ಮಂಗಳೂರು

ಬಂಟ್ವಾಳ: ಮನೆ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 24: ಸರಪಾಡಿ ಗ್ರಾಮದ ಮುನ್ನಲಾಯಿಪದವು ಎಂಬಲ್ಲಿ ವಸಂತಿ ಎಂಬವರ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ವಸಂತಿ ಹಾಗೂ ಅವರ ಮನೆಮಂದಿ ಶನಿವಾರ ಸುಳ್ಯಕ್ಕೆ ಸಂಬಂಧಿಕರ ಮನೆಗೆ ಕಾರ್ಯಕ್ರಮದ ನಿಮಿತ್ತ ತೆರಳಿದ್ದರು. ಸೋಮವಾರ ಮುಂಜಾನೆ ಮನೆ ಒಳಗಿನಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಮನೆಯತ್ತ ತೆರಳಿದಾಗ ಮನೆಯೊಳಗೆ ಸಾಮಗ್ರಿ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ತಕ್ಷಣ ಸ್ಥಳೀಯರು ಅಗ್ನಿಶಾಮಕದಳ ಹಾಗೂ ವಸಂತಿಯವರಿಗೆ ಕರೆ ಮಾಡಿ ಮಾಹಿತಿ ನೀಡಿದರು.   […]

ಬಂಟ್ವಾಳ: ಮನೆ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನಷ್ಟ Read More »

ಕರಾವಳಿ

WWE ಪ್ರಿಯರಿಗೆ ಟೇಕರ್ ಶಾಕ್ ➤ ಕುಸ್ತಿ ಅಂಗಳಕ್ಕೆ ವಿದಾಯ ಹೇಳಿದ “ಅಂಡರ್ ಟೇಕರ್”

(ನ್ಯೂಸ್ ಕಡಬ) newskadaba.com ದೆಹಲಿ ನ. 24: WWE ಕುಸ್ತಿ ನೋಡಿಕೊಂಡೇ ಬೆಳೆದ ದೊಡ್ಡವರಾದವರಿಗೆ ಬೇಸರವಾಗುವ ಬೆಳವಣಿಗೆಯೊಂದರಲ್ಲಿ, ‘ದಿ ಅಂಡರ್‌ಟೇಕರ್‌’ ಕುಸ್ತಿ ಅಂಗಳಕ್ಕೆ ನಿವೃತ್ತಿ ಘೋಷಿಸಿದ್ದಾರೆ. ‘ದಿ ಅಂಡರ್‌ಟೇಕರ್‌’ ಹೆಸರಿನ ಸ್ಟೇಜ್‌ನೇಮ್‌ನಿಂದಲೇ ಜನಪ್ರಿಯರಾದ ಮಾರ್ಕ್ ವಿಲಿಯಮ್ ಕಾಲವೇ, “ನೆಮ್ಮದಿಯಿಂದ ನಿವೃತ್ತ ಜೀವನ ನಡೆಸುವ ಕಾಲ ಬಂದಿದೆ” ಎಂದು ತಮ್ಮ ಟ್ವೀಟರ್‌ ಮೂಲಕ ಹೇಳಿಕೊಂಡಿದ್ದಾರೆ.   55ರ ಹರೆಯದ ಈ ವೃತ್ತಿಪರ ಕುಸ್ತಿಪಟುವಿನ ವಿದಾಯಕ್ಕೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ.  55 ವರ್ಷದ ಈ ಕುಸ್ತಿಪಟು, ತಮ್ಮ 30

WWE ಪ್ರಿಯರಿಗೆ ಟೇಕರ್ ಶಾಕ್ ➤ ಕುಸ್ತಿ ಅಂಗಳಕ್ಕೆ ವಿದಾಯ ಹೇಳಿದ “ಅಂಡರ್ ಟೇಕರ್” Read More »

ರಾಷ್ಟ್ರೀಯ ನ್ಯೂಸ್

ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸವನ್ನು ನೆರವೇರಿಸಿದರು. ಮಂಗಳೂರಿನ ಮೂಡುಶೆಡ್ಡೆ ಗ್ರಾಪಂ, ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಮೂಡುಶೆಡ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಸಹಯೋಗದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮದ ಹೊರಾಂಗಣ ರಸ್ತೆ ಡಾಮರೀಕರಣ ಮತ್ತು ಸುಮಾರು 69 ಲಕ್ಷ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮ ಮುಂದುವರಿದ ಪಿಲಿಕುಳ ದ್ವಾರದವರೆಗೆ ನಾಲ್ಕು ಪಥದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ

ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ Read More »

ಕರಾವಳಿ

ಬಂಟ್ವಾಳ: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ ➤ ವುಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 24: ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ದೇಶಾದ್ಯಂತ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬಂಟ್ವಾಳ ಮಿನಿ ವಿಧಾನ ಸೌದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವನ್ನು ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಹಿಸಿದ್ದರು. ವುಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್ ಮಾತನಾಡಿ, ದೇಶದಲ್ಲಿ ದಿನಗಳೆದಂತೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬಂಟ್ವಾಳ: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ ➤ ವುಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ Read More »

ಕರಾವಳಿ

ಅಸ್ಸಾಂನಲ್ಲಿ ದಾಖಲೆ ಬರೆದಿದ್ದ ಮಾಜಿ ಸಿಎಂ ತರುಣ್ ಗೊಗೋಯಿ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ ನ. 24: ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ.  84 ವರ್ಷದ ತರುಣ್ ಗೊಗೊಯಿ ಅವರು ವಿಧಿವಶರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ.     ಕಾಂಗ್ರೆಸ್ ಮುಖಂಡರು ಗೌಹತಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನವೆಂಬರ್ 2ರಿಂದ ಕೊರೋನಾ ನಂತರದ ತೊಂದರೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಎರಡು ತಿಂಗಳ ಚಿಕಿತ್ಸೆ ಬಳಿಕ ಕೊರೋನಾದಿಂದ ಚೇತರಿಸಿಕೊಂಡಿದ್ದ

ಅಸ್ಸಾಂನಲ್ಲಿ ದಾಖಲೆ ಬರೆದಿದ್ದ ಮಾಜಿ ಸಿಎಂ ತರುಣ್ ಗೊಗೋಯಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಕಲ್ಮಂಜ ಮನೆ ದರೋಡೆ ಯತ್ನ ಪ್ರಕರಣ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 24: ಬೆಳ್ತಂಗಡಿ ವೃತ್ತದ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಂಜ ಗ್ರಾಮದ, ನಿಡಿಗಲ್ ಎಂಬಲ್ಲಿ ಮನೆ ದರೋಡೆ ಯತ್ನ ಪ್ರಕರಣ ನಡೆದಿದ್ದು, ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಸಿಸಿಐ ಬೆಳ್ತಂಗಡಿ ಮತ್ತು ಪಿಎಸೈ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಆರೋಪಿಗಳಿಂದ ಸುಮಾರು ರೂ 8 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.     ಬಂಟ್ವಾಳ ತಾಲೂಕಿನ ಮೇಲ್ಕಾರ್ ಬಳಿ ಪಿ ಇರ್ಫಾನ್(28) ಬಿನ್, ಬಜಾಲ್ ಪಡ್ಪು ಮನೆ, ಮಂಗಳೂರು ತಾಲೂಕು

ಬೆಳ್ತಂಗಡಿ: ಕಲ್ಮಂಜ ಮನೆ ದರೋಡೆ ಯತ್ನ ಪ್ರಕರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾರು ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು ನ. 24: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ನನ್ಯದಲ್ಲಿ ಕಾರೊಂದು ರಸ್ತೆ ಬೇಲಿಗೆ ಢಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ನಡೆದಿದೆ.     ಕಾರಿನಲ್ಲಿದ್ದ ಕಾರು ಚಾಲಕನಿಗೆ ಎರಡು ದಿನದ ಹಿಂದೆ ಮದುವೆಯಾಗಿದ್ದು, ಕಾರಿನಲ್ಲಿ ದಂಪತಿಗಳು ಮತ್ತು ಕಾರು ಚಾಲಕನ ತಂಗಿ ಪ್ರಯಾಣಿಸುತ್ತಿದ್ದು, ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ನನ್ಯ ಸಮೀಪದಲ್ಲಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ

ಪುತ್ತೂರು: ಕಾರು ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ವಿ.ವಿ ಕಾಲೇಜು ಮಂಗಳೂರು ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 23: ವಿ.ವಿ ಕಾಲೇಜು ಮಂಗಳೂರು ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಧಿ ವಿಸ್ತರಣೆಯಾಗಿದೆ.   ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಸಂಧ್ಯಾಕಾಲೇಜು, ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಾಪ್ಪ ಕಾಲೇಜು, ಮಡಿಕೇರಿ, ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟದ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳು ನಡೆಸಲ್ಪಡುವ ವಿವಿಧ ಸ್ನಾತಕೋತ್ತರ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕಾಲೇಜುಗಳ ಪ್ರವೇಶಾತಿಗೆ

ವಿ.ವಿ ಕಾಲೇಜು ಮಂಗಳೂರು ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ Read More »

ಕರಾವಳಿ

ಪ್ರಾಣಿ ದಯಾ ಸಂಘ ರಚನೆ ➤ ಪದಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 23: ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ರಚನೆ ಮಾಡಲು ಸರ್ಕಾರೇತರ ಪದಾಧಿಕಾರಿಗಳ ಹುದ್ದೆಗಳಿಗೆ ಜಿಲ್ಲೆಯಲ್ಲಿನ ಪ್ರಾಣಿ ಪ್ರಿಯರು, ಪ್ರಾಣಿಗಳ ರಕ್ಷಣೆಯಲ್ಲಿ ತೊಡಗಿಕೊಂಡವರು, ಗೋಶಾಲೆ ನಡೆಸುತ್ತಿರುವವರು ಮತ್ತು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಣಿ ಕಲ್ಯಾಣದಲ್ಲಿ ಆಸಕ್ತಿ ಉಳ್ಳವರು ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ದ.ಕ., ಮಂಗಳೂರು ಕಛೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 26 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0824-2492337 ನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ

ಪ್ರಾಣಿ ದಯಾ ಸಂಘ ರಚನೆ ➤ ಪದಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಸಿಹಿತ್ಲು : ಸರ್ಫಿಂಗ್ ಬೀಚ್ ಬಳಿ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 23: ಹಳೆಯಂಗಡಿ ಸಮೀಪದ ಸಸಿಹಿತ್ಲು ಸರ್ಫಿಂಗ್ ಬೀಚ್ ಬಳಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ.   ಸುಮಾರು 65ರ ಹರೆಯದ ಗಂಡಸಿನ ಶವ ಸಸಿಹಿತ್ಲು ಎಂಡ್ ಪಾಯಿಂಟ್ ಮುಂಡ ಬೀಚ್ ಬಳಿ ಸಮುದ್ರದಲ್ಲಿ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಕೂಡಲೇ ಸ್ಥಳಕ್ಕೆ ಧಾವಿಸಿ ದೋಣಿ ಮುಖಾಂತರ ಶವವನ್ನು ಸಮುದ್ರತೀರಕ್ಕೆ ತಂದಿದ್ದಾರೆ. ಇಂದು (ಸೋಮವಾರ) ಬೆಳಗಿನ ಜಾವ ವ್ಯಕ್ತಿ ಮೃತಪಟ್ಟಿರಬಹುದು ಎಂದು ಸ್ಥಳೀಯ ಪಂಚಾಯತ್ ಸದಸ್ಯ ಚಂದ್ರಕುಮಾರ್ ತಿಳಿಸಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ

ಸಸಿಹಿತ್ಲು : ಸರ್ಫಿಂಗ್ ಬೀಚ್ ಬಳಿ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ
Scroll to Top