ಮಂಗಳೂರು

ಉಪ್ಪಿನಂಗಡಿ : ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.16: ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ರಸ್ತೆ ಬದಿ ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.     ಸುಮಾರು 45ರಿಂದ 50ರ ಹರೆಯದ ವ್ಯಕ್ತಿಯ ಶವ ಇದಾಗಿದ್ದು, ಮೃತಪಟ್ಟು ಸುಮಾರು ಮೂರು ದಿನಗಳಾಗಿರಬಹುದೆಂದು ಶಂಕಿಸಿ, ಸ್ಥಳೀಯ ಗ್ರಾ.ಪಂ. ಪಿಡಿಒ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಉಪ್ಪಿನಂಗಡಿ : ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ Read More »

ಕರಾವಳಿ

ಮಂಗಳೂರು :ಕೆಎಂಎಫ್ ಡೈರಿಯಲ್ಲಿ ಕೆಮಿಕಲ್ ಸ್ಫೋಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಡೈರಿಯಲ್ಲಿ ಕೆಎಂಎಫ್ ಡೈರಿಯಲ್ಲಿ ಕೆಮಿಕಲ್ ಸ್ಫೋಟಗೊಂಡ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭ ಬಿಸಿನೀರು ಮೈಗೆ ತಗುಲಿ ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.   ಸುಳ್ಯ ಮೂಲದ ಸತೀಶ್(27) ಎಂಬವರು ಮಧ್ಯಾಹ್ನದ ವೇಳೆಗೆ ಕಾಸ್ಟಿಕ್ ಸೋಡಾವನ್ನು ನೀರಿಗೆ ಸೇರಿಸಿ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ಬಿಸಿನೀರು ಮೈಮೇಲೆ ಬಿದ್ದಿದೆ. ಪರಿಣಾಮವಾಗಿ ಅವರ ದೇಹದ ಶೇ.50ರಷ್ಟು ಭಾಗ ಸುಟ್ಟು ಹೋಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕ್‍ನ್ನು

ಮಂಗಳೂರು :ಕೆಎಂಎಫ್ ಡೈರಿಯಲ್ಲಿ ಕೆಮಿಕಲ್ ಸ್ಫೋಟ Read More »

ಕರಾವಳಿ

ಉಡುಪಿ: ಅಗಲಿದ ಹಿರಿಯ ಚೇತನಗಳಿಗೆ ನುಡಿನಮನ, ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.15: ಅಗಲಿದ ಹಿರಿಯ ಚೇತನಗಳಿಗೆ ನಾಗರಿಕ ಸಮಿತಿಯಿಂದ ನುಡಿನಮನ, ಶ್ರದ್ಧಾಂಜಲಿ ಸಲ್ಲಿಸಿದರು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಆಯೋಜನೆಯಲ್ಲಿ ಅಗಲಿದ ಉಡುಪಿ ಜಿಲ್ಲೆಯ ಹಿರಿಯ ಚೇತನಗಳಾದ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ, ಸಾಮಾಜಿಕ ಹೋರಾಟಗಾರ ದಾಮೋದರ ಐತಾಳ್, ಸಾಹಿತಿ ಉದ್ಯಾವರ ಮಾಧವ ಆಚಾರ್ಯ, ಮಕ್ಕಳ ಹಕ್ಕುಗಳ ಹೋರಾಟಗಾರ ದಾಮೋದರ ಆಚಾರ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸುವ ಕಾರ್ಯಕ್ರಮ ಉಡುಪಿ ಮಾರುತಿ ವೀಥಿಕಾದ ನಾಗರಿಕ ಸಮಿತಿಯ ಕಚೇರಿ ವಠಾರದಲ್ಲಿ ನಡೆಯಿತು.ಅಗಲಿದ ಗಣ್ಯರಿಗೆ ನಾಗರಿಕ

ಉಡುಪಿ: ಅಗಲಿದ ಹಿರಿಯ ಚೇತನಗಳಿಗೆ ನುಡಿನಮನ, ಶ್ರದ್ಧಾಂಜಲಿ Read More »

ಕರಾವಳಿ, ಕರ್ನಾಟಕ

ತುಳುನಾಡಿನ ಐತಿಹಾಸಿಕ ನಡಿಬೆಟ್ಟು ಸೂರ್ಯಚಂದ್ರ ಕಂಬಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಶಿರ್ವ, ಡಿ.15: ಕರಾವಳಿಯ ಜನಪ್ರಿಯ ಜನಪದ ಕ್ರೀಡೆ ಕಂಬಳಕ್ಕೆ ಮರುಜೀವ ಸಿಕ್ಕಿದೆ.ಕೊರೋನಾದ ಆಂತಕ ದೂರವಾಗುತ್ತಲೇ ಜನಪದ ಕ್ರೀಡೆ ಕಂಬಳಕ್ಕೆ ಚಾಲನೆ ಸಿಕ್ಕಿದೆ. ತುಳುನಾಡಿನ ಐತಿಹಾಸಿಕ ನಡಿಬೆಟ್ಟು ಸೂರ್ಯಚಂದ್ರ ಕಂಬಳ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು.ಅನಾದಿ ಕಾಲದಿಂದ ಕೂಡ ಸಂಪ್ರದಾಯಬದ್ಧವಾಗಿ ಜೋಡುಕರೆ ಕಂಬಳ‌ ನಡೆದುಕೊಂಡು ಬಂದಿತ್ತು. ಮಹಾಮಾರಿ ಕೊರೊನಾದಿಂದ ಕಂಬಳಕ್ಕೂ ಬ್ರೇಕ್ ಬಿದ್ದಿತ್ತು.ಸದ್ಯ ಸರಕಾರದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಕಂಬಳವನ್ನು ನಡೆಸಲಾಯಿತು. ಹತ್ತಾರು ಕೋಣಗಳು ಉತ್ಸಾಹದಿಂದಲೇ ಕಂಬಳ ಗದ್ದೆ ಓಟ ನಡೆಸಿದವು.ಕರಾವಳಿಯ ನೂರಾರು

ತುಳುನಾಡಿನ ಐತಿಹಾಸಿಕ ನಡಿಬೆಟ್ಟು ಸೂರ್ಯಚಂದ್ರ ಕಂಬಳಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿ.20 ರವರೆಗೆ ಸಕಾಲ ಸಪ್ತಾಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿಸೆಂಬರ್ 14 ರಿಂದ 20 ರವರೆಗೆ ಸಕಾಲ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಅಗ್ನಿಶಾಮಕ ಇಲಾಖೆಯಲ್ಲಿ 05 ಸೇವೆಗಳನ್ನು ಸಕಾಲ ವ್ಯಾಪ್ತಿಯಲ್ಲಿ ತಂದಿದ್ದು, ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಇಲಾಖೆಯಲ್ಲಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಹೊಸ ಅರ್ಜಿಗಳನ್ನು ಸಕಾಲದಲ್ಲಿ ಸ್ವೀಕರಿಸಿ ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು. ಸಪ್ತಾಹದ ಅಂತ್ಯದಲ್ಲಿ ವಿಲೇವಾರಿ ಮಾಡಿರುವ ಅರ್ಜಿಗಳ ಕುರಿತು ಸಕಾಲ ಮಿಷನ್‍ಗೆ ವರದಿ ನೀಡಲಾಗುತ್ತದೆ. ಅಗ್ನಿಶಾಮಕ ಇಲಾಖೆಯಲ್ಲಿ

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿ.20 ರವರೆಗೆ ಸಕಾಲ ಸಪ್ತಾಹ Read More »

ಕರ್ನಾಟಕ

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿತ್ತು. ಸಭಾಪತಿ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು. ಇಂದು ಬೆಳಗ್ಗೆ 11.10ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಸ್ಥಾನದಲ್ಲಿ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡ ಕುಳಿತಿದ್ದದನ್ನು ಕಂಡು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಅವರನ್ನು ಎಬ್ಬಿಸಿ ಎಳೆದೊಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ, ತಳ್ಳಾಟ

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ Read More »

ಕರ್ನಾಟಕ

ಹಲವು ಕಡೆ ಕಳವು ಪ್ರಕರಣ ➤ ಕಿಲಾಡಿ ದಂಪತಿ ಅರೇಷ್ಟ್

(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ.15: ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳ ಬಗ್ಗೆ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ,2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000ರೂ. ಮೌಲ್ಯದ

ಹಲವು ಕಡೆ ಕಳವು ಪ್ರಕರಣ ➤ ಕಿಲಾಡಿ ದಂಪತಿ ಅರೇಷ್ಟ್ Read More »

ಕರಾವಳಿ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ➤ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳ ಹಂಚಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಪ್ರಸ್ತುತ ಸಾಲಿನ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ಕರ್ನಾಟಕಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ಅಧಿನಿಯಮ, 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆ ಮೇಲೆ ಪಕ್ಷದ ಬಾವುಟ, ಬ್ಯಾನರ್‍ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ➤ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳ ಹಂಚಿಕೆ Read More »

ಕರಾವಳಿ, ಕರ್ನಾಟಕ

ಬಾಲಕಾರ್ಮಿಕ ಯೋಜನಾ ಸಂಘ ➤ ಅಪಾರ್ಟ್‍ಮೆಂಟ್‍, ಹೋಟೆಲ್, ಗ್ಯಾರೇಜ್‍ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ)ಕಾಯ್ದೆ-1986ರನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000/-ದವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್‍ನ್ನು ಸಹ

ಬಾಲಕಾರ್ಮಿಕ ಯೋಜನಾ ಸಂಘ ➤ ಅಪಾರ್ಟ್‍ಮೆಂಟ್‍, ಹೋಟೆಲ್, ಗ್ಯಾರೇಜ್‍ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ  Read More »

ಕರಾವಳಿ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.15: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಇಬ್ಬರು ಮಹಿಳೆಯರೂ ಸೇರಿದಂತೆ ಮೂವರು ಆರೋಪಿತರನ್ನು ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಪತ್ತೆಹಚ್ಚಿದೆ. ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಪಡೆದಿದ್ದ ಬಾಡಿಗೆ ಮನೆಯಲ್ಲಿ  ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತಪಡಿಸಿಕೊಂಡ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ಬಂದ ಮಾಹಿತಿಯಂತೆ ನಡೆಸಿದ ಕಾರ್ಯಾಚರಣೆ ಯಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಬಂಧಿತರನ್ನು ಜನಾರ್ದನ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ Read More »

ಕರಾವಳಿ
Scroll to Top