ಮಂಗಳೂರು

ಉಡುಪಿ: ಯೋಗೀಶ್ವರ್ ಪರ ಡಿಸಿಎಂ ಅಶ್ವತ್ಥ ನಾರಾಯಣ್ ಬ್ಯಾಟಿಂಗ್

(ನ್ಯೂಸ್ ಕಡಬ) newskadaba.com ಉಡುಪಿ, ನ. 27: ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಉಡುಪಿಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ್ ಯೋಗೀಶ್ ಪರ ಬ್ಯಾಟಿಂಗ್ ಮಾಡಿದ್ದಾರೆ.ಯೋಗೀಶ್ವರ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಅನ್ನೋ ಒತ್ತಾಯ ಇದೆ ಎಂದು ಹೇಳಿರುವ ಡಿಸಿಎಂ, ಅವರು ಬಹಳಷ್ಟು ಜವಾಬ್ದಾರಿ ಹೊತ್ತು‌ ಕಾರ್ಯನಿರ್ವಹಿಸಿದ್ದಾರೆ.ಅವರಿಗೂ ಸಚಿವ ಸ್ಥಾನದ ಅಪೇಕ್ಷೆ ಇದೆ.ಅವರಿಗೆ ಸಚಿವ ಸ್ಥಾನ ಸಿಗಲಿ ಅನ್ನೋದು ನಮ್ಮ ಅಭಿಪ್ರಾಯ ಇದೆ ಎಂದು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ,ಕೇಂದ್ರದ […]

ಉಡುಪಿ: ಯೋಗೀಶ್ವರ್ ಪರ ಡಿಸಿಎಂ ಅಶ್ವತ್ಥ ನಾರಾಯಣ್ ಬ್ಯಾಟಿಂಗ್ Read More »

ಕರಾವಳಿ

ಮಂಗಳೂರು : ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ಬಾಳೆಹೊನ್ನೂರಿನ ಕೆ.ಎಚ್ ಲತೀಫ್ ಎಂಬವರು (35) ಸೆಪ್ಟೆಂಬರ್ 13ರಿಂದ ಕಾಣೆಯಾಗಿದ್ದು,ಈ ಬಗ್ಗೆ ಪಣಂಬೂರು ಪೊಲೀಸ್‍ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೃಢಕಾಯ ಶರೀರ ಹೊಂದಿದ್ದು, 5.6 ಅಡಿ ಎತ್ತರವಿದ್ದು, ಬಿಳಿ ಮೈಬಣ್ಣ ಹೊಂದಿದ್ದಾರೆ, ಕನ್ನಡ, ತುಳು, ಹಿಂದಿ, ಮಲಯಾಳಿ ತೆಲುಗು ಭಾಷೆ ಬಲ್ಲವರಾಗಿದ್ದಾರೆ.ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಪಣಂಬೂರು ಪೊಲೀಸ್‍ ಠಾಣೆದೂ.ಸಂ: 0824-2220530, 9480805355, 9480805331 ಅಥವಾಮಂಗಳೂರು ಕಂಟ್ರೋಲ್‍ರೂಮ್‍ದೂ.ಸಂ: 0824-2220800ಗೆ ಮಾಹಿತಿಯನ್ನು ನೀಡುವಂತೆ ಪಣಂಬೂರು ಪೊಲೀಸ್‍ ಠಾಣೆಯ ಸಬ್‍ ಇನ್ಸ್‍ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು : ವ್ಯಕ್ತಿ ನಾಪತ್ತೆ Read More »

ಕರಾವಳಿ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಮಂಗಳೂರು ನಗರದಲ್ಲಿ ವಿ.ಹಿಂ.ಪ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ನಿಷೇಧಿತ ಉಗ್ರ ಸಂಘಟನೆ ಪರ ನಗರದ ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಜೈಕಾರ ಹಾಗೂ ಸಂಘಪರಿವಾರಕ್ಕೆ ಎಚ್ಚರಿಕೆಯ ನೀಡಿದ ಗೋಡೆ ಬರಹದ ವಿರುದ್ಧ ವಿಶ್ವ ಹಿಂದೂ ಪರಿಷತ್ ನಗರದ ಮಲ್ಲಿಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿತು. 50 ಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು ದೇಶ ವಿರೋಧಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.‌ ಈ ಸಂದರ್ಭ ವಿಹಿಂಪ ಮುಖಂಡ ಗೋಪಾಲ್ ಕುತ್ತಾರ್ ಮಾತನಾಡಿ, ಆರೋಪಿಗಳನ್ನ ಶೀಘ್ರವೇ ಬಂಧಿಸಿ, ಈ ದುಷ್ಕೃತ್ಯದ ಹಿಂದೆ ಇರೋ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಮಂಗಳೂರು ನಗರದಲ್ಲಿ ವಿ.ಹಿಂ.ಪ ಪ್ರತಿಭಟನೆ Read More »

ಕರಾವಳಿ

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ

(ನ್ಯೂಸ್ ಕಡಬ) newskadaba.com ವಿಜಯನಗರ ನ. 27: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾಡಿದರು.       ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ Read More »

ಕರ್ನಾಟಕ

ಕುದುರೆ ರೇಸ್ ಜೂಜು ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 27: ಸಿಸಿಬಿ ಪೊಲೀಸರು ಕುದುರೆ ರೇಸ್ ಜೂಜು ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿ 20 ಲಕ್ಷ ರೂಪಾಯಿ ಹಾಗೂ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದುಕೊಂಡ ಆರೋಪಿಗಳನ್ನು ವಿಜಯ ನಗರದ ಸತ್ಯನಾರಾಯಣ,ಕುಮಾರ, ಶ್ರೀಕಾಂತ್ ಹಾಗೂ ಶೇಷಾದ್ರಿಪುರಂ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ.     ಆರ್ ಪಿ ಸಿ ಬಡಾವಣೆಯ ಮನೆಯೊಂದರಲ್ಲಿ ಬೆಟ್ಟಿಂಗ್ ಕಟ್ಟಿ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ 20 ಲಕ್ಷ ರೂ

ಕುದುರೆ ರೇಸ್ ಜೂಜು ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ MiG-29K ವಿಮಾನ ಪತನ

(ನ್ಯೂಸ್ ಕಡಬ) newskadaba.com ನವದೆಹಲಿ ನ. 27: ಕಳೆದ ದಿನ 5 ಗಂಟೆ ಸುಮಾರಿಗೆ ಅರಬ್ಬಿ ಸಮುದ್ರದ ಬಳಿ ಹಾರಾಟ ನಡೆಸುತ್ತಿದ್ದ MiG-29K ತರಬೇತಿ ವಿಮಾನ ಅಪಘಾತಕ್ಕೀಡಾಗಿದೆ ಅಂತ ಭಾರತೀಯ ನೌಕಾ ಪಡೆ ತಿಳಿಸಿದೆ.   ಘಟನೆ ವೇಳೆ ಓರ್ವ ಪೈಲಟ್​ನನ್ನು ರಕ್ಷಿಸಲಾಗಿದ್ದು, ಮತ್ತೋರ್ವ ಪೈಲಟ್​ಗಾಗಿ ಏರ್​​ ಹಾಗೂ ಸರ್ಫೇಸ್​ ಘಟಕದಿಂದ ಹುಟುಕಾಟ ನಡೆಸಲಾಗ್ತಿದೆ. ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದೆ. ಕಳೆದ ಒಂದು ವರ್ಷದಲ್ಲಿ ಮಿಗ್ 29ಏಯ ಮೂರನೇ ಅಪಘಾತ ಪ್ರಕರಣ ಇದಾಗಿದೆ. ಕಳೆದ ನವೆಂಬರ್

ಅರಬ್ಬೀ ಸಮುದ್ರದಲ್ಲಿ MiG-29K ವಿಮಾನ ಪತನ Read More »

ರಾಷ್ಟ್ರೀಯ ನ್ಯೂಸ್

ಅಮಾನುಷವಾಗಿ ಜಾನುವಾರು ಸಾಗಾಟ ➤ ಐದು ದನಗಳ ರಕ್ಷಣೆ,ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ ನ. 27: ಅಮಾನುಷ ರೀತಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಓಮ್ನಿ ಕಾರನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬೆಳಗ್ಗೆ ತಡೆದಿದ್ದು, ಐದು ದನಗಳನ್ನು ರಕ್ಷಿಸಿದ್ದು, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.   ಕಾರ್ಕಳ ಕಡೆಯಿಂದ ಮೂಡುಬಿದಿರೆ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ಹಿಂಸಾತ್ಮಕವಾಗಿ ದನಗಳನ್ನು ತುಂಬಿಸಿ ಅತೀ ವೇಗವಾಗಿ ಹೋಗುತ್ತಿದ್ದ ಓಮ್ನಿ ಕಾರನ್ನು ಪೊಲೀಸರು ಅನುಮಾನಗೊಂಡು ಪೇಟೆಯ ಬಜಾಜ್ ಶೋರೂಂ ಬಳಿಯ ಅಡ್ಡರಸ್ತೆಯಲ್ಲಿ ತಡೆದಿದ್ದಾರೆ. ಕಾರು ನಿಲ್ಲಿಸಿ ಚಾಲಕ ಸಹಿತ ಇಬ್ಬರು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಅಮಾನುಷವಾಗಿ ಜಾನುವಾರು ಸಾಗಾಟ ➤ ಐದು ದನಗಳ ರಕ್ಷಣೆ,ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಬೈಕ್ ಮತ್ತು ಆಟೋರಿಕ್ಷಾ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 27: ಕಳೆದ ದಿನ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಹನಫಿ ಬಜಾರ್ ಬಳಿ  ಬೈಕ್ ಹಾಗೂ ಆಟೋರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಾಗೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಚೆರ್ಕಳ ಮಾಸ್ತಿಕುಂಡು ಪೊವ್ವಲ್ ನಿವಾಸಿ ಮಸೂದ್(25) ಎಂದು ಗುರುತಿಸಲಾಗಿದೆ.       ಮೃತಪಟ್ಟ ವ್ಯಕ್ತಿಯನ್ನು ಗುರುತು ಚೀಟಿ ಹಾಗೂ ಬೈಕ್ ನಂಬರ್ ಸಹಾಯದಿಂದ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿದೆ. ಗಂಭೀರ ಗಾಯಗೊಂಡಿದ್ದ ಸಂದೀಪ್

ಕಾಸರಗೋಡು: ಬೈಕ್ ಮತ್ತು ಆಟೋರಿಕ್ಷಾ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ ;ಆರ್.ಟಿ.ಸಿ. ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ➤ ಉಪತಹಸೀಲ್ದಾರ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 27: ಆರ್.ಟಿ.ಸಿ. ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿನನ್ವಯ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಬಂಟ್ವಾಳ ತಾಲೂಕು ಕಚೇರಿಗೆ ದಾಳಿ ನಡೆಸಿದ ವೇಳೆ ಉಪತಹಸೀಲ್ದಾರ್ ರವಿಶಂಕರ್ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ಘಟನೆ ಗುರುವಾರ ಮಧ್ಯಾಹ್ನ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ  ನಡೆದಿದೆ.   ದೂರುದಾರರು ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್.ಟಿ.ಸಿ.ಯಲ್ಲಿ ತಿದ್ದುಪಡಿ ಮಾಡಿಕೊಡಲು ಉಪತಹಸೀಲ್ದಾರ್ 1,500 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಬಂಟ್ವಾಳ ;ಆರ್.ಟಿ.ಸಿ. ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ➤ ಉಪತಹಸೀಲ್ದಾರ್ ಎಸಿಬಿ ಬಲೆಗೆ Read More »

ಕರಾವಳಿ

ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ನಾಮಕರಣ ಮಾಡಿ ➤ ಪುತ್ತಿಗೆ ಶ್ರೀ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ಮಂಗಳೂರು ವಿಮಾಣ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರರ ಹೆಸರಿಡುವಂತೆ ಉಡುಪಿಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಒತ್ತಾಯ ಮಾಡಿದ್ದಾರೆ. ಮಂಗಳೂರು ಸಮೀಪದಲ್ಲಿ ಉಡುಪಿ ಹಾಗೂ ಶೃಂಗೇರಿ ಕ್ಷೇತ್ರ ಇದೆ. ಜಗದ್ಗುರು ಶಂಕರಾಚಾರ್ಯರು ಶೃಂಗೇರಿ ಮಠ ಸ್ಥಾಪಿಸಿದ್ದಾರೆ. ಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀ ಕೃಷ್ಣ ಮಠ ಸ್ಥಾಪಿಸಿದ್ದಾರೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರ ವಿಮಾನ ನಿಲ್ದಾಣ ಹೆಸರಿಡುವುದು ಅರ್ಥಪೂರ್ಣ ಎಂದು ಶ್ರೀಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆಯೋಧ್ಯೆಯಲ್ಲಿ ಶ್ರೀರಾಮನ

ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ನಾಮಕರಣ ಮಾಡಿ ➤ ಪುತ್ತಿಗೆ ಶ್ರೀ ಆಗ್ರಹ Read More »

ಕರಾವಳಿ, ಕರ್ನಾಟಕ
Scroll to Top