ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ಸಿಎಂ

ಮಂಗಳೂರು ಗೋಲಿಬಾರ್ ಪ್ರಕರಣ: ಹಿಂಸಾಚಾರದಲ್ಲಿ 78 ಪೊಲೀಸರಿಗೆ ಗಾಯ; ಡಿಸಿಪಿ ಅರುಣಾಂಶುಗಿರಿ

ಮಂಗಳೂರು, ಮಾ.9: ಡಿ.19ರಂದು ಮಂಗಳೂರಿನಲ್ಲಿ ನಡೆದ ಗಲಭೆ ಹಾಗೂ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಹಾಜರಾದ ನಗರದ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅರುಣಾಂಶುಗಿರಿ ಘಟನೆಯಲ್ಲಿ 78 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಾಯಗಳಾಗಿವೆ ಎಂದು ಹೇಳಿಕೆ ನೀಡಿದ್ದಾರೆ. ವಿಚಾರಣೆಯು ಹಂಪನಕಟ್ಟೆಯ್ಲಲಿರುವ ಮಿನಿ ವಿಧಾನಸೌಧದ ಉಪ ವಿಭಾಗಾಧಿಕಾರಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು. ಐಪಿಎಸ್ ಅಧಿಕಾರಿ ಅರುಣಾಂಶುಗಿರಿ ವಿಚಾರಣಾಧಿಕಾರಿ ಎದುರು ಹಾಜರಾಗಿದ್ದು, ಲಿಖಿತ ಹೇಳಿಕೆ ಹಾಗೂ ದಾಖಲೆಗಳನ್ನು ಸಲ್ಲಿಸಿದರು. ನಾನು ಡಿ.19ರಂದು ಪೊಲೀಸ್ ಸಿಬ್ಬಂದಿಯೊಂದಿಗೆ ಕರ್ತವ್ಯದಲ್ಲಿದ್ದೆ. […]

ಮಂಗಳೂರು ಗೋಲಿಬಾರ್ ಪ್ರಕರಣ: ಹಿಂಸಾಚಾರದಲ್ಲಿ 78 ಪೊಲೀಸರಿಗೆ ಗಾಯ; ಡಿಸಿಪಿ ಅರುಣಾಂಶುಗಿರಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು ಗೋಲಿಬಾರ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ಆಯುಕ್ತರಿಗೆ ನೋಟಿಸ್

ಮಂಗಳೂರು, ಮಾ.4: ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಮ್ಯಾಜಿಸ್ಟ್ರೀರಿಯಲ್ ವಿಚಾರಣೆಯು ನಗರದ ಎಸಿ ಕಚೇರಿ ಕೋರ್ಟ್‌ನಲ್ಲಿ ನಡೆಯಿತು. ತನಿಖಾಧಿಕಾರಿಯಾದ ಉಡುಪಿ ಜಿಲ್ಲಾಧಿಕಾರಿಯೂ ಆಗಿರುವ ಜಗದೀಶ್ ವಿಚಾರಣೆ ನಡೆಸಿದರು. ಬುಧವಾರ 176 ಸಾಕ್ಷಿಗಳ ಪೈಕಿ ಎಸಿಪಿಗಳ ಸಹಿತ 29 ಪೊಲೀಸರು ಬಂದು ಸಾಕ್ಷ್ಯ ಹೇಳಿದರು. ಮಾ.9ಕ್ಕೆ ಹಾಜರಾಗುವಂತೆ ಡಿಸಿಪಿ ಅರುಣಾಂಶುಗಿರಿ ಹಾಗೂ ಮಾ.12ರಂದು ವಿಚಾರಣೆಗೆ ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಹಾಗೂ ಗಲಭೆ

ಮಂಗಳೂರು ಗೋಲಿಬಾರ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ಆಯುಕ್ತರಿಗೆ ನೋಟಿಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು ಗೋಲಿಬಾರ್ ಪ್ರಕರಣ: ಹಾಲಿ ನ್ಯಾಯಾಧೀಶರಿಂದ ತನಿಖೆ ಒತ್ತಾಯಿಸಿ ನಾಳೆ ಧರಣಿ

ಮಂಗಳೂರು, ಜ.1: ಮಂಗಳೂರು ಗೋಲಿಬಾರ್ ಪ್ರಕರಣವನ್ನು ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ಒಳಪಡಿಸಬೇಕೆಂದು ಒತ್ತಾಯಿಸಿದ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷ, ಸಂಘಟನೆಗಳ ಜಂಟಿ ಆಶ್ರಯದಲ್ಲಿ ಜ.2ರಂದು ಅಂಬೇಡ್ಕರ್‌ ಪ್ರತಿಮೆಯ ಮುಂಭಾಗದಲ್ಲಿ ಸಾಮೂಹಿಕ ಧರಣಿ ನಡೆಸಲು ನಿರ್ಧಾರ ಮಾಡಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ. ನಗರದ ಖಾಸಗಿ ಹೊಟೇಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷ, ಸಂಘಟನೆಗಳ ನಿಯೋಗದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಲಾಠಿಚಾರ್ಚ್ ಹಾಗೂ ಗೋಲಿಬಾರ್‌ಗೆ ಕಾರಣವಾಗಿರುವ

ಮಂಗಳೂರು ಗೋಲಿಬಾರ್ ಪ್ರಕರಣ: ಹಾಲಿ ನ್ಯಾಯಾಧೀಶರಿಂದ ತನಿಖೆ ಒತ್ತಾಯಿಸಿ ನಾಳೆ ಧರಣಿ Read More »

ಕರಾವಳಿ

ಮಂಗಳೂರು ಗೋಲಿಬಾರ್ ಪ್ರಕರಣ: ಕಮಿಷನರ್, ಇನ್ಸ್ ಸ್ಪೆಕ್ಟರ್ ಅಮಾನತಿಗೆ ದಿನೇಶ್ ಗುಂಡೂರಾವ್ ಆಗ್ರಹ

ಮಂಗಳೂರು, ಡಿ.24: ಪೌರತ್ವ ಕಾಯ್ದೆ ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಗೋಲಿಬಾರ್‌ಗೆ ಇಬ್ಬರ ಸಾವಿಗೆ ಕಾರಣರಾದ ಮಂಗಳೂರು ಪೊಲೀಸ್ ಆಯುಕ್ತ ಡಾ.ಹರ್ಷ ಹಾಗೂ ಇನ್ ಸ್ಪೆಕ್ಟರ್ ಶಾಂತರಾಮ ಕುಂದರ್ ಅವರನ್ನು ಅಮಾನತುಗೊಳಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಿಐಡಿ ತನಿಖೆ ಸಾಲದು. ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದರು. ಅಲ್ಲದೆ ಕಮಿಷನರ್ ಮತ್ತು ಇನ್ಸ್ ಪೆಕ್ಟರ್ ಸಹಿತ ತಪ್ಪಿತಸ್ಥ

ಮಂಗಳೂರು ಗೋಲಿಬಾರ್ ಪ್ರಕರಣ: ಕಮಿಷನರ್, ಇನ್ಸ್ ಸ್ಪೆಕ್ಟರ್ ಅಮಾನತಿಗೆ ದಿನೇಶ್ ಗುಂಡೂರಾವ್ ಆಗ್ರಹ Read More »

ಕರಾವಳಿ

ಮಂಗಳೂರು ಗೋಲಿಬಾರ್ ಪ್ರಕರಣ: ಮ್ಯಾಜಿಸ್ಟ್ರೀಯಲ್  ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಡಿ. 24: ಪೌರತ್ವ ತಿದ್ದುಪತಿ ಕಾಯ್ದೆ  ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್  ತನಿಖೆಗೆ ವಹಿಸಿ ಆದೇಶಿಸಿದೆ. ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ಮ್ಯಾಜಿಸ್ಟ್ರೀಯಲ್ ತನಿಖೆ ನಡೆಸುವಂತೆ ರಾಜ್ಯ ಸರಕಾರ ಆದೇಶಿಸಿದೆ.

ಮಂಗಳೂರು ಗೋಲಿಬಾರ್ ಪ್ರಕರಣ: ಮ್ಯಾಜಿಸ್ಟ್ರೀಯಲ್  ತನಿಖೆಗೆ ರಾಜ್ಯ ಸರ್ಕಾರ ಆದೇಶ Read More »

ಕರಾವಳಿ

ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ಸಿಎಂ

ಬೆಂಗಳೂರು, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿ. ಎಸ್. ಯಡಿಯೂರಪ್ಪ, ಮಂಗಳೂರು ಗಲಭೆಯಲ್ಲಿ ನಡೆದ ಗೋಲಿಬಾರ್ ನ ಬಗ್ಗೆ ನಾವು ಸಿಐಡಿ ತನಿಖೆಗೆ ಒಪ್ಪಿಸುತ್ತಿದ್ದೇವೆ ಎಂದರು. ಪೌರತ್ವ ತಿದ್ದುಪಡಿ ಕಾಯ್ದೆ ಉದ್ದೇಶಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ತಲುಪಿತ್ತು. ಬಂದರ್ ಪೊಲೀಸ್ ಠಾಣೆಯ ಎದುರು ಹಿಂಸಾಚಾರದಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು 

ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ಸಿಎಂ Read More »

ಕರಾವಳಿ, ಕರ್ನಾಟಕ
Scroll to Top