ಮಂಗಳೂರು

ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.08: ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನರಾಗಿದ್ದಾರೆ.  ಅನೇಕ ವರ್ಷಗಳ ಕಾಲ ನಾಡಿನ‌ ವಿವಿಧ ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಪ್ರಾಧ್ಯಾಪಕ , ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ , ಪತ್ರಕರ್ತರಾಗಿ  ಉಡುಪಿ ಬಳಕೆದಾರರ ವೇದಿಕೆ ವಿಶ್ವಸ್ಥ, ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ , ಪ್ರತಿಷ್ಠಿತ ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆಗೆ ಶ್ರಮಿಸಿದ್ದ ಹಿರಿಯ ಸಾಮಾಜಿಕ ಧುರೀಣ ಕೆ ದಾಮೋದರ […]

ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನ Read More »

ಕರ್ನಾಟಕ

ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ ➤ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.08:ರಾಜ್ಯದಲ್ಲಿ ಗೋಹತ್ಯೆ ಹಾಗೂ ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ತರುವ ನಿಟ್ಟಿನಲ್ಲಿ ಸರಕಾರ ಬದ್ಧವಾಗಿದೆ. ಈಗಿನ ವಿಧಾನಸಭಾ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮಂಡನೆಯಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ, ಲವ್ ಜೆಹಾದ್ ನಿಷೇಧ ಬಗ್ಗೆ ಬಿಜೆಪಿ ಕಾರ್ಯಾಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದನ್ನು ಜಾರಿಗೊಳಿಸಲು ನಾವು ಬದ್ಧ ಎಂದರು.    

ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ ➤ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್ Read More »

ಕರಾವಳಿ

ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08:ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕುವೆಂಪು ಸಾಹಿತ್ಯ : ಪರಿಸರಯಾನ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಡಿಸೆಂಬರ್ 27 ರಿಂದ 29 ರವರೆಗೆ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಕುಪ್ಪಳ್ಳಿ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40ವರ್ಷದೊಳಗಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಡಿಸೆಂಬರ್ 11 ರೊಳಗೆ ಅರ್ಜಿ ಸಲ್ಲಿಸಬೇಕು.  ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ,

ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಭಾರತ ಬಂದ್ ಗೆ ಕಡಬದಲ್ಲಿ ನೀರಸ ಪ್ರತಿಕ್ರಿಯೆ,ಎಂದಿನಂತೆ ಜನಜೀವನ ➤ ಕ.ತಾಲೂಕು ರೈತ ಸಂಘದಿಂದ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.08: ಕೆಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟಗಳು ಕರ್ನಾಟಕದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈ ಪ್ರತಿಭಟನೆಯ ಬಿಸಿ ಕಡಬಕ್ಕೆ ತಟ್ಟಿಲ್ಲ. ಕಡಬ ತಾಲೂಕಿನ ರೈತ ಸಂಘದ ವತಿಯಿಂದ ವರ್ತರಲ್ಲಿ ಭಾರತ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು ಆದರೆ, ಕಡಬದಲ್ಲಿ ಎಂದಿನಂತೆ ಜನಜೀವನ ವಾಹನ ಸಂಚಾರ ಕಂಡು ಬಂದಿದ್ದು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ರೈತ ಸಂಘದಿಂದ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ

ಭಾರತ ಬಂದ್ ಗೆ ಕಡಬದಲ್ಲಿ ನೀರಸ ಪ್ರತಿಕ್ರಿಯೆ,ಎಂದಿನಂತೆ ಜನಜೀವನ ➤ ಕ.ತಾಲೂಕು ರೈತ ಸಂಘದಿಂದ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ Read More »

ಕರಾವಳಿ

ಶಸ್ತ್ರಾಸ್ತ್ರಗಳ ಠೇವಣಿ ➤ ಪರಿಷ್ಕøತ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: 2020 ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದುಗ್ರಾಮ ಪಂಚಾಯಿತಿ ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹೊರತುಪಡಿಸಿ ಉಳಿದಂತೆ ಎಲ್ಲಾಗ್ರಾಮ ಪಂಚಾಯಿತಿಗಳಿಗೊಳಪಟ್ಟ ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಪರವಾನಿಗೆ ಹೊಂದಿರುವಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸುವಂತೆ ಜಿಲ್ಲಾಧಿಕಾರಿ ಡಾರಾಜೇಂದ್ರ ಕೆ.ವಿ ಪರಿಷ್ಕೃತವಾಗಿ ಆದೇಶಿಸಿದ್ದಾರೆ.   ಮಂಗಳೂರು ನಗರ ಪೊಲೀಸ್

ಶಸ್ತ್ರಾಸ್ತ್ರಗಳ ಠೇವಣಿ ➤ ಪರಿಷ್ಕøತ ಆದೇಶ Read More »

ಕರಾವಳಿ, ಕರ್ನಾಟಕ

ಪುತ್ತೂರು : ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.08: ಪುತ್ತೂರಿನ ಸೆಂಟ್ಯಾರ್ ಬಳಿ ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್ ಸಮೀಪ ಟೈಲ್ಸ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಳೆದ ದಿನ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಯತೀಶ್ ರವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು : ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ Read More »

ಕರಾವಳಿ

ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಹೃದಯಾಘಾತ ➤ ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ

(ನ್ಯೂಸ್ ಕಡಬ) newskadaba.com ಕಾಪು, ಡಿ.08: ಕಾಪುವಿನ ವಸತಿ ಸಂಕೀರ್ಣವೊಂದರಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಯೋರ್ವರು ಹೃದಯಾಘಾತದಿಂದ ಮೃತ ಪಟ್ಟ ಘಟನೆ ಒಂದು ವಾರದ ಬಳಿಕ ಬೆಳಕಿಗೆ ಬಂದಿದೆ.ಕಾಪುವಿನ ಕಾಪುವಿನ ಸಿಟಿ ಸಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಯಾರ ಜೊತೆಗೆ ಬೆರೆಯುತ್ತಿರಲಿಲ್ಲ, ತಾನಯ್ತು ತನ್ನ ಕೆಲಸವಾಯ್ತು ಎಂಬಂತೆ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗಿನ ಜಾವ ಅವರ ರೂಮಿನಿಂದ ಕೆಟ್ಟ ವಾಸನೆ ಹೊರ ಬರುತ್ತಿದ್ದದ್ದನ್ನು ಗಮನಿಸಿದ ಪಕ್ಕದ ಕೋಣೆಯ ನಿವಾಸಿಗಳು ಕಾಪು ಪೋಲಿಸರಿಗೆ ತಿಳಿಸಿದ್ದಾರೆ. ಕಾಪು

ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಹೃದಯಾಘಾತ ➤ ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ Read More »

ಕರಾವಳಿ

ಮೂಡುಬಿದಿರೆ :ಪಾಳು ಬಿದ್ದ ಕಟ್ಟಡದಲ್ಲಿ ನೇಣಿಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಡಿ.08: ಯುವಕನೋರ್ವ ಡಿ.07 ರ ಸಂಜೆ ಮನೆ ಸಮೀಪದ ಪಾಳುಬಿದ್ದ ಕಟ್ಟಡದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ.     ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಶಿರ್ತಾಡಿ ಪೇಟೆಯ ಮೆಡಿಕಲ್ ನಲ್ಲಿ ಉದ್ಯೋಗಿಯಾಗಿದ್ದು, ಕೆಲಸ ಮುಗಿದ ಬಳಿಕ ಸಂಜೆ ನಾಲ್ಕು ಗಂಟೆಗೆ ಮನೆಗೆ ಬಂದಿದ್ದ. ಬಳಿಕ ಮನೆ ಪರಿಸರದಲ್ಲಿ ಸುತ್ತಾಡಿ ಬರುವೆನ್ನೆಂದು ಹೇಳಿ ಹೋಗಿದ್ದ. ರಾತ್ರಿ ವೇಳೆಗೆ ಸಂದೀಪ್ ಮನೆಗೆ ಮನೆಗೆ ಬಾರದಿರುವುದನ್ನು

ಮೂಡುಬಿದಿರೆ :ಪಾಳು ಬಿದ್ದ ಕಟ್ಟಡದಲ್ಲಿ ನೇಣಿಗೆ ಶರಣಾದ ಯುವಕ Read More »

ಕರಾವಳಿ

ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಸುಳ್ಯ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮಿ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.08: ಈಗಾಗಲೇ ಗ್ರಾಮ ಪಂಚಾಯತ್ ಚುನಾವಣೆ ಹತ್ತಿರವಾಗುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಯಕ್ಕೆ ಹೊಸ ತಹಶೀಲ್ದಾರ್ ರನ್ನು ನೇಮಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಸುಳ್ಯ ತಹಶೀಲ್ದಾರ್ ಅನಂತಶಂಕರ್ ರವರು ಕಡಬ ತಹಶೀಲ್ದಾರ್ ಆಗಿಯೂ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಶಾಖೆಯ ತಹಶೀಲ್ದಾರ್ ಆಗಿರುವ ಕು. ಅನಿತಾಲಕ್ಷ್ಮಿ ಅವರನ್ನು ಸುಳ್ಯ ತಹಶೀಲ್ದಾರ್ ಆಗಿ ನೇಮಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು

ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಸುಳ್ಯ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮಿ ನೇಮಕ Read More »

ಕರಾವಳಿ

ಬೆಳ್ತಂಗಡಿ :ಏಣಿಯಿಂದ ಕಾಲುಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.08:  ಮನೆಯ ಮಹಡಿ ಹತ್ತುವ ವೇಳೆ ಏಣಿಯಿಂದ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಾಯಗೊಂಡಿದ್ದ ಸುಲೇಮಾನ್ (34) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ಘಟನೆ ಭಾನುವಾರ ನಡೆದಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರಿಯರರನ್ನು ಅಗಲಿದ್ದಾರೆ.  

ಬೆಳ್ತಂಗಡಿ :ಏಣಿಯಿಂದ ಕಾಲುಜಾರಿ ಬಿದ್ದು ಮೃತ್ಯು Read More »

ಕರಾವಳಿ
Scroll to Top