ಮಂಗಳೂರು

ನೂಜಿಬಾಳ್ತಿಲ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮನವಿ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಡಿ. 03: ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.   ನೂಜಿಬಾಳ್ತಿಲ ಗ್ರಾಮ ಹಾಗೂ ರೆಂಜಿಲಾಡಿ ಗ್ರಾಮ ಸಮಿತಿ ವಿಶ್ವ ಹಿಂದೂ ಪರಿಷತ್ ಭಜರಂಗ ದಳದ ವತಿಯಿಂದ ಪ್ರತ್ಯೇಕ ಮನವಿಯನ್ನು ನೂಜಿಬಾಳ್ತಿಲ ಗ್ರಾ.ಪಂ. ಪಿಡಿಒ ಆನಂದ ಎ. ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು […]

ನೂಜಿಬಾಳ್ತಿಲ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮನವಿ Read More »

ಕರಾವಳಿ

ಬಂಟ್ವಾಳ ಪೊಲೀಸ್ ಠಾಣೆ ➤ ನಿರುಪಯುಕ್ತ ವಾಹನಗಳ ಬಹಿರಂಗ ಹರಾಜು ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಸ್ವಾದೀನಪಡಿಸಿಕೊಂಡಿರುವ 7 ನಿರುಪಯುಕ್ತ ವಾಹನಗಳ ಬಹಿರಂಗ ಹರಾಜು ನಡೆಯಲಿದೆ. 7 ನಿರುಪಯುಕ್ತ ವಾಹನಗಳಾದKA-19-K4107 ಹೀರೋ ಹೋಂಡಾ ಮೋಟಾರ್ ಸೈಕಲ್, KA-19-J-6402 ಮೋಟಾರ್ ಸೈಕಲ್, ಸಿಆರ್‍ಎಕ್ಸ್-6831 ಮೋಟಾರು ಸೈಕಲ್, KA-50-KA-4813 ಪಲ್ಸರ್ 180 ಮೋಟಾರು ಸೈಕಲ್, KA-03-EA-3812 ಮೋಟಾರು ಸೈಕಲ್, KA-20-S-4815 ಮೋಟಾರು ಸೈಕಲ್-1, ವಾಹನಗಳನ್ನು ಬಂಟ್ವಾಳ ಎ.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಆದೇಶದಂತೆ ಡಿಸೆಂಬರ್ 28ರಂದು ಬೆಳಿಗ್ಗೆ 11 ಕ್ಕೆ ಬಂಟ್ವಾಳ

ಬಂಟ್ವಾಳ ಪೊಲೀಸ್ ಠಾಣೆ ➤ ನಿರುಪಯುಕ್ತ ವಾಹನಗಳ ಬಹಿರಂಗ ಹರಾಜು ಪ್ರಕಟಣೆ Read More »

ಕರಾವಳಿ

ಕನಸು-ಆಕಾಂಕ್ಷೆಗಳಿಂದ ಕೂಡಿದ ಪರಿಶ್ರಮದಿಂದ ಶ್ರೇಷ್ಠ ಉದ್ಯಮಿಗಳಾಗಲು ಸಾಧ್ಯ ➤ ಶಾಸಕ ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03 :ಬಲಿಷ್ಠ ಕನಸು- ಆಕಾಂಕ್ಷೆಗಳಿಂದ ಕೂಡಿದ ಪರಿಶ್ರಮಗಳ ಮೂಲಕ ಶ್ರೇಷ್ಠ ಉದ್ಯಮಿಗಳಾಗಲು ಸಾಧ್ಯ. ಸ್ವ ಉದ್ಯೋಗದ ಮೂಲಕವೇ ಆರ್ಥಿಕ ಸ್ವಾವಲಂಭಿಗಳಾಗಬಹುದು ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಸಂಕಲ್ಪ ಯೋಜನೆ ಆಯ್ದ ಜಿಲ್ಲೆಗಳಿದ್ದು ದಕ್ಷಿಣ ಕನ್ನಡದ ಸ್ವ ಉದ್ಯೋಗಾಕಾಂಕ್ಷಿಗಳು ತರಬೇತಿಯ ಸಂಪೂರ್ಣ ಸದುಪಯೋಗ ಪಡೆದು ಕ್ರಿಯಾಶೀಲ ಹಾಗೂ ಮಾದರಿ ಉದ್ಯಮಿಗಳಾಗಿ ಮೂಡಿ ಬರಬೇಕೆಂದು ಕರೆ ನೀಡಿದರು. ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಿಡಾಕ್

ಕನಸು-ಆಕಾಂಕ್ಷೆಗಳಿಂದ ಕೂಡಿದ ಪರಿಶ್ರಮದಿಂದ ಶ್ರೇಷ್ಠ ಉದ್ಯಮಿಗಳಾಗಲು ಸಾಧ್ಯ ➤ ಶಾಸಕ ವೇದವ್ಯಾಸ್ ಕಾಮತ್ Read More »

ಕರಾವಳಿ

ಮಂಗಳೂರು : ಮೀನು ಮಾರುಕಟ್ಟೆಯಲ್ಲಿ ಆಟಿಕೆಯ ನೋಟು ನೀಡಿ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಮೀನು ಮಾರುಕಟ್ಟೆಯಲ್ಲಿ ವ್ಯಕ್ತಿಯೋರ್ವ ಮೀನು ಮಾರಾಟ ಮಾಡುತ್ತಿದ್ದ ಮಹಿಳೆಯರಿಗೆ 100 ರೂ. ಹಾಗೂ 200 ರೂ. ಮುಖಬೆಲೆಯ ನೋಟುಗಳನ್ನು ನೀಡಿ ವಂಚನೆ ಮಾಡಿದ ಬಗ್ಗೆ ಮಹಿಳೆಯರು ದೂರಿದ್ದಾರೆ.     ವಂಚಕ ವ್ಯಕ್ತಿಯು ಮೀನು ವ್ಯಾಪಾರ ಮಾಡಿ ನೂರು ರೂಪಾಯಿಯ 5 ನೋಟುಗಳಲ್ಲಿ ಆಟಿಕೆಯ ನೋಟನ್ನು ಇಟ್ಟು ಮಹಿಳೆಯರಿಗೆ ಮೋಸ ಮಾಡಿದ್ದಾನೆ. ಹಾಗೆ ಕೆಲದಿನಗಳ ಹಿಂದೆ ಇನ್ನೊಬ್ಬ ವ್ಯಕ್ತಿ ಬಂದು ಮೀನು ತೆಗೆದುಕೊಂಡು

ಮಂಗಳೂರು : ಮೀನು ಮಾರುಕಟ್ಟೆಯಲ್ಲಿ ಆಟಿಕೆಯ ನೋಟು ನೀಡಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಸಿದ್ದಾರೆ. ಉಗ್ರರ ಪರ ಗೋಡೆಯಲ್ಲಿ ಬರೆದ ಶಂಕಿತನ‌ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಚರಣೆ ನಡೆಸಿದ ಮಂಗಳೂರು ಕದ್ರಿ ಠಾಣೆ ಪೊಲೀಸರು ಮಹಮ್ಮದ್ ನಝೀರ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. ಬಂಧಿತನಾದ ಈತ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದವನು ಎಂದು ತಿಳಿದು ಬಂದಿದೆ. ಮೊಬೈಲ್ ಟವರ್ ಲೊಕೇಶನ್ ಆಧಾರದಲ್ಲಿ ಈತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  

ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.!

(ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಡಿ. 03: ಚಿಕ್ಕಮಂಗಳೂರು ತಾಲೂಕಿನ ಹಿರೇಗೌಡ ಸಮೀಪ ಕಳೆದ ದಿನ ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಂದು ಎಎಸ್ಸೈ ಆಗಿ ಪದೋನ್ನತಿ ಆಗಬೇಕಿದ್ದ ಪೊಲೀಸ್ ಮುಖ್ಯ ಪೇದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಿದ್ದರಾಮಪ್ಪ ಎಂದು ಗುರುತಿಸಲಾಗಿದೆ.     ಮೂಲತ: ಅಜ್ಜಂಪುರ ತಾಲೂಕಿನ ತಮ್ಮಟಹಳ್ಳಿ ನಿವಾಸಿಯಾಗಿದ್ದ ಇವರು ಸತತ 25 ವರ್ಷ ಕಾಲ ಸೇವೆ ಸಲ್ಲಿಸಿದ್ದು, ಕಳೆದ ದಿನ ಕರ್ತವ್ಯ ಮುಗಿಸಿ ಸಖರಾಯಪಟ್ಟಣದಿಂದ ಚಿಕ್ಕಮಂಗಳೂರಿಗೆ ಬರುತ್ತಿದ್ದ

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ

(ನ್ಯೂಸ್ ಕಡಬ) newskadaba.com ರಾಯಚೂರು ಡಿ. 03: ಕೃಷ್ಣ ನದಿಗೆ ನೀರು ಕುಡಿಯಲು ಹೋದ ಬಾಲಕನನ್ನು ಮೊಸಳೆ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ರಾಯಚೂರಿನ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.ಬುಧವಾರದಂದು ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ಕೃಷ್ಣ ನದಿ ದಂಡೆಯತ್ತ ಹೋಗಿದ್ದ. ಮಧ್ಯಾಹ್ನದ ವೇಳೆ ಗೆಳೆಯರು ಎಲ್ಲ ಗೆಳೆಯರು ಸೇರಿಕೊಂಡು ಊಟ ಮಾಡಿದ್ದಾರೆ. ಊಟ ಮಾಡಿದ ಬಳಿಕ ಬಾಯಾರಿಕೆಯಾದ ಹಿನ್ನೆಲೆ ಕೃಷ್ಣ ನದಿಯಲ್ಲಿ ನೀರು‌ ಕುಡಿಯಲು ಮಲ್ಲಿಕಾರ್ಜುನ ನೀರಿಗೆ ಇಳಿದಿದ್ದಾನೆ. ಈ

ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ Read More »

ಕರ್ನಾಟಕ

ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 03: ಉಡುಪಿ ಜಿಲ್ಲೆಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಸುನಿಲ್ ಎಂದು ಗುರುತಿಸಲಾಗಿದೆ.     ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹಿಂದಿರುಗುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸುನೀಲ್ ರವರು ಬಸ್ಸಿನ ಚಕ್ರಕ್ಕೆ ಸಿಲುಕಿ ಧಾರುಣವಾಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ

ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ➤ ಸ್ಟೋನ್ಸ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಹೇಮಂತ್

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 03: ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್, ನರಹರಿ, ಬೋಳಿಯಾರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಅವ್ಯಾಹತವಾಗಿ ಅಕ್ರಮ ಕಲ್ಲು ಸಾಗಾಟ ನಡೆಯುತ್ತಿದ್ದು ತಕ್ಷಣವೇ ಅದನ್ನ ರದ್ದುಗೊಳಿಸುವಂತೆ ಸ್ಟೋನ್ಸ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಹೇಮಂತ್ ಕುಮಾರ್ ಒತ್ತಾಯಿಸಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಹಾಗೂ ಸ್ಟೋನ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಅಕ್ರಮವಾಗಿ ಗಣಿಗಾರಿಕೆ ನಡೆದು ಕೇರಳಕ್ಕೆ ಕಲ್ಲು ಸಾಗಾಟವಾಗುತ್ತಿದ್ದರೂ ಅಧಿಕಾರಿಗಳು ಮೌನವಹಿಸಿದ್ದಾರೆ. ಇದನ್ನ ಗಮನಿಸಿದರೆ ಅಧಿಕಾರಿಗಳು ಕೂಡಾ

ಮಂಗಳೂರು: ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ➤ ಸ್ಟೋನ್ಸ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಹೇಮಂತ್ Read More »

ಕರಾವಳಿ

ಬದಿಯಡ್ಕ: ಡಿ.23ಕ್ಕೆ ವಿವಾಹ ನಿಗದಿಯಾಗಿದ್ದ ಯುವಕ ಅಪಘಾತದಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಬದಿಯಡ್ಕ ಡಿ. 03: ಡಿಸೆಂಬರ್ 23ರಂದು ವಿವಾಹ ನಿಗದಿಯಾಗಿದ್ದ ಬದಿಯಡ್ಕ ನಿವಾಸಿಯೋರ್ವರು ಬೆಂಗಳೂರಿನಲ್ಲಿ ಅಪಘಾತ ಸಂಭವಿಸಿ ಮೃತಪಟ್ಟ ಘಟನೆ ನಡೆದಿದೆ. ಬದಿಯಡ್ಕ ಕರಿಂಬಿಲ ನಿವಾಸಿ ಪ್ರವೀಣ್ ಕುಮಾರ್ ಪ್ರಭು (29) ಮೃತ ದುರ್ದೈವಿ. ಪ್ರವೀಣ್ ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ಇಲೆಕ್ಟ್ರಿಕಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು ಎಂದು ತಿಳಿದು ಬಂದಿದೆ. ಬಳಿಕ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ

ಬದಿಯಡ್ಕ: ಡಿ.23ಕ್ಕೆ ವಿವಾಹ ನಿಗದಿಯಾಗಿದ್ದ ಯುವಕ ಅಪಘಾತದಲ್ಲಿ ಮೃತ್ಯು Read More »

ಕರಾವಳಿ
Scroll to Top