ಮಂಗಳೂರು

ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಡಿ. 01: ಹೊಸ ಕೆ.ಎಸ್.ಆರ್.ಟಿ.ಸಿ ಬಸ್ಸು ತಂಗುದಾಣದ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಯುವಕ ನೋರ್ವನನ್ನು ವಶಕ್ಕೆ ಪಡೆದ ಪೊಲೀಸರು ,ಆತನಿಂದ  750 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿ ಧರ್ಮಸ್ಥಳ ಪೊಸೊಳಿಕೆ ನಿವಾಸಿ ಮಂಜುನಾಥ ಆಲಿಯಾಸ್ ಮಂಜು( 29) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷ ಚಂದ್ರಶೇಖರ ಕೆ. ಹಾಗೂ ಸಿಬಂದಿ ಗಸ್ತು ನಡೆಸುತ್ತಿದ್ದಾಗ ಮಂಜುನಾಥ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ […]

ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಣಿಯಲ್ಲಿ ರಸ್ತೆಗೆ ಉರುಳಿದ ಲಾರಿ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಾಣಿ ಡಿ. 01: ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿಯಲ್ಲಿ ಮುಗುಚಿ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಬೆಂಗಳೂರಿನಿಂದ ಮಂಗಳೂರಿಗೆ ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮುಗುಚಿದ ಪರಿಣಾಮ ಅಪಘಾತ ಸಂಭವಿಸಿದೆ. ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ.    

ಮಾಣಿಯಲ್ಲಿ ರಸ್ತೆಗೆ ಉರುಳಿದ ಲಾರಿ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರಾವಳಿ

ಕೌಡಿಚಾರು: ಬೈಕ್ ಅಪಘಾತ ➤ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕೌಡಿಚಾರು, ಡಿ. 01: ಇತ್ತೀಚೆಗೆ ಪುತ್ತೂರು ತಾಲ್ಲೂಕಿನ ಕೌಡಿಚ್ಚಾರ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪ್ರವೀಣ್(39) ಎಂದು ಗುರುತಿಸಲಾಗಿದೆ.   ಬೈಕ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದಗಾ ಪುತ್ತೂರು ತಾಲೂಕಿನ ಕೌಡಿಚ್ಚಾರ್ ಬಳಿ ದನ ಅಡ್ಡಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಉರುಳಿ ಬಿದ್ದ ಪರಿಣಾಮದಿಂದಾಗಿ ಪ್ರವೀಣ್ ರವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದರು

ಕೌಡಿಚಾರು: ಬೈಕ್ ಅಪಘಾತ ➤ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು Read More »

ಕರಾವಳಿ

ಮಣಿಪಾಲ ಸಮೀಪ ಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿ ➤ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಣಿಪಾಲ ಡಿ. 01: ದುಗ್ಲಿ ಪದವು ಎಂಬಲ್ಲಿ ತಡರಾತ್ರಿ ಸುಮಾರಿಗೆ ಬೆಂಕಿಬಿದ್ದಿದ್ದು ಬಹಳಷ್ಟು ಆಸ್ತಿಪಾಸ್ತಿ ನಷ್ಟವಾಗುವುದು ಯುವಕರ ಸಮಯಪ್ರಜ್ಞೆಯಿಂದ ತಪ್ಪಿದೆ. ಕಳೆದ ದಿನ ಹತ್ತು ಗಂಟೆ ಸುಮಾರಿಗೆ ಮಣಿಪಾಲ ಅಲೆವೂರು ರಸ್ತೆಯ ದುಗ್ಲಿ ಪದವು ಎಂಬಲ್ಲಿ ಆಕಸ್ಮಿಕ ಬೆಂಕಿಬಿದ್ದಿದೆ. ಈ ಪ್ರದೇಶದಲ್ಲಿ ಬಹಳಷ್ಟು ಜನವಸತಿ ಇದ್ದು 10.30 ಗಂಟೆಗೆ ಬೆಂಕಿಬಿದ್ದಾಗ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರರಾದ ಅಲೆವೂರಿನ ಜಲೇಶ್ ಶೆಟ್ಟಿ ಮತ್ತು ಕುಕ್ಕಿಕಟ್ಟೆಯ ನವೀನ್ ಸೇರಿಗಾರ್ ಕೂಡಲೇ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ.

ಮಣಿಪಾಲ ಸಮೀಪ ಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿ ➤ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರಾವಳಿ

ಉಳ್ಳಾಲ : ರಸ್ತೆ ದಾಟುತ್ತಿದ್ದಾಗ ಮಗುವಿನ ಮೇಲೆ ಚಲಿಸಿದ ಟ್ಯಾಂಕರ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 01: ಉಳ್ಳಾಲದಲ್ಲಿ ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಚಲಿಸಿದ ಪರಿಣಾಮ ನಾಲ್ಕು ವರ್ಷದ ಮಗು ಗಂಭೀರ ಗಾಯಗೊಂಡಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.   ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ವಾಸವಿದ್ದ ನಾಲ್ಕು ವರ್ಷದ ಕೃಷ್ಣ ಎಂಬ ಮಗು ಗಂಭೀರವಾಗಿ ಗಾಯಗೊಂಡಿದೆ. ಮಗು ತನ್ನ ತಾಯಿ ಚಿಕ್ಕಮ್ಮ ಹಾಗೂ ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಬರುತ್ತಿದ್ದ ನೀರಿನ ಟ್ಯಾಂಕರ್,

ಉಳ್ಳಾಲ : ರಸ್ತೆ ದಾಟುತ್ತಿದ್ದಾಗ ಮಗುವಿನ ಮೇಲೆ ಚಲಿಸಿದ ಟ್ಯಾಂಕರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ : ಕೃಷ್ಣಾ ಮಠದ ಪೂರ್ವಭಾವಿ ಬಾಳೆ ಮುಹೂರ್ತ ಸಂಭ್ರಮ

(ನ್ಯೂಸ್ ಕಡಬ) newskadaba.com ಉಡುಪಿ ನ. 30: ಉಡುಪಿಯ‌ ಅಷ್ಟಮಠಗಳಲ್ಲೊಂದಾದ ಕೃಷ್ಣಾಪುರ ಮಠದ‌ ಶ್ರೀವಿದ್ಯಾಸಾಗರತೀರ್ಥ‌‌ ಶ್ರೀಪಾದರು 2022, ಜ.18ರಂದು ನಾಲ್ಕನೇ ಬಾರಿ ಪರ್ಯಾಯ ಪೀಠಾರೋಹಣ ಮಾಡಲಿದ್ದಾರೆ. ಇದರ ಪೂರ್ವಭಾವಿಯಾಗಿ ನಾಲ್ಕರಲ್ಲಿ ಮೊದಲ‌ ಮುಹೂರ್ತವಾಗಿ ಬಾಳೆ ಮುಹೂರ್ತವು ಸೋಮವಾರ ಬೆಳಗ್ಗೆ ನೆರವೇರಿದ್ದು, ಈ ಕಾರ್ಯಕ್ರಮದಲ್ಲಿ ಕೃಷ್ಣಾಪುರ ಮಠದ ಶ್ರೀ‌ವಿದ್ಯಾಸಾಗರತೀರ್ಥ ಶ್ರೀಪಾದರು, ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ಕೆ.ರಘುಪತಿ ಭಟ್ ಮತ್ತಿತರರ ಉಪಸ್ಥಿತಿಯಲ್ಲಿ ನಡೆಯಿತು.

ಉಡುಪಿ : ಕೃಷ್ಣಾ ಮಠದ ಪೂರ್ವಭಾವಿ ಬಾಳೆ ಮುಹೂರ್ತ ಸಂಭ್ರಮ Read More »

ಕರಾವಳಿ

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 30: ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಅಪ್ಪದ ಸೇವೆ ಹಾಗೂ ಭಜನಾ ಕಾರ್ಯಕ್ರಮ ಇಂದು ನಡೆಯಿತು.     ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು. ಅವರೊಂದಿಗೆ ತಾ.ಪಂ ಮಾಜಿ ಸದಸ್ಯ ವೆಂಕಟೇಶ ನಾವಡ ಮತ್ತಿತರರು ಉಪಸ್ಥಿತರಿದ್ದರು.  

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಭಜನಾ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ‘ಸ್ಕಾಲರ್ ಶಿಪ್ ಕೊಡಿ’ ಆಂದೋಲನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 30: ಸರಕಾರದ ಸ್ಕಾಲರ್ ಶಿಪ್ ವಿಳಂಬ ನೀತಿಗೆ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತ ವಿಚಾರ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನಗರದ ಪಾಂಡೇಶ್ವರ ಬಳಿ ಇರುವ ಅಲ್ಪಸಂಖ್ಯಾತರ ಭವನ‌ ಮುಂಭಾಗ ಧರಣಿ ನಡೆಸಿದರು. ನಗರದ ಸ್ಟೇಟ್ ಬ್ಯಾಂಕ್ ನಿಂದ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಅಲ್ಪಸಂಖ್ಯಾತರ ಭವನ ಮುಂಭಾಗ ‘ಸ್ಕಾಲರ್ ಶಿಪ್ ಕೊಡಿ’ ಹೆಸರಿನಡಿ ಧರಣಿ ನಡೆಸಿದರು. ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆ ಕೂಗಿ

ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ‘ಸ್ಕಾಲರ್ ಶಿಪ್ ಕೊಡಿ’ ಆಂದೋಲನ Read More »

ಕರಾವಳಿ

ಮಂಗಳೂರು: “ಅನ್ವೇಷಣಾ” ರಿಸರ್ಚ್ ಫೋರಂ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 30: ಆಳ್ವಾಸ್ ಪದವಿ ಕಾಲೇಜಿನ ಬಿ.ಎಸ್.ಡಬ್ಲೂ ಹಾಗೂ ಫುಡ್ ಆಯಂಡ್ ನ್ಯೂಟ್ರೀಷನ್ ವಿಭಾಗದ ವತಿಯಿಂದ ”ಅನ್ವೇಷಣಾ” ರಿಸರ್ಚ ಫೋರಂ ಉದ್ಘಾಟನಾ ಕಾರ್ಯಕ್ರಮವು ಸುಂದರಿ ಆನಂದ ಆಳ್ವ ಕ್ಯಾಂಪಸ್‍ನಲ್ಲಿ ಜರುಗಿತು.     ಆಳ್ವಾಸ್ ಕಾಲೇಜಿನ ಸಂಶೋಧನಾ ವಿಭಾಗದ ಸಂಯೋಜಕ ಡಾ. ಸುಕೇಶ್, ಸಂಶೋಧನೆಯ ಹಲವು ಆಯಾಮಗಳ ಬಗ್ಗೆ ಮಾಹಿತಿ ನೀಡಿದರು. ಸಂಶೋಧನೆಯ ಕೌಶಲ್ಯ ತರಗತಿಯಲ್ಲಿ ಪಾಠ ಕೇಳುವುದರಿಂದ ಬರುವುದಲ್ಲ, ಪರಸ್ಪರ ಚರ್ಚಿಸಿ ಪ್ರಶ್ನೆಗಳು ಹುಟ್ಟಿಕೊಂಡಾಗ, ಉತ್ತರವನ್ನು ಸಂಶೋಧನೆಯ ಮೂಲಕ ಕಂಡುಕೊಳ್ಳಲು ವಿದ್ಯಾರ್ಥಿಗಳು

ಮಂಗಳೂರು: “ಅನ್ವೇಷಣಾ” ರಿಸರ್ಚ್ ಫೋರಂ ಉದ್ಘಾಟನೆ Read More »

ಕರಾವಳಿ

ಮಂಗಳೂರು: ತಮ್ಮದೇ ಮೀನಿನ ಬಲೆಯಲ್ಲಿ ಸಿಲುಕಿ ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು ನ. 30: ಕಳೆದ ದಿನ ಬೈಕಂಪಾಡಿ ಬಳಿ ಸಮುದ್ರದಲ್ಲಿ ಮೀನುಗಾರನು ಮೀನು ಹಿಡಿಯಲು ಹರಡುತ್ತಿದ್ದ ಬಲೆಗೆ ಸಿಕ್ಕಿಹಾಕಿಕೊಂಡ ದುರಂತ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ(32) ಎಂದು ಗುರುತಿಸಲಾಗಿದೆ.     ಮೀನಿಗೆ ಬಲೆ ಹಾಕುವ ಸಂದರ್ಭದಲ್ಲಿ ಬಲೆಗೆ ಅವರ ಕಾಲು ಬೆರಳು ಸಿಲುಕಿದ್ದು, ಅವರು ನೀರಿಗೆ ಬಿದ್ದು ಮುಳುಗಿದ್ದಾರೆ. ಇವರು ಸಿಕ್ಕಿಹಾಕಿಕೊಂಡಿದ್ದರಿಂದ ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ. ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಆತನ

ಮಂಗಳೂರು: ತಮ್ಮದೇ ಮೀನಿನ ಬಲೆಯಲ್ಲಿ ಸಿಲುಕಿ ಮೀನುಗಾರ ಮೃತ್ಯು Read More »

ಕರಾವಳಿ
Scroll to Top