ಮಂಗಳೂರು

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಡಿ.13 ರ ಕಳೆದ  ರಾತ್ರಿ ಸಮಯದಲ್ಲಿ ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದವೊಂದು ಕೇಳಿ ಬಂದಿದ್ದು ಜನರೆಲ್ಲ ಭಯಬೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಇನ್ನು ಕೆಲವರು ಶಬ್ದದ ಮೂಲ ಹುಡುಕಲು ಮುಂದಾಗಿದ್ದಾರೆ. ರಾತ್ರಿ ಸುಮಾರು ಹತ್ತು ಗಂಟೆ ವೇಳೆಗೆ ಭೂಮಿ ಬಾಯಿ ಬಿಟ್ಟಂತೆ ಭಾರೀ ಶಬ್ದವೊಂದು ಕೇಳಿ, ಹರಿಹರ ಪಲ್ಲತಡ್ಕದ ಮಂದಿಯೆಲ್ಲ ಮನೆಯಿಂದ ಹೊರ ಬಂದಿದ್ದಾರೆ.ನೆಲ ಅದುರಿದಂತೆ ಭಾಸವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ.13 :ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಸತಿ ಸಚಿವ ವಿ. ಸೋಮಣ್ಣ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.   ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಪ್ರಯುಕ್ತ ಇಂದು ಸಂಜೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನದ ಉದ್ಘಾಟನೆಯನ್ನು ಸಚಿವರು ನೆರವೇರಿಸಲಿದ್ದಾರೆ.    

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ Read More »

ಕರಾವಳಿ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: ಸ್ಯಾಂಡಲ್​ವುಡ್​ ಕಂಡ ದಿಗ್ಗಜ ನಟ, ದಾದಾ, ಸಾಹಸಸಿಂಹ ವಿಷ್ಣುವರ್ಧನ್ ಅವರ ಬಗ್ಗೆ ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದ ತೆಲುಗು ನಟ ವಿಜಯ್ ರಂಗರಾಜು ಈಗ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ. ನನ್ನದು ತಪ್ಪಾಯಿತು. ಬಾಯಿತಪ್ಪಿ ಆರೀತಿ ಮಾತನಾಡಿದ್ದೆ. ನನ್ನನ್ನು ಕ್ಷಮಿಸಿಬಿಡಿ ಎಂದು ಕೈ ಮುಗಿದು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ವಿಜಯ್ ರಂಗರಾಜು ವಿಷ್ಟುದಾದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಬೆನ್ನಲ್ಲೇ ಅವರ ವಿರುದ್ಧ ಇಡೀ ಸ್ಯಾಂಡಲ್​ವುಡ್ ತಿರುಗಿಬಿದ್ದಿತ್ತು. ಕನ್ನಡದ ಕಿರಿಯ ಸ್ಟಾರ್ ನಟರಿಂದ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು Read More »

ಕರ್ನಾಟಕ

ಬಂಟ್ವಾಳ : ಚುನಾವಣೆ ಬಹಿಷ್ಕಾರ ಬ್ಯಾನರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.13: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಅರಮನೆಹಿತ್ಲು ಎಂಬಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಶನಿವಾರ ರಾತ್ರಿ ಬಳಿಕ ಕಂಡುಬಂದಿದೆ. ನಂದಾವರದಿಂದ ಅರಮನೆಹಿತ್ಲುವರೆಗೆ ಸಂಪರ್ಕ ರಸ್ತೆ ಕಾಮಗಾರಿಗೆ ಅನುದಾನ ದೊರೆತರೂ ಕೆಲಸ ನಡೆಯದ ಕಾರಣ ಗ್ರಾಪಂ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.

ಬಂಟ್ವಾಳ : ಚುನಾವಣೆ ಬಹಿಷ್ಕಾರ ಬ್ಯಾನರ್ Read More »

ಕರಾವಳಿ

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: 2 ತಿಂಗಳ ಮಗುವಿಗೆ ಹೊಡೆಯುತ್ತಿದ್ದ 6 ವರ್ಷದ ಮಗನ ಮೇಲೆ ಕೋಪಗೊಂಡ ತಾಯಿಯೊಬ್ಬಳು ಕತ್ತು ಹಿಸುಕಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.     ಪಟ್ಟಣಗೆರೆ ನಿವಾಸಿ ತೇಜ್ ರಾಮ್ ಮತ್ತು ದೇವಿ ಅವರ ಪುತ್ರ ಮನೀಶ್ (6) ಮೃತ ಬಾಲಕ. ಈ ಸಂಬಂಧ ಪತಿ ಕೊಟ್ಟ ದೂರಿನ ಮೇರೆಗೆ ಮಗುವಿನ ತಾಯಿ ದೇವಿಯನ್ನು (26) ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.13: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ವಯೋಸಹಜ ಅನಾರೋಗ್ಯದಿಂದ (85) ನಿಧನರಾಗಿದ್ದಾರೆ. .ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯರು ಉಡುಪಿಯ ಅಂಬಲಪಾಡಿ ನಿವಾಸದಲ್ಲಿಂದು ಕೊನೆಯುಸಿರೆಳೆದಿದ್ದಾರೆ. ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕ ಹಾಗೂ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದ ಅವರು ನಟ ಡಾ.ವಿಷ್ಣುವರ್ಧನ್ ಗೆ ಆಧ್ಯಾತ್ಮಿಕ ಗುರುಗಳಾಗಿದ್ದರು. ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದು, ಕನ್ನಡದ ಪ್ರಮುಖ ಮೂರು ಚಲನಚಿತ್ರಗಳಾದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯಕ್ಕೆ ಸಂಭಾಷಣೆಯನ್ನು ಬರೆದಿದ್ದರು.1936ರಲ್ಲಿ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿದ್ದ ಗೋವಿಂದಾಚಾರ್ಯರು ಅಪಾರ ವಿದ್ವತ್ ಉಳ್ಳವರಾಗಿದ್ದರು.ಬನ್ನಂಜೆ

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.13: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ ನೆರವೇರಲಿದೆ. ಇದಕ್ಕೆ ಸರ್ವ ಭಕ್ತರ ಸಹಕಾರ ಅಗತ್ಯ. ಲಕ್ಷ ದೀಪೋತ್ಸವದಂದು ಲಕ್ಷ ದೀಪಗಳು ಉರಿದು ಕ್ಷೇತ್ರವು ಹಣತೆ ಬೆಳಕಿನಿಂದ ಪ್ರಜ್ವಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್‌.ಅಂಗಾರ ಹೇಳಿದರು. ಶ್ರೀ ದೇವಳದ ಆಡಳಿತ ಕಚೇರಿ ಮೇಲ್ಮಹಡಿಯಲ್ಲಿ ಶನಿವಾರ ನಡೆದ ಸಾರ್ವಜನಿಕರ ಮತ್ತು ವರ್ತಕರ ಸಭೆಯಲ್ಲಿಅಧ್ಯಕ್ಷತೆ ವಹಿಸಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ Read More »

ಕರಾವಳಿ

ಡಿ.13ರ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಬಳ್ಪ, ಡಿ.13: ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.   ಹಿಂದೂ ಜಾಗರಣ ವೇದಿಕೆ ಬಳ್ಪ ಇದರ ಆಶ್ರಯದಲ್ಲಿ ಎ. ಜೆ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿರುವ ರಕ್ತದಾನ ಶಿಬಿರ ಡಿ.13ರ ಇಂದು ಬಳ್ಪದಲ್ಲಿ ನಡೆಯಲಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಆರಂಭಗೊಂಡಿದ್ದು ಸಂಜೆವರೆಗೆ ರಕ್ತದಾನ ಶಿಬಿರ ಬಳ್ಪದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿದೆ.    

ಡಿ.13ರ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್-19 ಅಂಕಿ ಅಂಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13: ಡಿ.12 ರ ವರದಿಯಂತೆ 53 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,325ಕ್ಕೆ ಏರಿಕೆಯಾಗಿದೆ. ಇನ್ನೂ ಡಿ.12 ರ ವರದಿಯಂತೆ 43 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 31,236ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕಳೆದ ದಿನ ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 732 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.      

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್-19 ಅಂಕಿ ಅಂಶ Read More »

ಕರಾವಳಿ

ಬಂಟ್ವಾಳ :ಪತಿಯ ನಾಮಪತ್ರ ತಿರಸ್ಕರಿಸುವಂತೆ ಪತ್ನಿಯಿಂದ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13:  ಗ್ರಾಪಂ ಚುನಾವಣೆ ಸಂದರ್ಭ ತನ್ನ ಪತಿ ಸಲ್ಲಿಸಿದ ನಾಮಪತ್ರವನ್ನು ತಿರಸ್ಕರಿಸಿ ಎಂದು ಪತ್ನಿಯೇ ಹೇಳಿದ ಪ್ರಕರಣ ಬಂಟ್ವಾಳ ತಾಲೂಕಿನ ಅನಂತಾಡಿ ಎಂಬಲ್ಲಿ ಡಿ.12 ರ ಕಳೆದ ದಿನ ನಡೆದಿದೆ. ನಾಮಪತ್ರ ಸಲ್ಲಿಸಿದ ವ್ಯಕ್ತಿಯ ವಿರುದ್ಧ ಕೆಲವು ಪ್ರಕರಣಗಳು ಇದ್ದು, ಈ ಹಿನ್ನೆಲೆಯಲ್ಲಿ ತಿರಸ್ಕರಿಸಬೇಕು ಎಂದು ಅವರ ಪತ್ನಿ ಮತ್ತು ಕೆಲವರು ಆಗಮಿಸಿ ಆಕ್ಷೇಪ ಸಲ್ಲಿಸಿದರು. ಈ ಕುರಿತು ಅವರು ದೂರನ್ನೂ ನೀಡಿದ್ದಾರೆ. ಆದರೆ, ಅಭ್ಯರ್ಥಿ ಅಪರಾಧಿ ಎಂದು ಯಾವುದೇ ಘೋಷಣೆ

ಬಂಟ್ವಾಳ :ಪತಿಯ ನಾಮಪತ್ರ ತಿರಸ್ಕರಿಸುವಂತೆ ಪತ್ನಿಯಿಂದ ಮನವಿ Read More »

ಕರಾವಳಿ, ಕರ್ನಾಟಕ
Scroll to Top