ಜೆಬಿಎಫ್ ಕಂಪೆನಿಗೆ ಭೂಮಿ ಬಿಟ್ಟುಕೊಟ್ಟವರಿಗೆ ಗೈಲ್ ಕಂಪೆನಿಯಲ್ಲಿ ಉದ್ಯೋಗ- ಉದ್ಯೋಗ ಪತ್ರ ವಿತರಿಸಿದ ದ.ಕ. ಸಂಸದ ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com ಅ.26. ತುಳುನಾಡಿನ ದೈವ ದೇವರುಗಳ ಅನುಗ್ರಹದಿಂದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮಂಗಳೂರಿನ ವಿಶೇಷ ಆರ್ಥಿಕ ವಲಯ(ಎಂಎಸ್ಇಝೆಡ್)ದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟಿದ್ದವರ ಪೈಕಿಯಲ್ಲಿ 69 ಮಂದಿಗೆ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಕಲ್ಪಿಸುವ ನೇಮಕಾತಿ ಪತ್ರಗಳನ್ನು ಬಜಪೆಯ ಎಂಎಸ್ಇಝೆಡ್ನ ಜಿಎಂಪಿಎಲ್ ಕಂಪೆನಿಯಲ್ಲಿ […]

