ಮಂಗಳೂರು

ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.18: ಕನ್ನಡ, ಮಲಯಾಳಂ, ತುಳು ಭಾಷೆಗಳಲ್ಲಿ ಕವಿತೆ ಮತ್ತು ಕಥೆಗಳನ್ನು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆಗೈದಿರುವ ಡಿವಿಕೆ ಎಂಬ ಕಾವ್ಯನಾಮದಿಂದ ಗುರುತಿಸಿಕೊಂಡಿರುವ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ದಿಲೀಪ್ ವೇದಿಕ್ ಕಡಬ ಅವರು ಪ್ರತಿಷ್ಠಿತ ಇಂಡಿಯನ್ ಬುಕ್ ಆಫ್ ರೆಕಾಡ್ರ್ಸ್ ವತಿಯಿಂದ ನೀಡಲಾಗುವ ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.   ಇವರು ಇವರೆಗೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, 2021ರ […]

ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ Read More »

ಕರಾವಳಿ

ಬೆಳ್ತಂಗಡಿ: 8 ವರ್ಷದ ಬಾಲಕನ ಅಪಹರಣ ಕೇಸ್ ➤ ಪತ್ತೆಗಾಗಿ ನಾಲ್ಕು ತಂಡ ರಚನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.18: ಉಜಿರೆ ನಿವಾಸಿ ಎಂಟು ವರ್ಷದ ಮಗುವಿನ ಅಪಹರಣ ಪ್ರಕರಣ ಆತಂಕ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆ ಇನ್ನಷ್ಟು ಚುರುಕಾಗಿದೆ. ಅಪಹರಣ ಪ್ರಕರಣ ಬೇಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಎಸ್ ಪಿ ಲಕ್ಷ್ಮೀಪ್ರಸಾದ್ ಹೇಳಿದರು.   ಅಪಹರಣಕ್ಕೆ ಒಳಗಾದ ಬಾಲಕನ ಕುಟುಂಬಸ್ಥರನ್ನು ಭೇಟಿಯಾದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ. ಅಪಹರಣಕಾರರು ಬಿಟ್ ಕಾಯಿನ್ ಯಾಕೆ ಕೇಳುತ್ತಿದ್ದಾರೆ ಎಂಬ ಕುರಿತು

ಬೆಳ್ತಂಗಡಿ: 8 ವರ್ಷದ ಬಾಲಕನ ಅಪಹರಣ ಕೇಸ್ ➤ ಪತ್ತೆಗಾಗಿ ನಾಲ್ಕು ತಂಡ ರಚನೆ Read More »

ಕರಾವಳಿ

ಮೂಡುಬಿದಿರೆ :ಅಪರಾಧ ತಡೆಗೆ ಪೇಟೆಯಲ್ಲಿ ವಾಹನ ಜಾಥಾ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಡಿ.18:ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಆಟೋ ರಿಕ್ಷಾ ಚಾಲಕ ಮತ್ತು ಮಾಲಕರು ಹಾಗೂ ಪೊಲೀಸರಿಂದ ಮೂಡುಬಿದಿರೆ ಪೇಟೆಯಲ್ಲಿ ವಾಹನ ಜಾಥಾ ನಡೆಯಿತು.   ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಬಿ.ಎಸ್ .ದಿನೇಶ್ ಕುಮಾರ್, ಉಪ ನಿರೀಕ್ಷಕ ಸುದೀಪ್, ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಜಯರಾಮ್ ರಾವ್ , ಉಪಾಧ್ಯಕ್ಷಗಳಾದ ವಿಶ್ವನಾಥ ಬಿ.ಎ, ನಾರಾಯಣ, ಕಾರ್ಯದರ್ಶಿ ಆನಂದ ಪೂಜಾರಿ ಸಹಿತ

ಮೂಡುಬಿದಿರೆ :ಅಪರಾಧ ತಡೆಗೆ ಪೇಟೆಯಲ್ಲಿ ವಾಹನ ಜಾಥಾ Read More »

ಕರಾವಳಿ

ರಾಷ್ಟ್ರೀಯ ಒಲಿಂಪಿಯಾಡ್ ನಲ್ಲಿ ಕಡಬದ ಪೋರನಿಗೆ ದ್ವಿತೀಯ ರ್‍ಯಾಂಕ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.18: ದೆಹಲಿಯ ಆರೆಂಜ್ ಗ್ಲೋಬಲ್ ಒಲಿಂಪಿಯಾಡ್ ಅವರು 2019-20 ಶೈಕ್ಷಣಿಕ ಸಾಲಿನಲ್ಲಿ ನಡೆಸಿದ ರಾಷ್ಟ್ರೀಯ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಯತಿನ್ ಬಿ.ಎಸ್ ರಾಷ್ಟ್ರ ಮಟ್ಟದ ವಿಜ್ಞಾನ ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ರ್‍ಯಾಂಕ್ ಪಡೆದಿದ್ದಾನೆ. ಈ ಪ್ರಶಸ್ತಿ ರೂ. 40,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಹೊಂದಿದೆ.     ಇವರು ಕಡಬ ನಿವಾಸಿ ನಿವೃತ್ತ ಯೋಧ ಸೇಸಪ್ಪ ಗೌಡ ಮತ್ತು ಪುತ್ತೂರು ಠಾಣೆಯ

ರಾಷ್ಟ್ರೀಯ ಒಲಿಂಪಿಯಾಡ್ ನಲ್ಲಿ ಕಡಬದ ಪೋರನಿಗೆ ದ್ವಿತೀಯ ರ್‍ಯಾಂಕ್ Read More »

ಕರಾವಳಿ

ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದುಬೈಗೆ ಸುಮಾರು 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಿಐಎಸ್ಎಫ್ ಅಧಿಕಾರಿಗಳು ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಚಿತ್ತಾರಿಯ ಬಾರಿಕ್ಕಾಡ್‌‌‌ ನಿವಾಸಿ ತಾಜುದ್ದೀನ್‌‌ (39) ಎಂದು ಗುರುತಿಸಲಾಗಿದೆ.ಈತ ಡಿ.17ರ ಗುರುವಾರದಂದು ಸಂಜೆ 4.30 ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭ ತಪಾಸಣೆ ನಡೆಸಿದ ವೇಳೆ ಯುರೋಪಿಯನ್‌‌ ಕರೆನ್ಸಿ ಯೂರೊ ಹಾಗೂ ಯುಎಇ

ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರ ಪ್ರಶಸ್ತಿಯ ಗರಿ

(ನ್ಯೂಸ್ ಕಡಬ) newskadaba.com ಪಂಜ, ಡಿ.18: ಕೇರ್ ಟ್ರಸ್ಟ್( ರಿ )ಪ್ರೈಮ್ ಎಜುಕೇಶನ್ ತಮಿಳುನಾಡು, ಇದರ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳು ಮತ್ತೊಮ್ಮೆ ಪ್ರಶಸ್ತಿ ಪಡೆದು ಹೆಮ್ಮೆ ಗರಿ ಮೂಡಿಸಿದ್ದಾರೆ. ಪ್ರೌಢ ವಿಭಾಗ: ವಿದ್ಯಾರ್ಥಿಗಳಾದ ,ಅಭಿನ್ ಗೌಡ ಪ್ರಥಮ: ಸೈಂಟ್ ಜೋಸೆಫ್ ಪ್ರೌಢಶಾಲೆ ಸುಳ್ಯ. ಅಭಿಜ್ಞಾ ಪಿ.ಎಸ್ :ದ್ವಿತೀಯ :ಸೈಂಟ್ ಆನ್ಸ್ ಪ್ರೌಢಶಾಲೆ ಕಡಬ. ಪ್ರಾಥಮಿಕ ವಿಭಾಗ: ಅನ್ವಿತಾ ಸಿ-ಪ್ರಥಮ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ

ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರ ಪ್ರಶಸ್ತಿಯ ಗರಿ Read More »

ಕರಾವಳಿ

ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಕೈಪಿಡಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ನಬಾರ್ಡ್ ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಆಧಾರದಲ್ಲಿ ಲೀಡ್ ಬ್ಯಾಂಕ್ ಮೂಲಕ ಜಿಲ್ಲಾ ಸಾಲ ಯೋಜನೆಯನ್ನು ರೂಪಿಸಿ ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಡಿ.ಸಿ.ಸಿ.ಡಿ.ಎಲ್.ಆರ್.ಸಿ ಚೇರ್‍ಮ್ಯಾನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಸೂಚಿಸಿದರು.ಅವರು ಇಂದು ತಮ್ಮ ಕಚೇರಿಯಲ್ಲಿ ನಬಾರ್ಡ್ ವತಿಯಿಂದ ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಆರ್ಥಿಕ ವರ್ಷ 2021-22ರ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಬ್ಯಾಂಕಿನ ಮ್ಯಾನೇಜರ್‍ಗಳಿಗೆ ವಿವಿಧ

ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಕೈಪಿಡಿ ಬಿಡುಗಡೆ Read More »

ಕರಾವಳಿ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ➤ ಆರು ಮಂದಿ ಗೆಲುವು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.18: ಸುಳ್ಯ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆಗೆ ಇಂದು ನಡೆದ ಚುನಾವಣೆಯಲ್ಲಿ ಶಿಕ್ಷಕರುಗಳಾದ ದೇವಚಳ್ಳ ಶ್ರೀಧರ ಗೌಡ ಕೆ (148) ನಡುಗಲ್ಲು ಶಾಲೆಯ ಕುಶಾಲಪ್ಪ ಟಿ (147), ಅಮೈಮಡಿಯಾರು ಶಾಲೆಯ ಪದ್ಮನಾಭ ಅತ್ಯಾಡಿ (128), ದೊಡ್ಡತೋಟ ಶಾಲೆಯ ಕುಶಾಲಪ್ಪ ಪಿ (125), ಬಿಳಿಯಾರು ಶಾಲೆಯ ಶೀಲಾವತಿ ಕೆ.ಎನ್. (147), ಕರಿಕ್ಕಳ ಶಾಲೆಯ ಸರೋಜಿನಿ (137) ಮತಗಳನ್ನು ಪಡೆದು ನಿರ್ದೇಶಕರುಗಳಾಗಿ ಆಯ್ಕೆಯಾದರು. ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂಭಾಗದಲ್ಲಿರುವ ಸಂಧ್ಯಾ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ➤ ಆರು ಮಂದಿ ಗೆಲುವು Read More »

ಕರಾವಳಿ

ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ➤ ಬಸ್ಸಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೇಪ್ ಮಾಡಿದ ಆಟೋ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.18: ಹೆಣ್ಣು ಮಕ್ಕಳಿಗೆ ರಾಜ್ಯದ ರಾಜಧಾನಿ ಸೇಫ್ ಅಲ್ವಾ ಎನ್ನುವ ಪ್ರಶ್ನೆ ಮತ್ತೊಮ್ಮೆ ಎದ್ದಿದೆ. ಕಾರಣ ಮಹಾನಗರದಲ್ಲಿ ಇಂತಹ ಪ್ರಕರಣಗಳು ಒಂದಾದ ಮೇಲೊಂದರಂತೆ ನಡೆಯುತ್ತಿವೆ. ಈಗ ಮತ್ತೊಂದು ಅತ್ಯಾಚಾರ ಪ್ರಕರಣ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಮುಕ ಆರೋಪಿ ಮುಬಾರಕ್ (28) ಎಂಬಾತನೇ ಈ ಕೃತ್ಯ ಎಸಗಿದ್ದಾನೆ. ಸಂತ್ರಸ್ತ ಯುವತಿ ಕಂಪ್ಯೂಟರ್ ಸೈನ್ಸ್ ಕೋರ್ಸ್ ಓದುತ್ತ, ಮದುವೆಗಳಲ್ಲಿ ಸ್ವಾಗತಕಾರ್ತಿಯಾಗಿ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದಳು. ವಿವಾಹವೊಂದರಲ್ಲಿ ಪಾಲ್ಗೊಂಡಿದ್ದ ಯುವತಿ

ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ➤ ಬಸ್ಸಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೇಪ್ ಮಾಡಿದ ಆಟೋ ಚಾಲಕ Read More »

ಕರಾವಳಿ

ಅರೆಭಾಷೆಯ ಕಾರ್ಯಕ್ಷಮತೆ ಹೆಚ್ಚಾಗಬೇಕು ➤ ಉಪನ್ಯಾಸಕಿ ಸ್ವರ್ಣಲತಾ ಕಿಶೋರ್

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.18: ಅರೆಭಾಷೆಯ ಕಲಾ ಚಟುವಟಿಕೆಗಳು ಹವ್ಯಾಸ ಮಾತ್ರವಾಗದೆ, ಕಲಾವಿದರ ಜೀವನೋಪಾಯ ಮಾರ್ಗವೂ ಆಗಬೇಕು. ಅರೆಭಾಷೆ ಅನ್ನದ ಭಾಷೆಯಾಗುವುದೊಂದಿಗೆ ಭಾಷೆಯ ಕಾರ್ಯಕ್ಷಮತೆ ಕೂಡ ಹೆಚ್ಚಾಗಬೇಕು ಎಂದು ಶ್ರೀ ಶಾರದಾ ಮಹಿಳಾ ಪ.ಪೂ. ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣಲತಾ ಕಿಶೋರ್ ಹೇಳಿದರು. ಕರ್ನಾಟಕ ಸರ್ಕಾರವು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸಿ, ಆದೇಶ ಹೊರಡಿಸಿದ ನೆನಪಿಗಾಗಿ ಸುಳ್ಯದ ರೋಟರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಅರೆಭಾಷೆ ದಿನಾಚರಣೆ ಮತ್ತು ಅರೆಭಾಷೆ ಯಕ್ಷಗಾನ ಪ್ರದರ್ಶನ

ಅರೆಭಾಷೆಯ ಕಾರ್ಯಕ್ಷಮತೆ ಹೆಚ್ಚಾಗಬೇಕು ➤ ಉಪನ್ಯಾಸಕಿ ಸ್ವರ್ಣಲತಾ ಕಿಶೋರ್ Read More »

ಕರಾವಳಿ
Scroll to Top