ಮಾಡಲು ಇತ್ತೀಚೆಗೆ ಉಭಯ ಕುಟುಂಬಗಳ ನಡುವೆ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. ಎಸ್.ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ (ಸಿದ್ಧಾರ್ಥ ಹೆಗ್ಡೆ) ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು.     ಇದೀಗ ಅವರ ಹಿರಿಯ ಪುತ್ರ ಅಮರ್ಥ್ಯ

ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.04 : ಮೇ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಈ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಅವರು, ಕೊರೊನಾ ಲಾಕ್ಡೌನ್ನಿಂದಾಗಿ ಸುಮಾರು 3 ತಿಂಗಳ ಅಂತರವಿರುವಾಗಿದ್ದು ಇದರಿಂದ ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು  ತಿಳಿಸಿದ್ದಾರೆ   ಈ ಬಗ್ಗೆ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಮತ್ತು

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 04: ನಗರದ ವಿವಿಧ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು ಸಾರ್ವಜನಿಕರು ಸಹಕರಿಸಲು ವಿನಂತಿಸಲಾಗಿದೆ.     ಈ ಕುರಿತು ಪ್ರಕಟನೆಯಲ್ಲಿ ತಿಳಿಸಿರುವ ಮೆಸ್ಕಾಂ, ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ 33/11 ಕೆ.ವಿ. ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆವಿ ಕದ್ರಿ ಟೆಂಪಲ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ನಗರದ ಅಲ್ವಾರಿಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ Read More »

ಕರಾವಳಿ, ಕರ್ನಾಟಕ

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಕಾರವಾರ,ಜು.04 : ಕಾರವಾರ ಮೂಲದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಕುವೈತ್ ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.   ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.  

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ Read More »

ಕರಾವಳಿ, ಕರ್ನಾಟಕ

ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 03: ಮಾರಕ ಕೊರೋನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್ಡೌನ್ ಜಾರಿ ಮಾಡಿತ್ತು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿಕನ್, ಮಟನ್, ಫಿಶ್, ಪಾನಿಪುರಿ ಅಂಗಡಿ ನಡೆಸುತ್ತಿದ್ದವರ ನೆರವಿಗೆ ಹುಚ್ಚ ವೆಂಕಟ್… ಧಾವಿಸಿದ್ದಾರೆ. ದುಡಿಯಲು ದುಡಿಮೆಯಿಲ್ಲದೆ ಕೈಯಲ್ಲಿ ದುಡ್ಡಿಲ್ಲದೆ ಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡುವ ಮೂಲಕ ಹುಚ್ಚ ಮಾನವೀಯತೆ ಮೆರೆದಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಪಡಬಾರದ ಕಷ್ಟ ಅನುಭವಿಸಿದ ಪಾನಿಪುರಿ ಅಂಗಡಿ ಮಾಲೀಕನಿಗೆ ದಿನ ಕಿಟ್ ನೀಡಿದ ಹುಚ್ಚ ವೆಂಕಟ್ ಗ್ರಾಹಕರಿಲ್ಲದೆ ಬಿಕೋ

ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯ : ವಿವಾಹದಲ್ಲಿ ಭಾಗವಹಿಸಿದವರಿಗೆ ಹೋಂ ಕ್ವಾರಂಟೇನ್

(ನ್ಯೂಸ್ ಕಡಬ) newskadaba.com ಸುಳ್ಯ,ಜೂ. 03: ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರವೊಂದರಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ, ಪ್ರಾಥಮಿಕ ಸಂಪರ್ಕಿತರೊಬ್ಬರು ಭಾಗವಹಿಸಿದ್ದ ಹಿನ್ನಲೆಯಲ್ಲಿ , ಆ ಮದುವೆಯಲ್ಲಿ ಭಾಗಿಯಾಗಿದ್ದವರಿಗೆಲ್ಲ ಹೋಂ ಕ್ವಾರಂಟೇನ್ ಮಾಡುವ ಪರಿಸ್ಥಿತಿ ಎದುರಾಗಿದೆ. ಹೌದು, ಮಲೇಷಿಯದಲ್ಲಿದ್ದ ವೈದ್ಯ ತನ್ನ ಅರಂತೋಡು ಗ್ರಾಮದ ಸಂಬಂಧಿಕರ £ಮನೆಗೆ ಭಾನುವಾರ ಬಂದಿದ್ದರು.     ಆ ವೈದ್ಯರ ಪ್ರಾಥಮಿಕ ಸಂಪರ್ಕಿತದಲ್ಲಿದ್ದ ವ್ಯಕ್ತಿಯು ಸುಳ್ಯದ ಅರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರವೊಂದರಲ್ಲಿ ಭಾಗವಹಿಸಿದದ್ದು ಎಲ್ಲರಲ್ಲೂ ಆತಂಕ ಮನೆ ಮಾಡಿತ್ತು. ಅಷ್ಟೇ

ಸುಳ್ಯ : ವಿವಾಹದಲ್ಲಿ ಭಾಗವಹಿಸಿದವರಿಗೆ ಹೋಂ ಕ್ವಾರಂಟೇನ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ .03:  ಕೇಂದ್ರ ಸರಕಾರದ ಮಾರ್ಗಸೂಚಿಗೆ ಅನುಗುಣವಾಗಿ ರಾಜ್ಯ ಸರಕಾರ ಶಾಲೆಗಳ ಪುನಾರಂಭಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶಾಲೆಗಳನ್ನು ಹಂತ ಹಂತವಾಗಿ ಪುನಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ಶಾಲೆಗಳನ್ನು ಆರಂಭಿಸುವ ಸಂಬಂಧ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಸಿ ಶಾಲೆಗಳ ಪುನಾರಂಭ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದ್ದು,

ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಲ್ಪೆ ಬೋಟ್‌ ಮುಳುಗಡೆ ➤ 7 ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.03: ಮಲ್ಪೆ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ವೊಂದು ಗೋವಾ ಸಮೀಪ ಮುಳುಗಡೆಯಾಗಿದ್ದು, ಬೋಟ್ನಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಇನ್ನು ಮುಳುಗಡೆಯಾಗಿರುವ ಬೋಟ್ನ್ನು ಮಲ್ಪೆ ವಡಭಾಂಡೇಶ್ವರದ ದೀಪಿಕಾ ಅವರ ಮಾಲೀಕತ್ವದ ಶ್ರೀ ದುರ್ಗಾ ಹನುಮ ಆಳ ಸಮುದ್ರ ಬೋಟ್ ಎಂದು ಹೇಳಲಾಗಿದೆ. ಈ ಬೋಟ್ ಮೇ 23ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದು,  ಮಹಾರಾಷ್ಟ್ರದಲ್ಲಿ ಮೀನುಗಾರಿಕೆ ಮುಗಿಸಿ ಹಿಂತಿರುಗಿ ಬರುವಾಗ ಗೋವಾ ಸಮೀಪದ ರೆಡ್ಹೌಸ್ ಬಳಿ ಸುಮಾರು 27 ನಾಟಿಕಲ್

ಮಲ್ಪೆ ಬೋಟ್‌ ಮುಳುಗಡೆ ➤ 7 ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ

ಪೋಸ್ಟ್ ಮ್ಯಾನ್ ಗೆ ಕೊರೋನಾ ನೆಗೆಟಿವ್ ➤ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ದೃಢ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜೂ 02: ಬೆಳ್ಳಾರೆಯಲ್ಲಿ ಕಳೆದ ದಿನಗಳ ಹಿಂದೆಯಷ್ಟೇ ಕ್ವಾರಂಟೈನ್ ನಲ್ಲಿದ್ದ ದರ್ಖಾಸಿನ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಐವರ್ನಾಡಿನ ಪೋಸ್ಟ್ ಮ್ಯಾನ್ ಗೆ ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿತ್ತು.       ಇನ್ನು ಆ ಭಾಗಕ್ಕೆ ಪೋಸ್ಟ್ ಮ್ಯಾನ್ ಕರ್ತವ್ಯಕ್ಕೆ ಹೋಗಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಅವರನ್ನು ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿತ್ತು. . ಮೇ.29 ರಂದು ಅವರ ಗಂಟಲ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಅವರ ಪರೀಕ್ಷಾ ವರದಿ

ಪೋಸ್ಟ್ ಮ್ಯಾನ್ ಗೆ ಕೊರೋನಾ ನೆಗೆಟಿವ್ ➤ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ದೃಢ Read More »

ಕರಾವಳಿ, ಕರ್ನಾಟಕ
Scroll to Top