ದ.ಕ.

ದ.ಕ., ಉಡುಪಿಯಿಂದ ರಾತ್ರಿ ಬಸ್ ಸಂಚಾರ ಆರಂಭ

ಮಂಗಳೂರು, ಜೂ.3: ದ.ಕ. ಮತ್ತು ಉಡುಪಿ ಜಿಲ್ಲೆಗಳಿಂದ ದೂರದ ಊರುಗಳಿಗೆ ಸೀಮಿತವಾಗಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳ ರಾತ್ರಿ ಸಂಚಾರ ಆರಂಭವಾಗಿದೆ. ಕೆಎಸ್ಸಾರ್ಟಿಸಿ ಉಡುಪಿ, ಮಂಗಳೂರು, ಪುತ್ತೂರು ವಿಭಾಗದಿಂದ ರಾತ್ರಿ 9ರ ವರೆಗೆ ಬಸ್ ಸಂಚಾರ ನಡೆಸಲಿದೆ. ಸದ್ಯ ಬೆಂಗಳೂರಿಗೆ ಮಾತ್ರ ಕೊನೆಯ ಬಸ್ ರಾತ್ರಿ 9ಕ್ಕೆ ಸಂಚರಿಸಲಿದೆ. ಉಡುಪಿ, ಮಂಗಳೂರು ವಿಭಾಗದಿಂದ ಬಾಗಲಕೋಟೆ, ಹುಬ್ಬಳ್ಳಿ, ಬಳ್ಳಾರಿ, ರಾಯಚೂರು, ಬೆಳಗಾವಿ ಸಹಿತ ದೂರದ ಊರಿಗೆ ರಾತ್ರಿ 8ರ ವರೆಗೂ ಬಸ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]

ದ.ಕ., ಉಡುಪಿಯಿಂದ ರಾತ್ರಿ ಬಸ್ ಸಂಚಾರ ಆರಂಭ Read More »

ಕರಾವಳಿ

ದ.ಕ., ಉಡುಪಿ ಉದ್ಯೋಗಸ್ಥರಿಗೆ ಇನ್ನೂ ಮುಂದೆ ಬೇಕಿಲ್ಲ ಅಂತರ್ ಜಿಲ್ಲಾ ಪಾಸ್

ಮಂಗಳೂರು, ಮೇ 11: ಕೊರೋನ – ಲಾಕ್‌ಡೌನ್ ಹಿನ್ನೆಲೆಯಲ್ಲಿ ಅವಿಭಜಿತ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಮಧ್ಯೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ರಾಜ್ಯ ಸರಕಾರ ಕೊಂಚ ಸಡಿಲಿಕೆ ಮಾಡಿದ್ದು, ಉಭಯ ಜಿಲ್ಲೆಗಳ ಉದ್ಯೋಗಸ್ಥರು ಇನ್ನು ಮುಂದೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಯಾವುದೇ ಅಂತರ್ ಜಿಲ್ಲಾ ಪಾಸ್ ವ್ಯವಸ್ಥೆ ಇಲ್ಲದೆ ಓಡಾಡಬಹುದಾಗಿದೆ. ಈ ಬಗ್ಗೆ ರಾಜ್ಯ ಸರಕಾರ ಹೊಸ ಆದೇಶ ಹೊರಡಿಸಿದ್ದು ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನು ಒಂದೇ ಘಟಕವಾಗಿ ಪರಿಗಣಿಸಲು

ದ.ಕ., ಉಡುಪಿ ಉದ್ಯೋಗಸ್ಥರಿಗೆ ಇನ್ನೂ ಮುಂದೆ ಬೇಕಿಲ್ಲ ಅಂತರ್ ಜಿಲ್ಲಾ ಪಾಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ, ಉಡುಪಿಯ ಹಲವು ಮಸೀದಿಗಳಲ್ಲಿ ಗ್ರಹಣ ನಮಾಝ್

ಮಂಗಳೂರು, ಡಿ.26: ಈ ವರ್ಷದ ಕೊನೆಯ ಸೂರ್ಯಗ್ರಹಣ ಗುರುವಾರ ಗೋಚರಿಸಿದೆ. ಈ ಹಿನ್ನಲೆಯಲ್ಲಿ ವಿಶೇಷವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಮಸೀದಿಗಳಲ್ಲಿ ಗ್ರಹಣ ಸಂಬಂಧ ವಿಶೇಷ ನಮಾಝ್ ನಡೆಯಿತು. ಮಂಗಳೂರಿನ ಬಂದರು ಕೇಂದ್ರ ಜುಮಾ ಮಸೀದಿಯಲ್ಲಿ ಬೆಳಗ್ಗೆ 9 ಗಂಟೆಗೆ ಖತೀಬ್ ಸ್ವದಕತುಲ್ಲಾಹ್ ಫೈಝಿ ನೇತೃತ್ವದಲ್ಲಿವಿಶೇಷ ನಮಾಝ್ ನಡೆಯಿತು. ಉಡುಪಿ ಜಿಲ್ಲೆಯ ಕುಂದಾಪುರ ಗಂಗೊಳ್ಳಿ ಜುಮಾ ಮಸೀದಿಯಲ್ಲಿ ಎರಡು ಗಂಟೆಗಳ ಕಾಲ ವಿಶೇಷ ಪ್ರಾರ್ಥನೆ ನಡೆಯಿತು. ಜುಮಾ ಮಸೀದಿಯ ಖತೀಬರಾಗಿರುವ ಮೌಲಾನಾ ಮಝಮ್ಮಿಲ್ ಸಾಹಬ್ ನದ್ವಿ

ದ.ಕ, ಉಡುಪಿಯ ಹಲವು ಮಸೀದಿಗಳಲ್ಲಿ ಗ್ರಹಣ ನಮಾಝ್ Read More »

ಕರಾವಳಿ

ದ.ಕ., ಉಡುಪಿ ಜಿಲ್ಲೆಯಲ್ಲಿ ಡಿ.21ರವರೆಗೆ ನಿಷೇಧಾಜ್ಞೆ

ಮಂಗಳೂರು,/ ಉಡುಪಿ, ಡಿ.19: ಪೌರತ್ವ ಕಾಯ್ದೆ ವಿರುದ್ಧ ಹಲವು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ ನೀಡಿದ್ದು, ಇದರಿಂದ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಡಿ.21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.   ಡಿ.19 ರಿಂದ ಡಿ.20 ರ ರಾತ್ರಿ12ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ. ಅಲ್ಲದೆ

ದ.ಕ., ಉಡುಪಿ ಜಿಲ್ಲೆಯಲ್ಲಿ ಡಿ.21ರವರೆಗೆ ನಿಷೇಧಾಜ್ಞೆ Read More »

ಕರಾವಳಿ
Scroll to Top