ಬೆಂಗಳೂರು: ನಿಗೂಢ ಸ್ಫೋಟಕ್ಕೆ ವ್ಯಕ್ತಿಯ ಕಾಲಿಗೆ ಗಂಭೀರ ಗಾಯ

ಬೆಂಗಳೂರು, ಮಾ.8: ನಗರದ ಆಡುಗೋಡಿಯ ಬಳಿ ಸ್ಫೋಟ ಸಂಭವಿಸಿದ ವ್ಯಕ್ತಿಯೊಬ್ಬರ ಎಡಗಾಲು ತುಂಡಾದ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ನರಸಿಂಹಯ್ಯ(50) ಎಂದು ಗುರುತಿಸಲಾಗಿದೆ. ಕಸದ ರಾಶಿಯ ನಡುವೆ ಈ ಸ್ಫೋಟ ಸಂಭವಿಸಿರುವುದು ಅಚ್ಚರಿ, ಆತಂಕ ಮೂಡಿಸಿದೆ. ಸ್ಥಳಕ್ಕೆ ಡಿಸಿಪಿ ಶ್ರೀನಾಥ್ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇತ್ತೀಚಿನ ವರದಿಯ ಪ್ರಕಾರ ಗ್ರಾನೈಟ್ ಕತ್ತರಿಸುವ ಕೆಮಿಕಲ್ ಎಸೆದಿದ್ದು, ಕೆಮಿಕಲ್ ರಿಯಾಕ್ಷನ್‌ನ ಪರಿಣಾಮ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ನಿಗೂಢ ಸ್ಫೋಟಕ್ಕೆ ವ್ಯಕ್ತಿಯ ಕಾಲಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್