ಪ್ರಚೋದನಾಕಾರಿ ಪೋಸ್ಟ್- ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಜೂ. 20. ವಾಟ್ಸಪ್‌ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ಶಾಂತಿ ಭಂಗ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪಿಗೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಕಾಸರಗೋಡು ನಿವಾಸಿ ಸತ್ಯನಾರಾಯಣ ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದರು.   ಆರೋಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಚೋದನಾಕಾರಿ ಪೋಸ್ಟ್- ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ಕರಾವಳಿ