ಬೆಳ್ಳಾರೆ ಮೂಲದ ವ್ಯಕ್ತಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತ್ಯು
(ನ್ಯೂಸ್ ಕಡಬ) newskadaba.com, ಸೆ.16 ಸುಳ್ಯ: ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸಂಭವಿಸಿದೆ. ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂಬುವವರು ಎಂದು ಗುರುತಿಸಲಾಗಿದೆ.. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ಳಾರೆ ಮೂಲದ ವ್ಯಕ್ತಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್