ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್..!
(ನ್ಯೂಸ್ ಕಡಬ) newskadaba.com ಜೂ. 11. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ಪರಾರಿಯಾಗಿದ್ದ ವಾರಂಟ್ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಹೊಸಬೆಟ್ಟುವಿನ ಸಿದ್ದೀಕ್ ಸಾರಿಕ್ ಫರ್ಹಾನ್ ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಲಾಕಪ್ ನಿಂದ ಪರಾರಿಯಾಗಿದ್ದ ಈತ ಮುಂಬೈಗೆ ಪರಾರಿಯಾಗಿರುವುದಾಗಿ ಪ್ರಚಾರವಾಗಿತ್ತು. ಆದರೆ ಪೊಲೀಸರು ಆರೋಪಿ ಮಂಜೇಶ್ವರ ಪರಿಸರದಲ್ಲೇ ಇರುವ ಬಗ್ಗೆ ಮಾಹಿತಿ ಪಡೆದು ತನಿಖೆ ಚುರುಕುಗೊಳಿಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್..! Read More »
ಕರ್ನಾಟಕ, ಕ್ರೈಮ್ ನ್ಯೂಸ್
