ಮಂಗಳೂರು

ಮುರುಡೇಶ್ವರದಲ್ಲಿ ಜಾನುವಾರು ಕಳ್ಳತನ ಯತ್ನ ➤ ಓರ್ವನ ಬಂಧನ ,ನಾಲ್ವರು ಪರಾರಿ

(ನ್ಯೂಸ್ ಕಡಬ) newskadaba.com ಭಟ್ಕಳ ನ. 21:  ಮೇಯಲು ಬಿಟ್ಟ ಜಾನುವಾರುವೊಂದನ್ನು ಮರಕ್ಕೆ ಕಟ್ಟಿ ಹಾಕಿ, ರಾತ್ರಿ ವೇಳೆ ವಾಹನದಲ್ಲಿ ಕದ್ದೊಯ್ಯಲು ಯತ್ನಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಲು ಯಶಸ್ವಿಯಾಗಿರುವ ಘಟನೆ ತಾಲೂಕಿನ ಮುರುಡೇಶ್ವರ ಕೈಕಿಣಿ ಮುಡಕೇರಿ ರೇಲ್ವೇ ಬಿಡ್ಜ್ ಹತ್ತಿರ ಗುರುವಾರ ರಾತ್ರಿ ನಡೆದಿದೆ. ಬಂಧಿತನನ್ನು ಮುರುಡೇಶ್ವರ ನ್ಯಾಶನಲ್ ಕಾಲೋನಿ 5ನೇ ಕ್ರಾಸ್ ನಿವಾಸಿ ಯಾಸೀನ್ ತಂದೆ ಇಸ್ಮಾಯಿಲ್ ದೊನ್ನಾ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಈ […]

ಮುರುಡೇಶ್ವರದಲ್ಲಿ ಜಾನುವಾರು ಕಳ್ಳತನ ಯತ್ನ ➤ ಓರ್ವನ ಬಂಧನ ,ನಾಲ್ವರು ಪರಾರಿ Read More »

ಕರಾವಳಿ

ಡ್ರಗ್ಸ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21:  ಡ್ರಗ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಸದಾಶಿವನಗರ ಪೊಲೀಸ್‌ ಠಾಣೆಯ ಮುಖ್ಯ ಪೇದೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಭಾಕರ್ ಬಂಧಿತ ಆರೋಪಿ. ಸದಾಶಿವನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಕೆ.ಜಿ.ನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ ಜಾಲ ಪ್ರಕರಣದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದರು. ಡಾರ್ಕ್ ವೆಬ್ ತಾಣಗಳ ಮೂಲಕ ಹೈಡ್ರೋ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಂಡುಪಾರ್ಟಿ ಅಯೋಸುತ್ತಿದ್ದ ಸುನೀಶ್ ಹೆಗ್ಡೆ, ಹೇಮಂತ್, ದರ್ಶನ್ ಲಮಾಣಿ ಮತ್ತಿತರ ಆರೋಪಿಗಳು

ಡ್ರಗ್ಸ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜೆಪ್ಪು ಗುಜ್ಕರಕೆರೆಯಲ್ಲಿ ವೃದ್ದರೊಬ್ಬರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 21: ನಗರದ ಜೆಪ್ಪು ಗುಜ್ಕರಕೆರೆಯಲ್ಲಿ ‌ಬೆಳಿಗ್ಗೆ ವೃದ್ದರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ 86 ವರ್ಷದ ಸಂಜೀವ ಶೆಟ್ಟಿ ಎಂದು ಗುರುತಿಸಲಾಗಿದೆ.   ಕಳೆದ ದಿನ ಸಂಜೆಯಿಂದ ವ್ಯಕ್ತಿ ನಾಪತ್ತೆಯಾಗಿದ್ದರು.ಸ್ಥಳೀಯರು ಕೆರೆಯಿಂದ ವೃದ್ದರ ಮೃತದೇಹವನ್ನು ಮೇಲೆತ್ತಿದ್ದಾರೆ.ಇವರು ವೃತ್ತಿಯಲ್ಲಿ ಬಸ್ ಡ್ರೈವರ್ ಆಗಿದ್ದರು.ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು: ಜೆಪ್ಪು ಗುಜ್ಕರಕೆರೆಯಲ್ಲಿ ವೃದ್ದರೊಬ್ಬರ ಮೃತದೇಹ ಪತ್ತೆ Read More »

ಕರಾವಳಿ

ತುಳು ಅಕಾಡೆಮಿಯಿಂದ ಸಿ.ಟಿ ರವಿಯವರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 21: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಿಸಿ ತಮ್ಮ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿದ ಸಿ.ಟಿ. ರವಿ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್ ಅವರು ವಿಶೇಷವಾಗಿ ತುಳುನಾಡಿನ ಪರಂಪರೆಯ ಮುಟ್ಟಾಳೆ, ರೇಷ್ಮೆ ಶಾಲು, ಸಹಿತ ತುಳುನಾಡನ್ನು ಪ್ರತಿಬಿಂಬಿಸುವ ವಿಶೇಷ ಕಲಾಕೃತಿಯನ್ನು ನೀಡಿ ಸಾರ್ವತ್ರಿಕವಾಗಿ ಗೌರವಿಸಿದರು. ಬೆಂಗಳೂರಿನ ಕಲಾ ಗ್ರಾಮದ ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಮಾತನಾಡಿದ ದಯಾನಂದ ಜಿ.

ತುಳು ಅಕಾಡೆಮಿಯಿಂದ ಸಿ.ಟಿ ರವಿಯವರಿಗೆ ಗೌರವಾರ್ಪಣೆ Read More »

ಕರಾವಳಿ

ಪಾಕ್ ಗುಂಡಿನ ದಾಳಿ ➤ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ ನ. 21: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದರಿಂದ ಉಂಟಾದ ಗುಂಡಿನ ಚಕಮಕಿಯಲ್ಲಿ ಇಂದು ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.     ಘಟನೆಯಲ್ಲಿ ಹವಲ್ದಾರ್ ಒಬ್ಬರು ತೀವ್ರವಾಗಿ ಗಾಯಗೊಂಡು, ನಂತರ ಸಾವನ್ನಪ್ಪಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಕಿಸ್ತಾನದ ಈ ದಾಳಿಗೆ ಭಾರತೀಯ ಸೇನೆಯು ತೀವ್ರವಾಗಿ ಪ್ರತೀಕಾರ ತೀರಿಸಿತು. ಎರಡೂ ದೇಶಗಳ ನಡುವೆ ಸ್ವಲ್ಪ ಸಮಯದವರೆಗೆ ಗಡಿಯಾಚೆಗೆ ಗುಂಡಿನ ದಾಳಿ ಮುಂದುವರೆದಿರುವುದಾಗಿ ತಿಳಿದುಬಂದಿದೆ.    

ಪಾಕ್ ಗುಂಡಿನ ದಾಳಿ ➤ ಭಾರತೀಯ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಬಾಲವನಕ್ಕೆ ಸಾರ್ವಜನಿಕ ಪ್ರವೇಶಕ್ಕೆ ಇಂದಿನಿಂದ ಅವಕಾಶ

(ನ್ಯೂಸ್ ಕಡಬ) newskadaba.com ಪುತ್ತೂರು ನ. 21: ಕನ್ನಡ ನಾಡು ಕಂಡ ವಿಶಿಷ್ಟ ವ್ಯಕ್ತಿತ್ವಗಳಲ್ಲಿ ಕೋಟ ಶಿವರಾಮ ಕಾರಂತರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ತೊಡಗಿಕೊಳ್ಳದ ಕ್ಷೇತ್ರವಿಲ್ಲ ಎಂಬ ಮಾತು ಕಡಲ ತೀರದ ಭಾರ್ಗವನ ಅಗಾಧ ವಿದ್ವತ್ತಿಗೆ ಹಿಡಿದ ಕನ್ನಡಿ. ಹಾಗೆಯೇ ಪುತ್ತೂರು ಪರ್ಲಡ್ಕದಲ್ಲಿರುವ ಡಾ. ಶಿವರಾಮ ಕಾರಂತರ ಬಾಲವನವು ಕೋವಿಡ್ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧವಿದ್ದು, ಇದೀಗ ಮತ್ತೆ ಅಧಿಕೃತವಾಗಿ ಸಾರ್ವಜನಿಕ ಪ್ರವೇಶಕ್ಕೆ ಬಾಲವನದ ಆಡಳಿತಾಧಿಕಾರಿಯಾಗಿರುವ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ರವರು ತಿಳಿಸಿದ್ದಾರೆ.

ಪುತ್ತೂರು: ಬಾಲವನಕ್ಕೆ ಸಾರ್ವಜನಿಕ ಪ್ರವೇಶಕ್ಕೆ ಇಂದಿನಿಂದ ಅವಕಾಶ Read More »

ಕರಾವಳಿ

ಉಡುಪಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕೊವೀಡ್ ಟೆಸ್ಟ್ ➤ ಏಳು ಸ್ಟೂಡೆಂಟ್ಸ್ ಗಳಲ್ಲಿ ಕೊವೀಡ್ ಪಾಸಿಟಿವ್

(ನ್ಯೂಸ್ ಕಡಬ) newskadaba.com ಉಡುಪಿ, ನ. 21: ಕಾಲೇಜು ಪ್ರಾರಂಭವಾಗುತ್ತಲೇ ಏಳು ಮಂದಿ ಪದವಿ ವಿದ್ಯಾರ್ಥಿಗಳಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೂರು ದಿನಗಳ ಕಾಲ‌ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು.ಈ ಪೈಕಿ 7 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಗೊಂಡಿದೆ. ಪದವಿ ಕಾಲೇಜು ಆರಂಭದ ಹಿನ್ನಲೆಯಲ್ಲಿ ಈ ಟೆಸ್ಟ್ ನಡೆಯುತ್ತಿದೆ.   ಮಣಿಪಾಲದ 5 ಹಾಗೂ ಕಾರ್ಕಳ ತಾಲೂಕಿನ 2 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ದೃಢಗೊಂಡಿದ್ದು, ಸೋಂಕಿತ‌ ವಿದ್ಯಾರ್ಥಿಗಳಿಗೆ ಹೋಂ‌ ಐಸೋಲೇಶನ್‌ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6 ಸಾವಿರ

ಉಡುಪಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕೊವೀಡ್ ಟೆಸ್ಟ್ ➤ ಏಳು ಸ್ಟೂಡೆಂಟ್ಸ್ ಗಳಲ್ಲಿ ಕೊವೀಡ್ ಪಾಸಿಟಿವ್ Read More »

ಕರಾವಳಿ

ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕ ಪುರುಷೋತ್ತಮ ಗೌಡ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ಪ್ರಸ್ತುತ ಉಪ್ಪಿನಂಗಡಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುರುಷೋತ್ತಮ ಗೌಡ ರವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.  

ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕ ಪುರುಷೋತ್ತಮ ಗೌಡ ನಿಧನ Read More »

ಕರಾವಳಿ

ರಾಜ್ಯದಲ್ಲಿಂದು 1,781 ಮಂದಿಗೆ ಕೊರೊನಾ, 17 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ರಾಜ್ಯದಲ್ಲಿ ಇಂದು 1,781 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಇದೀಗಾ ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯ ಇಂದಿನ ವರದಿಯಂತೆ 24 ಗಂಟೆಯಲ್ಲಿ ರಾಜ್ಯದಲ್ಲಿ 17 ಮಂದಿ ಸೋಂಕಿಗೆ ಬಲಿಯಾಗುವುದರ ಮೂಲಕ ಒಟ್ಟಾರೆ ರಾಜ್ಯದಲ್ಲಿ ಸಾವಿನ ಸಂಖ್ಯೆ 11,621ಕ್ಕೆ ಏರಿಕೆಯಾಗಿದೆ.   2,181 ಮಂದಿ ಕೋವಿಡ್​ನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ರಾಜ್ಯದಲ್ಲಿ 8,33,169 ಮಂದಿ ಚೇತರಿಸಿಕೊಂಡಿದ್ದಾರೆ. 24,752 ಸಕ್ರಿಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ

ರಾಜ್ಯದಲ್ಲಿಂದು 1,781 ಮಂದಿಗೆ ಕೊರೊನಾ, 17 ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಶೀಘ್ರವೇ ಜಾರಿ ➤ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಚವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ರಾಜ್ಯದಲ್ಲಿ ಶೀಘ್ರವೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲಾಗುವುದು ಎಂದು ಪಶು ಸಂಗೋಪನೆ ಇಲಾಖೆಯ ಸಚಿವ ಪ್ರಭು ಚವ್ಹಾಣ್​​​ ತಿಳಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಮಾಡುವುದು ನೂರಕ್ಕೆ ನೂರರಷ್ಟು ಖಚಿತ. ಇದರಲ್ಲಿ ಹೆಜ್ಜೆ ಹಿಂದಿಡುವ ಮಾತೇ ಇಲ್ಲ. ಅದರ ಸಾಧಕ ಬಾಧಕಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು. ಸಚಿವ ಸ್ಥಾನ ಸಿಗುತ್ತದೆ ಎಂದು ನಾನು ಕನಸು ಕಂಡಿರಲಿಲ್ಲ. ಸಚಿವ ಸ್ಥಾನ ಸಿಕ್ಕಿದೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಶೀಘ್ರವೇ ಜಾರಿ ➤ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಚವ್ಹಾಣ್ Read More »

ಕರ್ನಾಟಕ
Scroll to Top