ಕಲ್ಲಡ್ಕ ಭಟ್ ಅಧೀನದ ಶಾಲಾ ಅನುದಾನ ರದ್ದು ► ರಾಜ್ಯ ಸರಕಾರದ ವಿರುದ್ಧ ತಟ್ಟೆ ಹಿಡಿದು ವಿದ್ಯಾರ್ಥಿಗಳಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.11. ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರ ಮತ್ತು ಪುಣಚ ಶ್ರೀದೇವಿ ಶಾಲೆಗಳಿಗೆ ಕೊಲ್ಲೂರು ಮೂಕಾಂಬಿಕಾ ದೇವಾಲಯದಿಂದ ದತ್ತು ಯೋಜನೆಯಡಿ ನೀಡಲಾಗುತ್ತಿದ್ದ ಅನುದಾನವನ್ನು ರದ್ದುಗೊಳಿಸಿರುವ ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಶುಕ್ರವಾರದಂದು ವಿದ್ಯಾರ್ಥಿಗಳು ಮತ್ತು ಪೋಷಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಮುಂಭಾಗದಲ್ಲಿ ಬಟ್ಟಲು ಹಿಡಿದು ಪ್ರತಿಭಟನೆಗೆ ಕುಳಿತ ವಿದ್ಯಾರ್ಥಿಗಳಿಗೆ ಪೋಷಕರು, ಸಂಘಟನೆಯ ಮುಖಂಡರು ಸಾಥ್ ನೀಡಿದರು. ವಿವಿಧ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಾತನಾಡಿ ಸಿದ್ದರಾಮಯ್ಯ ಸರಕಾರದ […]

