ಮಂಗಳೂರು

ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ನವ ವಿವಾಹಿತೆ ಹತ್ಯೆ!

(ನ್ಯೂಸ್ ಕಡಬ) newskadaba,ಚಿಕ್ಕಮಗಳೂರು ಜೂ.30:ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮೂರು ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದ ನವ ವಿವಾಹಿತೆಯನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾದಲ್ಲಿ ನೀರಿನ ಸಂಪ್ ಗೆ ಮುಳುಗಿಸಿ ಸಿಮ್ರಾನ್ (22) ಕೊಲೆ ಮಾಡಲಾಗಿದೆ. ಮೂರು ತಿಂಗಳ ಹಿಂದೆಯಷ್ಟೇ ಸಿಮ್ರಾನ್ ಅವರನ್ನು ಫೈರೋಜ್ ಗೆ ವಿವಾಹ ಮಾಡಿಕೊಡಲಾಗಿತ್ತು. ಆದರೆ ಮದುವೆಗೆ ಮೊದಲೇ ಅಕ್ರಮ ಸಂಬಂಧ ಹೊಂದಿದ್ದ ಫೈರೋಜ್ ಮದುವೆ ಆದ ಮೇಲೂ ಮುಂದುವರಿಸಿದ್ದ. ಇದಕ್ಕೆ ಹೆತ್ತವರು ಕೂಡ ಬೆಂಬಲ […]

ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ನವ ವಿವಾಹಿತೆ ಹತ್ಯೆ! Read More »

ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ ➤ ಬೆಂಗಳೂರಿನಲ್ಲಿ 813 ಸೇರಿ 3,382 ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.30: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 3,382 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,43,810ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 111 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,040ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   ಬೆಂಗಳೂರಿನಲ್ಲಿ ಇಂದು 813 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,13,559ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ.ರಾಜ್ಯದಲ್ಲಿ

ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ ➤ ಬೆಂಗಳೂರಿನಲ್ಲಿ 813 ಸೇರಿ 3,382 ಪ್ರಕರಣ ಪತ್ತೆ Read More »

ಕರ್ನಾಟಕ

ಮೀನು ಸಾಗಾಟದ ಕಂಟೈನರ್ ನಲ್ಲಿ 3 ಟನ್ ಗೋಮಾಂಸ ಸಾಗಟ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba,ಕುಮಟಾ ಜೂ.30: ಮೀನಿನ ಬಾಕ್ಸ್’ಗಳಲ್ಲಿ ಇರಿಸಿ ಬರೋಬ್ಬರಿ ಮೂರು ಟನ್ ಗಿಂತಲೂ ಹೆಚ್ಚು ಗೋಮಾಂಸ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕುಮಟಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕುಮಟದ ಹೊಳೆಗದ್ದೆ ಟೋಲ್ ಗೇಟ್ ನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವಾಗ ಅಕ್ರಮ ಗೋ ಮಾಂಸ ಸಾಗಟ ಮಾಡುತ್ತಿರುವುದು ಕಂಡು ಬಂದಿದೆ. ಕಂಟೈನರ್ ಚಾಲಕ ಮಹಮ್ಮದ್ ಶಾಹಿದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಹಾನಗಲ್ ನಿಂದ ಮಂಗಳೂರಿಗೆ ಗೋ ಮಾಂಸ ಸಾಗಿಸುತ್ತಿರುವುದಾಗಿ ಆತ ಹೇಳಿದ್ದಾನೆ. ಆತನ ಹೇಳಿಕೆಯಿಂದ ಮಂಗಳೂರಿನಲ್ಲಿ ಗೋ

ಮೀನು ಸಾಗಾಟದ ಕಂಟೈನರ್ ನಲ್ಲಿ 3 ಟನ್ ಗೋಮಾಂಸ ಸಾಗಟ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಖಾಲಿ ಇರುವ ಬೆಡ್‌ಗಳ ಭರ್ತಿಗಾಗಿ ನಕಲಿ ರೋಗಿಗಳನ್ನು ಕರೆತರುವ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಇನ್ನೂ ಈ ಘಟನೆ ಮೂಡಬಿದ್ರೆ ತಾಲೂಕಿನ ಕುರ್ನಾಡು ಗ್ರಾಮದಲ್ಲಿ ನಡೆದಿದ್ದು, ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ಸುಮಾರು 85 ಮಹಿಳೆಯರನ್ನು ತಡರಾತ್ರಿ ಕಾಲೇಜು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಪೊಲೀಸರ ತನಿಖೆ

ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗಿನಲ್ಲಿ ಜುಲೈ 5 ರವರೆಗೆ ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ

(ನ್ಯೂಸ್ ಕಡಬ) newskadaba,ಕೊಡಗು ಜೂ.30: ಜುಲೈ 5 ರವರೆಗೆ ಲಾಕ್ ಡೌನ್ ದಿನಗಳಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗೆ ಅವಕಾಶ ಇಲ್ಲ. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು, ಉಪವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ತಿಳಿಸಿದ್ದಾರೆ. ಲಾಕ್ ಡೌನ್ ದಿನಗಳಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಬರುತ್ತಿರುವ ದೂರುಗಳು ಬಂದಿದೆ. ಜಿಲ್ಲೆಯಲ್ಲಿ ಜುಲೈ 5 ರವರೆಗೆ ಲಾಕ್‌ಡೌನ್ ಇರುತ್ತದೆ. ಅಲ್ಲಿಯವರೆಗೆ ಕೊಡಗಿನಲ್ಲಿ ಯಾವುದೇ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬುಧವಾರ ಕೂಡ ಪ್ರವಾಸಿಗರಿಗೆ ಅವಕಾಶ ನೀಡಿದ ಮಡಿಕೇರಿಯ ಹೋಂಸ್ಟೇ ವಿರುದ್ದ ಕ್ರಮ

ಕೊಡಗಿನಲ್ಲಿ ಜುಲೈ 5 ರವರೆಗೆ ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ Read More »

ಕರ್ನಾಟಕ

ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ➤ ದ.ಕ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30: ಕೇರಳ ಗಡಿಭಾಗದಲ್ಲಿ ಡೆಲ್ಟಾ ಹಾಗೂ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಗಡಿ ತಪಾಸಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ. ಗಡಿಯಲ್ಲಿ ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಕಟ್ಟುನಿಟ್ಟಿನ ತಪಾಸಣೆಗೆ ಆದೇಶ ನೀಡಿದ್ದು, ಕೇರಳ-ಕರ್ನಾಟಕ ನಡುವಿನ ನಾಲ್ಕು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಮಂಗಳೂರಿನ ತಲಪಾಡಿ ಸೇರಿದಂತೆ ಸಾರಡ್ಕ, ನೆಟ್ಟಣಿಗೆ ಮುಡ್ನೂರು, ಜಾಲ್ಸೂರು

ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ➤ ದ.ಕ ಜಿಲ್ಲಾಡಳಿತ Read More »

ಕರಾವಳಿ, ಕರ್ನಾಟಕ

ಹಿರಿಯ ನಟ ನಾಸೀರುದ್ದೀನ್​ ಶಾ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba,ಮುಂಬೈ ಜೂ.30: ಹಿರಿಯ ನಟ ನಾಸೀರುದ್ದೀನ್​ ಶಾ ನ್ಯುಮೋನಿಯಾ ತೊಂದರೆಯಿಂದಾಗಿ ಮುಂಬೈನ ಹಿಂದೂಜ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅವರ ಮ್ಯಾನೇಜರ್​ ಮಾಹಿತಿ ನೀಡಿದ್ದಾರೆ. ನಾಸೀರುದ್ದೀನ್​ ಶಾ ಅವರು ಎರಡು ದಿನಗಳ ಕಾಲ ಮೆಡಿಕಲ್​ ಅಬ್ಸರ್ವೇಷನ್​ನಲ್ಲಿ ಇರಬೇಕೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಶಾ ಅವರ ಶ್ವಾಸಕೋಶದಲ್ಲಿ ಒಂದು ಪ್ಯಾಚ್​ ಕಂಡುಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಬೇಕಾಯಿತು. ಅವರ ಆರೋಗ್ಯ ಸ್ಥಿರವಾಗಿದೆ. ಜೊತೆಗೆ ಶಾ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು

ಹಿರಿಯ ನಟ ನಾಸೀರುದ್ದೀನ್​ ಶಾ ಆಸ್ಪತ್ರೆಗೆ ದಾಖಲು..!! Read More »

ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba,ನೆಲ್ಯಾಡಿ ಜೂ.30: ಹೊಸಮಜಲು ಎಂಬಲ್ಲಿ ಕೆಲವು ವರ್ಷಗಳಿಂದ ಅಕ್ರಮವಾಗಿ ಕಾರ್ಯಚರಿಸುತ್ತಿದ್ದ ಬೃಹತ್ ಫರ್ನಿಶಿಂಗ್ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಎರಡು ಟ್ಯಾಂಕರ್, ಮಿಕ್ಸಿಂಗ್ ಗೆ ಬಳಸುತ್ತಿದ್ದ ಉಪಕರಣಗಳು ಸೇರಿದಂತೆ ಸ್ವತ್ತುಗಳನ್ನು ವಶಪಡಿಸಿಕೊಂಡು,ಪ್ರಾಥಮಿರ ಮಾಹಿತಿ ಪ್ರಕಾರ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಹಲವಾರು ಬಾರಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಈ ಅಕ್ರಮ ನಡೆಯುತ್ತಿರುವ ಅಡ್ಡೆಗೆ ದಾಳಿ ನಡೆಸಲು ಮುಂದಾಗಿದ್ದರೂ ಯಾವುದಾದರೂ ಮೂಲಗಳಿಂದ

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು

(ನ್ಯೂಸ್ ಕಡಬ) newskadaba,ಕಾಪು ಜೂ.30: ಕಾರೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು, ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು Read More »

ಕರಾವಳಿ

ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಕೊರೊನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.30:ಬಹುಭಾಷಾ ನಟಿ ಕವಿತಾ ಅವರ ಮಗ, ಪತಿ ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.ಕೇವಲ 15 ದಿನಗಳಲ್ಲಿ ಗಂಡ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವುದು ಕವಿತಾ ಅವರಿಗೆ ದಿಗ್ಭ್ರಮೆ ಮೂಡಿಸಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟಿ ಕವಿತಾ ಅವರು ಕೈ ಹಿಡಿದ ಪತಿ ದಶರಥ ರಾಜ್ ಮತ್ತು ಹೆತ್ತ ಮಗ ಸಂಜಯ್ ರೂಪ್ ಅವರನ್ನು ಕಳೆದುಕೊಂಡ ನಟಿ ಕವಿತಾ ದುಃಖದ ಮಡುವಿನಲ್ಲಿದ್ದಾರೆ.ಮಗ ಸಂಜಯ್ ರೂಪ್ ಎರಡು ವಾರಗಳ ಹಿಂದೆ

ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಕೊರೊನಾ ಸೋಂಕಿಗೆ ಬಲಿ Read More »

ಕರ್ನಾಟಕ
Scroll to Top