ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ
(ನ್ಯೂಸ್ ಕಡಬ) newskadaba.com, ಆ.20 ಬೆಂಗಳೂರು: ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ ವಿಧಿಸುವ ಹಾಗೂ ಇತರ ಕಠಿಣ ನಿಬಂಧನೆಗಳನ್ನು ಹೊಂದಿರುವ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯ ಸರ್ಕಾರದ ಪರವಾಗಿ ಇದನ್ನು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಮಂಡಿಸಿದ್ದರು. ಆರ್ಸಿಬಿ ವಿಜಯೋತ್ಸವ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಈ ನಿಟ್ಟಿನಲ್ಲಿ ಕಠಿಣ ಜೈಲು ಶಿಕ್ಷೆ, ದಂಡನೆ ವಿಧಿಸುವ ಜನಸಂದಣಿ ನಿಯಂತ್ರಣ […]

