ಮಂಗಳೂರು

ಉಡುಪಿ: ಅಸ್ವಸ್ಥ ಸ್ಥಿತಿಯಲ್ಲಿದ್ದ ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರ ➤ ವಾರೀಸುದಾರರು ಸಂಪರ್ಕಿಸುವಂತೆ ಸಮಾಜಸೇವಕರ ಸೂಚನೆ

(ನ್ಯೂಸ್ ಕಡಬ) newskadaba.com ಉಡುಪಿ ನ. 30: ನಗರದ ಕಿದಿಯೂರು ಹೋಟೆಲ್ ಬಳಿಯ ರಸ್ತೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.   ರೋಗಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಸರು ವಿಳಾಸ ತಿಳಿದು ಬಂದಿಲ್ಲ. ವಾರೀಸುದಾರರು ತುರ್ತಾಗಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ನಿತ್ಯಾನಂದ ಒಳಕಾಡು ಮನವಿ ಮಾಡಿದ್ದಾರೆ.ಕಾರ್ಯಾಚರಣೆಗೆ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಮಹಿಳಾ ಸೆಕ್ಯೂರಿಟಿ ಗಾರ್ಡ್ ಶ್ರುತಿ ಸಹಕರಿಸಿದರು.  

ಉಡುಪಿ: ಅಸ್ವಸ್ಥ ಸ್ಥಿತಿಯಲ್ಲಿದ್ದ ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರ ➤ ವಾರೀಸುದಾರರು ಸಂಪರ್ಕಿಸುವಂತೆ ಸಮಾಜಸೇವಕರ ಸೂಚನೆ Read More »

ಕರಾವಳಿ

ಉಡುಪಿ : ದೊಂದಿ ಬೆಳಕಿನ ತೆಪ್ಪೋತ್ಸವ ಸಂಪನ್ನ

(ನ್ಯೂಸ್ ಕಡಬ) newskadaba.com ಉಡುಪಿ, ನ. 30: ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಕೃಷ್ಣಮಠದ ಲಕ್ಷ ದೀಪೋತ್ಸವ ಕೊನೆಯ ದಿನ ದೊಂದಿ ಬೆಳಕಿನ ತೆಪ್ಪೋತ್ಸವ ನಡೆಯುವುದರೊಂದಿಗೆ ಸಂಪನ್ನಗೊಂಡಿತು. ಲಕ್ಷದೀಪೋತ್ಸವ ,ತೆಪ್ಪೋತ್ಸವದೊಂದಿಗೆ ಉತ್ಸವಪ್ರಿಯ ಕೃಷ್ಣನಿಗೆ ನಿತ್ಯ ಉತ್ಸವಗಳು ನಡೆಯುವುದು ಸಂಪ್ರದಾಯ. ಮಳೆಗಾಲದ 4 ತಿಂಗಳು ಕೃಷ್ಣನಿಗೆ ಯಾವುದೇ ಉತ್ಸವಗಳು ನಡೆಯುವುದಿಲ್ಲ. ಇದೇ ಸಂದರ್ಭದಲ್ಲಿ ಶ್ರೀಗಳ ಚಾತುರ್ಮಾಸ್ಯ ವ್ರತವೂ ನಡೆಯುತ್ತದೆ. ಉತ್ಥಾನ ದ್ವಾದಶಿಯ ನಂತರ ದೇವರನ್ನು ಹೊರಗೆ ತಂದು ಮತ್ತೆ ನಿತ್ಯವೂ ಉತ್ಸವಗಳನ್ನು ನಡೆಸಲಾಗುತ್ತದೆ. ರಥಬೀದಿಯಲ್ಲಿ ಲಕ್ಷದೀಪೋತ್ಸವ ಮತ್ತು ಮಧ್ವಸರೋವರದಲ್ಲಿ ದೊಂದಿ

ಉಡುಪಿ : ದೊಂದಿ ಬೆಳಕಿನ ತೆಪ್ಪೋತ್ಸವ ಸಂಪನ್ನ Read More »

ಕರಾವಳಿ, ಕರ್ನಾಟಕ

ಗೋಡೆ ಬರಹದ ಕಿಡಿಗೇಡಿಗಳನ್ನ ಬಂಧಿಸಲು ಯು ಟಿ ಖಾದರ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 30: ನಗರದಲ್ಲಿ ಗೋಡೆ ಬರಹ ಬರೆಯುವುದನ್ನ ತೀವ್ರವಾಗಿ ಖಂಡಿಸುತ್ತೇವೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ‌.ಖಾದರ್ ಹೇಳಿದ್ದಾರೆ. ಇದನ್ನ ಯಾರೇ ಆದರೂ ಸಹಿಸಲು ಯಾವುದೇ ಕಾರಣಕ್ಕೂ ಸಾದ್ಯವಿಲ್ಲ. ಇದರ ಪತ್ತೆ ಮಾಡುವದು ಬಿಜೆಪಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಜವಾಬ್ದಾರಿಯಾಗಿದೆ ಎಂದರು. ಆದಷ್ಟು ಬೇಗ ಇವರಿಗೆ ಬೆಂಬಲವಾಗಿರುವರನ್ನ ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ. ಗುಪ್ತಚರ ಇಲಾಖೆ ಏನು ಮಾಡ್ತಿದೆ ಎಂದು ಪ್ರಶ್ನಿಸಿದ ಅವರು ಮತ್ತೆ ಮತ್ತೆ ಹೀಗ್ಯಾಕೆ ಅಗ್ತಿದೆ ಎಂದಿದ್ದಾರೆ.

ಗೋಡೆ ಬರಹದ ಕಿಡಿಗೇಡಿಗಳನ್ನ ಬಂಧಿಸಲು ಯು ಟಿ ಖಾದರ್ ಆಗ್ರಹ Read More »

ಕರಾವಳಿ

ಕಡಬದಲ್ಲಿ ಇಂದು ಶೂನ್ಯ ಕೊರೋನಾ

(ನ್ಯೂಸ್ ಕಡಬ) newskadaba.com ಕಡಬ ನ. 30: ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ ಇಂದು ಶೂನ್ಯ ಕೊರೋನಾ ಆದರೇ ಪುತ್ತೂರು ತಾಲೂಕಿನಲ್ಲಿ 2 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.       ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ 26 ವರ್ಷದ ಯುವತಿ, ಕೆಯ್ಯೂರು ನಿವಾಸಿ 59 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಪತ್ತೆಯಾಗಿದೆ.  

ಕಡಬದಲ್ಲಿ ಇಂದು ಶೂನ್ಯ ಕೊರೋನಾ Read More »

ಕರಾವಳಿ

ಗ್ರಾಮ ಪಂಚಾಯತ್‌ ಚುನಾವಣೆ ದಿನಾಂಕ ಘೋಷಣೆ ➤ ಡಿ. 22 ಮತ್ತು ಡಿ.27ರಂದು ಚುನಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 30: ಪಂಚಾಯತ್‍ ಚುನಾವಣೆ ದಿನಾಂಕ ಕೊನೆಗೂ ಘೋಷಣೆಯಾಗಿದೆ. ಡಿಸೆಂಬರ್ .22 ಮತ್ತು ಡಿ.27 ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ.   ಒಟ್ಟು 5762 ಗ್ರಾಮ ಪಂಚಾಯತ್ಗಳಿಗರ ಚುನಾವಣೆ ನಡೆಯಲಿದೆ. ಇದಕ್ಕೆ ಸಂಬಂಧಪಟ್ಟಂತೆ ಪದಾಧಿಕಾರಿಗಳು ಮಾತು ಕತೆ ನಡೆಸಿದ್ದಾರೆ.  

ಗ್ರಾಮ ಪಂಚಾಯತ್‌ ಚುನಾವಣೆ ದಿನಾಂಕ ಘೋಷಣೆ ➤ ಡಿ. 22 ಮತ್ತು ಡಿ.27ರಂದು ಚುನಾವಣೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳು ನಾಳೆಯಿಂದ ಪುನಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 30: ಕೋವಿಡ್-19 ಕಾರಣಗಳಿಂದ ಕಳೆದ ಎಂಟು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ವೈದ್ಯಕೀಯ ಕಾಲೇಜುಗಳು ರಾಜ್ಯದಲ್ಲಿ  ನಾಳೆಯಿಂದ ಆರಂಭವಾಗಲಿದ್ದು, ಕೇಂದ್ರ ಸರ್ಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಾಲೇಜುಗಳಿಗೆ ಸೂಚನೆ ನೀಡಿದೆ.     ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಎಲ್ಲ ಸಂಯೋಜಿತ ವೈದ್ಯಕೀಯ ಕಾಲೇಜುಗಳನ್ನು ಡಿಸೆಂಬರ್ 1 ರ ಮಂಗಳವಾರದಂದು ಪುನಾರಂಭಗೊಳಿಸಿ ತಕ್ಷಣವೇ ಪ್ರಾಯೋಗಿಕ ತರಗತಿಗಳನ್ನು ನಡೆಸುವ ಬಗ್ಗೆ ಗಮನ ಹರಿಸಬೇಕು.

ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳು ನಾಳೆಯಿಂದ ಪುನಾರಂಭ Read More »

ಕರ್ನಾಟಕ

ಉಡುಪಿ: ಪ್ರಸಾದ್ ನಾರ್ಣಕಜೆಯವರಿಂದ ‘ಉಪಾಸಣೆ” ಪುಸ್ತಕ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಡುಪಿ ನ. 30: ಕಳೆದ ದಿನ ಉಡುಪಿ ಕನ್ನಡ ಪರಿಷತ್‍ನ ಪುಸ್ತಕ ಅನಾವರಣ ಕಾರ್ಯಕ್ರಮದಲ್ಲಿ ಇತಿಹಾಸ ಅಧ್ಯಾಪಕರಾಗಿರುವ ಪ್ರಸಾದ್ ನಾರ್ಣಕಜೆ ಯವರು ಮಲೆನಾಡು ಪ್ರಕಾಶನದವರು ಪ್ರಕಟಿಸಿದ ನಾರಾಯಣ ಶೆವಿರೆ ಅವರ “ಉಪಾಸಣೆ” ಪುಸ್ತಕ ಬಿಡುಗಡೆಗೊಳಿಸಿ ಬಳಿಕ ಮಾತನಾಡಿದರು.     ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕ.ಸಾ.ಪ.ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ವಹಿಸಿದ್ದರು. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಗೌರವ ಉಪಸ್ಥಿತರಿದ್ದರು.  

ಉಡುಪಿ: ಪ್ರಸಾದ್ ನಾರ್ಣಕಜೆಯವರಿಂದ ‘ಉಪಾಸಣೆ” ಪುಸ್ತಕ ಬಿಡುಗಡೆ Read More »

ಕರಾವಳಿ

ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ

(ನ್ಯೂಸ್ ಕಡಬ) newskadaba.com ರಾಜಸ್ಥಾನ ನ. 30: ರಾಜಸ್ಥಾನದ ಬಿಜೆಪಿ ನಾಯಕಿ ಮತ್ತು ಶಾಸಕಿ ಕಿರಣ್ ಮಹೇಶ್ವರಿ ಕೊರೋನಾಗೆ ಬಲಿಯಾಗಿದ್ದಾರೆ. ಕಿರಣ್‌ ಮಹೇಶ್ವರಿ ಅವರು ಮೆಡಂತ ಆಸ್ಪತ್ರೆಯಲ್ಲಿ ಕೊರೋನಾಗೆ‌ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಫಲಿಸದೇ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಮಹೇಶ್ವರಿ ಅವರು ರಾಜ್ಸಾಮಂದ್‌ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಕಿರಣ್ ಮಹೇಶ್ವರಿ ಅವರ ಅಕಾಲಿಕ ನಿಧನದಿಂದ ಬಹಳ ಬೇಸರವಾಗಿದೆ. ಅವರ ಕುಟುಂಬ, ಸ್ನೇಹಿತರಿಗೆ ಸಂತಾಪ ಸೂಚಿಸುತ್ತಿದ್ದೇನೆ ಎಂದು ಅಶೋಕ್‌ ಗೆಹ್ಲೋಟ್‌ ಅವರು ಟ್ವೀಟ್‌

ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ Read More »

ಕರಾವಳಿ

ಡಿಸೆಂಬರ್ ಮೂರನೇ ವಾರ SSLC ಪರೀಕ್ಷೆ ವೆಳ್ಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು  ನ. 30: ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆದಿರುವ ಬೆನ್ನಲ್ಲೇ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಪ್ರೌಢ ಶಿಕ್ಷಣಾ ಪರಿಕ್ಷಾ ಮಂಡಳಿಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.   ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆದು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಕುರಿತು ಚರ್ಚಿಸಲಿದ್ದಾರೆಂದು ತಿಳಿದುಬಂದಿದ್ದು, ಡಿಸೆಂಬರ್

ಡಿಸೆಂಬರ್ ಮೂರನೇ ವಾರ SSLC ಪರೀಕ್ಷೆ ವೆಳ್ಳಾಪಟ್ಟಿ ಪ್ರಕಟ Read More »

ಕರಾವಳಿ

ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಶವಶೈತ್ಯಾಗಾರ ಸಮರ್ಪಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 30: ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಅಂತಾರಾಷ್ಟ್ರೀ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ 317ಡಿ ಪ್ರಾಂತ್ಯ-2ರ ಪ್ರಾಂತೀಯ ಸಮ್ಮೇಳನ ಪುನರ್ಜನ್ಮ ನೆನಪಿಗಾಗಿ ನೀಡಲಾದ ಶೈತ್ಯಾಗಾರವನ್ನು ಆಸ್ಪತ್ರೆಯ ಆವರಣದಲ್ಲಿ ಸಮರ್ಪಿಸಲಾಯಿತು.   ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಈ ಸಂದರ್ಭ ಮಾತನಾಡಿ, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಜತೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯಗಳಿಗೆ ಸ್ಪಂದನೆ ನೀಡುವ ಕಾರ್ಯ ಮಾಡಲಾಗುತ್ತಿದೆ. ಇಲ್ಲಿ ಎಲ್ಲಾ ವೈದ್ಯರ ಸೇವೆ ಲಭ್ಯವಿದ್ದು, ರೋಗಿಗಳಿಗೆ ಉತ್ತಮ ಸೇವೆ ಲಭ್ಯವಾಗುತ್ತಿದೆ. ಶೀಘ್ರದಲ್ಲಿ

ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಶವಶೈತ್ಯಾಗಾರ ಸಮರ್ಪಣೆ Read More »

ಕರಾವಳಿ
Scroll to Top