ಇನ್ನು ಮುಂದೆ ಅನರ್ಹರಿಗೆ ಸಿಗಲ್ಲ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು: ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ
(ನ್ಯೂಸ್ ಕಡಬ) newskadaba.com, ಮೇ.25: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಿನ್ನೆ ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ ಹಾಗೂ ನಿಜವಾದ ಅರ್ಹ ಬಡ ಜನರಿಗೆ ಮಾತ್ರ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರದ […]

