ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಕರಾಟೆಯಲ್ಲಿ ಅಮೋಘ ಸಾಧನೆ: ಐವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ!
(ನ್ಯೂಸ್ ಕಡಬ) newskadaba.com, ಮೇ.09: ಮುಂಬೈನಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರಮಟ್ಟದ ಕರಾಟೆ ಟೂರ್ನಮೆಂಟ್ನಲ್ಲಿ ನೆಲ್ಯಾಡಿಯ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ.ಮುಂಬೈನಲ್ಲಿ ಮೇ 1 ರಿಂದ 3 ರವರೆಗೆ *3ನೇ ಯುಜೆಕೆಎಫ್ಐ ರಾಷ್ಟ್ರೀಯ ಓಪನ್ ಕರಾಟೆ ಟೂರ್ನಮೆಂಟ್* ಆಯೋಜಿಸಲಾಗಿತ್ತು. ಕಾಲೇಜಿನ ಒಟ್ಟು 15 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.ವಿದ್ಯಾರ್ಥಿ ಹಿಶಾಮ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.ಫಾಸಿಲಾ, ಅದ್ವೈತಾ, […]

