ಮಂಗಳೂರು

ಕಡಬ: ನೂತನ ತಾ.ಪಂ. ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲು ಉಸ್ತುವಾರಿ ಸಚಿವರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ನ.12: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕು ಪಂಚಾಯತ್ ಗೆ ಅನುದಾನ ಬಿಡುಗಡೆಗೊಳಿಸುವಂತೆ ತಾ.ಪಂ. ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ನ.10 ರಂದು ಕಡಬ ತಾ.ಪಂ. ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.     ಹೊಸದಾಗಿ ರಚನೆಗೊಂಡಿರುವ ಕಡಬ ತಾಲೂಕು ಪಂಚಾಯತ್ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಅನುದಾನದ ಕೊರತೆ ಇದ್ದು, ಕೂಡಲೇ 2 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರು ನ.10 ರಂದು ಮಂಗಳೂರಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ […]

ಕಡಬ: ನೂತನ ತಾ.ಪಂ. ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲು ಉಸ್ತುವಾರಿ ಸಚಿವರಿಗೆ ಮನವಿ Read More »

ಕರಾವಳಿ

ಉಳ್ಳಾಲ :ಅಕ್ರಮ ಜಾನುವಾರು ಸಾಗಾಟ ➤ ವಾಹನ ಚಾಲಕ ಖಾಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 12: ಉಳ್ಳಾಲದಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡು ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳೂರಿನಿಂದ ಕೇರಳದ ಕಡೆಗೆ ಈಚರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಐದು ಹೋರಿ ಹಾಗೂ ಒಂದು ಹಸುವನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ನೋಂದವಣಿಯ ವಾಹನವಾಗಿದ್ದು ಚಾಲಕನು ವಾಹನ ಮತ್ತು ಜಾನುವಾರುಗಳನ್ನು ಹುಬ್ಬಳ್ಳಿಯ ಕೋರ್ಟಿಂದ ಬಿಡುಗಡೆಗೊಳಿಸಿರುವುದಾಗಿ ದಾಖಲೆ ತೋರಿದ್ದಾನೆ. ಉಳ್ಳಾಲ ಪೊಲೀಸರು ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.    

ಉಳ್ಳಾಲ :ಅಕ್ರಮ ಜಾನುವಾರು ಸಾಗಾಟ ➤ ವಾಹನ ಚಾಲಕ ಖಾಕಿ ವಶಕ್ಕೆ Read More »

ಕರಾವಳಿ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 11: ಬಂಟ್ವಾಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ನೇಪಾಳ ಮೂಲದ ಯುವಕ ಸೇರಿ ಇಬ್ಬರನ್ನು ಇಂದು  ಪೋಲಿಸರು ಬಂಧಿದ್ದಾರೆ.       ಮಂಗಳೂರು ನಿವಾಸಿ ಟಿ.ಪಿ ಫಾರೂಕ್‌ (50), ಹಾಗೂ ನೇಪಾಳ ನಿವಾಸಿ ಸಾಗರ್‌ ಸಿಂಗ್‌ (22), ಬಂಧಿತ ಆರೋಪಿಗಳು. ಬಂಧಿತರಿಂದ 10,32,900 ರೂ. ಮೌಲ್ಯದ ಒಟ್ಟು 1.480 ಕಿ.ಗ್ರಾಂ ಗಾಂಜಾವನ್ನು ಮತ್ತು ಅದನ್ನು ಸಾಗಾಟ ಮಾಡಲು ಉಪಯೋಗಿಸಿದ ಮಾರುತಿ ಬ್ರೀಝಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಇಬ್ಬರು ವ್ಯಕ್ತಿಗಳು ಬಿ.ಸಿ ರೋಡ್‌ನಿಂದ ಮಾಣಿ ಮಾರ್ಗದಲ್ಲಿ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನ. 13 ರಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ತಪಾಸಣ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ ನ. 11: ಸಮುದಾಯ ಆರೋಗ್ಯ ಕೇಂದ್ರ ಕಡಬ, ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕಡಬ ಹಾಗೂ ಪಟ್ಟಣ ಪಂಚಾಯತ್ ಕಡಬ ಇದರ ಸಂಯುಕ್ತ ಆಶ್ರಯದಲ್ಲಿ ಆಸಾಂಕ್ರಾಮಿಕ ರೋಗಗಳು ಮತ್ತು ಕೋವಿಡ್-19 ಉಚಿತ ತಪಾಸಣ ಶಿಬಿರವು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನ. 13 ರಂದು ಜರಗಲಿದೆ.   ಶಿಬಿರದಲ್ಲಿ ಕೋವಿಡ್-19 ಪರೀಕ್ಷೆ ಮಾತ್ರವಲ್ಲದೇ ರಕ್ತದೊತ್ತಡ ಪರೀಕ್ಷೆ  ಸಕ್ಕರೆ ಕಾಯಿಲೆ ಪರೀಕ್ಷೆ ಹಾಗೂ ರಕ್ತ ವರ್ಗೀಕರಣವನ್ನು ಉಚಿತವಾಗಿ ನಡೆಸಲಾಗುವುದು ಎಂದು ಕಡಬ ಸಮುದಾಯ ಆರೋಗ್ಯ

ನ. 13 ರಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ತಪಾಸಣ ಶಿಬಿರ Read More »

ಕರಾವಳಿ

ಉಡುಪಿ: ಕಾರು ಮತ್ತು ಈಚರ್ ವಾಹನದ ನಡುವೆ ಅಪಘಾತ ➤ ಢಿಕ್ಕಿಯಾದ ರಭಸಕ್ಕೆ ಈಚರ್ ವಾಹನದ ಒಳಗೆ ಸಿಲುಕಿದ ವೈದ್ಯರು

(ನ್ಯೂಸ್ ಕಡಬ) newskadaba.com ಉಡುಪಿ ನ. 11: ಉಡುಪಿಯ ಹಿರಿಯಡ್ಕ ದ ಬಳಿ ಕಾರು ಹಾಗೂ ಈಚರ್ ವಾಹನದ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ವೈದ್ಯರೊಬ್ಬರಿಗೆ ಗಂಭೀರಾ ಗಾಯಾವಾಗಿದೆ. ಮಣಿಪಾಲದಿಂದ ಮೂಡಬಿದ್ರೆ ಕಡೆ ತೆರಳುತ್ತಿದ್ದ ಕಾರು ಹಾಗೂ ಕಾರ್ಕಳದಿಂದ ಹಿರಿಯಡ್ಕ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಮುಖಾಮುಖಿಯಾಗಿ ಢಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆ  ವೈದ್ಯರು ಈಚರ್ ವಾಹನದ ಒಳಗೆ ಸಿಲುಕಿದ್ದಾರೆ. ತಕ್ಷಣವೇ ಸ್ಥಳಿಯರ ಸಹಾಯದಿಂದ ಹೊರತೆಗೆಯಲಾಗಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.    

ಉಡುಪಿ: ಕಾರು ಮತ್ತು ಈಚರ್ ವಾಹನದ ನಡುವೆ ಅಪಘಾತ ➤ ಢಿಕ್ಕಿಯಾದ ರಭಸಕ್ಕೆ ಈಚರ್ ವಾಹನದ ಒಳಗೆ ಸಿಲುಕಿದ ವೈದ್ಯರು Read More »

ಕರಾವಳಿ

ಹರಿಹರ ಪಲ್ಲತಡ್ಕ: ರಸ್ತೆ ಕಾಂಕ್ರೀಟ್ ಕಾರ್ಯ

(ನ್ಯೂಸ್ ಕಡಬ) newskadaba.com ಹರಿಹರ ಪಲ್ಲತಡ್ಕ, ನ.11: ಮಳೆ ಹಾನಿ ಯೋಜನೆಯಡಿಯಲ್ಲಿ ಮಂಜೂರಾದ 45 ಲಕ್ಷ ಅನುದಾನದಲ್ಲಿ 815 ಮೀಟರ್ ರಸ್ತೆ ಕಾಂಕ್ರೀಟ್ ಕಾರ್ಯವು ಬಾಳುಗೋಡು -ಹರಿಹರ ಸಂಪರ್ಕ ರಸ್ತೆಯ ಕಲ್ಲೆಮಠ ಎಂಬಲ್ಲಿ ಭರದಿಂದ ಸಾಗುತ್ತಿದೆ.     ಈ ಸಂದರ್ಭದಲ್ಲಿ ತಾಲೂಕು ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಜನಾರ್ಧನ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹಾಗೆಯೇ ಪಲ್ಲತಡ್ಕ ಗ್ರಾ.ಪಂ. ನ ಮಾಜಿ ಅಧ್ಯಕ್ಷರಾದ ಚಂದ್ರಹಾಸ ಶಿವಾಲ, ಶಿವಕುಮಾರ್ ಶಿವಾಲ, ಗುತ್ತಿಗೆದಾರರ ಉಸ್ತುವಾರಿ ಯಾಹ್ಯಾ ಉಪಸ್ಥಿತರಿದ್ದರು.  

ಹರಿಹರ ಪಲ್ಲತಡ್ಕ: ರಸ್ತೆ ಕಾಂಕ್ರೀಟ್ ಕಾರ್ಯ Read More »

ಕರಾವಳಿ

ಪುತ್ತೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಆಭರಣ ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ನ.11: ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ಮತ್ತು ಪರಿವಾರ ದೈವಸ್ಥಾನ ಬಲ್ನಾಡು ಗ್ರಾಮದ ಕಾಡ್ಲ ಎಂಬಲ್ಲಿ ಕಳ್ಳತನ ಎಸಗಿರುವ ಘಟನೆ ಕಳೆದ ದಿನ ರಾತ್ರಿ ಬೆಳಕಿಗೆ ಬಂದಿದೆ.     ಕಳೆದ ದಿನ ರಾತ್ರಿ ದೀಪ ಹಚ್ಚಲು ಬಾಗಿಲು ತೆರೆದಾಗ ದೈವಸ್ಥಾನದ ಒಳಗಿರುವ ದೈವದ ಆಯುಧಗಳು ಹಾಗೂ ಆಭರಣಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಸಂಪ್ಯ ಠಾಣಾ ಎಸ್.ಐ ಉದಯ ರವಿ, ಪೊಲೀಸ್ ಸಿಬಂದಿಗಳು, ಶ್ವಾನ ದಳ ಹಾಗೂ ಬೆರಳುತಜ್ಞರು ಆಗಮಿಸಿ

ಪುತ್ತೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಆಭರಣ ಕಳವು Read More »

ಕರಾವಳಿ

ಮಂಗಳೂರು: ದೇರಳಕಟ್ಟೆ ಆಸ್ಪತ್ರೆಯಿಂದ ಹುಬ್ಬಳ್ಳಿಗೆ ಮೃತದೇಹವನ್ನು ಸಾಗಿಸಲು ನೆರವಾದ ಕರ್ನಾಟಕ ರಕ್ಷಣಾ ವೇದಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.11: ಉತ್ತರಕನ್ನಡ ಮೂಲದ ವ್ಯಕ್ತಿಯೋರ್ವರು ಮಂಗಳೂರು ದೇರಳಕಟ್ಟೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತದೇಹವನ್ನು ಅವರ ಊರಿಗೆ ತಲುಪಿಸಲು ವ್ಯವಸ್ಥೆ ಮಾಡುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ದ.ಕ ಜಿಲ್ಲಾ ಸಮಿತಿ ಯವರು ಮಾನವೀಯತೆ ಮೆರೆದಿದ್ದಾರೆ.     ಹುಬ್ಬಳ್ಳಿ ಮೂಲದ ವಿಷ್ಣು ಎಂಬ ಯುವಕ ದೇರಳಕಟ್ಟೆ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಮೃತರು ಮೃತದೇಹವನ್ನು ಊರಿಗೆ ಸಾಗಿಸಲು ಹಣಕಾಸಿನ ಕೊರತೆ ಇದ್ದುದರಿಂದ ಈ ವಿಚಾರ ತಿಳಿದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ದ.ಕ.

ಮಂಗಳೂರು: ದೇರಳಕಟ್ಟೆ ಆಸ್ಪತ್ರೆಯಿಂದ ಹುಬ್ಬಳ್ಳಿಗೆ ಮೃತದೇಹವನ್ನು ಸಾಗಿಸಲು ನೆರವಾದ ಕರ್ನಾಟಕ ರಕ್ಷಣಾ ವೇದಿಕೆ Read More »

ಕರಾವಳಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ,ಲ್ಯಾಪ್ ಟ್ಯಾಪ್ ವಿತರಣೆ ➤ ಜ್ಞಾನತಾಣದ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 11:ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ರಾಜ್ಯದ ಗ್ರಾಮೀಣ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಗ್ರಾಮೀಣ ಮಕ್ಕಳಿಗೆ ‘ಆನ್ ಲೈನ್ ಮತ್ತು ಆಫ್ ಲೈನ್ ಶಿಕ್ಷಣ’ ಪಡೆಯಲು ಅನುಕೂಲವಾಗಲು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ‘ ಉಚಿತ ಟ್ಯಾಬ್ ಮತ್ತು ಲ್ಯಾಪ್ ಟ್ಯಾಪ್ ವಿತರಿಸುವ’ ಜ್ಞಾನತಾಣದ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಜ್ಞಾನತಾಣ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ 21 ಕೋಟಿ ರೂಪಾಯಿ ವೆಚ್ಚದಲ್ಲಿ ಮೊದಲ ವರ್ಷ 20 ಸಾವಿರ ಟ್ಯಾಬ್

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ,ಲ್ಯಾಪ್ ಟ್ಯಾಪ್ ವಿತರಣೆ ➤ ಜ್ಞಾನತಾಣದ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಚಾಲನೆ Read More »

ಕರ್ನಾಟಕ

ಪತ್ರಕರ್ತ ದುರ್ಗಾಕುಮಾರ್ ಗೆ ದಿ. ರಾಜೇಶ್ ಶಿಬಾಜೆ ಮಾಧ್ಯಮ ಗೌರವ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಳ್ಯ ನ. 11: ಪತ್ರಕರ್ತರ ವೇದಿಕೆ ಬೆಂಗಳೂರು ಇದರ ಉಡುಪಿ ಘಟಕದ ವತಿಯಿಂದ ನೀಡಲಾಗುವ ದಿ.ರಾಜೇಶ್ ಶಿಬಾಜೆ ಮಾಧ್ಯಮ ಗೌರವ ಪ್ರಶಸ್ತಿಗೆ ಸುಳ್ಯದ ಪ್ರತಿಭಾನ್ವಿತ ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಭಾಜನರಾಗಿದ್ದಾರೆ.     ಜನವಾಹಿನಿ ಪತ್ರಿಕೆಯ ವರದಿಗಾರರಾಗಿದ್ದ ರಾಜೇಶ್ ಶಿಬಾಜೆಯವರು ಹಲವು ವರ್ಷಗಳ ಹಿಂದೆ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಅವರ ಸ್ಮರಣಾರ್ಥ ಮಾಧ್ಯಮ ಗೌರವ ಪ್ರಶಸ್ತಿಯನ್ನು ಪತ್ರಕರ್ತರ ವೇದಿಕೆ ಪ್ರತಿವರ್ಷ ಕೊಡಲಾರಂಭಿಸಿತ್ತು.  ಈ ಬಾರಿಯ 2020 ರ ಸಾಲಿನ ಪ್ರಶಸ್ತಿಯನ್ನು

ಪತ್ರಕರ್ತ ದುರ್ಗಾಕುಮಾರ್ ಗೆ ದಿ. ರಾಜೇಶ್ ಶಿಬಾಜೆ ಮಾಧ್ಯಮ ಗೌರವ ಪ್ರಶಸ್ತಿ Read More »

ಕರಾವಳಿ
Scroll to Top