ಮಂಗಳೂರು

ಕುಕ್ಕೆ ಸುಬ್ರಹ್ಮಣ್ಯ :ಹುಂಡಿ ಎಣಿಕೆ ವೇಳೆ ಹಣ ಎಗರಿಸಿದ ಮಹಿಳಾ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಡಿ.09: ಕಳೆದ ದಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಡಿ ಎಣಿಕೆ ಸಂದರ್ಭದಲ್ಲಿ ದೇಗುಲದ ಮಹಿಳಾ ನಿಬ್ಬಂದಿಯೋರ್ವರು ಹಣ ಎಗರಿಸಿ ಸಿಕ್ಕಿ ಬಿದ್ದ ಘಟನೆ ಡಿ.08 ರ ಮಂಗಳವಾರ ನಡೆದಿದೆ. ಪ್ರತಿ ಬಾರಿಯಂತೆ ಈ ಬಾರಿಯು ದೇವಸ್ಥಾನದ ಕೆಲ ಸಿಬ್ಬಂದಿ ಮತ್ತು ಕಾಲೇಜಿನ ವಿದ್ಯಾರ್ಥಿಗಳನ್ನು ದೇವರ ಕಾಣಿಕೆ ಹುಂಡಿ ಎಣಿಕೆಗೆ ನಿಯೋಜಿಸಲಾಗಿತ್ತು. ಅದರಂತೆ ದೇವಸ್ಥಾನದ ಗೌರಮ್ಮ ಎಂಬ ಮಹಿಳಾ ಸಿಬ್ಬಂದಿ ಹಣ ಕದ್ದು ಬಚ್ಚಿಟ್ಟುಕೊಳ್ಳುವಾಗ ಮತ್ತೊಬ್ಬ ಸಿಬ್ಬಂದಿಗೆ ಸಿಕ್ಕಿ ಬಿದ್ದಿದ್ದಾರೆ. ಈ […]

ಕುಕ್ಕೆ ಸುಬ್ರಹ್ಮಣ್ಯ :ಹುಂಡಿ ಎಣಿಕೆ ವೇಳೆ ಹಣ ಎಗರಿಸಿದ ಮಹಿಳಾ ಸಿಬ್ಬಂದಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪಡೀಲ್‌ನಲ್ಲಿ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ನಗರದ ಪಡೀಲ್ ಸಮೀಪ ಓಮ್ನಿ ಇಕೋ ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.   ಚಿಕ್ಕಮಗಳೂರು ಮೂಲದ ಸುಮಂತ್ (21) ಮೃತ ಬೈಕ್ ಸವಾರ. ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.  ಪಡೀಲ್ ಸಮೀಪದಲ್ಲಿ ಓಮ್ನಿ ಇಕೋ ಕಾರಿಗೆ ಸುಮಂತ್ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸುಮಂತ್ ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಗೆ ಎಸೆಯಲ್ಪಟ್ಟಿದ್ದರು.

ಪಡೀಲ್‌ನಲ್ಲಿ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ

ಪುತ್ತೂರು : ಸಹೋದರಿ ಮನೆಯಲ್ಲಿದ್ದ ಅವಿವಾಹಿತೆ ನಾಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.09: ಅವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ನಗರದ ಪರ್ಲಡ್ಕ ಎಂಬಲ್ಲಿನ ನಿವಾಸಿ ಶಾರದಾ (55) ನಾಪತ್ತೆಯಾದವರು. ಶಾರದಾ ಅವರು ಅವಿವಾಹಿತೆಯಾಗಿದ್ದು, ಕಳೆದ ಕೆಲ ಸಮಯಗಳಿಂದ ಸಾಲ್ಮರದಲ್ಲಿರುವ ಸಹೋದರಿ ಪುಷ್ಪಲತಾ ಎಂಬವರೊಂದಿಗೆ ವಾಸವಾಗಿದ್ದರು. ಸೋಮವಾರ ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ಹೋಗಿದ್ದ ಅವರು, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪುತ್ತೂರು : ಸಹೋದರಿ ಮನೆಯಲ್ಲಿದ್ದ ಅವಿವಾಹಿತೆ ನಾಪತ್ತೆ Read More »

ಕರಾವಳಿ

ಮಂಗಳೂರು : ಮದುವೆ ಮನೆಯಲ್ಲಿ ದಾಂದಲೆ ➤ ರೌಡಿಶೀಟರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: ನಗರದ ಪಡೀಲ್‌ ಸಮೀಪ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಮನೆಯೊಂದರಲ್ಲಿ ರೌಡಿಶೀಟರೊಬ್ಬ ವಿನಾಕಾರಣ ದಾಂಧಲೆ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.   ರೌಡಿಶೀಟರ್‌ ಗೌರೀಶ್‌ ಆರೋಪಿಯಾಗಿದ್ದು, ಆತನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೊಲೆ, ಕೊಲೆಯತ್ನ ಸೇರಿದಂತೆ ನಾನಾ ಪ್ರಕರಣಗಳಿವೆ.ಈ ಹಿಂದೆ ಪೊಲೀಸರಿಗೂ ಈತ ಹಲ್ಲೆಗೆ ಯತ್ನಿಸಿದ್ದ. ಈತ ಪಡೀಲ್‌ ಹೋಂಸ್ಟೇ ಬಳಿ ಮನೆಯೊಂದರಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿದ್ದ. ಈ ಸಂದರ್ಭ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ

ಮಂಗಳೂರು : ಮದುವೆ ಮನೆಯಲ್ಲಿ ದಾಂದಲೆ ➤ ರೌಡಿಶೀಟರ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಫೆ ಕಾಫಿ ಡೇ ನೂತನ ಸಿಇಒ ಆಗಿ ಮಾಳವಿಕ ಹೆಗ್ಡೆ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.08:ಕಾಫೀ ಡೇ ಎಂಟರ್ ಪ್ರೈಸಸ್ ಸಂಸ್ಥೆಯ ನೂತನ ಮುಖ್ಯ ಕಾರ್ಯ ನಿರ್ವಾಹಕ ಆಧಿಕಾರಿಯಾಗಿ( ಸಿಇಒ) ವಿ.ಜಿ. ಸಿದ್ಧಾರ್ಥ ಪತ್ನಿ ಮಾಳವಿಕಾ ಹೆಗ್ಡೆ ಅವರು ನೇಮಕಗೊಂಡಿದ್ದಾರೆ. ಕಳೆದ ವರ್ಷ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ್ ಹೆಗ್ಡೆ ಮಂಗಳೂರಿನಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ದಾರ್ಥ್ ನಿಧನದಿಂದ ತಾತ್ಕಾಲಿಕ ಅಧ್ಯಕ್ಷರಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ನೂತನ ಸಿಇಒ ಆಗಿ ಮಾಳವಿಕರನ್ನು ನೇಮಕಾತಿ ಮಾಡಲಾಗಿದೆ ಎಂದು ಸಂಸ್ಥೆ

ಕೆಫೆ ಕಾಫಿ ಡೇ ನೂತನ ಸಿಇಒ ಆಗಿ ಮಾಳವಿಕ ಹೆಗ್ಡೆ ನೇಮಕ Read More »

ಕರ್ನಾಟಕ

ಮಂಗಳೂರು – ಬೆಂಗಳೂರು ಸ್ಪೆಷಲ್ ಎಕ್ಸಪ್ರೆಸ್ ರೈಲು ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: ಕೋರೋನಾ ಬಳಿಕ ನಿಂತುಹೋಗಿದ್ದ ಮಂಗಳೂರು ಬೆಂಗಳೂರು ನಡುವಿನ ನಡುವೆ ಸ್ಪೆಷಲ್ ಎಕ್ಸ್ ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ. ಈ ರೈಲು ವಾರದಲ್ಲಿ ನಾಲ್ಕು ದಿನಗಳ ಪ್ರಯಾಣಿಕರಿಗೆ ಸೇವೆ ನೀಡಲಿದೆ. ಬೆಂಗಳೂರು ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್ ರೈಲು ಬೆಂಗಳೂರು ರೈಲ್ವೆ ನಿಲ್ದಾಣದಿಂದ ಪ್ರತಿ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿವೆ. ಈ ರೈಲು ಸೇವೆಯು ಡಿಸೆಂಬರ್ 8 ರಿಂದ 24 ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.

ಮಂಗಳೂರು – ಬೆಂಗಳೂರು ಸ್ಪೆಷಲ್ ಎಕ್ಸಪ್ರೆಸ್ ರೈಲು ಸೇವೆ ಆರಂಭ Read More »

ಕರಾವಳಿ

ಕಲ್ಲುಗುಡ್ಡೆ: ತುಳುನಾಡ ತುಡರ್ ಯುವಕ ಮಂಡಲ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.08: ಯುವಕ ಮಂಡಲಗಳು ಸಮಾಜದಲ್ಲಿ ತಪ್ಪುಗಳು ನಡೆದಾಗ, ಬೇರೆಯವರು ತಪ್ಪು ಮಾಡಿದಾಗ ಅವರನ್ನು ಸರಿ ದಾರಿಗೆ ಕೊಂಡೊಯ್ಯುವ ಕೆಲಸ ಮಾಡಬೇಕು. ದುಶ್ಚಟ ಮುಕ್ತ ಸಮಾಜ ನಿರ್ಮಾಣವಾಗುವಲ್ಲಿ ಯುವ ಜನತೆಯ ಪಾತ್ರ ಹೆಚ್ಚಿದೆ ಎಂದು ತುಳುನಾಡ ತುಡರ್ ಯುವಕ ಮಂಡಲದ ಗೌರವ ಸಲಹೆಗಾರ ಉಮೇಶ್ ಶೆಟ್ಟಿ ಸಾಯಿರಾಮ್ ಅವರು ಹೇಳಿದರು. ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಸಭಾಂಗಣದಲ್ಲಿ ರವಿವಾರ ನಡೆದ ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮ ವ್ಯಾಪ್ತಿಯಲ್ಲಿ ರಚನೆಗೊಂಡ

ಕಲ್ಲುಗುಡ್ಡೆ: ತುಳುನಾಡ ತುಡರ್ ಯುವಕ ಮಂಡಲ ಉದ್ಘಾಟನೆ Read More »

ಕರಾವಳಿ

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಶಾರೀಕ್ ಎಂಬಾತ ಪ್ರಮುಖ ಆರೋಪಿ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08:  ನಗರದ ಎರಡು ಕಡೆಗಳಲ್ಲಿ ಉಗ್ರರ ಪರವಾಗಿ ಗೋಡೆ ಬರಹ ಬರೆದ ಪ್ರಕರಣದಲ್ಲಿ ಮಹಮ್ಮದ್ ಶಾರೀಕ್ ಎಂಬಾತನೇ ಕಿಂಗ್ ಪಿನ್ ಆರೋಪಿ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ.   ಆರೋಪಿ ಶಾರೀಕ್ ವಿದೇಶಿ ಮೂಲದ ವ್ಯಕ್ತಿಯಿಂದ ಬ್ರೈನ್ ವಾಶ್ ಗೆ ಒಳಗಾಗಿದ್ದ‌. ಮತ್ತು ಆ ಮೂಲಕ ಜನರಲ್ಲಿ ಆತಂಕ ಮೂಡಿಸುವ ಕೆಲಸ ಮಾಡಲು ಪ್ರೇರಣೆ ಪಡೆದಿದ್ದ. ಈ ಕೃತ್ಯಕ್ಕೆ ತನ್ನೂರಿನ ಸ್ನೇಹಿತ ಮಾಝ್ ಮುನೀರ್ ಅಹ್ಮದ್ ಎಂಬಾತನನ್ನೂ ಸೇರಿಸಿಕೊಳ್ಳಲು ಪ್ರಯತ್ನಿಸಿದ್ದ. ಆದರೆ

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಶಾರೀಕ್ ಎಂಬಾತ ಪ್ರಮುಖ ಆರೋಪಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಕಲಚೇತನರ ರಿಯಾಯತಿ ಬಸ್ಸ್ ಪಾಸ್ ➤ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: 2021ನೇ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ/ನವೀಕರಣದ ವಿಕಲಚೇತನರರಿಯಾಯತಿ ಬಸ್ಸ್‍ಪಾಸ್‍ಗಾಗಿಆನ್‍ಲೈನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧೂ ಪೋರ್ಟಲ್‍ನಲ್ಲಿಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು2021ನೇ ಜನವರಿ 01ರಿಂದಡಿಸೆಂಬರ್ 31 ರವರೆಗೆ ಸಲ್ಲಿಸಬಹುದು.ಅರ್ಜಿಯನ್ನುಆನ್‍ಲೈನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನಅರ್ಜಿದಾರರುಆನ್‍ಲೈನಲ್ಲಿತಮ್ಮ ವಿವರಗಳನ್ನು ಭರ್ತಿಗೊಳಿಸಿ ಅಗತ್ಯ ದಾಖಲೆಗಳನ್ನು ಜೆ.ಪಿ.ಜೆಅಥವಾ ಪಿ.ಡಿ.ಎಫ್ ನಮೂನೆಯಲ್ಲಿಆನ್‍ಲೈನಲ್ಲಿ ಅಡಕಗೊಳಿಸುವುದು. ಬಸ್ ಪಾಸ್ ನವೀಕರಿಸಿ ಕೊಳ್ಳುವವರು ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪಾಸ್ ಕೌಂಟರ್‍ಗಳಲ್ಲಿ ಹಾಗೂ ಹೊಸದಾಗಿ ಪಾಸ್

ವಿಕಲಚೇತನರ ರಿಯಾಯತಿ ಬಸ್ಸ್ ಪಾಸ್ ➤ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ

ಪಿಜಕಳ : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶ್ರೀಮತಿ ಚೇತನಾರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಪಿಜಕಳ, ಡಿ.08:ಪಿಜಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಕುಮಾರಧಾರ ಯುವಕ ಮಂಡಲ ಪಿಜಕಳ, ಹಾಗೂ ಊರಿನ ವಿದ್ಯಾಭಿಮಾನಿಗಳ ಜಂಟಿ ಆಶ್ರಯದಲ್ಲಿ ಪಿಜಕಳ ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶ್ರೀಮತಿ ಚೇತನಾ ಇವರಿಗೆ ಬೀಳ್ಕೊಡುಗೆ ಸಮಾರಂಭ ಪಿಜಕಳ ಶಾಲಾ ಸಭಾಂಗಣ ದಲ್ಲಿ ದಿ.06ರಂದು ನಡೆಯಿತು. ಸಭಾ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮೋಹನ ಗೌಡ ಗೊಡಾಲು ವಹಿಸಿದರು. ಮುಖ್ಯ ಅಥಿತಿಗಳಾಗಿ -ರಾಮಕೃಷ್ಣ ಮಲ್ಲಾರ, ಪ್ರಧಾನ ಕಾರ್ಯದರ್ಶಿ ಶಿಕ್ಷಕರ ಸಂಘ,ನಾಗರಾಜ್ ಓ

ಪಿಜಕಳ : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶ್ರೀಮತಿ ಚೇತನಾರಿಗೆ ಬೀಳ್ಕೊಡುಗೆ Read More »

ಕರಾವಳಿ
Scroll to Top