ಕೊಡಗು:  ಜನವರಿ 15 ರಂದು ಬ್ಯಾರಿ ಸಮಾವೇಶ

(ನ್ಯೂಸ್ ಕಡಬ) newskadaba.com.ಕೊಡಗು,ಜ.12. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಕೊಡಗು ಬ್ಯಾರೀಸ್ ವೆಲ್‍ಫೇರ್ ಟ್ರಸ್ಟ್ ಇದರ ಸಹಯೋಗದೊಂದಿಗೆ 2019 ರ ಜನವರಿ 15ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ “ಕೊಡಗು ಜಿಲ್ಲಾ ಬ್ಯಾರಿ ಸಮಾವೇಶ”ವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11.30 ಗಂಟೆಗೆ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಮಾಡಲಿದ್ದು, ಅಧ್ಯಕ್ಷತೆಯನ್ನು ಸಾಹಿತಿ ಬಿ.ಎ. ಶಂಶುದ್ದೀನ್ ಮಡಿಕೇರಿ ವಹಿಸಲಿರುವರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ […]

ಕೊಡಗು:  ಜನವರಿ 15 ರಂದು ಬ್ಯಾರಿ ಸಮಾವೇಶ Read More »

ಕರಾವಳಿ