ಮಂಗಳೂರು

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಾದಕ ವಸ್ತು ಮತ್ತು MDMA ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ನಿಯಾಜ್ (28), ನಿಶಾದ್ (28), ಮೊಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರಾವಳಿ

ಗುಡ್ಡ ಜರಿತ – ಸುಳ್ಯ-ಪಾಣತ್ತೂರು ಅಂತರಾಜ್ಯ ರಸ್ತೆ ಬಂದ್

(ನ್ಯೂಸ್ ಕಡಬ)newskadaba.com ಸುಳ್ಯ, ಜು.19. ಭಾರಿ ಪ್ರಮಾಣದಲ್ಲಿ ಮಣ್ಣು ಹಾಗೂ ಮರ ಸಮೇತ ಗುಡ್ಡ ಜರಿದು ರಸ್ತೆ ಬಂದ್ ಆಗಿರುವ ಘಟನೆ ಸುಳ್ಯ-ಕಲ್ಲಪ್ಪಳ್ಳಿ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಬಾಟೋಳಿ ಎಂಬಲ್ಲಿ ನಡೆದಿದೆ. ವಾಹನ ಸಂಚಾರಕ್ಕೆ ತಡೆ ಉಂಟಾಗಿದ್ದು ಮತ್ತು ನಡೆದು ಹೋಗಲು ಸಾಧ್ಯವಿಲ್ಲದ‌ ರೀತಿಯಲ್ಲಿ ರಸ್ತೆ ಬಂದ್ ಆಗಿದೆ ಎನ್ನಲಾಗಿದೆ. ರಸ್ತೆಯಲ್ಲಿ ತಾತ್ಕಾಲಿಕವಾಗಿ ಬಡ್ಡಡ್ಕ-ರಂಗತ್ತಮಲೆ-ಕಲ್ಲಪಳ್ಳಿ ವಾಹನ ಪ್ರಯಾಣಿಸಬಹುದು ಎಂದು ವರದಿ ತಿಳಿಸಿದೆ.

ಗುಡ್ಡ ಜರಿತ – ಸುಳ್ಯ-ಪಾಣತ್ತೂರು ಅಂತರಾಜ್ಯ ರಸ್ತೆ ಬಂದ್ Read More »

ಕರಾವಳಿ

ಮಂಗಳೂರು: ಮಟ್ಕ ಚೀಟಿ ದಂಧೆ !!! ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಉರ್ವ ಪೊಲೀಸ್ ಥಾಣಾ ವ್ಯಾಪ್ತಿಯ ಉರ್ವಾ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕ ಚೀಟಿ ದಂದೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ, ಗಿರೀಶ್ ರೈ ವಾಮಂಜುರು ಎಂದು ತಿಳಿದುಬಂದಿದೆ. ಈ ಕುರಿತು ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.  

ಮಂಗಳೂರು: ಮಟ್ಕ ಚೀಟಿ ದಂಧೆ !!! ➤ ಮೂವರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ ➤ ಜಾಗ್ರತೆ ವಹಿಸಲು SP ಸೂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.18. ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್‌ ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ. ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ ನ್ನು

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ ➤ ಜಾಗ್ರತೆ ವಹಿಸಲು SP ಸೂಚನೆ Read More »

ಕರಾವಳಿ

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಪೊಲೀಸರು ಯಶಸ್ವಿಯಾಗಿದ್ದಾರೆ. ಕಣ್ಣೂರು ಅಡ್ಯಾರ್‌ ನಿವಾಸಿ ಹಸೈನಾರ್‌ ಆಲಿಯಾಸ್‌ ಹಸೈನ್‌(35) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಲೇಡಿಹಿಲ್‌ ಸಮೀಪ ಫ್ಲ್ಯಾಟ್‌ ಕಡೆಗೆ ಹೋಗುತ್ತಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಗೆ ಯುವತಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಎನ್ನಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು 4 ತಿಂಗಳ ಕಾರಾಗೃಹ ಶಿಕ್ಷೆ

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಜು.17. ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಸುಮಾರು ಒಂದೂವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2021 ರ ಡಿಸೆಂಬರ್ 13 ರಂದು ಪೇರಡ್ಕ ನಿವಾಸಿ ಸಾಜನ್ ಎಂಬವರ ಮನೆಯಿಂದ ಹಗಲಿನಲ್ಲಿ ಸುಮಾರು 41 ಗ್ರಾಂ. ಚಿನ್ನಾಭರಣವನ್ನು ಎಗರಿಸಿದ್ದರು. ಸಾಜನ್ ಎಂಬವರು ಸಂಜೆ ವೇಳೆಗೆ ಮನೆಗೆ ಬಂದಾಗ ಹಿಂಭಾಗದ ಬಾಗಿಲನ್ನು

ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು Read More »

ಕರ್ನಾಟಕ

ಉಪ್ಪಿನಂಗಡಿ: ಆ್ಯಕ್ಟಿವಾ ಹಾಗೂ ಪಿಕಪ್ ನಡುವೆ ಢಿಕ್ಕಿ – ಸವಾರ ಮೃತ್ಯು, ಸಹ ಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.09. ಪಿಕಪ್ ವಾಹನ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಉರುವಾಲು ಪದವು ಶುಂಠಿಪಲ್ಕೆ ನಿವಾಸಿ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಉಪ್ಪಿನಂಗಡಿ: ಆ್ಯಕ್ಟಿವಾ ಹಾಗೂ ಪಿಕಪ್ ನಡುವೆ ಢಿಕ್ಕಿ – ಸವಾರ ಮೃತ್ಯು, ಸಹ ಸವಾರೆ ಗಂಭೀರ Read More »

ಕರ್ನಾಟಕ
crime, arrest, suspected

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಮಾಲಕನೇ ಬೆಂಕಿ ಕೊಟ್ಟು ಕ್ರೂರವಾಗಿ ಕೊಂದಿರುವ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯಲ್ಲಿ ಕೆಲಸಕ್ಕಿದ್ದ ಜಗ್ಗು (35) ಎಂಬವರೇ ಮೃತ ದುರ್ದೈವಿ. ಶನಿವಾರದಂದು ಕ್ಷುಲ್ಲಕ ಕಾರಣಕ್ಕೆ ಅಂಗಡಿ ಮಾಲಕ ತೌಸೀಫ್ ಹುಸೈನ್ ಎಂಬಾತ ಜಗ್ಗುವನ್ನು ಕೊಲೆ‌ ಮಾಡುವ ಉದ್ದೇಶದಿಂದ ಬೆಂಕಿ‌ಕೊಟ್ಟಿದ್ದು, ಸುಟ್ಟ ದೇಹದೊಂದಿಗೆ ಚೀರಾಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಜಮಾಯಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವಿದ್ಯುತ್ ಶಾಕ್

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ Read More »

ಕರಾವಳಿ

ಗ್ಯಾರಂಟಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ – ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.09. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೂರು ಯೋಜನೆಗಳು ನೇರವಾಗಿ ಮಹಿಳೆಯರಿಗೆ ಘೋಷಿಸಿರುವ ರಾಜ್ಯ ಸರಕಾರವು ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರದ ವತಿಯಿಂದ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯರು, ದೇಶದ ಮೂರು ರಾಜ್ಯಗಳಲ್ಲಿ ಉದ್ಯೋಗಸ್ಥ ಹೆಣ್ಮಕ್ಕಳಿಗೆ ಮುಟ್ಟಿನ ರಜೆ

ಗ್ಯಾರಂಟಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ – ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

(ನ್ಯೂಸ್ ಕಡಬ) newskadaba.com ಚೆನ್ನೈ, ಜು.09. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಹೊರಬರಲಿದ್ದು, ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದ್ದು,

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ Read More »

ರಾಷ್ಟ್ರೀಯ ನ್ಯೂಸ್
Scroll to Top